ಶಿಕ್ಷಣವೇ ಶಕ್ತಿ

Saturday, 15 May 2021

ಕನ್ನಡ ವ್ಯಾಕರಣ ಮುಂದುವರೆದ ಭಾಗ....

ವಚನ ಎಂದರೇನು? ವಿಧಗಳು ಯಾವುವು?

ವಚನಗಳು
ಸಾಹಿತ್ಯದ ದೃಷ್ಟಿಯಲ್ಲಿ ವಚನ ಎಂದರೆ – “ಪರಿಶುದ್ಧ / ನೀತಿಯುಕ್ತ ಮಾತು ಎಂದರ್ಥ .ಆದರೆ ವ್ಯಾಕರಣದ ದೃಷ್ಟಿಯಲ್ಲಿ ವಚನ ಎಂದರೆ ಸಂಖ್ಯೆ ಎಂದರ್ಥ..

ವಚನಗಳ ವಿಧಗಳು
ಕನ್ನಡದ ವಚನಗಳಲ್ಲಿ ಮುಖ್ಯವಾಗಿ ಎರಡು ವಿಧಗಳುಂಟು.ಅವುಗಳೆಂದರೆ :

ಏಕವಚನ.
ಬಹುವಚನ


ಏಕವಚನ

ಒಬ್ಬ ವ್ಯಕ್ತಿ , ಒಂದು ವಸ್ತು, ಒಂದು ಸ್ಥಳ ಎಂದು ಹೇಳುವ ಶಬ್ಬಗಳಿಗೆ ಏಕವಚನ ಎಂದು ಕರೆಯಲಾಗಿದೆ. ಉದಾ ; ಅರಸು, ನೀನು, ಮನೆ , ನಾನು, ಮರ, ಕವಿ , ತಂದೆ, ತಾಯಿ, ರಾಣಿ, ಊರು….. ಇತ್ಯಾದಿ

ಬಹುವಚನ
ಒಂದಕ್ಕಿಂತ ಹೆಚ್ಚು ವ್ಯಕ್ತಿ, ವಸ್ತುಗಳನ್ನು ಕುರಿತು ಹೇಳುವ ಶಬ್ಬಗಳಿಗೆ ಬಹುವಚನ ಎಂದು ಹೆಸರು..

 ಉದಾ :  ಅರಸರು, ನೀವು, ಮನೆಗಳು, ನಾವು, ಮರಗಳು, ಕಿವಿಗಳು, ಅಣ್ನದಿರು, ತಾಯಿಯರು , ರಾಣಿಯರು, ಊರುಗಳು ಇತ್ಯಾದಿ… 

ಪುಲ್ಲಿಂಗ, ಸ್ತ್ರೀಲಿಂಗ ನಾಮಪ್ರಕೃತಿಗಳ ಮೇಲೆ ಬಹುಮಟ್ಟಿಗೆ ಆರು , ಅಂದಿರುಗಳು, ಪ್ರತ್ಯಯಗಳು ಹತ್ತುತ್ತವೆ. ಗಂಡಸರು, ಹೆಂಗಸರು, ಮುದುಕರು, ಜಾಣೆಯರು, ಗೆಳೆತಿಯರು, ಅರಸರು, ಗೆಳೆಯರು, ಆಟಗಾರರು, ಸೊಸೆಯರು,ಅತ್ತೆಯರು……. ಇತ್ಯಾದಿ

ಅಂದಿರು : ‘ಅ’ ಕಾರಂತ ಪ್ರಕೃತಿಗಳಿಗೆ ಅಂದಿರು ಎಂಬ ಪ್ರತ್ಯಯವು ಹತ್ತುತ್ತದೆ… ಅಣ್ಣಂದಿರು ಗಂಡಂದಿರು ಅಕ್ಕಂದಿರು, ತಮ್ಮಂದಿರು,ಭಾವಂದಿರು ,ಮಾವಂದಿರು ……….. ಇತ್ಯಾದಿಗಳು

(ಅ) ಅಕಾರಾಂತ ವಲ್ಲದ ಪುಲಿಂಗ,ಸ್ತ್ರೀಲ್ಲಿಂಗ ಪ್ರಕೃತಿಗಲಲ್ಲಿ ಹಲವಕ್ಕಿಗಳು ಪ್ರತ್ಯಯಗಳು ಸೇರುತ್ತದೆ.

  ಉದಾ : ಋಷಿಗಳು, ಗುರುಗಳು, ದೊರೆಗಳು, ಮುನಿಗಳು, ಹೆಣ್ಣುಗಳು, ತಮದೆಗಳು, ……….. ಇತ್ಯಾದಿ

(ಆ) ನಪುಂಸಕ ಲಿಂಗದ ಪ್ರಕೃತಿಗಳಿಗೆಲ್ಲ ‘ಗಳು’ – ಸೇರುತ್ತವೆ. 

ಉದಾ : ಮರಗಳು , ದೇವತೆಗಳು, ಹಸುಗಳು, ಎಮ್ಮೆಗಳು, ಕೊಳಗಳು , ಹುಲಿಗಳು, ಹಳ್ಳಿಗಳು, ಕೆರೆಗಳು, ಕಲ್ಲುಗಳು …………. ಇತ್ಯಾದಿ

_________________________________________

ವಿಭಕ್ತಿ ಪ್ರತ್ಯಯ, ವಿಧಗಳು, ಹಳಗನ್ನಡ ಮತ್ತು ಹೊಸಗನ್ನಡದ ವಿಭಕ್ತಿ ಪ್ರತ್ಯಯಗಳು

ವಿಭಕ್ತಿ ಪ್ರತ್ಯಯಗಳು
ನಾಮ ಪದಗಳ ಮೂಲ ರೂಪಕ್ಕೆ ನಾಮ ಪ್ರಕೃತಿ ಎಂದು ಹೇಳುತ್ತೇವೆ.

ನಾಮ ಪ್ರಕೃತಿಗಳ ಜೊತೆ ಪ್ರತ್ಯಯಗಳು ಸೇರಿ ನಾಮಪದಗಳಾಗುತ್ತವೆ.ಈ ರೀತಿ “ನಾಮ ಪ್ರಕೃತಿಗಳ ಜೊತೆ ಸೇರುವ” ಅಕ್ಷರಗಳಿಗೆ ವಿಭಕ್ತಿ ಪ್ರತ್ಯಯವೆಂದು ಹೆಸರು ಅಥವಾ “ನಾಮ ಪ್ರಕೃತಿಗಳಿಗೆ ಇರುವ ಸಂಭಂಧವನ್ನು ತಿಳಿಸಲುಸೇರಿರುವ ಪ್ರತ್ಯಯಕ್ಕೆ ವಿಭಕ್ತಿ ಪ್ರತ್ಯಯವೆಂದುಹೆಸರು. ಅಥವಾ“ಕ್ರಿಯಾಪದದೊಂದಿಗೆ ನಾಮಪದಗಳ ಸಮಭಂಧವನ್ನು ತಿಳಿಸುವ ಕರ್ತೃ, ಕರ್ಮ, ಕರಣ, ಸಂಪ್ರಧಾನ, ಅಪಾದಾನ, ಅಧಿಕರಣ, ಮುಂತಾದ ಕಾರಕಾರ್ಥಗಳನ್ನು ವಿಭಜಿಸಿ ಹೇಳುವ ಪ್ರತ್ಯಯಗಳನ್ನು‘ವಿಭಜಿಸಿ ಪ್ರತ್ಯಯ’ ಎಂದು ಕರೆಯಲಾಗಿದೆ.”

ವಿಭಕ್ತಿಗಳಿಗೆ ಪ್ರತ್ಯಯಗಳು ಸೇರಿ ಒಂದು ಪೂರ್ಣ ನಾಮಪದವಾಗುತ್ತದೆ.ಈ ವಿಭಕ್ತಿ ಪ್ರತ್ಯಯಗಳನ್ನು ಪುಲ್ಲಿಂಗ, ಸ್ತ್ರೀಲಿಂಗ, ನಪುಂಸಕಲಿಂಗ , ಹಾಗೂ ಸರ್ವನಾಮ ಪದಗಳಿಗೆ ಅಳವಡಿಸಿ …

ವಿಭಕ್ತಿ ಪ್ರತ್ಯಯಗಳ ವಿಧಗಳು
ಕ್ರ ಸಂ ವಿಭಕ್ತಿಯ ಹೆಸರು ಹೊಸಗನ್ನಡ ಪ್ರತ್ಯಯ ಹಳಗನ್ನಡ ಪ್ರತ್ಯಯ ಕಾರಕಗಳು


1 ಪ್ರಥಮ ವಿಭಕ್ತಿ ಮ್ ಕರ್ತೃ
2 ದ್ವಿತೀಯ ವಿಭಕ್ತಿ ಅನ್ನು ಅಮ್ ಕರ್ಮ
3 ತೃತೀಯಾ ವಿಭಕ್ತಿ ಇಂದ ಇಮ್ ಕರಣ
4 ಚತುರ್ಥಿ ವಿಭಕ್ತಿ ಗೆ ಕೆ ಸಂಪ್ರಧಾನ
5 ಪಂಚಮಿ ವಿಭಕ್ತಿ ದೆಸೆಯಿಂದ ಅತ್ತಣಿಂ ಅಪಧಾನ
6 ಷಷ್ಠಿ ವಿಭಕ್ತಿ ಆ ಆ ಸಂಬಂಧ
7 ಸಪ್ತಮಿ ವಿಭಕ್ತಿ ಅಲ್ಲಿ ಒಳ್ ಅಧಿಕರಣ
ವಿಭಕ್ತಿ ಪ್ರತ್ಯಯಗಳಲ್ಲಿ ಮುಖ್ಯವಾಗಿ ಎಂಟು ವಿಧಗಳಿವೆ..

