ಶಿಕ್ಷಣವೇ ಶಕ್ತಿ

Friday 14 May 2021

ಜಗಜ್ಯೋತಿ ಬಸವೇಶ್ವರರು

ಬಸವೇಶ್ವರ

ಸಮಾಜ ಸುಧಾರಕ


ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು. ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು ಅನುಭವ ಮಂಟಪ (ಅಥವಾ, "ಆಧ್ಯಾತ್ಮಿಕ ಅನುಭವದ ಭವನ), ಇಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷ ಮತ್ತು ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚಿಸಲು ಸ್ವಾಗತಿಸಿತು.ಬಸವಣ್ಣನವರ ಜೊತೆ ೭೭೦ ಅಮರಗಣಂಗಳು ಇದ್ದರೆಂದು ಮತ್ತು ೧,೯೬,೦೦೦ ಶರಣರಿದ್ದರೆಂದು ಐತಿಹಾಸಿಕ ಪುರಾವೆಗಳಿವೆ.  

Quick Facts ಜಗದ್ಗುರು ಬಸವೇಶ್ವರ, ಜನನ ...

ಜಗದ್ಗುರು ಬಸವೇಶ್ವರ
ಗುರು ಬಸವಣ್ಣ
ಜನನಕ್ರಿ.ಶ. ೧೧೩೪
ಬಸವನ ಬಾಗೇವಾಡಿ ವಿಜಯಪುರ ಜಿಲ್ಲೆಕರ್ನಾಟಕಭಾರತ
ಮರಣಕ್ರಿ.ಶ. ೧೧೯೬
ಕೂಡಲಸಂಗಮಕರ್ನಾಟಕಭಾರತ
ಗೌರವಗಳು/honoursಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ
ತತ್ವಶಾಸ್ತ್ರಶರಣ ಶರಣೆಯರ ಲಿಂಗಾಯತ ದರ್ಶನ",
ಸಾಹಿತ್ಯದ ಕೆಲಸಗಳುವಚನ ಸಾಹಿತ್ಯ ವಚನಗಳು
ನುಡಿಅರಿತಡೆ ಶರಣ-ಮರೆತಡೆ ಮಾನವ , ಕಾಯಕ ದಾಸೋಹ , ಜಂಗಮ
ಅಧ್ಯಾತ್ಮಜ್ಞಾನೀ ಅರ್ಥಶಾಸ್ತ್ರಜ್ಞ

ಸಾಂಪ್ರದಾಯಿಕ ದಂತಕಥೆಗಳು ಮತ್ತು ವಿದ್ವತ್ಪೂರ್ಣ ಗ್ರಂಥಗಳು ಲಿಂಗಾಯ ಸ್ಥಾಪಕ ಬಸವಣ್ಣ ಎಂದು ಉಲ್ಲೇಖಿಸುತ್ತವೆ . ಆದಾಗ್ಯೂ, ಆಧುನಿಕ ಕಲಾಚುರಿ ಶಾಸನಗಳಂತಹ ಐತಿಹಾಸಿಕ ಸಾಕ್ಷ್ಯವನ್ನು ಅವಲಂಬಿಸಿದೆ ಬಸವ ಕವಿ ತತ್ತ್ವಜ್ಞಾನಿಯಾಗಿದ್ದು, ಈಗಾಗಲೇ ಅಸ್ತಿತ್ವದಲ್ಲಿದ್ದ ಸಂಪ್ರದಾಯವನ್ನು ಸಂಸ್ಕರಿಸಿದರು ಮತ್ತು ಶಕ್ತಿಯನ್ನು ತುಂಬಿದರು ಎಂದು ಉಲ್ಲೇಖಿಸುತ್ತವೆ.ಕನ್ನಡ ಕವಿ ಹರಿಹರರಿಂದ ರಚಿತ (c.1180) ಬಸವರಾಜದೇವರ ರಗಳೆ (ಸಿ.ಎಸ್ .8080 ರಲ್ಲಿ 25 ವಿಭಾಗಗಳು ಲಭ್ಯವಿದೆ) ಸಾಮಾಜಿಕ ಸುಧಾರಕನ ಜೀವನದ ಬಗ್ಗೆ ಲಭ್ಯವಿರುವ ಅತ್ಯಂತ ಆರಂಭಿಕ ಖಾತೆಯಾಗಿದೆ ಮತ್ತು ಲೇಖಕನು ತನ್ನ ನಾಯಕನ ಸಮಕಾಲೀನ ಸಮೀಪದಲ್ಲಿದ್ದ ಕಾರಣದಿಂದಾಗಿ ಅದು ಮುಖ್ಯವೆಂದು ಪರಿಗಣಿಸಲಾಗಿದೆ.ಬಸವನ ಜೀವನ ಮತ್ತು ವಿಚಾರಗಳ ಸಂಪೂರ್ಣ ವಿವರ 13 ನೇ ಶತಮಾನದ ಪವಿತ್ರ ತೆಲುಗು ಪಠ್ಯ ಪಾಲ್ಕುರಿಕಿ ಸೋಮನಾಥರ ಬಸವ ಪುರಾಣದಲ್ಲಿ ನಿರೂಪಿಸಲ್ಪಟ್ಟಿದೆ. ಬಸವ ಸಾಹಿತ್ಯ ಕೃತಿಗಳು ಕನ್ನಡ ಭಾಷೆಯಲ್ಲಿ ವಚನ ಸಾಹಿತ್ಯವನ್ನು ಒಳಗೊಂಡಿದೆ.ಅವರನ್ನು ಭಕ್ತಿಭಂಡಾರಿ ಎಂದೂ ಕರೆಯುತ್ತಾರೆ (ಅಕ್ಷರಶಃ, ಭಕ್ತಿಯ ಖಜಾಂಚಿ),ಬಸವಣ್ಣ (ಹಿರಿಯ ಸಹೋದರ ಬಸವ) ಅಥವಾ ಬಸವೇಶ್ವರ .

ಬಾಲ್ಯ ಜೀವನ

ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾರೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.

ಬಸವಣ್ಣ ಹನ್ನೆರಡು ವರ್ಷಗಳ ಕಾಲ ಕುಂಡಲಸಂಗಮದಲ್ಲಿ ಹಿಂದೂ ದೇವಸ್ಥಾನದಲ್ಲಿ ಅಧ್ಯಯನ ಮಾಡುತ್ತಿದ್ದರು.ನಂತರ ಲಕುಲಿಶಾ-ಪಶುಪಾಟ ಸಂಪ್ರದಾಯದ ಒಂದು ಶೈವ ಕಲಿಕೆಯ ಕಲಿಕೆಯಲ್ಲಿ ಸಂಗಮೇಶ್ವರದಲ್ಲಿ ಮುಗಿಸಿದರು ಬಸವ ತನ್ನ ತಾಯಿಯ ಕಡೆಯಿಂದ ಸೋದರ ಸಂಬಂಧಿಯನ್ನು ಮದುವೆಯಾದ. ಅವರ ಪತ್ನಿ ಗಂಗಾಂಬಿಕೆ ಕಲಚುರಿ ರಾಜ ಬಿಜ್ಜಳ ಪ್ರಧಾನ ಮಂತ್ರಿಯ ಮಗಳು,

ಧಾರ್ಮಿಕ ಬೆಳವಣಿಗೆಗಳು

[ಸೂಕ್ತ ಉಲ್ಲೇಖನ ಬೇಕು]

  • ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವನಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾಮೋಹ ಹೊಂದುವುದು ಘೋರ ಅಪರಾಧ.
  • ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗ ಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು.
  • ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಎಂದೂ ಕರೆಯಲಾಗುತ್ತದೆ. ಮಾನವಿಯತೆ. ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು.
  • ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ.
  • ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ.
  • ಬೆಳಗಾವಿ ಜಿಲ್ಲೆಯ ಅರ್ಜುನವಾಡದ ಶಿಲಾಶಾಸನದಲ್ಲಿ ಉಲ್ಲೇಖಿತವಾಗಿರುವ ಸಂಗಣಬಸವ ಎಂಬ ಹೆಸರು ವಚನಕಾರ ಬಸವಣ್ಣನವರದ್ದೇ ಎಂದು ವಿದ್ವಾಂಸರು ಊಹಿಸಿದ್ದಾರೆ. "ನಮನ" ( ಪ್ರೊ.ಚಿದಾನಂದ ಮೂರ್ತಿ­ಯವರಂಥ ಹಿರಿ­ಯರೂ ಕೆಲವು ಗೌರವಾನ್ವಿತ ಸಂಪ್ರದಾಯ ಪರಾ­ಯಣ ಮಠಾಧಿಪತಿಗಳೂ ವೀರಶೈವ ಧರ್ಮದ ಪ್ರತ್ಯೇಕ ಅಸ್ತಿತ್ವ­ವನ್ನೊಪ್ಪದೆ ಅದು ಹಿಂದೂ ಧರ್ಮದ ಒಂದು ಭಾಗವೆಂದು ಘಂಟಾ­ಘೋಷವಾಗಿ ಸಾರಿದ್ದಾರೆ.

