ಶಿಕ್ಷಣವೇ ಶಕ್ತಿ

Monday 27 November 2023

ನವೋದಯ ಪ್ರಶ್ನೆ ಪತ್ರಿಕೆಗಳು


ಉತ್ತರ ಪರಿಹಾರಗಳೊಂದಿಗೆ JNVST ಹಿಂದಿನ ವರ್ಷದ ಹಳೆಯ ಪ್ರಶ್ನೆ ಪತ್ರಿಕೆ

🌳 ಕರ್ನಾಟಕವನ್ನಾಳಿದ ಪ್ರಮುಖ ರಾಜಮನೆತನಗಳು: 🌳

● ೧) *ಮೌರ್ಯರು*:

* ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ನಾರುತ್ತವೆ. ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ

11 ಸ್ಥಳಗಳಲ್ಲಿ ಕಂಡು ಬಂದಿವೆ.

* ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.

* ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು : ಸುವರ್ಣಗಿರಿ, ಇಸಿಲ, ತೊಸಿಲ, ಸಂಪ.

* ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು : ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ. ರಾಮೇಶ್ವರ.

* ರಾಯಚೂರು ಜಿಲ್ಲೆಯ ಗವಿಮಠ, ಮಸ್ಕಿ, ಪಾಲ್ಕಿಗುಂಡು, ಕೊಪ್ಪಳ.
* ಗುಲ್ಬರ್ಗಾ ಜಿಲ್ಲೆಯ ಸನ್ನತಿ

* ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದಯಗೊಳ್ಳಂ

● ೨) ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225):*

* ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.

* ಇವರ ರಾಜಧಾನಿ : ಪೈತಾನ್‌ ಅಥವಾ ಪ್ರತಿಷ್ಠಾನ.

* ಇವರ ಲಾಂಛನ: ವರುಣ.

* ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.

* ಶಾತವಾಹನರ ಮೂಲ ಪುರುಷ : ಸಿಮುಖ.

* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ * ಶಾತವಾಹನರನ್ನು ' ಶಾತಕರ್ಣಿಗಳೆಂದು ಕರೆಯುತ್ತಾರೆ.

● *೩) ಬನವಾಸಿಯ ಕದಂಬರು (ಕ್ರಿ.ಶ 345 - 540):*

* ಈ ಸಂತತಿಯ ಸ್ಥಾಪಕ : ಮಯೂರವರ್ಮ (ಮಯೂರಶರ್ಮ) (345-360) * ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ)

* ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.

* ಇವರ ಲಾಂಛನ : ಸಿಂಹ.

* ಕದಂಬರಲ್ಲಿ ಹಾನಗಲ್, ಚಂದಾವರ, ಗೋವೇ ಕದಂಬರೆಂದು ಮೂರು ಶಾಖೆಗಳಿದ್ದವು.

* ಕದಂಬರ ಮೂಲದ ಬಗ್ಗೆ 'ಶಾಂತಿವರ್ಮನ ತಾಳಗುಂದ ಶಾಸನ' ತಿಳಿಸುತ್ತದೆ.

* ಕನ್ನಡದ ಪ್ರಪ್ರಥಮ ಶಾಸನ - ಕಾಕುತ್ಸವರ್ಮನ ಹಮ್ಮಿಡಿ ಶಾಸನ.

● ೪) ತಲಕಾಡಿನ ಗಂಗರು (ಕ್ರಿ.ಶ 350- 999):*

* ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು.
* ಈ ಸಂತತಿಯ ಮೊದಲ ದೊರೆ : ದಡಿಗ (ಕ್ರಿ.ಶ. 350 -400)

* ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ.
* ಇವರ ಎರಡನೆಯ ರಾಜಧಾನಿ : ತಲಕಾಡು
* ತಲಕಾಡಿನ ಮತ್ತೊಂದು ಹೆಸರು : ತಲವನಪುರ.
* ಇವರ ಮೂರನೇ ರಾಜಧಾನಿ : ಚನ್ನಪಟ್ಟಣ ಬಳಿಯ ಮಾಕುಂದ
* ಇವರ ಲಾಂಛನ : ಆನೆ(ಮದಗಜ)
* ಈ ಸಂತತಿಯ ಅತ್ಯಂತ ಪ್ರಸಿದ್ದ ದೊರೆ : ದುರ್ವಿನೀತ (540-600)

*ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.*

* ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು.

● ೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757):*

* ಈ ಸಂತತಿಯ ಸ್ಥಾಪಕ : ಜಯಸಿಂಹ

* ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ)
* ಈ ಸಂತತಿಯ ಅತ್ಯಂತ ಪ್ರಸಿದ್ದ ದೊರೆ : ಇಮ್ಮಡಿ ಪುಲಕೇಶಿ (609-642)
* ಇವರ ರಾಜ ಲಾಂಛನ : ವರಹ.

* ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್.

* ಬಾದಾಮಿಯ ಚಾಲುಕ್ಯರ ನಿರ್ಮಿತ ಐಹೊಳೆಯನ್ನು 'ಭಾರತೀಯ ದೇವಾಲಯದ ವಾಸ್ತುಶಿಲ್ಪದ ತೊಟ್ಟಿಲು' ಎನ್ನುವರು.

● ೬) ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 - 540):*

* ಈ ಸಂತತಿಯ ಸ್ಥಾಪಕ : ದಂತಿದುರ್ಗ

* ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.

* ಇವರ ಲಾಂಛನ : ಗರುಡ

* ಈ ಸಂತತಿಯ ಅತ್ಯಂತ ಹೆಸರಾಂತ ದೊರೆ : ಅಮೋಘವರ್ಷ ನೃಪತುಂಗ (814-878).
* ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು.

● ೭) ಕಲ್ಯಾಣದ ಚಾಲುಕ್ಯರು (ಕ್ರಿ.ಶ 273-1156 ಹಾಗೂ 1183 1200):*

ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ

* ಇವರ ರಾಜಧಾನಿ : ಕಲ್ಯಾಣ

* ಈ ಸಂತತಿಯ ಅತ್ಯಂತ ಪ್ರಮುಖ ದೊರೆ: 6ನೇ ವಿಕ್ರಮಾದಿತ್ಯ (1076-1126)
* 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200ರ ವರೆಗೆ ರಾಜ್ಯಭಾರ ನಡೆಸಿದರು.

● ೮) ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 - 1183):*

* ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು.

* ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.

● ೯) ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 - 1346):*

* ಈ ಸಂತತಿಯು ಮೂಲ ಪುರುಷ : ಸಳ.

* ಇವರ ರಾಜಧಾನಿ : ಹಳೆಬೀಡು ಅಥವಾ ದ್ವಾರಸಮುದ್ರವಾಗಿತ್ತು.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152).

* ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.

● 10) ವಿಜಯನಗರ ಸಾರ್ಮಾಜ್ಯ (ಕ್ರಿ.ಶ 1336 - 1565):*

ವಿದ್ಯಾರಣ್ಯರ ಸಹಾಯದಿಂದ ಹಕ್ಕ ಬುಕ್ಕ ಸಹೋದರರಿಂದ ಸ್ಥಾಪಿತವಾದ ಈ ಸಾಮ್ರಾಜ್ಯವನ್ನು ಹಲವಾರು ಸಂತತಿಯ ರಾಜರು ವೈಭವದಿಂದ ಆಳಿದರು.
* ಇವರ ರಾಜಧಾನಿ : ಹಂಪಿ

* ತುಳುವ ಸಂತತಿಯ ಕೃಷ್ಣದೇವರಾಯ (1519 - 1529) ವಿಜಯನಗರ ಸಾಮ್ರಾಜ್ಯದ ಅತ್ಯಂತ ಪ್ರಬಲ ಹಾಗೂ ಖ್ಯಾತ ದೊರೆ.

* 1565ರ ತಾಳೀಕೋಟೆ ಯುದ್ಧದಿಂದ ವಿಜಯನಗರ ಸಾಮ್ರಾಜ್ಯ ಪತನವಾಯಿತು.