ಪ್ರಥಮ ವಿಭಕ್ತಿ ಉ
ದ್ವಿತೀಯ ವಿಭಕ್ತಿ ಅನ್ನು
ತೃತೀಯ ವಿಭಕ್ತಿ ಇಂದ
ಚತುರ್ಥಿ ವಿಭಕ್ತಿ ಗೆ, ಇಗೆ
ಪಂಚಮಿ ವಿಭಕ್ತಿ ದೆಸೆಯಿಂದ
ಷಷ್ಠಿ ವಿಭಕ್ತಿ ಅ
ಸಪ್ತಮಿ ವಿಭಕ್ತಿ ಅಲ್ಲಿ
ಸಂಭೋಧನ ವಿಭಕ್ತಿ ಮ ಏ
ಆದರೆ ಕನ್ನಡದಲ್ಲಿ 7 ವಿಭಕ್ತಿ ಪ್ರತ್ಯಯಗಳುಂಟು

ಪ್ರಥಮ ಕತೃರ್ಥ ಉ
ದ್ವಿತೀಯ ಕರ್ಮಾರ್ಥ ಅನ್ನು
ತೃತೀಯ ಕರಣಾರ್ಥ ಇಂದ
ಚತುರ್ಥೀ ಸಂಪ್ರಧಾನ ಗೆ
ಪಂಚಮಿ ಅಪಧಾನ ದೆಸೆಯಿಂದ
ಷಷ್ಠಿ ಸಂಭಂಧ ಅ
ಅಪ್ತಮಿ ಅಧಿಕರಣ ಅಲ್ಲಿ
ಸಂಬೋಧನ ಅಭಿಮುಖೀ ಏ ಆಕರಣ ಹಳಗನ್ನಡ ವಿಭಕ್ತಿ ಪ್ರತ್ಯಯಗಳು

ವಿಭಕ್ತಿ ಪ್ರತ್ಯಯ ರೂಪಗಳು
ಪ್ರಥಮಾ ಮ್ ಮ್ ರಾಮಂ
ದ್ವಿತೀಯಾ ಅಮ್ ರಾಮನಂ
ತೃತೀಯ ಇಮ್ ರಾಮನಿಂ
ಚತುರ್ಥೀ ಗೆ ರಾಮಂಗೆ
ಪಂಚಮಿ ಅತ್ತಣಿಂ ರಾಮನತ್ತಣಿಂ
ಷಷ್ಠಿ ಅ ರಾಮನ
ಸಪ್ತಮಿ ಒಳ್ ರಾಮನೊಳ್

_________________________________________

ಕ್ರಿಯಾ ಪದ, ಧಾತು, ಧಾತುಗಳ ವಿಧಗಳು

ಕ್ರಿಯಾ ಪದ ಪ್ರಕರಣ
ಕ್ರಿಯಾಪದ : ” ವಾಕ್ಯದಲ್ಲಿ ಒಂದು ವಸ್ತುವಿನ ಕ್ರಿಯೆಯ ಅರ್ಥವನ್ನು ಸೂಚಿಸುವ ಪದಗಳೇ ಕ್ರಿಯಾಪದ” ಅಥವಾ “ಒಂದು ಕ್ರಿಯೆಯ ಅರ್ಥವನ್ನು ಸೂಚಿಸುವ ಪದಗಳನ್ನು ಸಾಮಾನ್ಯವಾಗಿ ಕ್ರಿಯಾಪದ ಎನ್ನುತ್ತೇವೆ.” 

ಉದಾ ;
ದೀಪವು ಉರಿಯುತ್ತದೆ.
ಹಸುವು ಹಾಲನ್ನು ಕೊಡುತ್ತದೆ.
ತಾಯಿಯು ಅಡುಗೆಯನ್ನು ಮಾಡುತ್ತಾಳೆ.
ಅಣ್ಣ ಊಟವನ್ನು ಮಾಡುವ್ನು.
ದೇವರು ಒಳ್ಳೆದನ್ನು ಮಾಡಲಿ.
ಮೇಲಿನ ಉದಾ-ಗಳಲ್ಲಿ ಗೆರೆ ಎಳೆದಿರುವ ಪದಗಳೆಲ್ಲವೂ ಕ್ರಿಯೆಯ ಅರ್ಥವನ್ನು ಸೂಚಿಸುವ ಶಬ್ದಗಳಾಗಿರುವುದತಿಂದ ಕ್ತಿಯಾಪದಗಳು ಎನಿಸುತ್ತದೆ..

ಮೇಲಿನ ಶಬ್ದಗಳಲಿ “ಉರಿ ಕೊಡು ಮಾಡು ” ಎಂಬ ಶಬ್ಧ ಕ್ರಿಯೆಯ ಅರ್ಥಕೊಡುವ ಮೂಲ ರೂಪವಾಗಿದೆ..

ಧಾತು ಅಥವಾ ಕ್ರಿಯಾ ಪ್ರಕೃತಿ
ಕ್ರಿಯಾ ಪದದ ಮೂಲ ರೂಪಕ್ಕೆ ಧಾತು / ಕ್ರಿಯಾಪ್ರಕೃತಿ ಎಂದು ಹೆಸರು ”ಅಥವಾ“ಕ್ರಿಯಾರ್ಥವನ್ನು ಕೂಡುವುದಾಗೆಯೂ, ಪ್ರತ್ಯಯವನ್ನು ಹೊಂದದೆಯೂ ಇರುವ ಶಬ್ದಕ್ಕೆ ಕ್ರಿಯಾಪ್ರಕೃತಿ / ಧಾತು ಎಂದು ಎಂದು ಹೆಸರು”ಧಾತುಗಳಿಗೆ ಪ್ರತ್ಯಯಗಳು ಸೇರಿ ಕ್ರಿಯಾಪದಗಳಾಗುತ್ತವೆ.

ಉದಾ : ಧಾತು + ಪ್ರತ್ಯಯ + ಕ್ರಿಯಾಪದ ಮಾಡು + ತ್ತಾನೆ + ಮಾಡುತ್ತಾನೆ ಯತ್ನ + ಇಸು + ಯತ್ನಿಸು ಕನ್ನಡ + ಇಸು + ಕನ್ನಡಿಸು ಭಾವ + ಇಸು + ಭಾವಿಸು ರಕ್ಷ + ಇಸು + ರಕ್ಷಿಸು ಓಡು +ತ್ತಾನೆ + ಓಡುತ್ತಾನೆ

ಧಾತುಗಳ ವಿಧಗಳು
ಧಾತುಗಳಲ್ಲಿ ಮುಖ್ಯವಾಗಿ ಎರಡು ವಿಧಗಳಿವೆ.

ಮೂಲಧಾತು (ಸಹಜ) ಗಳು
ಸಾಧಿತ ಧಾತುಗಳು


ಮೂಲ ಧಾತುಗಳು

“ಒಂದು ಭಾಷೆಯಲ್ಲಿ ಆರಂಭದಿಂದಲೂ ಇರುವ ಧಾತುಗಳಿಗೆಮೂಲಧಾತು / ಸಹಜಧಾತು ಎಂದು ಹೆಸರು”

ಉದಾ : ಮಾಡು, ಹೋಗು , ಬರು, ನಡೆ, ನೋಡು, ಓದು, ಹುಟ್ಟು, ಅಂಜು, ಸುತ್ತು, ಬಿತ್ತು , ಹೊಗಳು , ತೆಗಳು , ಎಳೆ , ಸೆಳೆ ತಿಳಿ , ಅರಿ , ಸುರಿ, ಅರಸು, ಸೆಳೆ, ಇತ್ಯಾದಿ

ಮೂಲಧಾತು + ಪ್ರತ್ಯಯ =ಕ್ರಿಯಾಪದ ಮಾಡು + ತ್ತಾನೆ =ಮಾಡುತ್ತಾನೆ ನೋಡು + ಇಸು =ನೋಡಿಸು ತಿನ್ನು +ತ್ತಾನೆ = ತಿನ್ನುತ್ತಾಳೆ

ಸಾಧಿತ ಧಾತುಗಳು
“ಕೆಲವು ಕನ್ನಡ ನಾಮಪ್ರಕೃತಿಗಳ ಮೇಲೆ , ಅನುಕರಣ ಶಬ್ಧಗಳ ಮೇಲೆ ‘ಇಸು’ ಪ್ರತ್ಯಯ ಸೇರಿದಾಗ ಸಾಧಿತ ಧಾತುಗಳೆನಿಸುತ್ತವೆ.”ಇವಕ್ಕೆ ಪ್ರತ್ಯಯಾಂತ ಧಾತು ಎಂತಲೂ ಕರೆಯುತ್ತಾರೆ. 