ಸಾಮಾಜಿಕ ಸಮಾನತೆ

[ಸೂಕ್ತ ಉಲ್ಲೇಖನ ಬೇಕು]

ಅಣ್ಣ ಬಸವಣ್ಣ

ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ
ಇವ ನಮ್ಮವ ಇವ ನಮ್ಮವ ಇವ ನಮ್ಮವ ನೆಂದೆನಿಸಯ್ಯಾ
ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ.

  • ಶೂದ್ರರಾದ ರೈತಾಪಿ ಜನರು, ಕಾಯಕಜೀವಿಗಳು, ಮಹಿಳೆಯರು ಮತ್ತು ಪಂಚಮರು ಈ ದೇಶದಲ್ಲಿ ಸಹಸ್ರಾರು ವರ್ಷಗಳಿಂದ ಮನುಧರ್ಮದ ಪುರುಷ ಪ್ರಧಾನವಾದ ವರ್ಣ ವ್ಯವಸ್ಥೆಯಿಂದಾಗಿ ಪಡಬಾರದ ಕಷ್ಟಪಟ್ಟಿದ್ದಾರೆ. ಮೇಲ್ವರ್ಗ ಮತ್ತು ಮೇಲ್ಜಾತಿಯ ಅನುತ್ಪಾದಕ ಪುರುಷರಿಗಾಗಿಯೇ ಬದುಕಿನ ಎಲ್ಲ ಸುಖಭೋಗಗಳು ಮೀಸಲಾಗಿದ್ದವು. ಇವರು ಮಾತ್ರ ಜನಿವಾರ ಧರಿಸುವ ಹಕ್ಕನ್ನು ಪಡೆದಿದ್ದರು.
  • ಜನಿವಾರ ಧರಿಸುವ ಬ್ರಾಹಣ ಓದಿರಬಹುದು, ಬರೆದಿರಬಹುದು ಆದರೆ ಕಾಯಕಜೀವಿಯಾಗಿ ಉತ್ಪಾದನೆಯಲ್ಲಿ ತೊಡಗಿಲ್ಲ. ಉತ್ಪಾದನೆಯ ಅನುಭವದಿಂದ ಬರುವ ಜ್ಞಾನವನ್ನು ಹಿಂದಿನ ಕಾಲದಲ್ಲಿ ಅವನೆಂದೂ ಪಡೆಯಲಿಲ್ಲ. ಕ್ಷತ್ರಿಯ ಕಾದಿರಬಹುದು ಆದರೆ ಉತ್ಪಾದನೆಯಲ್ಲಿ ತೊಡಗಲಿಲ್ಲ. ವೈಶ್ಯ ವಸ್ತುಗಳ ಮಾರಾಟ ಮಾಡಿರಬಹುದು, ಕೃಷಿಭೂಮಿಯ ಒಡೆಯನೂ ಆಗಿರಬಹುದು ಆದರೆ ಸ್ವತಃ ಉತ್ಪಾದನೆ ಮಾಡಲಿಲ್ಲ. ಈ ಮೂರೂ ವರ್ಣದವರಿಗೂ ಜನಿವಾರ ಇದೆ.
  • ಆದರೆ ಉತ್ಪಾದನೆಯಲ್ಲಿ ತೊಡಗಿದ ಕಾಯಕ ಜೀವಿಗಳಿಗೆ ಮತ್ತು ಪಂಚಮರಿಗೆ ಜನಿವಾರ ಇಲ್ಲ. ಯಾರಿಗೆ ಜನಿವಾರ ಇತ್ತೋ ಅವರು ದುಡಿಯದೆ ಸುಖ ಜೀವನವನ್ನು ಅನುಭವಿಸಿದರು. ಯಾರಿಗೆ ಜನಿವಾರ ಇದ್ದಿದ್ದಿಲ್ಲವೂ ಅವರು ದುಡಿದೂ ಕಷ್ಟ ಜೀವನವನ್ನು ಅನುಭವಿಸಿದರು. ಅಂತೆಯೆ ಬಸವಣ್ಣನವರು ಕಟ್ಟ ಕಡೆಗೆ ಮನುಷ್ಯನ ಕಡೆಗೆ ಬಂದರು ಈ ಅನ್ಯಾಯದ ವಿರುದ್ಧ ಸಿಡಿದೆದ್ದರು.
  • "ಜಾತಿ ಸಂಕರವಾದ ಬಳಿಕ ಕುಲವನರಸುವರೆ ?" ಎಂದು ಪ್ರಶ್ನಿಸಿ ಕಾಯಕಜೀವಿಗಳ ಕೇಂದ್ರಿತ ಶರಣ ಸಂಕುಲವನ್ನು ಸೃಷ್ಟಿಸಿದರು. ವಿವಿಧ ಕಾಯಕಗಳ ಶೂದ್ರರಿಗೆ, ಮಹಿಳೆಯರಿಗೆ ಮತ್ತು ಪಂಚಮರಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವ ವ್ಯವಸ್ಥೆ ಮಾಡಿದರು. ಅವರೆಲ್ಲ ಅನುಭವ ಮಂಟಪದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು.
  • ಭಾರತದಲ್ಲಿ ವಿವಿಧ ಜಾತಿಗಳ ಕಾಯಕಜೀವಿಗಳು ಮೊದಲ ಬಾರಿಗೆ ಜಾತಿಯನ್ನು ಮೀರಿ ಒಂದು ವರ್ಗವಾಗಿದ್ದು ಶರಣ ಸಂಕುಲದಲ್ಲಿ ಎಂಬುದು ಹೆಮ್ಮೆಯ ವಿಚಾರವಾಗಿದೆ. ಅವರೆಲ್ಲ ತಮ್ಮ ಕಾಯಕಗಳ ಹೆಸರುಗಳನ್ನು ಅಭಿಮಾನದಿಂದ ಉಳಿಸಿಕೊಂಡರು. ಆದರೆ ಆ ಕಾಯಕಗಳ ಒಳಗೆ ಇದ್ದ ಜಾತಿ ವಿಷವನ್ನು ಹೊರ ಹಾಕಿದರು. ಹೀಗೆ ಶರಣರಲ್ಲಿ ಸಮಗಾರ, ಮಾದಾರ, ಮೇದಾರ, ಡೋಹರ, ಅಂಬಿಗ ಮುಂತಾದ ಪದಗಳು ಜಾತಿ ಸೂತಕವನ್ನು ಕಳೆದುಕೊಂಡು ಕಾಯಕ ಸೂಚಕಗಳಾಗಿ ಉಳಿದವು.

