ಶಿಕ್ಷಣವೇ ಶಕ್ತಿ

Saturday 19 December 2020

ಕನ್ನಡ ಸಾಹಿತ್ಯ ಚರಿತ್ರೆ

 🌹 ಹೊಸಬೆಳಕು🌹

==========≠=≠======≠==========

🌍 ಕನ್ನಡ ಸಾಹಿತ್ಯ ಚರಿತ್ರೆ🌍


☘ಪೆತ್ತಜಯನ್ ಎಂಬ ಪದವು ಹಲ್ಮಿಡಿ ಶಾಸನದಲ್ಲಿದ್ದು ಇದು ಸಮಾಸಪದವಾಗಿದೆ

☘ಕನ್ನಡ ಛಂದಸ್ಸಿನ ತಾಯಿಬೇರು-ತ್ರಿಪದಿ

☘ಛಂದೋನುಶಾಸನದ ಕರ್ತೃ -ಜಯಕಿರ್ತ

☘ಕವಿರಾಜಮಾರ್ಗದ ಆಕರ -ದಂಡಿಯ ಕಾವಾಯದರ್ಶಿ

☘ನಾಡವರ್ಗಳ್ ನಿಜವಾಗಿಯೂ ಚದುರರ್ ಕುರಿತೋದಯೊ ಕಾವ್ಯ ಪ್ರಯೋಗಪರಿಣಿತಮತಿಗಳ್ ಎಂಬ ಸ್ತುತಿ ವಾಕ್ಯವು -ಕವಿರಾಜಮಾರ್ಗದಲ್ಲಿದೆ

☘ಬೃಹತ್ಕಥೆಯ ಕರ್ತೃ -ಗುಣಾಢ್ಯ

☘ಬೃಹತ್ಕಥೆಯ ಭಾಷೆ -ಪೈಶಾಚಿ

☘ಕವಿರಾಜಮಾರ್ಗವು-ಲಕ್ಷಣಗ್ರಂಥ /ಅಲಂಕಾರಗ್ರಂಥ

☘ಕನ್ನಡದ ಮೊದಲನೇ ಅಷ್ಟಕ -ಗಜಷ್ಟಾಕ

☘ಕನ್ನಡ ಕವಿತೆಯೊಲ್ ಅಸಗಂ ನೂರ್ಮಡಿ ಎಂದವರು -ಪೊನ್ನ

☘ನಜುಂಡಕವಿಯ ಕೃತಿ -ಕುಮಾರರಾಮನ ಕಥೆ

☘ಚಿತ್ತಾಣ ಬೆದಂಡೆಗಳು -ಕಾವ್ಯರೂಪಕಗಳು

☘ವಡ್ಡರಾಧನೆಯ ಆಕರ-ಜಿನಸೇನಾಚಾರ್ಯನ ಪೂರ್ವಪುರಾಣ ಕರ್ತೃ-ಶಿವಕೋಟ್ಯಾಚಾರ್ಯ

☘ಪಂಪನಿಗೆ ಆಶ್ರಯ ನೀಡಿದ್ದ ದೊರೆ-ಚಾಲುಕ್ಯದೊರೆ ಅರಿಕೇಸರಿ

☘ಪಂಪನ ಧಾರ್ಮಿಕ ಕಾವ್ಯ (ಆಗಮಿಕ ) -ಆದಿಪುರಾಣ (ಕನ್ನಡದ ಮೊದಲ ಕಾವ್ಯ)

☘ಪಂಪನ ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ ವೆಂಬ ಕೃತಿಗಳ ಸ್ವರೂಪ -ಚಂಪೂಕಾವ್ಯ (ಗದ್ಯ ಪದ್ಯ ಮಿಶ್ರಿತ )