ಉದಾ : ನಾಮಪ್ರಕೃತಿ + ಪ್ರತ್ಯಯ + ಸಾಧಿತ ಧಾತು ಅಬ್ಬರ + ಇಸು + ಅಬ್ಬರಿಸು ಕಳವಳ + ಇಸು + ಕಳವಳಿಸು ಕನ್ನಡ + ಇಸು + ಕನ್ನಡಿಸು ಚಿತ್ರ + ಇಸು + ಚಿತ್ರಿಸು ಸ್ತುತಿ + ಇಸು + ಸುತ್ತಿಸು ಸಿದ್ದಿ + ಇಸು + ಸಿದ್ದಿಸು ಓಲಗ + ಇಸು + ಓಲಗಿಸು ಮಲಗು + ಇಸು + ಮಲಗಿಸು ಪ್ರೀತಿ +ಇಸು + ಪ್ರೀತಿಸು ರಕ್ಷ + ಇಸು + ರಕ್ಷಿಸು ಧಗಧಗ + ಇಸು + ಧಗಧಗಿಸು ಥಳ ಥಳ + ಇಸು + ಥಳ ಥಳಿಸು

ಭಾವ ಸೂಚಕಗಳಾದ ಸಂಸ್ಕೃತ ಶಬ್ದಗಳು “ಇಸು” ಪ್ರತ್ತಯಯಗಳನ್ನು ಹೊಂದಿ ಸಾಧಿತ ಧಾತುಗಳಾಗುತ್ತವೆ.

ಉದಾ :ಯತ್ತಿಸಯ, ಸ್ತುತಿಸು , ಜಯಿಸು, ಲೇಪಿಸು, ಶೋಕಿಸು, ಭಾವಿಸು , ಇತ್ಯಾದಿ ಎಲ್ಲ ಧಾತುಗಳಿಗೂ ಪ್ರೇರಣಾರ್ಥಕದಲ್ಲಿ ‘ಇಸು’ ಪ್ರತ್ಯಯ ಸೇರುತ್ತದೆ. ಇವಕ್ಕೆ ಪ್ರೇರಣಾರ್ಥಕ ಧಾತುಗಳು ಎಂದು ಹೆಸರು.

ಪ್ರೇರಣೆ ಎಂದು ” ಇನೋಬ್ಬರಿಂದ ಕೆಲಸ ಮಾಡಿಸುವುದು” ಉದಾ :ಮೂಡಿಸು ಕಲಿಸು , ಬರೆಯಿಸು , ನುಡಿಸು ಹೇಳಿಸು…..ಇತ್ಯಾದಿ

ಸಾಧಿತ ಧಾತುಗಳ ವಿಧಗಳು

ಸಕರ್ಮಕ ಧಾತುಗಳು - ಅರ್ಥಪೂರ್ತಿಗಾಗಿ ಅರ್ಮಪದವನ್ನು ಅಪೇಕ್ಷಿಸುವ ಧಾತುಗಳಿಗೆ ಸಕರ್ಮಕ ಧಾತು ಎಂದು ಹೆಸರು .ಈ ಸಕರ್ಮಕ ಧಾತುಗಳಲ್ಲಿ ಬರುವ ಕ್ರಿಯಾಪದ ಏನನ್ನು ಎಂಬ ಪ್ರಶ್ನೆಯು ಉದ್ಬವಿಸುತ್ತದೆ. ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ಸೂಚಿಸಲು ವನ್ನು ಉಪಯೋಗಿಸಲಾಗುತ್ತದೆ. 

ಉದಾ : ಕರ್ತೃಪದ ಪರ್ಮಪದ ಕ್ರಿಯಾಪದ ರಾಮನ್ನು ಮರವನ್ನು ಕಡಿಯುತ್ತಾನೆ ಭೀಮನ್ನು ಬಕಾಸುನನ್ನು ಕೊಂದನು ದೇವರು ಲೋಕವನ್ನು ರಕ್ಷಿಸುವನ್ನು ಶಿಲ್ಪಿಗಳು ಗುಡಿಯನ್ನು ಕಟ್ಟಿದರು ವಿದ್ಯಾರ್ಥಿಗಳು ಪಾಠವನ್ನು ಓದಿದರು ಹುಡುಗರು ಕೆಲಸವನ್ನು ಮಾಡುತ್ತಾರೆ ಅನೇಕರು ನದಿಯನ್ನು ದಾಟಿದರು ಸಾಧುಗಳು ದೇವರನ್ನು ನಂಬುತ್ತಾರೆ ಹುಡುಗಿ ಪಾತ್ರೆಯನ್ನು ತೋಳೆಯುತ್ತಾಳೆ

ಅಕರ್ಮಕ ಧಾತುಗಳು -ಕರ್ಮಪದದ ಅಪೇಕ್ಷೆಯಿಲ್ಲದೇ ಪೂಣಾರ್ಥವನ್ನು ಕೊಡಲು ಸಮ್ಥವಾದ ಧಾತುಗಳನ್ನು ಅಕರ್ಮಕ ಧಾತು ಎಂದುಕರೆಯುತ್ತೇವೆ. ಈ ಅಕರ್ಮಕ ಧಾತುಗಳಲ್ಲಿ ಬರುವ ಕ್ರಿಯಾಪದಕ್ಕೆ ಉದ್ಬವಿಸುವ ಪ್ರಶ್ನೆಗೆ ಉತ್ತರವನ್ನು ಸೂಚಿಸಲು ಕರ್ಮಪದವನ್ನು ಪ್ರಯೋಗ ಮಾಡಲಾಗುವುದಿಲ್ಲ. 

ಉದಾ : ಕರ್ತೃಪದ ಕ್ರಿಯಾಪದ ಧಾತು ಮಗು ಹುಟ್ಟಿತು ಹುಟ್ಟು ರಾಮನು ಬಂದನು ಬಂದ ಮಳೆ ಬೀಳುತ್ತದೆ ಬೀಳು ಮಗುವು ಅಳುತ್ತಿದೆ ಅಳು ಕೂಸು ಮಲಗಿತು ಮೊಲಗು ರಾಮನು ಓಡಿದನ್ನು ಓಡು ಆಕಾಶ ಹೊಳೆಯುತ್ತಿದೆ ಹೊಳೆ ಅವನು ಬದುಕಿದನು ಬದುಕು ಕಳ್ಳರು ಹೆದರಿದರು ಹೆದರು ಅವರು ಸೇರಿದರು ಸೇರು ಇವಳು ನೆನೆದಳು ನೆನೆ ಹುಡುಗರು ಓದಿದರು ಓದು.

_________________________________________

ಕೃದಂತ-ತದ್ಧಿತಾಂತ

ಕೃದಂತ-ತದ್ಧಿತಾಂತ

ಕೃದಂತ (ಕೃನ್ನಾಮ)