ಸಂಕ್ಷಿಪ್ತ ಪರಿಚಯ

  • ವಿಶ್ವಗುರು ಬಸವಣ್ಣನವರು ಪರಮಾತ್ಮನ ಕರುಣೆಯ ಕಂದರಾಗಿ ಅವತರಿಸಿ, ಲೋಕಕ್ಕೆ ಹೊಸ ಧರ್ಮವೊಂದನ್ನು ಕೊಟ್ಟರು. ಇಂಗಳೇಶ್ವರ ಬಾಗೇ ವಾಡಿಯಲ್ಲಿ ಶೈವ ಬ್ರಾಹ್ಮಣ ದಂಪತಿಗಳಾದ ಮಾದರಸ-ಮಾದಲಾಂಬಿಕೆಯರ ಮಗನಾಗಿ ಆನಂದನಾಮ ಸಂವತ್ಸರದಲ್ಲಿ ವೈಶಾಖಮಾಸದ ಅಕ್ಷಯ ತೃತೀಯದಂದು (ದಿ. ಎಪ್ರಿಲ್ ೩೦ ೧೧೩೪) ರೋಹಿಣಿ ನಕ್ಷತ್ರದಲ್ಲಿ ಜನಿಸಿದರು.
  • ಇವರು ಯಾವುದೇ ಅಂಧಶ್ರದ್ಧೆ ಜಡ ಸಂಪ್ರದಾಯಗಳನ್ನೊಪ್ಪದ ಸತ್ಯಾನ್ವೇಷಕರಾಗಿ ಹೆತ್ತವರನ್ನು, ಬಂಧು ಬಾಂಧವರನ್ನು ತೊರೆದು ವಿದ್ಯಾಕಾಂಕ್ಷಿಯಾಗಿ ಕೂಡಲ ಸಂಗಮದ ಗುರುಕುಲಕ್ಕೆ ಬಂದರು. ಶಾಸ್ತ್ರಾಧ್ಯಯನ, ಯೋಗಾಭ್ಯಾಸಗಳಲ್ಲಿ ಬಾಲ್ಯವನ್ನು ಕಳೆದು ತಾರುಣ್ಯಕ್ಕೆ ಕಾಲಿರಿಸಿದರು. ಜನರಲ್ಲಿ ಮನೆ ಮಾಡಿಕೊಂಡಿದ್ದ ಮೌಢ್ಯತೆ, ಕಂದಾಚಾರ, ಜಾತೀಯತೆಗಳನ್ನು ಕಂಡು ಮನನೊಂದು ಪರಿಹಾರವನ್ನು ಅರಸತೊಡಗಿದರು.
  • ಒಂದು ದಿನ (ದಿ. ೧೪ನೇ ಜನವರಿ ೧೧೫೫) ಪರಮಾತ್ಮನ ದಿವ್ಯ ದರ್ಶನವಾಯಿತು; ಅನುಗ್ರಹಿತರಾದರು. ಬ್ರಹ್ಮ-ವಿಷ್ಣು-ಮಹೇಶ್ವರರೆಂಬ ತ್ರಿಮೂರ್ತಿಗಳನ್ನು ಮೀರಿದ ಸೃಷ್ಟಿಕರ್ತನೇ ಶ್ರೇಷ್ಠವೆಂದು ಘೋಷಿಸಿ ಆ ದೇವನನ್ನು ಲಿಂಗದೇವ ಎಂದು ಕರೆದರು. ನಿರಾಕಾರ ದೇವನಿಗೆ ಮನುಷ್ಯರ, ಪ್ರಾಣಿಗಳ ಆಕಾರ ಕೊಡುವುದು ಸರಿಯಲ್ಲ ಎಂಬ ಭಾವ ತಳೆದು, ದೇವನ ಸಾಕಾರ ಕೃತಿಯೇ ಬ್ರಹ್ಮಾಂಡ, ಇದು ಗೋಲಾಕಾರದಲ್ಲಿದೆ.
  • ಆದ್ದರಿಂದ ಲಿಂಗದೇವನನ್ನು ವಿಶ್ವದಾಕಾರದಲ್ಲಿ ಪೂಜಿಸುವುದು ಸರಿ ಎಂದು ಇಷ್ಟಲಿಂಗದ ಪರಿಕಲ್ಪನೆ ಕೊಟ್ಟರು. ದೇವರ ಕುರುಹಾದ ಇಷ್ಟಲಿಂಗವು ಮಾನವನ ಜಾತಿ, ವರ್ಣ, ವರ್ಗ ಭೇದಗಳನ್ನು ಕಳೆದು ಶರಣನನ್ನಾಗಿ ಮಾಡುವ ಸಾಧನವಾಗಬೇಕೆಂದು ಅದನ್ನು ಗಣ ಲಾಂಛನವನ್ನಾಗಿ ಮಾಡಿದರು. ಪರಮಾತ್ಮನ ದಿವ್ಯಾನುಭವ ಪಡೆದು, ನವ ಸಮಾಜ ನಿರ್ಮಾಣದ ರೂಪುರೇಷೆಗಳನ್ನು ತಮ್ಮ ಮನದಲ್ಲಿ ಹೊಂದಿ ಕಲ್ಯಾಣದ ಕಾರ್ಯಕ್ಷೇತ್ರವನ್ನು ಪ್ರವೇಶಿಸಿದರು.
  • ಸೋದರ ಮಾವನ ಮಗಳು ನೀಲಾ೦ಬಿಕೆಯನ್ನು ವಿವಾಹವಾಗಿ ಕರಣಿಕ ಕಾಯಕ ಕೈಗೊಂಡರು. ಅಲ್ಲಿಂದ ಮುಂದೆ ಭಂಡಾರಿಯಾಗಿ, ಪ್ರಧಾನಿ(ದಂಡನಾಯಕ)ಯಾಗಿ ಕಾಯಕ ನಿರ್ವಹಿಸಿದರು. ಅನುಭವ ಮಂಟಪ ಸ್ಥಾಪಿಸಿ ಧರ್ಮ ಪ್ರಚಾರ ಮಾಡಿದರು. ಎಲ್ಲರ ಮನೆ, ಮನಗಳ ಬಾಗಿಲಿಗೂ ಧರ್ಮಗಂಗೆ ಹರಿಯುವಂತೆ ಮಾಡಿದರು. ಇಷ್ಟಲಿಂಗವೆಂಬ ಗಣಲಾಂಛನವನ್ನು ಧರಿಸಿ ಲಿಂಗಾಯತರಾದ ಎಲ್ಲ ಶರಣ ಬಂಧುಗಳನ್ನು ಸಮಾನ ಭಾವದಿಂದ ಕಂಡರು.
  • ಹುಟ್ಟಿನಿಂದ ಬ್ರಾಹ್ಮಣರಾಗಿ, ಸಂಸ್ಕಾರದಿಂದ ಶರಣರಾದ ಮಧುವರಸರ ಮಗಳನ್ನು ಹುಟ್ಟಿನಿಂದ ಸಮಗಾರರಾಗಿ ಸಂಸ್ಕಾರದಿಂದ ಶರಣರಾದ ಹರಳಯ್ಯನವರ ಮಗನಿಗೆ ಕೊಟ್ಟು ವಿವಾಹ ಮಾಡಲು ಪ್ರೇರಣೆ ನೀಡಿದರು. ಈ ವಿವಾಹದಿಂದ ಸಂಪ್ರದಾಯವಾದಿಗಳು ಸಿಡಿದೆದ್ದು ಬಿಜ್ಜಳ ಮಹಾರಾಜನನ್ನು ಬಸವಣ್ಣನವರ ವಿರುದ್ದ ಪ್ರೇರೇಪಿಸಿ ಧರ್ಮಗುರು ಬಸವಣ್ಣನವರಿಗೆ ಗಡಿಪಾರು ಶಿಕ್ಷೆ ನೀಡುವಂತೆ ಮಾಡಿದರು.
  • ಧರ್ಮಪಿತರು ಗಡಿಪಾರು ಶಿಕ್ಷೆ ಸ್ವೀಕರಿಸಿ ಕಲ್ಯಾಣದಿಂದ ಹೊರಟ ನಂತರ ಹರಳಯ್ಯ, ಮಧುವರಸ, ಶೀಲವಂತರ ಬಂಧನವಾಗಿ ಅವರು ವರ್ಣಾಂತರ ವಿವಾಹದಲ್ಲಿ ಭಾಗಿಯಾದುದ ಕ್ಕಾಗಿ ಕಣ್ಣು ಕೀಳಿಸುವ ಶಿಕ್ಷೆ, ಎಳೆ ಹೊಟ್ಟೆ ಶಿಕ್ಷೆಗೆ ಒಳಗಾಗಿ ಪ್ರಾಣ ಬಿಡಬೇಕಾಯಿತು. ಜಾತಿವಾದಿಗಳು ವಚನ ಸಾಹಿತ್ಯವನ್ನು ನಾಶ ಮಾಡಲು ಸನ್ನದ್ಧರಾದಾಗ, ವೀರಮಾತೆ ಅಕ್ಕನಾಗಲಾಂಬಿಕೆ, ಚಿನ್ಮಯಜ್ಞಾನಿ ಚೆನ್ನಬಸವಣ್ಣ, ವೀರ ಗಣಾಚಾರಿ ಮಡಿವಾಳ ಮಾಚಯ್ಯನವರು ವೀರಾಗ್ರಣಿಗಳಾಗಿ ಕಾದಾಡಿ ವಚನ ವಾಙ್ಮಯ ನಿಧಿಯನ್ನು ಉಳಿಸಿಕೊಟ್ಟರು. ಅದಿಂದು ನಮ್ಮೆಲ್ಲರ, ಕರ್ನಾಟಕದ, ಭಾರತದ, ವಿಶ್ವದ ಹೆಮ್ಮೆಯ ಆಸ್ತಿಯಾಗಿದೆ.
  • ಇಂತಹ ಮಹಾನ್ ನೇತಾರರಾದ ಬಸವಣ್ಣನವರು ಲಿಂಗಾಯತ ಧರ್ಮದ ಸಂಸ್ಥಾಪಕರು; ಧರ್ಮಪಿತರು, ಮಂತ್ರಪುರುಷರು. ೬೨ ವರ್ಷ ೩ ತಿಂಗಳು ೨ ದಿವಸಗಳ ಕಾಲ ಇಳೆಯಲ್ಲಿ ಬಾಳಿದ ಬಸವಣ್ಣನವರು ನಳನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು (ದಿ. ಜುಲೈ ೭ ೧೧೯೬) ಉರಿಯುಂಡ ಕರ್ಪುರದಂತೆ ಲಿಂಗೈಕ್ಯರಾದರು.
  • ಮಂಗಳವೇಡದ ರಾಜ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾದ ಬಸವಣ್ಣ ಹಲವಾರು ಜನಪರ ಮತ್ತು ಸಮಾಜ ಸುಧಾರಣೆ ಕ್ರಮಗಳನ್ನು ಕೈಗೊಂಡರು. ಕಾಯಕವೇ ಕೈಲಾಸ ವೆಂದು ಸಾರಿ, ಜನರನ್ನು ದುಡಿದು ಬದುಕುವ ಪಥದಲ್ಲಿ ಮುನ್ನೆಡೆಸಿದರು. ಜಾತಿ, ಲಿಂಗ, ಭಾಷೆ ಭೇದವಿಲ್ಲದೆ, ಶರಣ ತತ್ವದಲ್ಲಿ, ಸಮಾನತೆಯಲ್ಲಿ ಮತ್ತು ಕಾಯಕ ನಿಷ್ಠೆಯಲ್ಲಿ ನಂಬಿಕೆಯುಳ್ಳವರನ್ನು ನಿಜವಾದ " ಶಿವಶರಣ " ರೆಂದು ಕರೆದರು.
  • ದಂಪತಿಗಳನ್ನು ಮತ್ತು ನವ ವಧುವರಾರಾದ ಶೀಲವಂತ-ಲಾವಣ್ಯರನ್ನು ಆನೆಯ ಕಾಲಿಗೆ ಕಟ್ಟಿಸಿ, ಊರ ತುಂಬಾ ನೆಲದ ಮೇಲೆ ಎಳೆಸಿ ಕೊಲ್ಲುವ ಕ್ರೂರವಾದ ಎಳೆಹೂಟೆ ಶಿಕ್ಷೆಗೆ ಗುರಿಪಡಿಸಿ, ಕೊಲ್ಲುತ್ತಾನೆ. ಬಿಜ್ಜಳನ ಸೇನೆ ಶಿವಶರಣರನ್ನು ಕಂಡಲ್ಲಿ ಕೊಲ್ಲ ತೊಡಗಿ, ರಕ್ತದ ಹೊಳೆ ಹರಿಸುತ್ತದೆ. ಬಸವಣ್ಣನವರು ೧೧೯೬ ರಲ್ಲಿ ಕೂಡಲಸಂಗಮಕ್ಕೆ ಮರಳಿ ಅಲ್ಲೇ ಲಿಂಗೈಕ್ಯರಾದರು. ಅವರ ಸಮಾಧಿಯು ಅಲ್ಲಿಯೇ ಇದೆ. ಅವರ ಸಮಾಧಿಯನ್ನು ಕರ್ನಾಟಕ ಸರಕಾರದಿಂದ ಬಸವ ಸಾಗರ ಹಿನ್ನಿರಿನಲ್ಲಿ ಮುಳಗದಂತೆ ರಕ್ಷಿಸಿಲ್ಪಟ್ಟಿದೆ.

