ಶಿಕ್ಷಣವೇ ಶಕ್ತಿ

Thursday 29 April 2021

ಜಿಲ್ಲಾ ದರ್ಶನ

ರಾಯಚೂರು ಜಿಲ್ಲೆ

ಭಾರತದಲ್ಲಿ ಇರುವ ಕರ್ನಾಟಕದ ಒ೦ದು ಜಿಲ್ಲೆ.


ರಾಯಚೂರು ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿರುವ, ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಜಿಲ್ಲೆ. ರಾಯಚೂರು ಜಿಲ್ಲೆಯ ಜನಸಂಖ್ಯೆ ೨೦೦೧ ರ ಜನಗಣತಿಯಂತೆ ೧೬,೪೮,೨೧೨. ರಾಯಚೂರು ಜಿಲ್ಲೆಯಲ್ಲಿ 8 ತಾಲೂಕುಗಳಿವೆ: ರಾಯಚೂರು, ದೇವದುರ್ಗಸಿಂಧನೂರುಮಾನವಿ,, ಲಿಂಗಸುಗೂರು, ಮಸ್ಕಿ , ಸಿರಿವಾರ ಮತ್ತು ಅರಕೇರಾ. ಜಿಲ್ಲಾಕೇಂದ್ರ ರಾಯಚೂರು ನಗರ. ಇದು ಬೆಂಗಳೂರಿನಿಂದ ೪೦೯ ಕಿ. ಮೀ. ದೂರದಲ್ಲಿದೆ.

ರಾಯಚೂರು, ಕರ್ನಾಟಕ

ಇತಿಹಾಸ

ಸಾಮ್ರಾಟ್ ಅಶೋಕನ ಕುರಿತ ದೇಶದ ಅತಿಮುಖ್ಯ ಶಿಲಾಶಾಸನಗಳಲ್ಲಿ ಒಂದೆನಿಸಿದ ಮಸ್ಕಿ ಶಾಸನವು, ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ದೊರೆತಿರುವುದು ರಾಯಚೂರಿನ ಶ್ರೀಮಂತ ಇತಿಹಾಸಕ್ಕೆ ಒಂದು ಐತಿಹಾಸಿಕ ಸಾಕ್ಷಿ.

ಭಾರತದ ಸ್ವಾತಂತ್ರ ಹೋರಾಟ ಮತ್ತು ನಂತರದ ಹೈದ್ರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟದಲ್ಲಿ ಈ ಜಿಲ್ಲೆಯ ಜನತೆಯ ಪಾತ್ರ ಪ್ರಮುಖವಾದುದು. ರಾಯಚೂರು ಕೋಟೆ ರಾಯಚೂರು ನಗರದ ಚಾರಿತ್ರಿಕ ಆಕರ್ಷಣೆಗಳಲ್ಲಿ ಒಂದು - ಇದನ್ನು ೧೨೯೪ ರಲ್ಲಿ ಕಟ್ಟಲಾಯಿತು. ರಾಯಚೂರಿನ ಇನ್ನೊಂದು ವಿಶೇಷತೆಯೆಂದರೆ ವಿಜಯನಗರ ಸಾಮ್ರಾಜ್ಯ ಮತ್ತು ಬಹುಮನಿ ಸಾಮ್ರಾಜ್ಯಗಳ ಅರಸರ ಕಾಲದಲ್ಲಿ ಈ ಪ್ರದೇಶ ಹೋರಾಟದ ನೆಲವಾಗಿತ್ತು.

ಭೌಗೋಳಿಕ ಲಕ್ಷಣಗಳು

ಜಿಲ್ಲೆಯ ದಕ್ಷಿಣದಲ್ಲಿ ತುಂಗಭದ್ರಾ ನದಿ ಹಾಗೂ ಉತ್ತರದಲ್ಲಿ ಕೃಷ್ಣಾ ನದಿಯು ಹರಿಯುತ್ತಿದ್ದು, ಬಹುತೇಕ ಬಯಲು ಪ್ರದೇಶವನ್ನು ಹೊಂದಿದೆ. ಲಿಂಗಸೂಗೂರು, ದೇವದುರ್ಗ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಚಿನ್ನದ ಅದಿರಿನ ನಿಕ್ಷೇಪಗಳಿವೆ.