ನಾಮಪ್ರಕೃತಿಗಳು ನಾಲ್ಕು ಪ್ರಕಾರಗಳೆಂದು ತಿಳಿದಿರುವಿರಿ.
(೧) ಸಹಜನಾಮಪ್ರಕೃತಿಗಳು
(೨) ಕೃದಂತಗಳು
(೩) ತದ್ಧಿತಾಂತಗಳು
(೪) ಸಮಾಸಗಳು – ಎಂದೇ ಆ ನಾಲ್ಕುವಿಧವಾದ ನಾಮಪ್ರಕೃತಿಗಳು.
ಸಹಜನಾಮಪ್ರಕೃತಿಗಳೆಂದರೇನು? ಅವು ನಾಮವಿಭಕ್ತಿಪ್ರತ್ಯಯ ಸೇರಿ, ನಾಮಪದಗಳಾಗು ವಿಕೆ, ಅವುಗಳ ಲಿಂಗ, ವಚನಾದಿಗಳ ಬಗೆಗೂ, ಸಮಾಸವೆಂದರೇನು? ಅವುಗಳ ಪ್ರಕಾರಗಳ ಬಗೆಗೂ ಹಿಂದಿನ ಪ್ರಕರಣಗಳಲ್ಲಿ ತಿಳಿದಿದ್ದೀರಿ.  ಈಗ ಕೃದಂತ, ತದ್ಧಿತಾಂತಗಳೆಂದರೇನೆಂಬ ಬಗೆಗೆ ತಿಳಿಯಿರಿ.
ಮೊದಲು ಕೃದಂತಪ್ರಕರಣದಲ್ಲಿ ಕೃದಂತಗಳ ಬಗೆಗೂ, ಅನಂತರ ತದ್ಧಿತಾಂತ ಪ್ರಕರಣದಲ್ಲಿ ತದ್ಧಿತಾಂತಗಳ ಬಗೆಗೂ ವಿವರಗಳನ್ನು ನೋಡಿರಿ.
ಧಾತು-ಕ್ರಿಯಾಪದ-ಕೃದಂತನಾಮಪ್ರಕೃತಿ-ಕೃದಂತನಾಮಪದ
(೧)ಮಾಡು-ಮಾಡಿದನು-ಮಾಡಿದ-ಮಾಡಿದವನು, ಮಾಡಿದವನನ್ನು, ಮಾಡಿದವನಿಂದ -ಇತ್ಯಾದಿ
(೨)ಹೋಗು-ಹೋಗುವನು-ಹೋಗುವ-ಹೋಗುವವನು, ಹೋಗುವವನನ್ನು, ಹೋಗುವವನಿಂದ -ಇತ್ಯಾದಿ
(೩)ತಿನ್ನು-ತಿನ್ನುತ್ತಾನೆ-ತಿನ್ನುವ-ತಿನ್ನುವವನು, ತಿನ್ನುವವನನ್ನು, ತಿನ್ನುವವನಿಗೆ, ತಿನ್ನುವವನಲ್ಲಿ -ಇತ್ಯಾದಿ
(೪)ಬರೆ-ಬರೆಯುವನು-ಬರೆಯುವ-ಬರೆಯುವವನು, ಬರೆಯುವವನನ್ನು -ಇತ್ಯಾದಿ

ಮೇಲಿನ ನಾಲ್ಕು ಉದಾಹರಣೆಗಳಲ್ಲಿ-ಮಾಡು, ಹೋಗು, ತಿನ್ನು, ಬರೆ-ಈ ನಾಲ್ಕು ಧಾತುಗಳು-ಮಾಡಿದನು, ಹೋಗುವನು, ತಿನ್ನುತ್ತಾನೆ, ಬರೆಯುವನು ಈ ನಾಲ್ಕು ರೀತಿಯ ಕ್ರಿಯಾಪದಗಳಾಗಿವೆ.  ಇವು ಕ್ರಿಯಾಪದಗಳಾಗುವ ರೀತಿಯನ್ನು ಹಿಂದಿನ ಕ್ರಿಯಾಪದ ಪ್ರಕರಣದಲ್ಲಿ ತಿಳಿದಿದ್ದೀರಿ.  ಅವುಗಳ ಮುಂದಿರುವ ಮಾಡಿದ, ಹೋಗುವ, ತಿನ್ನುವ, ಬರೆಯುವ- ಇವು ಕ್ರಮವಾಗಿ – ಮಾಡು+ದ+ಅ=ಮಾಡಿದ, ಹೋಗು+ವ+ಅ=ಹೋಗುವ, ತಿನ್ನು+ವ+ಅ=ತಿನ್ನುವ, ಬರೆ+ಉವ+ಅ=ಬರೆಯುವ – ಹೀಗಾಗಿವೆ.  ಇವು ಎಲ್ಲಾ ಕಡೆಗೂ ಕೊನೆಯಲ್ಲಿ ಅ ಎಂಬ ಪ್ರತ್ಯಯವನ್ನೂ ಮಧ್ಯದಲ್ಲಿ ದ, ವ, ಉವ ಇತ್ಯಾದಿ ಪ್ರತ್ಯಯಗಳನ್ನೂ ಹೊಂದಿವೆ.  ಧಾತುಗಳು ಹೀಗೆ – ಮಾಡಿದ, ಹೋಗುವ, ತಿನ್ನುವ, ಬರೆಯುವ – ಇತ್ಯಾದಿ ರೂಪ ಪಡೆದ ಮೇಲೆ ಧಾತುವಿನಿಂದ ಹುಟ್ಟಿದ ನಾಮಪ್ರಕೃತಿಗಳೆನಿಸಿದವು.  ಅಥವಾ ಕೃದಂತನಾಮ ಪ್ರಕೃತಿಗಳೆನಿಸಿದವು.  ಇನ್ನು ಇವುಗಳ ಮೇಲೆ-ಉ, ಅನ್ನು, ಇಂದ, ಗೆ, ಇಗೆ, ಕ್ಕೆ, ಅಕ್ಕೆ, ದೆಸೆಯಿಂದ, ಅ, ಅಲ್ಲಿ – ಇತ್ಯಾದಿ ಸಪ್ತ ವಿಧವಾದ ನಾಮವಿಭಕ್ತಿಪ್ರತ್ಯಯಗಳೂ ಸೇರಿ ಕೃದಂತನಾಮಪದಗಳೆನಿಸುತ್ತವೆ.  ಇಂಥವನ್ನೇ ನಾವು ಸಾಧಿತ ನಾಮಗಳು ಎನ್ನುತ್ತೇವೆ.  ಮೇಲಿನ ಉದಾಹರಣೆಗಳಲ್ಲಿ ಕೊನೆಯಲ್ಲಿ ಬಂದಿರುವ ಅ ಎಂಬುದೇ ಕೃತ್‌ಪ್ರತ್ಯಯ.  ಇಂಥ ಕೃತ್‌ಪ್ರತ್ಯಯವನ್ನು ಅಂತದಲ್ಲಿ ಉಳ್ಳದ್ದೇ ಕೃದಂತ.  ಮಧ್ಯದಲ್ಲಿ ಬಂದಿರುವ ದ, ವ, ಉವಗಳು ಕಾಲವನ್ನು ಸೂಚಿಸುವ ಪ್ರತ್ಯಯಗಳು.  ಇವಕ್ಕೆ ಕಾಲಸೂಚಕ ಪ್ರತ್ಯಯಗಳೆನ್ನುವರು.  ಹಾಗಾದರೆ ಕೃದಂತವೆಂದರೇನು? ಎಂಬ ಬಗೆಗೆ ಸೂತ್ರವನ್ನು ಕೆಳಗಿನಂತೆ ಹೇಳಬಹುದು.

(೮೬ಕೃದಂತ:- ಧಾತುಗಳಿಗೆಕೃತ್ಪ್ರತ್ಯಯಗಳು ಸೇರಿಕೃದಂತಗಳೆನಿಸುವುವುಇವಕ್ಕೆಕೃನ್ನಾಮಗಳೆಂದೂ ಹೆಸರು.
ಕೃದಂತಗಳು ಕೃದಂತನಾಮ (ಕೃನ್ನಾಮ), ಕೃದಂತ ಭಾವನಾಮಕೃದಂತಾವ್ಯಯಗಳೆಂದು ಮೂರು ವಿಧ.
ಉದಾಹರಣೆಗೆ:-
ಕೃದಂತನಾಮಕೃದಂತಭಾವನಾಮಕೃದಂತಾವ್ಯಯ
ಮಾಡಿದಮಾಟಮಾಡಿ
ತಿನ್ನುವತಿನ್ನುವಿಕೆತಿಂದು
ನಡೆಯುವನಡೆತನಡೆಯುತ್ತ
ಹೋಗದಹೋಗುವಿಕೆಹೋಗಲು

(ಕೃದಂತ ನಾಮಗಳು
(೮೭ಕೃದಂತನಾಮಗಳು:- ಧಾತುಗಳಿಗೆಕರ್ತೃ ಮೊದಲಾದ ಅರ್ಥಗಳಲ್ಲಿಸಾಮಾನ್ಯವಾಗಿ  ಎಂಬ ಕೃತ್ಪ್ರತ್ಯಯವುಬರುವುದುಆಗ ಧಾತುವಿಗೂಕೃತ್ಪ್ರತ್ಯಯಕ್ಕೂ ಮಧ್ಯದಲ್ಲಿ ವರ್ತಮಾನಭವಿಷ್ಯತ್ಕಾಲಗಳಲ್ಲಿ  ಉವ ಎಂಬಕಾಲಸೂಚಕ ಪ್ರತ್ಯಯಗಳೂಭೂತಕಾಲದಲ್ಲಿ  ಎಂಬ ಕಾಲಸೂಚಕಪ್ರತ್ಯಯವೂನಿಷೇಧಾರ್ಥದಲ್ಲಿ ಅದಎಂಬುದೂ ಆಗಮಗಳಾಗುತ್ತವೆಇವನ್ನೇಕೃದಂತನಾಮಗಳೆ ನ್ನುವರು.
ಇವು ನಾಮಪ್ರಕೃತಿಗಳೆನಿಸಿದ್ದರಿಂದ ಇವುಗಳ ಮೇಲೆ ನಾಮವಿಭಕ್ತಿಪ್ರತ್ಯಯಗಳು ಸೇರಿ ನಾಮಪದಗಳಾಗುವುವು.
ಉದಾಹರಣೆಗೆ:-
(i) ವರ್ತಮಾನ ಕೃದಂತಕ್ಕೆ-
ಮಾಡು++=ಮಾಡುವ
ತಿನ್ನು++=ತಿನ್ನುವ
ಬರೆ+ಉವ+=ಬರೆಯುವ