ಬಸವಣ್ಣನವರ ಕಾಯಕದ ಮಹತ್ವ ಮತ್ತು ಕಾಯಕ ಸಮಾನತೆ

"ದೇವ ಸಹಿತ ಮನೆಗೆ ಬಂದಡೆ
ಕಾಯಕವಾವುದೆಂದು ಬೆಸಗೊಂಡಡೆ
ನಿಮ್ಮಾಣೆ, ನಿಮ್ಮ ಪುರಾತರಾಣೆ! ತಲೆದಂಡ! ತಲೆದಂಡ! ತಲೆದಂಡ!
ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಿಸಿದಡೆ
ನಿಮ್ಮ ರಾಣಿವಾಸದಾಣೆ."

ಹೀಗೆ ಬಸವಣ್ಣನವರು ಭಕ್ತರಲ್ಲಿ ಸರ್ವಸಮಾನತೆಯನ್ನು ಕಾಣುತ್ತಾರೆ. ಶರಣರ ದೃಷ್ಟಿಯಲ್ಲಿ ಯಾವ ಕಾಯಕವೂ ಚಿಕ್ಕದಲ್ಲ ಅಥವಾ ದೊಡ್ಡದಲ್ಲ.
"ಮನೆ ನೋಡಾ ಬಡವರು, ಮನ ನೋಡಾ ಘನ
ಸೋಂಕಿನಲ್ಲಿ ಶುಚಿ; ಸರ್ವಾಂಗ ಕಲಿಗಳು.
ಪಸರಕ್ಕನುವಿಲ್ಲ; ಬಂದ ತತ್ಕಾಲಕ್ಕೆ ಉಂಟು.
ಕೂಡಲಸಂಗನ ಶರಣರು ಸ್ವತಂತ್ರ ಧೀರರು."
ಎಂದು ಬಸವಣ್ಣನವರು ಕಾಯಕಜೀವಿಗಳಾದ ಆಯ್ದಕ್ಕಿ ಲಕ್ಕಮ್ಮ ಮತ್ತು ಮಾರಯ್ಯನವರ ವ್ಯಕ್ತಿತ್ವವನ್ನು ಕುರಿತು ಕಣ್ಣಿಗೆ ಕಟ್ಟುವಂತೆ ಹೇಳಿದ್ದಾರೆ. ಅವರು ಘನಮನದವರೂ ಪರಿಶುದ್ಧ ರೂ ಸ್ವತಂತ್ರ ಧೀರರೂ ಆಗಿದ್ದಾರೆ.

"ಮನಶುದ್ಧವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ
ಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿ
ಸದ್ಭಕ್ತಂಗೆ ಎತ್ತ ನೋಡಿದತ್ತ ಲಕ್ಷ್ಮಿ ತಾನಾಗಿಪ್ಪಳು
ಮಾರಯ್ಯಪ್ರಿಯ ಅಮರೇಶ್ವರ ಲಿಂಗದ
ಸೇವೆಯುಳ್ಳನ್ನಕ್ಕರ"
ಎಂದು ಆಯ್ದಕ್ಕಿ ಲಕ್ಕಮ್ಮ ಕಾಯಕದ ಮಹತ್ವ ವ್ಯಕ್ತಪಡಿಸುತ್ತಾಳೆ.