☘ವಿಕ್ರಮಾರ್ಜುನ ವಿಜಯ ವೆಂಬ ಕೃತಿಯ ಮತ್ತೊಂದು ಹೆಸರು -ಪಂಪಭಾರತ

☘ಕವಿತಾಗುಣಾರ್ಣವ ಸಂಸಾರ ಸಾರೊದಯ ಎಂಬ ಬಿರುದುಳ್ಲ ಕವಿ -ಪಂಪ

☘ಪಂಪನು ಬರೆದ ಕಾವ್ಯಗಳ ಶೈಲಿ -ತಿರುಳ್ಗನ್ನಡ (ಪುಲಿಗೆರೆಯ

☘ಬೆಳಗುವೆನಿಲ್ಲಿ ಲೌಕಿಕಮನಲ್ಲಿ ಜಿನಾಗಮಮಂ ಎಂದವರು -ಪಂಪ

☘ಪಂಪನ ಆದಿಪುರಾಣಕ್ಕೆ ಆಕರ ಗ್ರಂಥ -ಜಿನಸೇನಾಚಾರ್ಯನಸಂಸ್ಕೃತದ ಪೂರ್ವಪುರಾಣ

☘ ಚಲದೊಳ್ ದುರ್ಯೋಧನಂ ನನ್ನಿಯೊಳ್ ಇನಯತನಯಂ ಗಂಡಿನೊಳ್ ಭೀಮಸೇನಂ ಎಂಬ ವರ್ಣನೆಯಿರುವ ಕೃತಿ
-ಪಂಪಭಾರತ ( ವಿಕ್ರಮಾರ್ಜುನ ವಿಜಯ )

☘ಪಸರಿಪ ಕನ್ನಡಕ್ಕೊಡೆಯನೋರ್ವನೆ ಸತ್ಕವಿ ಪಂಪನಾವಗಂ ಎಂದು ಹೇಳಿದವರು -ನಾಗರಾಜ

☘ಪಂಪನನ್ನು ಕನ್ನಡ ಕಾಳಿದಾಸ ಎಂದು ಕರೆದವರು -ತೀನಂಶ್ರೀ

☘ಪೊನ್ನನ ಪ್ರಸಿದ್ಧ ಕೃತಿ -ಶಾಂತಿ ಪುರಾಣ

☘ಭುವನೈಕ ರಾಮಾಭ್ಯದಯ ಗ್ರಂಥದ ಮತ್ತೊಂದು ಹೆಸರು -ರಾಮಕಥೆ

☘ಶಾಂತಿಪುರಾಣವು ೧೯ನೇ ತೀರ್ಥಂಕರನಾದ ಶಾಂತಿನಾಥನ ಚರಿತ್ರೆಯನ್ನೊಳಗೊಂಡಿದೆ (ಚಂಪೂ )

☘ಪೊನ್ನನಿಗಿದ್ದ ಬಿರುದು -ಕವಿಚಕ್ರವರ್ತಿ

☘ರನ್ನನ ತಂದೆ ತಾಯಿ -ಜಿನವಲ್ಲಭ ಅಬ್ಬಲಬ್ಬೆ

☘ರನ್ನನಿಗೆ ಆಶ್ರಯ ನೀಡಿದ್ದ ದೊರೆ -ಸತ್ಯಾಶ್ರಯ (ಇರುವೆ ಬೆಡಂಗ ಚಾಲುಕ್ಯ ದೊರೆ

☘ರನ್ನನ ಕೃತಿಗಳು
—-ರನ್ನಕಂದ (ನಿಘಂಟು)
— ಪರುಶುರಾಮಚರಿತ
ಚಕ್ರೆಶ್ವರ ಚರಿತ ಅಜಿತತೀರ್ಥೇಶ್ವರಚರಿತೆ (ಅಜಿತತಿರ್ಥಂಕರ ಪುರಾಣ ) ಆಗಮಿಕ ಕಾವ್ಯ ಸಾಹಸ ಭೀಮ ವಿಜಯ (ಲೌಕಿಕ ಕಾವ್ಯ )

☘ಸಿಂಹಾವಲೋಕನ ಕ್ರಮದಿಂದ ಕಾವ್ಯವನ್ನು  ಅರುಪಿದವನು -ರನ್ನ

☘ಚಾವುಂಡರಾಯನ ಚಾವುಂಡರಾಯ ಪುರಾಣಕ್ಕಿರುವ ಮತ್ತೊಂದು ಹೆಸರು -ತ್ರಿಷಷ್ಟಿಲಕ್ಷಣಮಹಾಪುರಾಣ

☘ಕರ್ನಾಟಕ ಕಾದಂಬರಿಯ ಕರ್ತೃ -೧ನೇ ನಾಗವರ್ಮ

☘ಕನ್ನಡದಲ್ಲಿನ ಮೊದಲನೆಯ ಛಂದಶಾಸ್ತ್ರ ಗ್ರಂಥ -ಛಂದೋಬುದಿ (೧ನೇ ನಾಗವರ್ಮ)