ಇದರಂತೆ-ಹೋಗುವ, ಬರುವ, ತಿನ್ನುವ, ನೋಡುವ, ಓಡುವ, ನಡೆಯುವ, ಕಾಣುವ, ಕೊಡುವ[1].
(ii) ಭೂತ ಕೃದಂತಕ್ಕೆ-
ಮಾಡು++=ಮಾಡಿದ
ತಿನ್ನು++=ತಿಂದ
ಹೋಗು++=ಹೋದ

ಇದರಂತೆ ಬರೆದ, ನೋಡಿದ, ನಡೆದ, ಕಂಡ, ಕರೆದ-ಇತ್ಯಾದಿ.
(iii) ನಿಷೇಧ ಕೃದಂತಕ್ಕೆ-
ಮಾಡು+ಅದ+=ಮಾಡದ
ತಿನ್ನು+ಅದ+=ತಿನ್ನದ

ಇದರಂತೆ ಹೋಗದ, ಬರದ, ನೋಡದ, ನುಡಿಯದ, ಬರೆಯದ-ಇತ್ಯಾದಿ.
ಮೇಲೆ ಹೇಳಿದ ವರ್ತಮಾನ, ಭವಿಷ್ಯತ್, ಭೂತ, ನಿಷೇಧಾರ್ಥ ಕೃದಂತನಾಮಗಳೆಲ್ಲ ಈಗ ನಾಮವಿಭಕ್ತಿಪ್ರತ್ಯಯ ಹತ್ತಲು ಸಿದ್ಧವಾದವು. ಇವುಗಳ ಮೇಲೆ ನಾಮವಿಭಕ್ತಿಪ್ರತ್ಯಯಗಳು ಸೇರುವಾಗ ಪುಲ್ಲಿಂಗ, ಸ್ತ್ರೀಲಿಂಗ, ನಪುಂಸಕಲಿಂಗಗಳಲ್ಲಿ ಆಗುವ ವ್ಯಾಕರಣ ವಿಶೇಷಗಳನ್ನು ಈ ಕೆಳಗೆ ನೋಡಿರಿ.
(i) ಪುಲ್ಲಿಂಗದಲ್ಲಿ-
ಕೃದಂತನಾಮಪದಗಳು
ಮಾಡುವಮಾಡುವ+ಅವನು+=ಮಾಡುವವನು

ಮಾಡುವ+ಅವರು+=ಮಾಡುವವರು

ಮಾಡುವ+ಅವನು+ಅನ್ನು=ಮಾಡುವವನನ್ನು

ಮಾಡಿದ+ಅವನು+=ಮಾಡಿದವನು (ಏ.ವ.)

ಮಾಡಿದ+ಅವರು+=ಮಾಡಿದವರು (ಬ.ವ.)

ಮಾಡಿದ+ಅವರು+ಇಂದ=ಮಾಡಿದವರಿಂದ (ಬ.ವ.)

ಮಾಡದ+ಅವನು+=ಮಾಡದವನು (ಏ.ವ.)

ಮಾಡದ+ಅವನು+ಅಲ್ಲಿ=ಮಾಡದವನಲ್ಲಿ (ಏ.ವ.)

ಮಾಡದ+ಅವರು+ಅಲ್ಲಿ=ಮಾಡದವರಲ್ಲಿ (ಬ.ವ.)









(ii) ಸ್ತ್ರೀಲಿಂಗದಲ್ಲಿ-
ಕೃದಂತನಾಮಪದಗಳು
ಬರೆದಬರೆದ+ಅವಳು+=ಬರೆದವಳು (ಏ.ವ.)

ಬರೆದ+ಅವಳು+ಅನ್ನು=ಬರೆದವಳನ್ನು (ಏ.ವ.)

ಬರೆದ+ಅವರು+ಇಂದ=ಬರೆದವರಿಂದ (ಬ.ವ.)

ಬರೆದ+ಅವಳು+ಇಗೆ=ಬರೆದವಳಿಗೆ (ಏ.ವ.)

ಬರೆದ+ಅವರು+ಇಗೆ=ಬರೆದವರಿಗೆ (ಬ.ವ.)

ಬರೆದ+ಅವಳು+ಅಲ್ಲಿ=ಬರೆದವಳಲ್ಲಿ (ಏ.ವ.)

ಬರೆದ+ಅವಳು+=ಬರೆದವಳೇ (ಏ.ವ.)

ತಿನ್ನದ+ಅವಳು+=ತಿನ್ನದವಳು

ತಿನ್ನದ+ಅವರು+ಅನ್ನು=ತಿನ್ನದವರನ್ನು

ತಿನ್ನದ+ಅವಳು+ಇಂದ=ತಿನ್ನದವಳಿಂದ

(iii) ನಪುಂಸಕಲಿಂಗದಲ್ಲಿ-
ಕೃದಂತನಾಮಪದಗಳು
ಹೋಗುವಹೋಗುವ+ಉದು+=ಹೋಗುವುದು


ಹೋಗುವ+ಉದು+ಅನ್ನು=ಹೋಗುವುದನ್ನು


ಹೋಗುವ+ಉವು+ಅನ್ನು=ಹೋಗುವುವನ್ನು


ಹೋಗುವ+ಉದು+ಅರು+ಇಂದ=ಹೋಗುವುದರಿಂದ

ಹೋಗುವ+ಉದು+ಅಕ್ಕೆ=ಹೋಗುವುದಕ್ಕೆ


ಹೋಗುವ+ಉದು+ಅರು+ಅಲ್ಲಿ=ಹೋಗುವುದರಲ್ಲಿ

ಹೋಗುವ+ಉವು+ಗಳು+ಅಲ್ಲಿ=ಹೋಗುವುವುಗಳಲ್ಲಿ
(ಅವು)

ಹೋಗುವವುಗಳಲ್ಲಿ

ಹೋದ+ಉದು+ಅನ್ನು=ಹೋದುದನ್ನು


ಹೋದ+ಉವು+ಗಳು+ಇಂದ=ಹೋದುವುಗಳಿಂದ
- ಇತ್ಯಾದಿ
ಮೇಲೆ ಹೇಳಿದ ಉದಾಹರಣೆಗಳನ್ನೆಲ್ಲ ನೋಡಿದರೆ ಕೃದಂತಗಳ ಮೇಲೆ ನಾಮವಿಭಕ್ತಿಪ್ರತ್ಯಯಗಳು ಸೇರುವಾಗ ಕೃದಂತಕ್ಕೂ, ನಾಮವಿಭಕ್ತಿಪ್ರತ್ಯಯಕ್ಕೂ ಮಧ್ಯದಲ್ಲಿ ಪುಲ್ಲಿಂಗ ಏಕವಚನದಲ್ಲಿ ಅವನುಎಂಬುದೂಬಹುವಚನದಲ್ಲಿ ಅವರುಎಂಬ ಸರ್ವನಾಮಗಳೂ ಆಗಮಗಳಾಗಿಬರುತ್ತವೆ.
ಸ್ತ್ರೀಲಿಂಗದ ಏಕವಚನದಲ್ಲಿ ಅವಳುಬಹುವಚನದಲ್ಲಿ ಅವರು ಎಂಬ ಸರ್ವನಾಮಬರುತ್ತವೆ.
ನಪುಂಸಕಲಿಂಗದ ಏಕವಚನದಲ್ಲಿ ಉದು(ಅದುಮತ್ತು ಬಹುವಚನದಲ್ಲಿ ಉವು(ಅವುಎಂಬ ಸರ್ವನಾಮಗಳುಬರುತ್ತವೆ[2].
(ಇದುವರೆಗೆ ತಿಳಿಸಿದ ಕೃದಂತನಾಮಗಳುನಾಮಪದಗಳನ್ನು ವಿಶೇಷಿಸುತ್ತವೆ.
(i) ವರ್ತಮಾನಭವಿಷ್ಯತ್ ಕೃದಂತಗಳುನಾಮಪದಗಳನ್ನು ವಿಶೇಷಿಸುವುದಕ್ಕೆ-
ಮಾಡುವ ಕೆಲಸ
ಹಾಡುವ ಪದ
ನೋಡುವ ಕಾರ‍್ಯ
ತಿನ್ನುವ ಪದಾರ್ಥ – ಇತ್ಯಾದಿ.