"ಗುರುವಾದರೂ ಕಾಯಕದಿಂದಲೇ ಜೀವನ್ಮುಕ್ತಿ
ಲಿಂಗವಾದರೂ ಕಾಯಕದಿಂದಲೇ ಶಿಲೆಯ ಕುಲ ಹರಿವುದು
ಜಂಗಮವಾದರೂ ಕಾಯಕದಿಂದಲೇ ವೇಷ ಪಾಶ ಹರಿವುದು
ಇದು ಚೆನ್ನಬಸವಣ್ಣಪ್ರಿಯ ಚಂದೇಶ್ವರ ಲಿಂಗದ ಅರಿವು"
ಎಂದು ನುಲಿಯ ಚಂದಯ್ಯನವರು ಕಾಯಕದ ಮಹತ್ವವನ್ನು ಸಾರಿದ್ದಾರೆ. ಗುರು-ಲಿಂಗ-ಜಂಗಮಕ್ಕೆ ಕಾಯಕವೇ ಆಧಾರವಾಗಿದೆ ಎಂದು ಮನಂಬುಗುವಂತೆ ಹೇಳಿದ್ದಾರೆ.
"ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದರೂ ಮರೆಯಬೇಕು
ಲಿಂಗಪೂಜೆಯಾದರೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದರೂ ಹಂಗು ಹರಿಯಬೇಕು
ಕಾಯಕವೇ ಕೈಲಾಸವಾದ ಕಾರಣ
ಅಮರೇಶ್ವರ ಲಿಂಗವಾಯಿತ್ತಾದರೂ ಕಾಯಕದೊಳಗು."
ಎಂದು ಆಯ್ದಕ್ಕಿ ಮಾರಯ್ಯ ಹೇಳುವಲ್ಲಿ ಕಾಯಕದ ಮಹತ್ವ ಪರಾಕಾಷ್ಠೆಯನ್ನು ತಲುಪುತ್ತದೆ.
"ಆವ ಕಾಯಕವಾದರೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು,
ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು, ಬೇನೆ ಬಂದಡೆ ಒರಲು,
ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ,
ಭಾಪು ಲದ್ದೆಯ ಸೋಮಾ."
ಹುಲ್ಲಿನ ಹೊರೆ ಹೊರುವ ಕಾಯಕದ ಸೋಮಯ್ಯ ಬದುಕೆಂಬುದು ಜೈವಿಕ ಪ್ರಕ್ರಿಯೆ ಎಂದು ಹೀಗೆ ಸೂಚಿಸುತ್ತಾನೆ. ಆ ಮೂಲಕ ಸಾವನ್ನು ಗೆಲ್ಲುತ್ತಾನೆ. ದೇವರ ಹಂಗಿಗೆ ಒಳಗಾಗದೆ ದೇವರನ್ನು ಆರಾಧಿಸುವ ಕ್ರಮವನ್ನು ನಮಗೆ ಕಲಿಸಿಕೊಟ್ಟಿದ್ದಾನೆ. ಜನಸಾಮಾನ್ಯರು ಶರಣಸಂಕುಲ ಸೇರಿ ಹೀಗೆ ಆತ್ಮಸ್ಥೈರ್ಯ ಪಡೆದು ಅಸಾಮಾನ್ಯರಾಗುವಲ್ಲಿ ಬಸವಣ್ಣನವರ ಅಪಾರ ಶ್ರಮ ಅಡಗಿದೆ. ಅಂತೆಯೆ ಶರಣರಿಗೆ ಬದುಕೆಂಬುದು ದುಃಖದ ಆಗರವೆಂದು ಅನಿಸುವುದಿಲ್ಲ. ಶರಣರು ಸವಾಲನ್ನು ಎದುರಿಸುತ್ತ ಆನಂದವನ್ನು ಅನುಭವಿಸುವವರು.
"ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ
ಸತ್ಯಶುದ್ಧವಿಲ್ಲದುದು ಕಾಯಕವಲ್ಲ
ಆಸೆಯೆಂಬುದು ಭವದ ಬೀಜ
ನಿರಾಸೆಯೆಂಬುದು ನಿತ್ಯಮುಕ್ತಿ
ಉರಿಲಿಂಗಪೆದ್ದಿಗಳರಸನಲ್ಲಿ ಸದರವಲ್ಲ ಕಾಣವ್ವಾ." ಎಂದು ಉರಿಲಿಂಗಪೆದ್ದಿಗಳ ಮುಣ್ಯಸ್ತ್ರೀ ಕಾಳವ್ವೆ ಹೇಳುತ್ತಾಳೆ.
ಕಾಯಕದಲ್ಲಿ ಮುಕ್ತಿ ಕಾಣುವ ಪರಿ ಇದು. ಒಬ್ಬ ದಲಿತ ಮಹಿಳೆ ಶರಣಸಂಕುಲದೊಳಗೆ ಬಂದು ಇಷ್ಟೊಂದು ಮಹತ್ತರವಾದ ವಿಚಾರವನ್ನೊಳಗೊಂಡ ವಚನರಚನೆ ಮಾಡಿದ್ದಾಳೆಂದರೆ ಬಸವಣ್ಣನವರು ಜಗತ್ತಿನಲ್ಲಿ ಮೊದಲಬಾರಿಗೆ ಯಾವ ರೀತಿ ವಯಸ್ಕರ ಶಿಕ್ಷಣದ ವ್ಯವಸ್ಥೆ ಮಾಡಿರಬಹುದು ಎಂಬುದರ ಕುರಿತು ಸಂಶೋಧನೆಯಾಗಬೇಕಿದೆ. ಶರಣರ ವಚನಗಳು ಮತ್ತು ತತ್ತ್ವ ಕೂಡ ಕಾಯಕದ ಉತ್ಪತ್ತಿಯಾಗಿವೆ ಎಂಬುದನ್ನು ಮರೆಯಬಾರದು. ವಚನಗಳು ಅನನ್ಯವಾಗಿರುವುದು ಇದೇ ಕಾರಣದಿಂದ. ಅನೇಕ ವಚನಕಾರರು ತಮ್ಮ ಕಾಯಕಗಳ ಅನುಭದ ಮೂಲಕವೇ ಅನುಭವಿಯಾಗಿದ್ದಾರೆ. ಅವರ ವಚನಗಳಲ್ಲಿನ ಪ್ರತಿಮೆ, ಪ್ರತೀಕ ಮತ್ತು ಸಂಕೇತಗಳು ಅವರವರ ಕಾಯಕಗಳ ಅನುಭವದ ಮೂಲಕವೇ ಸೃಷ್ಟಿಯಾಗಿವೆ. ಕಾಯಕದ ವಸ್ತುಗಳು ಹೀಗೆ ಕಾವ್ಯ ಪ್ರತಿಮೆಗಳಾಗುತ್ತಲೇ ತತ್ತ್ವವನ್ನು ಸ್ಫುರಿಸತೊಡಗುತ್ತವೆ.

ಬಸವಣ್ಣನವರ ಅಂಚೆ ಚೀಟಿ ಮತ್ತು ನಾಣ್ಯ

[ಸೂಕ್ತ ಉಲ್ಲೇಖನ ಬೇಕು]

ಗುರು ಬಸವಣ್ಣನವರ ಚಿತ್ರವನ್ನೊಳಗೊಂಡ ಅಂಚೆಚೀಟಿಗಳು

ಗುರು ಬಸವಣ್ಣವರ ೮೦೦ನೇಯ ಲಿಂಗೈಕ್ಯ ದಿನಾಚರಣೆ ನಿಮಿತ್ತ ಭಾರತ ಸರಕಾರದ ಅಂಚೆ ಇಲಾಖೆಯು ೧೧ನೇ ಮೇ ೧೯೬೭ರಲ್ಲಿ ೧೫ ಪೈಸೆ ಮುಖ ಬೆಲೆಯುಳ್ಳ ಅಂಚೆ ಚೀಟಿ ಯನ್ನು ಮುದ್ರಿಸಿತು. ಮತ್ತೊಮ್ಮೆ ೧೯೯೭ರಲ್ಲಿ ೨ ರೂಪಾಯಿ ಮುಖ ಬೆಲೆಯುಳ್ಳ ಅಂಚೆ ಚೀಟಿಯನ್ನು ಮುದ್ರಿಸಿತು. ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳನ್ನು ಡಾ. ಮನಮೋಹನ ಸಿಂಗ್ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಬಸವಣ್ಣನವರು ನಾಣ್ಯದ ಮೇಲೆ ಪ್ರಕಟಿಸಲ್ಪಟ್ಟವರಲ್ಲಿ ಪ್ರಥಮ ಕನ್ನಡಿಗ ರಾಗಿದ್ದಾರೆ. ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ್ ನಲ್ಲಿ ೨೮ನೇ ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯತು.

ವಚನಗಳು

  • ಅಡವಿಯಲೊಬ್ಬ ಕಡು ನೀರಡಿಸಿ.
  • ಅಭ್ಯಾಸವೆನ್ನ ವರ್ತಿಸಿತ್ತಯ್ಯಾ.

ಚಿತ್ರಗಳು

__________________________________________
ಜಗಜ್ಯೋತಿ ಬಸವೇಶ್ವರ ಜಯಂತಿ-

ವೈಶಾಖ ಶುದ್ಧ ತದಿಗೆಯಂದು, ಲಿಂಗಾಯತ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಹಾಗೂ ಸರ್ವಧರ್ಮೀಯರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.

ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು. ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳಮಾಚಯ್ಯ ಮುಂತಾದ ಶಿವಶರಣರ ಕಾಲದಲ್ಲಿಯೇ ಜೀವಿಸಿದ್ದ ಜಗಜ್ಯೋತಿ ಬಸವಣ್ಣನವರ ಪ್ರಭಾವದ ಕಾರಣ ಆ ಕಾಲವನ್ನು ಬಸವಯುಗವೆಂದೇ ಕರೆಯುತ್ತಾರೆ.


_“ಕಾಯಕವೇ ಕೈಲಾಸ” (Work is Workship) ಪ್ರತಿಯೊಬ್ಬರೂ ತಮ್ಮ ತಮ್ಮ ಜೀವನೋಪಾಯಕ್ಕಾಗಿ ಒಂದು ವೃತ್ತಿಯನ್ನು ಮಾಡಲೇಬೇಕು. ಮಾಡುವ ಕೆಲಸದಲ್ಲಿಯೇ ದೇವರನ್ನು ಕಾಣಬೇಕು. ಕೆಲಸವೇ ಪೂಜೆ, ಕೆಲಸವೇ ದೇವರು. ಕೆಲಸದಲ್ಲಿಯೇ ಕೈಲಾಸವನ್ನು ಕಾಣಬೇಕೆಂದು ಹೇಳಿದವರು