ಕೊರತೆಗಳು

ಮಳೆಯ ಕೊರತೆ, ನೀರಿನ ಅಭಾವ ಜಿಲ್ಲೆಯ ಸಾಮಾನ್ಯ ಸಮಸ್ಯೆಗಳಾದರೆ, ಅತಿಯಾದ ಬಿಸಿಲು ಜಿಲ್ಲೆಯ ಮತ್ತೊಂದು ಲಕ್ಷಣ.

ಹವಾಗುಣ

ಜಿಲ್ಲೆಯ ಹವಾಗುಣವು ಬಹುತೇಕ ಒಣ ಹವೆ ಇರುತ್ತದೆ. ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ ೪೫ ಡಿಗ್ರಿವರೆಗೆ ಉಷ್ಣತೆ ಇರುತ್ತದೆ.

ಜಿಲ್ಲೆಯ ಪ್ರಮುಖರು

  • ವಿಜಯದಾಸರು, ಹರಿದಾಸರು
  • ಶ್ರೀ ಚನ್ನಬಸವಪ್ಪ ಬೆಟ್ಟದೂರು, ಹಿರಿಯ ಸ್ವಾತಂತ್ರ ಹೋರಾಟಗಾರರು, ರೈತ ಹೋರಾಟಗಾರರು, ವಿಚಾರವಾದಿಗಳು
  • ಶ್ರೀ ಶಂಕರಗೌಡ ಬೆಟ್ಟದೂರು, ಹಿರಿಯ ಸ್ವಾತಂತ್ರ ಹೋರಾಟಗಾರರು, ಚಿತ್ರ ಕಲಾವಿದರು
  • ಶ್ರೀ ಶಿವರಾಜ ಪಾಟೀಲ್ , ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರು
  • ಶ್ರೀ ಜೆ.ಎಚ್.ಪಾಟೀಲ್, ನಿವೃತ್ತ ಕಾನೂನು ಉಪಕುಲಪತಿಗಳು
  • ಶ್ರೀ ಡಾ. ಪಂ. ನರಸಿಂಹಲು ವಡವಾಟಿ, ವಿಶ್ವ ವಿಖ್ಯಾತ ಕ್ಲಾರಿಯೋನೆಟ್ ವಾದಕರು, ಮಾಜಿ ಅಧ್ಯಕ್ಷರು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ.
  • ಸೈಯದ್ ಯಾಸೀನ್, ಮಾಜಿ ಶಾಸಕರು
  • ತಿಪ್ಪರಾಜು ಹವಾಲ್ದಾರ
  • ವಡವಾಟಿ ಶಾರದಾ ಭರತ್, ಹಿಂದೂಸ್ಥಾನಿ ಮತ್ತು ವಚನ ಸಂಗೀತ ಗಾಯಕರು, ಸದಸ್ಯರು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ.
  • ದಿವಂಗತ ವೆಂಕಟೇಶ್ ನಾಯಕ, ಮಾಜಿ ಸಂಸದ
  • ಶ್ರೀ ಹಂಪಯ್ಯನಾಯಕ, ಶಾಸಕರು, ಮಾನವಿ.
  • ಶ್ರೀ ಗಂಗಾಧರ ನಾಯಕ್, ಮಾಜಿ ಶಾಸಕರು
  • ಶ್ರೀ ಪ್ರತಾಪ ಗೌಡ ಪಾಟೀಲ್,ಮಾಜಿ ಶಾಸಕರು