(ii) ಭೂತಕೃದಂತಗಳು ನಾಮಪದಗಳನ್ನುವಿಶೇಷಿಸುವುದಕ್ಕೆ-
ಮಾಡಿದ ಕೆಲಸ
ಹಾಡಿದ ಪದ
ನೋಡಿದ ಕಾರ‍್ಯ
ತಿಂದ ಪದಾರ್ಥ – ಇತ್ಯಾದಿ.

(iii) ನಿಷೇಧಕೃದಂತಗಳು ನಾಮಪದಗಳನ್ನುವಿಶೇಷಿಸುವುದಕ್ಕೆ-
ಮಾಡದ ಕೆಲಸ
ಹಾಡದ ಪದ
ನೋಡದ ಕಾರ‍್ಯ
ತಿನ್ನದ ಪದಾರ್ಥ – ಇತ್ಯಾದಿ.

(ಕೃದಂತಭಾವನಾಮಗಳು(ಭಾವಕೃದಂತ)
(i) ಆತನ ಓಟ ಚೆನ್ನಾಗಿತ್ತು
(ii) ಅದರ ನೆನಪು ಇಲ್ಲ
(iii) ಗಡಿಗೆಯ ಮಾಟ ಸೊಗಸು
(iv) ಇದರ ಕೊರೆತ ಹಸನಾಗಿದೆ
ಮೇಲಿನ ವಾಕ್ಯಗಳಲ್ಲಿ ಕೆಳಗೆ ಗೆರೆ ಎಳೆದಿರುವ ಓಟಮಾಟನೆನಪುಕೊರೆತ-ಈ ಶಬ್ದಗಳನ್ನು ಗಮನಿಸಿರಿ.
ಓಡುವ ರೀತಿಯೇ ಓಟ – ಓಡು .
ಮಾಡಿರುವ ರೀತಿಯೇ ಮಾಟ – ಮಾಡು .
ನೆನೆಯುವ ರೀತಿಯೇ ನೆನಪು – ನೆನೆ ಅಪು.
ಕೊರೆದಿರುವಿಕೆಯೇ ಕೊರೆತ – ಕೊರೆ +.
ಇವೆಲ್ಲ ಕ್ರಿಯೆಯ ಭಾವವನ್ನು ತಿಳಿಸುತ್ತದೆ.  ಆದುದರಿಂದ ಇವನ್ನು ಕೃದಂತ ಭಾವನಾಮಗಳು ಅಥವಾ ಭಾವಕೃದಂತಗಳು ಎನ್ನುತ್ತಾರೆ.

(೮೮ಕೃದಂತಭಾವನಾಮಗಳು-ಧಾತುಗಳಮೇಲೆ ಭಾವಾರ್ಥದಲ್ಲಿ ಕೃತ್ ಪ್ರತ್ಯಯಗಳುಸೇರಿ ಕೃದಂತಭಾವನಾಮಗಳೆನಿಸುವುವು.
ಉದಾಹರಣೆಗೆ:
ಧಾತು+ಭಾವಾರ್ಥದಲ್ಲಿ ಕೃತ್ಪ್ರತ್ಯಯ=ಕೃದಂತ ಭಾವನಾಮ-ಇದರಂತೆ ಇರುವ  ಇತರ ರೂಪಗಳು
ಮಾಡು+ವುದು[3]=ಮಾಡುವುದು-ನೋಡುವುದು, ತಿನ್ನುವುದು
ತಿನ್ನು+ಇಕೆ=ತಿನ್ನುವಿಕೆ-ನೋಡುವಿಕೆ, ಬರೆಯುವಿಕೆ, ಕೊರೆಯುವಿಕೆ
ಅಂಜು+ಇಕೆ=ಅಂಜಿಕೆ-ನಂಬಿಕೆ, ಹೊಗಳಿಕೆ,  ತೆಗಳಿಕೆ, ಆಳಿಕೆ,  ನಾಚಿಕೆ, ಬಳಲಿಕೆ, ಕಲಿಕೆ
ಉಡು+ಇಗೆ=ಉಡಿಗೆ-ತೊಡಿಗೆ, ಅಡಿಗೆ,  ಮುತ್ತಿಗೆ, ಹಾಸಿಗೆ, ಏಳಿಗೆ
ಉಡು+ಗೆ=ಉಡುಗೆ-ತೊಡುಗೆ, ನಂಬುಗೆ, ಹೊಲಿಗೆ, ಏಳ್ಗೆ
ಬರು+ಅವು=ಬರವು-ಸೆಳವು, ಮರವು, ಒಲವು, ಕಳವು, ತೆರವು
ಸಾ+ವು=ಸಾವು-ನೋವು, ಮೇವು,  ದಣಿವು, ಅರಿವು
ಕೊರೆ+=ಕೊರೆತ-ಸೆಳೆತ, ಕಟೆತ, ಇರಿತ,  ತಿವಿತ, ಕುಣಿತ, ಒಗೆತ
ಓಡು+=ಓಟ-ಮಾಟ, ಕೂಟ, ನೋಟ, ಆಟ, ಕಾಟ
ನಡೆ+ವಳಿ=ನಡೆವಳಿ-ನುಡಿವಳಿ, ಸಲುವಳಿ, ಹಿಡಿವಳಿ, ಕೂಡುವಳಿ, ಮುಗಿವಳಿ
ಕಾ+ಪು=ಕಾಪು-ಮೇಪು, ತೀರ್ಪು, ತಿಳಿಪು, ಹೊಳೆಪು, ನೆನೆಪು,
ಹೊಳೆ+ಅಪು=ಹೊಳಪು-ನೆನಪು
ಮುಗ್ಗು+ಅಲು=ಮುಗ್ಗಲು-ಒಣಗಲು, ಜಾರಲು,






ಬಿಕ್ಕಲು, ಒಕ್ಕಲು
ನಗು+=ನಗೆ-ಹೊರೆ
ಬೆರೆ+ಅಕೆ=ಬೆರಕೆ-ಮೊಳಕೆ
ಬೆಳೆ+ವಳಿಕೆ=ಬೆಳೆವಳಿಕೆ-ತಿಳಿವಳಿಕೆ, ನಡೆವಳಿಕೆ
ಮೆರೆ+ವಣಿಗೆ=ಮೆರೆವಣಿಗೆ-ಬೆಳವಣಿಗೆ, ಬರೆವಣಿಗೆ
ಅಳೆ+ಅತೆ=ಅಳತೆ-ನಡತೆ
ಮುಳಿ+ಸು=ಮುಳಿಸು-ತೊಳೆಸು, ಮುನಿಸು
ಮುರಿ+ಅಕು=ಮುರಕು-ಹರಕು
ನಡುಗು+ಉಕ=ನಡುಕ-ಮುರುಕ
ಒಪ್ಪು+ಇತ=ಒಪ್ಪಿತ-ತಪ್ಪಿತ

(೧) ಕೆಲವು ಧಾತುಗಳು ಅಲ್ಪಸ್ವಲ್ಪ ವ್ಯತ್ಯಾಸದಿಂದ ಭಾವಕೃದಂತ (ಭಾವನಾಮ)ಗಳಾಗುವುವು.
ಧಾತುಭಾವಕೃದಂತನಾಮಪದ
ಕಿಡುಕೇಡುಕೇಡನ್ನು, ಕೇಡಿನಿಂದ.
ಬಿಡುಬೀಡುಬೀಡನ್ನು, ಬೀಡಿನಿಂದ, ಬೀಡಿಗೆ.
ಪಡುಪಾಡುಪಾಡನ್ನು, ಪಾಡಿನಿಂದ, ಪಾಡಿಗೆ.

(೨) ಕೆಲವು ಧಾತುಗಳು ಇದ್ದ ರೂಪದಲ್ಲಿಯೇ ಭಾವಕೃದಂತ (ಕೃದಂತ ಭಾವನಾಮ) ಗಳಾಗುವುವು.
ಧಾತುಭಾವಕೃದಂತನಾಮಪದ
ನಡೆನಡೆನಡೆಯನ್ನು, ನಡೆಯಿಂದ
ನುಡಿನುಡಿನುಡಿಯು, ನುಡಿಯನ್ನು, ನುಡಿಯಿಂದ, ನುಡಿಗೆ-ಇತ್ಯಾದಿ
ಓದುಓದುಓದು, ಓದನ್ನು, ಓದಿನಿಂದ, ಓದಿನಲ್ಲಿ-ಇತ್ಯಾದಿ
ಕಟ್ಟುಕಟ್ಟುಕಟ್ಟು, ಕಟ್ಟನ್ನು, ಕಟ್ಟಿನಿಂದ, ಕಟ್ಟಿಗೆ, ಕಟ್ಟಿನಲ್ಲಿ
ಅಂಟುಅಂಟುಅಂಟನ್ನು, ಅಂಟಿನ ದೆಸೆಯಿಂದ, ಅಂಟಿನಲ್ಲಿ
ಹಿಡಿಹಿಡಿಹಿಡಿಯನ್ನು, ಹಿಡಿಯಿಂದ
ಉರಿಉರಿಉರಿಯನ್ನು, ಉರಿಯಿಂದ
ಹೇರುಹೇರುಹೇರನ್ನು, ಹೇರಿನಿಂದ, ಹೇರಿನಲ್ಲಿ
ಉಗುಳುಉಗುಳುಉಗುಳನ್ನು, ಉಗುಳಿನ, ಉಗುಳಿನಲ್ಲಿ
ಹುಟ್ಟುಹುಟ್ಟುಹುಟ್ಟನ್ನು, ಹುಟ್ಟಿನ, ಹುಟ್ಟಿನಲ್ಲಿ
ಚಿಗುರುಚಿಗುರುಚಿಗುರನ್ನು, ಚಿಗುರಿನಲ್ಲಿ
ಬೆಳೆಬೆಳೆಬೆಳೆಯನ್ನು, ಬೆಳೆಯಲ್ಲಿ
ಸವಿಸವಿಸವಿಯನ್ನು, ಸವಿಯಲ್ಲಿ
ಗುದ್ದುಗುದ್ದುಗುದ್ದನ್ನು, ಗುದ್ದಿನಲ್ಲಿ
ಬದುಕುಬದುಕುಬದುಕನ್ನು, ಬದುಕಿನಲ್ಲಿ