🔯🔯 ಜಗಜ್ಯೋತಿ ಬಸವೇಶ್ವರರು._🔯🔯

_ವಿಶ್ವಗುರು ಬಸವಣ್ಣನವರು ಪರಮಾತ್ಮನ ಕರುಣೆಯ ಕಂದರಾಗಿ ಅವತರಿಸಿದರು._ _ಇಂಗಳೇಶ್ವರ ಬಾಗೇವಾಡಿಯಲ್ಲಿ ಶೈವ ಬ್ರಾಹ್ಮಣ ದಂಪತಿಗಳಾದ ಮಾದರಸ-ಮಾದಲಾಂಬಿಕೆಯ ಮಗನಾಗಿ ಆ.ನಂದನಾಮ_ ಸಂವತ್ಸರದಲ್ಲಿ _ವೈಶಾಖಮಾಸದ ಅಕ್ಷಯ ತೃತೀಯದಂದು  ಏಪ್ರಿಲ್ 30 1134 ರೋಹಿಣ  ನಕ್ಷತ್ರದಲ್ಲಿ ಜನಿಸಿದರು. ಯಾವುದೇ_ _ಅಂಧಶ್ರದ್ಧೆ ಜಡ ಸಂಪ್ರದಾಯಗಳನ್ನೊಪ್ಪದ  ಸತ್ಯಾನ್ವೇಷಕರಾಗಿ ಹೆತ್ತವರನ್ನು, ಬಂಧು-ಬಾಂಧವರನ್ನು ತೊರೆದು ವಿದ್ಯಾಕಾಂಕ್ಷಿಯಾಗಿ ಕೂಡಲ ಸಂಗಮದ ಗುರುಕುಲಕ್ಕೆ ಹೋದರು. ಶಾಸ್ತ್ರಾಧ್ಯಯನ, ಯೋಗಾಭ್ಯಾಸಗಳಲ್ಲಿ ಬಾಲ್ಯವನ್ನು ಕಳೆದು ತಾರುಣ್ಯಕ್ಕೆ ಕಾಲಿರಿಸಿದರು. ಜನರಲ್ಲಿ ಮನೆ ಮಾಡಿಕೊಂಡಿದ್ದ ಮೌಢ್ಯತೆ, ಕಂದಾಚಾರ,_ _ಜಾತೀಯತೆಗಳನ್ನು ಕಂಡು ಮನನೊಂದು ಪರಿಹಾರವನ್ನು ಅರಸತೊಡಗಿದರು. ಎಲ್ಲ ದೇವರನ್ನು ಮೀರಿದ ಸೃಷ್ಟಿಕರ್ತನೇ ಶ್ರೇಷ್ಠವೆಂದು ಘೋಷಿಸಿ ಆ ದೇವನನ್ನು ಲಿಂಗದೇವ ಎಂದು ಕರೆದರು. ನಿರಾಕಾರ ದೇವನಿಗೆ ಮನುಷ್ಯರ ಪ್ರಾಣ ಗಳ ಆಕಾರ ಕೊಡುವುದು ಸರಿಯಲ್ಲ ಎಂಬ ಭಾವ ತಳೆದು ದೇವನ ಸಾಕಾರ ಕೃತಿಯೇ ಬ್ರಹ್ಮಾಂಡ ಇದು ಗೋಲಾಕಾರದಲ್ಲಿದೆ. ಆದ್ದರಿಂದ ಲಿಂಗದೇವನನ್ನು ವಿಶ್ವಾದಾಕಾರದಲ್ಲಿ ಪೂಜಿಸುವುದು ಸರಿ ಎಂದು ಇಷ್ಟ ಲಿಂಗದ ಪರಿಕಲ್ಪನೆ ನೀಡಿದರೂ, ದೇವರ ಕುರುಹಾದ ಇಷ್ಟಲಿಂಗವು ಮಾನವನ ಜಾತಿ, ವರ್ಣ, ವರ್ಗ ಭೇದಗಳನ್ನು ಕಳೆದು ಶರಣನಾಗಬೇಕು._ _ನವ ಸಮಾಜ ನಿರ್ಮಾಣದ ರೂಪುರೇಷಗಳನ್ನು ತಮ್ಮ ಮನದಲ್ಲಿ ಹೊಂದಿ ಕಲ್ಯಾಣದ ಕಾರ್ಯಕ್ಷೇತ್ರವನ್ನು_ _ಪ್ರವೇಶಿಸಿದರು. ಸೋದರ ಮಾವನ ಮಗಳು ನೀಲಾಂಬಿಕೆಯನ್ನು ವಿವಾಹವಾಗಿ ಕರಣ ಕ ಕಾಯಕ ಕೈಗೊಂಡರು. ಅಲ್ಲಿಂದ ಮುಂದೆ ಭಂಡಾರಿಯಾಗಿ ಪ್ರಧಾನಿ (ದಂಡನಾಯಕ) ಯಾಗಿ ಕಾರ್ಯ ನಿರ್ವಹಿಸಿದರು._ _

ಬಸವ ಕಲ್ಯಾಣದಲ್ಲಿ ಬಸವಣ್ಣನವರು ಶರಣರ ಜೊತೆ ಸೇರಿ ಅನುಭವ ಮಂಟಪ_ _ಸ್ಥಾಪಿಸಿದರು. ಅನುಭವ ಮಂಟಪವು ವಿಶ್ವ ಮಾನವ ಸಂದೇಶ ಮತ್ತು ವಿಚಾರಗಳ ಬಗೆಗೆ ಮುಕ್ತವಾಗಿ ಚರ್ಚಿಸಬಹುದಾದ ವೇದಿಕೆಯಾಗಿದೆ_ .

  _ಅನುಭವ ಮಂಟಪದಿಂದ ಧರ್ಮ ಪ್ರಚಾರ ಮಾಡಿದರು. ಎಲ್ಲರ ಮನಗಳ ಬಾಗಿಲಿಗೂ ಧರ್ಮಗಂಗೆ ಹರಿಯುವಂತೆ ಮಾಡಿದರು. ಇಷ್ಟಲಿಂಗವೆಂಬ_ _ಗಣಲಾಂಛನವನ್ನು ಧರಿಸಿ ಲಿಂಗಾಯತರಾದ ಎಲ್ಲ ಶರಣ ಬಂಧುಗಳನ್ನು ಸಮಾನ ಭಾವದಿಂದ ಕಂಡರು._
_ಮಂಗಳವೇಡದ ರಾಜ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾದ ಬಸವಣ್ಣ ಹಲವಾರು ಜನಪರ ಮತ್ತು ಸಮಾಜ ಸುಧಾರಣೆ ಕ್ರಮಗಳನ್ನು ಕೈಗೊಂಡರು. ಕಾಯಕವೇ ಕೈಲಾಸವೆಂದು ಸಾರಿದರು. ಅಸ್ಪ್ರಶ್ಯತೆಯ ಹೆಸರಿನಲ್ಲಿ ಊರ ಹೊರಗೆ ಇರಿಸಲಾದ ದಲಿತರನ್ನು ಕರೆತಂದು ಸಮಾಜದ ಭಾಗವನ್ನಾಗಿ ಮಾಡಿದರು_ . _ದೇವಾಲಯ, ಕುಡಿಯುವ ನೀರಿನ ಬಾವಿ-ಕೆರೆಗಳನ್ನು ಬಳಸಲು ಇವರಿಗೂ ಸಮಾನ ಹಕ್ಕಿದೆಯಂದು ತೋರಿಸಿದರು._ _

ಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯ”_ _ಎಂದು ಬಸವಣ್ಣನವರು ಪುರೋಹಿತಶಾಹಿ ವ್ಯವಸ್ಥೆ ಮತ್ತು ಧರ್ಮದ ಹೆಸರಿನಲ್ಲಿ ಜನಸಾಮಾನ್ಯರ_ _ಶೋಷಣೆಯನ್ನು ಖಂಡಿಸಿದ್ದರು. ಬ್ರಾಹ್ಮಣ ಸಮಾಜದ ಶರಣರಾದ ಮಧುವರಸರ ಮಗಳನ್ನು ಸಮಗಾರ ಸಮಾಜದ ಶರಣರಾದ ಹರಳಯ್ಯನವರ ಮಗನಿಗೆ ಕೊಟ್ಟು ವಿವಾಹ ಮಾಡಲು ಪ್ರೇರಣೆ ನೀಡಿದರು._ _ಈ ವಿವಾಹದಿಂದ ಸಂಪ್ರದಾಯವಾದಿಗಳು ಸಿಡಿದೆದ್ದು ಬಿಜ್ಜಳ ಮಹಾರಾಜನನ್ನು ಬಸವಣ್ಣನವರ ವಿರುದ್ಧ ಪ್ರೇರೇಪಿಸಿ ಬಸವಣ್ಣನವರಿಗೆ ಗಡಿಪಾರು ಶಿಕ್ಷೆ ನೀಡುವಂತೆ ಮಾಡಿದರು. ಧರ್ಮಪಿತರು ಗಡಿಪಾರು ಶಿಕ್ಷೆ ಸ್ವೀಕರಿಸಿ ಕಲ್ಯಾಣದಿಂದ ಹೊರಟ ನಂತರ ಹರಳಯ್ಯ, ಮಧುವರಸ, ಶೀಲವಂತರ ಬಂಧನ ಮಾಡಿ ಅವರು ವರ್ಣಾಂತರ_ _ವಿವಾಹದಲ್ಲಿ ಭಾಗಿಯಾದುದಕ್ಕಾಗಿ ಕಣ್ಣು ಕೀಳಿಸುವ ಶಿಕ್ಷೆ._ _ಎಳೆ ಹೊಟ್ಟೆ ಶಿಕ್ಷೆಗೆ ಒಳಗಾಗಿ ಪ್ರಾಣ ಬಿಡಬೇಕಾಯಿತು. ಜಾತಿವಾದಿಗಳು ವಚನ ಸಾಹಿತ್ಯವನ್ನು ನಾಶ ಮಾಡಲು  ಸನ್ನದ್ಧರಾದಾಗ ವೀರಮಾತೆ ಅಕ್ಕನಾಗಲಾಂಬಿಕೆ, ಚೆನ್ನಬಸವಣ್ಣ, ವೀರ ಗಣಾಚಾರಿ, ಮಡಿವಾಳ, ಮಾಚಯ್ಯನವರು ವೀರಾಗ್ರಣ ಗಳಾಗಿ ಕಾದಾಡಿ ವಚನ ಸಾಹಿತ್ಯ ನಿಧಿಯನ್ನು ಉಳಿಸಿಕೊಟ್ಟರು._ _ಇದೇ ಸಮಯದಲ್ಲಿ ಚೆನ್ನಬಸವಣ್ಣನವರು ಉತ್ತರ ಕನ್ನಡ ಜಿಲ್ಲೆಯ ಉಳವಿಗೆ ಬಂದು ನೆಲೆಸಿದರು._  