ಪ್ರಾಮುಖ್ಯತೆ

  • ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ಇರುವ ಶಾಖೋತ್ಪನ್ನ ವಿದ್ಯುತ್‌ಸ್ಥಾವರ ಕರ್ನಾಟಕದಲ್ಲಿ ಬಳಸಲ್ಪಡುವ ವಿದ್ಯುಚ್ಛಕ್ತಿಯ ಪ್ರಮುಖ ಕೇಂದ್ರಗಳಲ್ಲಿ ಒಂದಾಗಿದೆ.
  • ಜಿಲ್ಲೆಯ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಪ್ರಮುಖವಾಗಿದೆ.
  • ಲಿಂಗಸೂಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿಯು ದೇಶದಲ್ಲಿಯೇ ಅತಿ ಹೆಚ್ಚು ಚಿನ್ನದ ಅದಿರು ಹೊಂದಿರುವ ಗಣಿಯಾಗಿದೆ. ಅಶೋಕನ ಕಾಲದ ಮಸ್ಕಿ ಶಾಸನ ದೊರೆತಿರುವುದು ಇದೇ ತಾಲೂಕಿನ ಮಸ್ಕಿಯಲ್ಲಿದೆ. ಇದೇ ಶಾಸನದಲ್ಲಿ ದೇವನಾಂಪ್ರಿಯಸ ಅಸೋಕಸ ಎನ್ನುವ ಪ್ರಸಿದ್ಡ ಸಾಲಿದೆ.
  • ಸಿಂಧನೂರು ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದಲ್ಲಿ ಭತ್ತ ಬೆಳೆಯುವ ಪ್ರದೇಶವಾಗಿದೆ.
  • ಸಿಂಧನೂರು ತಾಲ್ಲೂಕಿನ ಸೋಮಲಾಪುರ ಗ್ರಾಮದ ಅಂಭಾಮಠದ ಅಂಭಾದೇವಿಯ ಜಾತ್ರೆ ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದೆ.
  • ಲಿಂಗಸೂಗೂರು ತಾಲ್ಲೂಕಿನ ಮುದುಗಲ್ ನಲ್ಲಿ ಐತಿಹಾಸಿಕ ಕೋಟೆ ಇದ್ದು, ಮೊಹರಂ ಆಚರಣೆ ವಿಜೃಂಭಣೆಯಿಂದ ಜರಗುತ್ತದೆ.
  • ಜಲದುರ್ಗದಲ್ಲಿರುವ ಕೋಟೆ, ಅತ್ಯಂತ ವಿಶೇಷವಾಗಿ ನಿರ್ಮಿಸಲಾದ ಕೋಟೆಗಳಲ್ಲಿ ಒಂದಾಗಿದೆ.ಜೊತೆಗೆ ಇಲ್ಲಿ ಕಂಡು ಬರುವ ರಕ್ಷಣಾ ವಾಸ್ತುಶಿಲ್ಪ ತುಂಬಾ ವಿಶೇಷ ವಾದದ್ದು.
  • ಮಂತ್ರಾಲಯವು ರಾಯಚೂರಿನಿಂದ ಹತ್ತಿರದಲ್ಲಿದೆ.
  • ಮಾನವಿ ಕೊನೆಯ ತಾಲೂಕು. ಈ ಮಾನವಿಯಲ್ಲಿ ದಾಸ ಸಾಹಿತ್ಯ ಉಗಮವಾಗಿದ್ದು. ವಿಜಯ ದಾಸರು ಮಾನವಿ ತಾಲೂಕಿನವರು.

ಇದನ್ನೂ ನೋಡಿ

ರಾಯಚೂರು ; ಪ್ರಸಕ್ತ ಸಾಲಿನ ನಾನಾ ವಿಭಾಗಗಳ ಡಿಪ್ಲೊಮಾ ಪ್ರವೇಶಕ್ಕೆ ಆಸಕ್ತ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35 ಅಂಕಗಳೊಂದಿಗೆ ತೇರ್ಗಡೆಯಾದ ಮೂಳೆ ಮತ್ತು ಕೀಲು ವಿಕಲಚೇತನರು, ಶೇ.40 ಹಾಗೂ ಮೇಲ್ಪಟ್ಟು, ಕಿವುಡು ಮತ್ತು ಮೂಗು ವಿಕಲಚೇತನರ ಶೇ.60 ಡಿಬಿ ಮತ್ತು ಮೇಲ್ಪಟ್ಟು ಹಾಗೂ ಭಾಗಶಃ ಮತ್ತು ಪೂರ್ಣ ಅಂಧತ್ವ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿಗಳು ಸಾಮಾನ್ಯರಿಗೆ 100 ರೂ. ಹಾಗೂ ಇತರರಿಗೆ 50 ರೂ. ಶುಲ್ಕವನ್ನು ಡಿಡಿ ಇಲ್ಲವೇ ಎಂಒ ಮೂಲಕ ಪಡೆದು ಜೂ.10 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2548315 ಕ್ಕೆ ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

ಬಾಹ್ಯ ಅಂತರ್ಜಾಲ ಸಂಪರ್ಕಗಳು

ಪ್ರಮುಖ ಅಂಶಗಳು

ಮೊರಾರ್ಜಿ ಪ್ರವೇಶ ಪರೀಕ್ಷೆ 2023-24 ನೇ ಸಾಲಿಗೆ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ / ಅಟಲ್‌ ಬಿಹಾರಿ ವಾಜಪೇಯಿ / ಡಾ.ಬಿ.ಆರ್.‌ ಅಂಬೇಡ್ಕರ್‌ ...

ಪ್ರಮುಖ ಕಲಿಕಾಂಶಗಳು