(೩) ಹಳಗನ್ನಡದ ಕೆಲವು ಕೃದಂತ ಭಾವನಾಮಗಳು ಹೊಸಗನ್ನಡದಲ್ಲಿ ರೂಪಾಂತರ ಹೊಂದುತ್ತವೆ.
ಏಳ್ಗೆ-ಏಳಿಗೆ, ಸಲ್ಗೆ-ಸಲಿಗೆ, ಕಾಣ್ಕೆ-ಕಾಣಿಕೆ, ಒಲ್ಮೆ-ಒಲುಮೆ, ಪೂಣ್ಕೆ-ಪೂಣಿಕೆ – ಇತ್ಯಾದಿ.
(ಕೃದಾಂತಾವ್ಯಯಗಳು (ಅವ್ಯಯಕೃದಂತ)
ಧಾತುವಿನಿಂದ ಹುಟ್ಟಿ ಅವ್ಯಯದ ಗುಣವನ್ನು ಪಡೆದಂಥ ಶಬ್ದ ರೂಪಗಳೇ ಕೃದಂತಾವ್ಯಯಗಳು ಅಥವಾ ಅವ್ಯಯಕೃದಂತಗಳುಈ ಕೆಳಗಿನ ಕೆಲವು ಉದಾಹರಣೆ ನೋಡಿರಿ.
(೧) ರಾಮನು ಉಣ್ಣದೆ ಮಲಗಿದನು.
(೨) ಮಳೆ ಬರಲು ಕರೆ ತುಂಬಿತು.
(೩) ಅವನು ಬರುತ್ತ ತಿಂದನು.
(೪) ಅದನ್ನು ಬರೆದು ಕಳುಹಿಸಿದನು.
(೫) ಅಲ್ಲಿಗೆ ಹೋಗಲಿಕ್ಕೆ ತಡವಾಯಿತು.
ಮೇಲಿನ ವಾಕ್ಯಗಳಲ್ಲಿ ದಪ್ಪಕ್ಷರ ಶಬ್ದಗಳಾದ ಉಣ್ಣದೆ, ಬರಲುಬರುತ್ತಬರೆದುಹೋಗಲಿಕ್ಕೆ-ಮುಂತಾದವುಗಳು ಉಣ್ಣು+ಅದೆಬರು+ಅಲುಬರು+ಉತ್ತಬರೆ+ದುಹೋಗು+ಅಲಿಕ್ಕೆ-ಹೀಗೆ ಧಾತುಗಳ ಮೇಲೆ-ಅದೆಅಲುಉತ್ತದುಅಲಿಕ್ಕೆ-ಇತ್ಯಾದಿ ಪ್ರತ್ಯಯಗಳು ಬಂದು ಆದ ಶಬ್ದರೂಪಗಳು.  ಇವು ಪುಲ್ಲಿಂಗ, ಸ್ತ್ರೀಲಿಂಗ, ನಪುಂಸಕಲಿಂಗ ಗಳಲ್ಲೂ, ಏಕವಚನ ಬಹುವಚನಗಳಲ್ಲೂ ಒಂದೇ ರೂಪವಾಗಿರುತ್ತವೆ.  ಅಲ್ಲದೆ ಇವುಗಳ ಮೇಲೆ ಇನ್ನಾವ ವಿಭಕ್ತಿಪ್ರತ್ಯಯಗಳೂ ಬರುವುದಿಲ್ಲ.  ಆದ್ದರಿಂದ-ಇಂಥ ಶಬ್ದಗಳು ಅವ್ಯಯದ[4]ಗುಣವನ್ನು ಪಡೆದವು.  ಆದ್ದರಿಂದಲೇ ಇವುಗಳನ್ನು ಅವ್ಯಯಕೃದಂತಗಳು ಅಥವಾ ಕೃದಂತಾವ್ಯಯಗಳು ಎನ್ನುವರು.  ಕೆಳಗಿನ ಸೂತ್ರವನ್ನು ಗಮನಿಸಿರಿ.
(೮೯ಧಾತುಗಳ ಮೇಲೆ ಉತಉತ್ತಅದೆದರೆಅಲುಅಲಿಕ್ಕೆದು-ಇತ್ಯಾದಿ ಪ್ರತ್ಯಯಗಳು ಸೇರಿ ಕೃದಂತಾವ್ಯಯಗಳೆನಿಸುವುವು.
ಇವು ಪೂರ್ಣಕ್ರಿಯಾರ್ಥವನ್ನು ಕೊಡದೆಇನ್ನೊಂದು ಕ್ರಿಯೆಯನ್ನಪೇಕ್ಷಿಸುವುದರಿಂದ ಇವನ್ನು ಅಪೂರ್ಣಕ್ರಿಯೆ ಅಥವಾ ನ್ಯೂನಕ್ರಿಯೆಗಳೆಂದು ಕರೆಯುವರು.
(ರಾಮನು ಉಣ್ಣುತ್ತಾ ಮಾತಾಡಿದನು.
ಎಂಬ ಈ ವಾಕ್ಯದಲ್ಲಿ ರಾಮನೆಂಬ ಕರ್ತೃವು ಉಣ್ಣುವ ಮತ್ತು ಮಾತನಾಡುವ ಕ್ರಿಯೆಗಳೆರಡನ್ನೂ ಮಾಡಿದನಾದ್ದರಿಂದ ಇಂಥವು ಏಕಕರ್ತೃಕ ಕ್ರಿಯೆಗಳು.
(ಮಳೆ ಬರಲು ಕೆರೆ ತುಂಬಿತು.
ಎಂಬ ಈ ವಾಕ್ಯದಲ್ಲಿ ಬರಲು ಎಂಬ ಕ್ರಿಯೆಗೆ ಮಳೆಯೂ, ತುಂಬುವ ಕ್ರಿಯೆಗೆ ಕೆರೆಯೂ ಕರ್ತೃಗಳಾದ್ದರಿಂದ ಇವೆರಡೂ ಕ್ರಿಯೆಗೆ ಬೇರೆ ಬೇರೆ ಕರ್ತೃಗಳು ಇದ್ದಹಾಗಾಯಿತು.  ಇಂಥವನ್ನು ಭಿನ್ನಕರ್ತೃಗಳು ಎನ್ನುತ್ತಾರೆ.
ಉದಾಹರಣೆಗೆ:
ಪ್ರತ್ಯಯಗಳು-ಧಾತು+ಪ್ರತ್ಯಯ=ಅವ್ಯಯಕೃದಂತ
ಉತ-ಮಾಡು+ಉತ=ಮಾಡುತ, ಇದರಂತೆ ನೋಡುತ, ಮಾರುತ, ಬರುತ
ಉತ್ತ[5]-ತಿನ್ನು+ಉತ್ತ=ತಿನ್ನುತ್ತ, ಇದರಂತೆ ನೋಡುತ್ತ, ನಡೆಯುತ್ತ, ಬರುತ್ತ
ಅದೆ-ಮಾಡು+ಅದೆ=ಮಾಡದೆ, ಇದರಂತೆ ನೋಡದೆ, ತಿನ್ನದೆ, ಬರೆಯದೆ
ಅಲು-ಬರು+ಅಲು=ಬರಲು, ಇದರಂತೆ ತಿನ್ನಲು, ಉಣ್ಣಲು, ನೋಡಲು, ನುಡಿಯಲು, ಬರೆಯಲು
ಅಲಿಕ್ಕೆ-ತಿನ್ನು+ಅಲಿಕ್ಕೆ=ತಿನ್ನಲಿಕ್ಕೆ, ಇದರಂತೆ ಮಾಡಲಿಕ್ಕೆ, ತಿಳಿಯಲಿಕ್ಕೆ, ಬರಲಿಕ್ಕೆ, ನಡೆಯಲಿಕ್ಕೆ
-ಹೇಳು+=ಹೇಳ[6], ಇದರಂತೆ ಮಾಡ, ನೋಡ, ನುಡಿಯ
-ಮಾಡು+=ಮಾಡಿ, ಇದರಂತೆ ಹೇಳಿ, ಕೇಳಿ, ನೋಡಿ
ದು-ತಿನ್ನು+ದು=ತಿಂದು, ಇದರಂತೆ ನುಡಿದು, ನಡೆದು, ಕರೆದು, ಬರೆದು
ಈಗ ಏಕಕರ್ತೃಕ ಕೃದಂತಾವ್ಯಯಗಳು ಮತ್ತು ಭಿನ್ನಕರ್ತೃಕ ಕೃದಂತಾವ್ಯಯಗಳಲ್ಲಿ ಯಾವ ಯಾವ ಪ್ರತ್ಯಯಗಳು ಬರುತ್ತವೆಂಬುದರ ವ್ಯವಸ್ಥೆಯನ್ನು ನೋಡಿರಿ.
(ಏಕಕರ್ತೃಕ ಕೃದಂತಾವ್ಯಯಗಳು.
(i) ಒಂದು ಕರ್ತೃವಿನಿಂದ ಎರಡು ಕ್ರಿಯೆಗಳು ನಡೆದಾಗ ಮೊದಲು ಹೇಳುವ ಕ್ರಿಯೆಯಲ್ಲಿ ಭೂತಕಾಲ ತೋರಿದರೆ ದು ಅಥವಾ ಇ ಪ್ರತ್ಯಯಗಳು ಬರುತ್ತವೆ.
[7](ಅ) ಅದನ್ನು ತಿಂದು ಹೋದನು (ತಿನ್ನು+ದು=ತಿಂದು)
83(ಆ) ಆ ಕೆಲಸವನ್ನು ಮಾಡಿ ಬಂದೆನು (ಮಾಡು+ಇ=ಮಾಡಿ)
-ಇಲ್ಲಿ ತಿಂದು, ಮಾಡಿ ಎಂಬುವೆರಡೂ ಮೊದಲ ಕ್ರಿಯೆಗಳು ಮುಗಿದು ಹೋದ (ಭೂತ) ಕಾಲವನ್ನು ತೋರಿಸುತ್ತವಾದ್ದರಿಂದ, ದು, ಇ ಪ್ರತ್ಯಯಗಳು ಬಂದಿವೆ.