ಲಿಂಗೈಕ್ಯ
_ಬಸವಣ್ಣನವರು 1196 ರಲ್ಲಿ ಕೂಡಲಸಂಗಮಕ್ಕೆ ಮರಳಿ ಬಂದರು. 7 ಜುಲೈ 1196 ನಳನಾಮ ಸಂವತ್ಸರದ_ _ಶ್ರಾವಣ ಶುದ್ಧ ಪಂಚಮಿಯಂದು ಉರಿಯುಂಡ ಕರ್ಪೂರದಂತೆ ಲಿಂಗೈಕ್ಯರಾದರು. ಅವರ ಸಮಾಧಿಯು ಅಲ್ಲಯೇ ಇದೆ._ _ಅವರ ಸಮಾಧಿಯನ್ನು ಕರ್ನಾಟಕ ಸರಕಾರದಿಂದ ಬಸವ ಸಾಗರ ಹಿನ್ನೀರಿನಲ್ಲಿ ಮುಳಗದಂತೆ ರಕ್ಷಿಸಿಲ್ಪಟ್ಟಿದೆ._ 

🔯🔯 _ *ಬಸವಣ್ಣನವರ ತತ್ವಗಳು*:-_ 🔯🔯

_ದೇವನೊಬ್ಬ ನಾಮ ಹಲವು  ನಮ್ಮನ್ನೆಲ್ಲ ಸೃಷ್ಟಿಸಿದ ದೇವರು ಒಬ್ಬನೇ, ಮಾನವನಿಗೆ ಯಾವುದೇ ರೀತಿ_ _ಜಾತಿಕುಲಗಳಿಲ್ಲ ಮಾನವ ಜಾತಿ ಒಂದೇ. 

ಸ್ವರ್ಗ-ನರಕಗಳು ಬೇರಿಲ್ಲ :- ಪಾಪ-ಪುಣ್ಯ ಫಲವಾಗಿ ಸ್ವರ್ಗ-ನರಕಗಳು ಬೇರಿಲ್ಲ, ಅಯ್ಯಾ ಎಂದೊಡಿ ಸ್ವರ್ಗ, ಎಲವೇ ಎಂದರೆ ನರಕ, ಆಚಾರವೇ ಸ್ವರ್ಗ,_ ಅನಾಚಾರವೇ ನರಕ, ಸತ್ಯ _ನುಡಿವುದೇ ದೇವಲೋಕ ಮಿಥ್ಯ ನುಡಿಯುವುದೇ ಮೃತ್ರ್ಯಲೋಕ ಎಂದು ತಿಳಿಸಿದರು. 

ದಯವೇ ಧರ್ಮದ.ಮೂಲ_ :- _⤵️⤵️⤵️

ಯಾವುದೇ ಧರ್ಮದ ಮೂಲ ದಯೆ ದಯವಿಲ್ಲದ ಧರ್ಮ ಅದಾವುದಯ್ಯ? ದಯವಿರಬೇಕು ಸಕಲ ಪ್ರಾಣ ಗಳೆಲ್ಲರಲ್ಲಿ ಎಂದು ತಿಳಿಸಿ ಹಿಂಸಾಚಾರವನ್ನು ತಡೆಗಟ್ಟಿದರು._
_ಕಾಯಕವೇ ಕೈಲಾಸ :-_ _ಪ್ರತಿಯೊಬ್ಬರೂ ತಮ್ಮ ತಮ್ಮ ಜೀವನೋಪಾಯಕ್ಕಾಗಿ ಒಂದು ವೃತ್ತಿಯನ್ನು ಮಾಡಲೇ ಬೇಕಾಗುವುದು. ಅದರಲ್ಲಿಯೇ ದೇವರನ್ನು ಕಾಣ ರೋ ಎಂದರು._ _

ಸಮತಾವಾದ :- ನಮ್ಮ ದೇಶದಲ್ಲಿ  12 ನೇ ಶತಮಾನದಲ್ಲಿ ಸಮತಾವಾದದ ಬೀಜ ಬಿತ್ತಿದ ಪ್ರಥಮ ವ್ಯಕ್ತಿ_ _ಎಂದರೆ ಶ್ರೀ ಬಸವಣ್ಣನವರು. ಜಾತಿ ಪದ್ಧತಿಗಳು ಕೇವಲ ಉದ್ಯೋಗದಿಂದ ಹುಟ್ಟಿ ಬಂದವುಗಳು, ಅವುಗಳನ್ನು ನಾವೇ ಮಾಡಿಕೊಂಡಿದ್ದೇವೆ. ಆದರೆ ಮಾನವ ಜಾತಿ ಒಂದೇ.

ರಮಜಾನ್ ಹಬ್ಬ

ರಂಜಾನ್


ರಂಜಾನ್ ಅಥವ ರಮದಾನ್ (ಅರೇಬಿಕ್‌ ಭಾಷೆಯಲ್ಲಿ: رمضان ) ಇಸ್ಲಾಮ್ ಕ್ಯಾಲೆಂಡರ್‌ನಲ್ಲಿ ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್‌ನ ಐದು ಕಂಬಗಳಲ್ಲಿ ನಾಲ್ಕನೆಯದು ಹಾಗೂ ರಮದಾನ್‌ನ ಸಮಯದಲ್ಲಿ ಉಪವಾಸ ನಡೆಯುತ್ತದೆ.

ಕ್ರೆಸೆಂಟ್ ವರ್ಣರಂಜಿತವಾಗಿ ಅಲಂಕರಿಸಲ್ಪಟ್ಟಿದೆ ಮತ್ತು ರಮದಾನ್ ಸಮಯದಲ್ಲಿ ಸುಂದರವಾಗಿ ಪ್ರಕಾಶಿಸಲ್ಪಟ್ಟಿದೆ.

ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ ರಮದಾನ್ ತಿಂಗಳ ಸಂಪೂರ್ಣ ವ್ರತಾಚರಣೆ ಯಾಗಿದೆ. ಮಾನವಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್(ಸ)ರವರ ಮೇಲೆ ಇದೇ ತಿಂಗಳಲ್ಲಿ ಪವಿತ್ರ ಕುರ್ಆನ್ ಅವತೀರ್ಣಗೊಂಡಿತು.ಇದರ ಗೌರವಾರ್ಹ ಪ್ರತಿವರ್ಷವೂ ಈ ಒಂದು ತಿಂಗಳ ವ್ರತಾಚರಣೆಯನ್ನು ಕಡ್ಡಾಯ ಗೊಳಿಸಲಾಯಿತು. ಪ್ರಭಾತಕಾಲ ದಿಂದ ಹಿಡಿದು ಸೂರ್ಯಾಸ್ತಮದವರೆಗೆ ಇತರ ಸಮಯಗಳಲ್ಲಿ ಧರ್ಮಸಮ್ಮತ ವಾದ ಅನ್ನ ಪಾನೀಯಗಳನ್ನು ಮತ್ತು ಕಾಮಾಸಕ್ತಿಯ ಚಟುವಟಿಕೆಗಳನ್ನು ತ್ಯಜಿಸುವುದನ್ನೇ ಇಸ್ಲಾಮಿನಲ್ಲಿ ಉಪವಾಸ ಅಥವಾ ವ್ರತಾಚರಣೆ ಎನ್ನಲಾಗಿದೆ. ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂಥ ಎಲ್ಲ ವಿಧ ಮಾನವೀಯ ದೌರ್ಬಲ್ಯಗಳಿಂದ ಮನುಷ್ಯನನ್ನು ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿ ಸುವುದೇ ಒಂದು ತಿಂಗಳ ಪೂರ್ಣ ವ್ರತಾಚರಣೆಯ ಉದ್ದೇಶವಾಗಿದೆ.

ಇಸ್ಲಾಂ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ಧಾರ್ಮಿಕವಾಗಿ ಈದ್-ಉಲ್-ಫಿತರ್ ಎಂತಲೂ ಕರೆಯುತ್ತಾರೆ.