● ೧೧) ಬಹಮನಿ ಸಾಮ್ರಾಜ್ಯ (ಕ್ರಿ.ಶ 1347 - 1527):*

* ಈ ಬಹಮನಿ ಸಾಮ್ರಾಜ್ಯದ ಸ್ಥಾಪಕ: ಅಲ್ಲಾವುದ್ದೀನ್ ಹಸನ್ ಬಹಮನ್ ಷಾ.
* ಈ ಮುಸ್ಲಿಂ ಸಾಮ್ರಾಜ್ಯದ ರಾಜಧಾನಿಗಳು : ಗುಲ್ಬರ್ಗಾ ಹಾಗೂ ಬೀದರ್.
🌸🌼🌸🌼🌸🌼🌸🌼🌸🌼🌸🌼

ಕೆಲವು ಶಾಸನಗಳ ಬಗ್ಗೆ ಒಂದಿಷ್ಟು ಮಾಹಿತಿ..

🌷ಐಹೊಳೆ ಶಾಸನ  -  ರವಿಕೀರ್ತಿ . ಮೇಗುತಿ ದೆವಾಲಯದಲ್ಲಿ ಕೆತ್ತಲಾಗಿದೆ ( ಇಮ್ಮಡಿ ಪುಲಕೇಶಿಯ ಕಾಲದ್ದು)

🌷ಚಂದ್ರವಳ್ಳಿ ಶಾಸನದ ಕತೃ  -  ಮಯೂರ ವರ್ಮ ( ಚಿತ್ರದುರ್ಗ)

🌷ಕನ್ನಡದ ಮೊಟ್ಟಮೊದಲ ಶಾಸನ  -  ಹಲ್ಮಿಡಿ ಇರುವುದು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಲ್ಮಿಡಿ ಗ್ರಾಮ.

🌷ಬ್ರಾಹ್ಮಿ ಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ  -  ಚಂದ್ರವಳ್ಳಿ ಶಾಸನ

🌷ಹಲ್ಮಿಡಿ ಶಾಸನದ ಕತೃ -  ಕಾಕುತ್ಸ ವರ್ಮ.

🌷ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ  -  ಚಂದ್ರವಳ್ಳಿ ಶಾಸನ

🌷ತಾಳಗುಂದ ಶಾಸನದ ಕತೃ  -  ಕವಿ ಕುಬ್ಜ

🌷ತಾಳಗುಂದ ಶಾಸನವನ್ನು ಬರೆಸಿದವರು  -  ಶಾಂತಿವರ್ಮ ( ಶಿವಮೊಗ್ಗ ಜಿಲ್ಲೆಯಲ್ಲಿದೆ)

🌷ನಿಟ್ಟೂರು ಶಾಸನದ ಕತೃ  -  ಚಡಪ.

🌷ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ  -  ದಂತಿದುರ್ಗ

🌷ಭಾಂಡ್ಕ ಮತ್ತು ತಾಳೆಗಾಂ ಶಾಸನ  -  ಒಂದನೇ ಕೃಷ್ಣ

🌷ಸಂಜಾನ್ ತಾಮ್ರ ಶಾಸನ   -  ಅಮೋಘ ವರ್ಷ

🌷ಬಾದಾಮಿ ಶಾಸನದ ಕತೃ  -  ಒಂದನೇ ಪುಲಿಕೇಶಿ

🌷ಮಹಾಕೂಟಸ್ತಂಭ ಶಾಸನ ಕತೃ  -  ಮಂಗಳೇಶ. ಬಾದಾಮಿಯ ಮಹಾಕೂಟೇಶ್ವರ ದೇವಾಲಯದಲ್ಲಿದೆ

ಪ್ರಮುಖ ಅಂಶಗಳು

ಮೊರಾರ್ಜಿ ಪ್ರವೇಶ ಪರೀಕ್ಷೆ 2023-24 ನೇ ಸಾಲಿಗೆ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ / ಅಟಲ್‌ ಬಿಹಾರಿ ವಾಜಪೇಯಿ / ಡಾ.ಬಿ.ಆರ್.‌ ಅಂಬೇಡ್ಕರ್‌ ...

ಪ್ರಮುಖ ಕಲಿಕಾಂಶಗಳು