☘ಕನ್ನಡದ ಮೊದಲನೆಯ ಜೋತಿಷ್ಯ ಗ್ರಂಥ -ಜಾತಕ ತಿಲಕ

☘ರಾಮಚಂದ್ರ ಚರಿತ ಪುರಾಣ (ಪಂಪರಾಮಾಯಣ) ಕೃತಿಯ ಕರ್ತೃ -ನಾಗಚಂದ್ರ

☘ಮಲ್ಲಿನಾಥ ಪುರಾಣ ಗ್ರಂಥ ಬರೆದವರು -ನಾಗಚಂದ್ರ

☘ಧರ್ಮಾಮೃತ ಗ್ರಂಥದ ಕರ್ತೃ-ನಯಸೇನ

☘ಕನ್ನಡದಲ್ಲಿ ಉಪಲಬ್ದವಾದ ಮೊದಲನೆಯ ಜೈನ ರಾಮಾಯಣ -ರಾಮಚಂದ್ರಚರಿತ ಪುರಾಣ (ನಾಗಚಂದ್ರ )

☘ಅಭಿನವ ಪಂಪ ಎಂದು ಕರೆದು ಕೊಂಡಿರುವವನು -ನಾಗಚಂದ್ರ

☘ನೇಮಿನಾಥ ಪುರಾಣದ ಆಕಾರ ಗ್ರಂಥ -ಉತ್ತರ ಪುರಾಣ

☘ನೇಮಿನಾಥ ಪುರಾಣದ ಕರ್ತೃ -ಕರ್ಣಪಾರ್ಯ

☘ಯೋಗಾಂಗ ತ್ರಿವಿಧಿಯ ಕರ್ತೃ -ಅಕ್ಕಮಹಾದೇವಿ

☘ಹರಿಹರನ ಗಿರಿಜಾಕಲ್ಯಾಣವು -ಚಂಪೂಶೈಲಿಯಲ್ಲಿದೆ

☘ಹರಿಹರನ ಪಂಪಾಶತಕ ಕೃತಿಯು -ವೃತ್ತ ಛಂದಸ್ಸಿನಲ್ಲಿದೆ

☘.ರಾಘವಾಂಕನ ಉದ್ದಂಡ ಷಟ್ಪದಿಯಲ್ಲಿರುವ ಕೃತಿ -ವೀರೆಷ ಚರಿತೆ

☘ಅನಂತನಾಥ ಪುರಾಣ ದ ಕರ್ತೃ -ಜನ್ನ (ಚಂಪೂ)

 ☘.ಕೇಶಿರಾಜನ ಶಬ್ದಮಣಿದರ್ಪಣ ಕೃತಿಯು (ಕರ್ನಾಟಕ ಲಕ್ಷಣ ಶಬ್ದಶಾಸ್ತ್ರ ) -ಕಂದಪದ್ಯದಲ್ಲಿದೆ ೮ ಪ್ರಕರಣ

☘ಜನ್ನ ಕವಿಗೆ ಆಶ್ರಯ ನೀಡಿದ ದೊರೆ -ವೀರಬಲ್ಲಾಳ ನರಸಿಂಹ

☘ಕನ್ನಡದ ಮೊದಲನೆಯ ಸಂಕಲನ ಗ್ರಂಥ -ಸೂಕ್ತಿ ಸುಧಾರ್ಣವ

☘.ಕನ್ನಡದ ಮೊದಲ ವ್ಯಾಕರಣ ಗ್ರಂಥ ಹಳಗನ್ನಡ:  -ಶಬ್ದಮಣಿದರ್ಪಣ (ಕೇಶಿರಾಜ)

No comments:

ಪ್ರಮುಖ ಅಂಶಗಳು

ಮೊರಾರ್ಜಿ ಪ್ರವೇಶ ಪರೀಕ್ಷೆ 2023-24 ನೇ ಸಾಲಿಗೆ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ / ಅಟಲ್‌ ಬಿಹಾರಿ ವಾಜಪೇಯಿ / ಡಾ.ಬಿ.ಆರ್.‌ ಅಂಬೇಡ್ಕರ್‌ ...

ಪ್ರಮುಖ ಕಲಿಕಾಂಶಗಳು