ಒಂದು ತಿಂಗಳ ಕಠಿಣ ವೃತಾಚರಣೆಯ ಬಳಿಕ ಈದ್-ಉಲ್-ಫಿತರ್ ಬಂದಿದೆ. ರಂಜಾನ್ ತಿಂಗಳ ಹಗಲಿನಲ್ಲಿ ತೊಟ್ಟು ನೀರೂ ಕುಡಿಯದೆ, ಕಠಿಣ ವೃತದ ಮೂಲಕ ಹಸಿವಿನ ಕಠಿಣತೆಯನ್ನು ಅರಿತು, ವಿಶ್ವ ಮುಸ್ಲಿಮರೆಲ್ಲರು ಸಮಾನರೆನಿಸಿದರು. ಅಲ್ಲಿ ಬಡವ - ಶ್ರೀಮಂತರೆನ್ನುವ ಭೇಧವಿಲ್ಲದೆ ಎಲ್ಲರೂ ವೃತಾಚರಣೆಯಲ್ಲಿ ತೊಡಗಿದರು. ದೇವಲೀನರಾಗಿ ಅಲ್ಲಾಹನನ್ನು ಪ್ರಾರ್ತಿಸುತ್ತಾ ಎಲ್ಲ ರೀತಿಯ ತಪ್ಪುಗಳಿಂದ ದೂರವಿದ್ದ ಒಂದು ತಿಂಗಳು ಕಳೆದು ಈದ್-ಉಲ್-ಫಿತರ್ ಬಂದಿದೆ. ಇದು ದಾನದ ಹಬ್ಬ. ಒಂದು ತಿಂಗಳ ಹಸಿವೆಯ ಪಾಠದಿಂದ ಬಡತನ ಹಸಿವು ಏನೆಂಬುದು ಅರಿತ ಮುಸ್ಲಿಮನಿಗೆ ಈಗ ಬಡವನಿಗೆ -ಹಸಿದವನಿಗೆ ದಾನದ ಮೂಲಕ ಸಹಾಯಿಯಾಗುವುದು ಕರ್ತವ್ಯ. ಇಸ್ಲಾಂ ಎಂದೂ ಸಂಪತ್ತಿನ ಕೇಂದ್ರೀಕರಣ ವನ್ನು ವಿರೋಧಿಸುತ್ತದೆ. ಯಾವತ್ತೂ ಶೀಮಂತನನ್ನು ದಾನ ನೀಡುವುದಕ್ಕೆ ಪ್ರೇರೇಪಿಸುತ್ತದೆ. ಇಸ್ಲಾಮಿನ ಐದು ಪ್ರಧಾನ ಕರ್ಮಗಳಲ್ಲಿ ಒಂದಾದ 'ಝಕಾತ್' ಇದಕ್ಕೆ ಪುಷ್ಟಿ ನೀಡುತ್ತದೆ. ಅದಲ್ಲದೇ ಹಲವಾರು ಪುಣ್ಯ ಕಾರ್ಯಗಳ ಸಂದರ್ಭಗಳಲ್ಲೂ ದಾನ ನೀಡುವುದು ಕಡ್ಡಾಯಗೊಳಿಸುತ್ತದೆ. ಅಂತಹ ಒಂದು ಹಬ್ಬವಾಗಿದೆ ಈದ್-ಉಲ್-ಫಿತರ್ಇಸ್ಲಾಂ ಆಚರಿಸುವ ಎರಡೂ ಹಬ್ಬಗಳೂ ದಾನವನ್ನು ಪ್ರೋತ್ಸಾಹಿಸುತ್ತದೆ. ಅದರಲ್ಲೂ ಈಗ ಬಂದಿರುವ ಈದ್-ಉಲ್-ಫಿತರ್ ಸಂದರ್ಭೋಚಿತವಾಗಿ 'ದಾನ್ಯ' ದಾನ ಮಾಡುವುದನ್ನು ಹೇಳುತ್ತದೆ. ಇದು ಪ್ರತೀ ಮುಸ್ಲಿಮನ ಕಡ್ಡಾಯ ಕರ್ಮವಾಗಿದೆ. ಈದ್ ದಿನದಂದು ಯಾರೂ ಹಸಿದಿರಬಾರದು ಎಂಬುದು ಈ ದಾನದಿಂದ ಉಧ್ದೇಶಿಸಲಾಗಿದೆ. ಒಬ್ಬ ಮುಸ್ಲಿಮ ಆತನ ಈದ್ ದಿನದ ಹಗಲಿನ ಮತ್ತು ಆರಾತ್ರಿಯ ಖರ್ಚುಗೆ ಬೇಕಾದ ಸ್ವತ್ತು ಕಳೆದು ಬೇರೇನಾದರೂ ಉಳಿದಲ್ಲಿ, ಖಡ್ಡಾಯ ವಾಗಿ ದಾನ ನೀಡ ತಕ್ಕದ್ದು. ಅದು ಆ ಊರಿನ ಆಹಾರ ದಾನ್ಯ ವಾಗಿರಬೇಕು ಮತ್ತು ಅದಕ್ಕಾಗಿ ಒಂದು ಅಳತೆಯನ್ನು ನಿಗದಿಪಡಿಸಿದೆ(ಪ್ರತೀ ವ್ಯಕ್ತಿಯ ಮೇಲೂ ಸುಮಾರು 3 ಕೆಜಿ - ಇದು ಮಝಹಬ್ ಗಳಿಗೆ ಅನುಸರಿಸಿ ಬದಲಾಗಬಹುದು). ಯಾರೆಲ್ಲ ಈ ದಾನ ನೀಡಲು ಸಮರ್ಥರಲ್ಲವೋ ಅವರೆಲ್ಲ ದಾನಪಡಯಲು ಅರ್ಹರು. ಆದರೆ ಈ ದಾನದ ಲೆಕ್ಕಾಚಾರದಲ್ಲಿ ಒಬ್ಬಾತನ ಮನೆಯಲ್ಲಿರುವ ಪಾತ್ರೆ ಮೊದಲಾದ ವಸ್ತುಗಳೂ ಒಳಗೊಳ್ಳುತ್ತದೆ. ಅಂದರೆ ಪಾತ್ರೆಗಳನ್ನು ಮಾರಿಯಾದರೂ ದಾನ ನಿಡಬೇಕು!!!. ಮಾತ್ರವಲ್ಲ ಒಂದು ಮನೆಯಲ್ಲಿರುವ ಪ್ರತಿವ್ಯಕ್ತಿಯ ಮೇಲೂ ಈ ದಾನ ಖಡ್ಡಾಯ ವಾಗಿದೆ.

ಹಾಗಿದ್ದರೆ ಯೋಚಿಸಿ ನೋಡಿ ವಿಶ್ವದ ಎಲ್ಲ ಮುಸ್ಲಿಮ ಈ ದಾನವನ್ನು ನೀಡಿದರೆ ಕನಿಷ್ಟ ಒಂದು ವಾರವಾದರೂ ಹಸಿವಿಲ್ಲದ ವಾರ ವಾಗಿರಬಹುದು!!. "ಜಿಹಾದ್-ಜಿಹಾದ್" ಅನ್ನುವ ನಾಮಧಾರಿ ಮುಸ್ಲಿಮ "ಝಕಾತ್ - ಝಕಾತ್" (ದಾನ) ಅಂದರೆ ಇಂದು ಹಸಿವಿನಿಂದ ಸಾಯುವವರ ಸಂಖ್ಯೆ ಬಹಳ ಕಡಿಮೆ ಇರುತ್ತಿತ್ತು.

ಸಾಹೋದರ್ಯ ಭಾವ ತುಂಬಿಸುವ ಈದ್ ನ ಈ ದಿನ ಎಲ್ಲರೂ ದಾನ ಕರ್ಮಗಳಿಂದ ಸುಂದರವಾಗಿಸಲು, ಸೃಷ್ಟಿಕರ್ತ ನಮನ್ನು ಕರುಣಿಸಲೀ (ಆಮೀನ್) ಎಂದು ಪ್ರಾರ್ತಿಸುತ್ತೇನೆ. ಎಲ್ಲರಿಗೂ ಈದ್-ಉಲ್-ಫಿತರ್ (ದಾನ್ಯ ದಾನದ ಹಬ್ಬ) ನ ಶುಭಾಶಯಗಳು.

ಪ್ರಮುಖ ಅಂಶಗಳು

ಮೊರಾರ್ಜಿ ಪ್ರವೇಶ ಪರೀಕ್ಷೆ 2023-24 ನೇ ಸಾಲಿಗೆ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ / ಅಟಲ್‌ ಬಿಹಾರಿ ವಾಜಪೇಯಿ / ಡಾ.ಬಿ.ಆರ್.‌ ಅಂಬೇಡ್ಕರ್‌ ...

ಪ್ರಮುಖ ಕಲಿಕಾಂಶಗಳು