(ii) ಒಂದೇ ಕರ್ತೃವಿನಿಂದ ಏಕಕಾಲದಲ್ಲಿ ಎರಡು ಕ್ರಿಯೆಗಳುಂಟಾದಾಗ ಮೊದಲನೆಯ ಕ್ರಿಯೆಯ ಮೇಲೆ ಉತ್ತ (ಉತ್ತಾಪ್ರತ್ಯಯವೂನಿಷೇಧ ತೋರಿದರೆ ಅದೇ ಪ್ರತ್ಯಯವೂ ಬರುವುವು.
(ಅ) ಅವನು ಉಣ್ಣುತ್ತ ಮಾತನಾಡಿದನು (ಏಕಕಾಲದಲ್ಲಿ ನಡೆದ ಕ್ರಿಯೆಗಳು)
(ಆ) ಅವನು ಉಣ್ಣದೆ ಹೋದನು (ನಿಷೇಧ)
-ಇಲ್ಲಿ ಮೊದಲ ವಾಕ್ಯದಲ್ಲಿ ಮಾತನಾಡುವ ಕ್ರಿಯೆ, ಉಣ್ಣುವ ಕ್ರಿಯೆಗಳು ಒಬ್ಬನಿಂದಲೇ ಏಕಕಾಲದಲ್ಲಿ ಆಗಿವೆ.  ಆದ್ದರಿಂದ ಉತ್ತ ಎಂಬುದೂ, ಎರಡನೆಯ ವಾಕ್ಯದಲ್ಲಿ ನಿಷೇಧ ಕ್ರಿಯೆ, ಹೋಗುವ ಕ್ರಿಯೆಗಳೆರಡೂ ಒಬ್ಬ ಕರ್ತೃವಿನಿಂದ ನಡೆದಿವೆ.  ಆದ್ದರಿಂದ ಅದೆ ಎಂಬುದು ಮೊದಲ ಕ್ರಿಯೆಯ ಮೇಲೆ ಬಂದಿದೆ.
(iii) ಒಂದು ಕರ್ತೃವಿನಿಂದ ಏಕಕಾಲದಲ್ಲಿ ಎರಡು ಕ್ರಿಯೆಗಳುಂಟಾದಾಗ ಪ್ರಯೋಜನ ತೋರಿದರೆ ಅಲು ಅಲಿಕ್ಕೆ ಪ್ರತ್ಯಯಗಳು ಮೊದಲನೆಯ ಕ್ರಿಯೆಯ ಮೇಲೆ ಬರುತ್ತವೆ.
(ಅ) ಅವನು ತಿನ್ನಲು ಹೋದನು (ಪ್ರಯೋಜನ)
(ಆ) ಅವನು ತಿನ್ನಲಿಕ್ಕೆ ಹೋದನು (    “    )
-ಮೇಲಿನ ಎರಡೂ ವಾಕ್ಯಗಳಲ್ಲಿ ಹೋಗುವ ಕ್ರಿಯೆಯು ತಿನ್ನುವ ಪ್ರಯೋಜನಕ್ಕಾಗಿ.  ಆದ್ದರಿಂದ ಮೊದಲ ಕ್ರಿಯೆಯ ಮೇಲೆ ಅಲು, ಅಲಿಕ್ಕೆ ಪ್ರತ್ಯಯಗಳು ಬಂದಿವೆ.

(ಭಿನ್ನಕರ್ತೃಕ ಕೃದಂತಾವ್ಯಯಗಳು
(i) ಬೇರೆ ಬೇರೆ ಕರ್ತೃಗಳಿಂದ ಎರಡು ಕ್ರಿಯೆಗಳುಂಟಾದಾಗ ಕಾರಣ ತೋರುವಾಗ ಅಲು ಮತ್ತು ದು ಪ್ರತ್ಯಯಗಳು ಮೊದಲ ಕ್ರಿಯೆಯ ಮೇಲೆ ಬರುತ್ತವೆ.
ಉದಾಹರಣೆಗೆ:
(ಅ) ಹೊಲ ಬೆಳೆಯಲು ರೈತನು ಸುಖ ಹೊಂದಿದನು.
(ಆ) ಹೊಲ ಬೆಳೆದು ರೈತನಿಗೆ ಸುಖ ಬಂದಿತು.
(ii) ಬೇರೆ ಬೇರೆ ಕರ್ತೃಗಳಿಂದ ಎರಡು ಕ್ರಿಯೆಗಳು ಏಕ ಕಾಲದಲ್ಲಿ ತೋರಿದರೆ ಉತ್ತದುಅದೆ ಪ್ರತ್ಯಯಗಳು ಬಂದಾಗ ಅವುಗಳ ಮುಂದೆ ಇರಲು ಇರಲಾಗಿ ಎಂಬುವು ಸೇರುವುವು.
ಉದಾಹರಣೆಗೆ:
(ಅ) ಅವನು ಬರುತ್ತಿರಲು ಎಲ್ಲರೂ ಓಡಿದರು.
(ಆ) ಅವನು ಬರುತ್ತಿರಲಾಗಿ ಎಲ್ಲರೂ ಓಡಿದರು.
(ಇ) ಅವನು ಬರದಿರಲು ನಾವು ಮನೆಗೆ ಹೋದೆವು.
(ಈ) ಅವನು ಬರದಿರಲಾಗಿ ನಾವು ಮನೆಗೆ ಹೋದೆವು.
(ಉ) ಅವನು ಬಂದಿರಲು ನಾವೇಕೆ ಬರಬಾರದು.
(ಊ) ಅವನು ಬಂದಿರಲಾಗಿ ನಾವೇಕೆ ಬರಬಾರದು.
(iii) ಎರಡು ಕ್ರಿಯೆಗಳು ಬೇರೆ ಬೇರೆ ಕರ್ತೃಗಳಿಂದ ನಡೆದಾಗ ಪಕ್ಷಾರ್ಥ ತೋರಿದರೆ ದರೆ ಎಂಬುದೂಭಾವಾರ್ಥ ತೋರಿದರೆ ಅ ಎಂಬುದೂ ಬರುವುವು.
ಉದಾಹರಣೆಗೆ:
(೧) ಪಕ್ಷಾರ್ಥಕ್ಕೆ
(ಅ) ಮಳೆ ಬಂದರೆ, ಕರೆ ತುಂಬುವುದು.
(ಆ) ನೀವು ಬಂದರೆ ನಾವು ಬರುತ್ತೇವೆ.
(೨) ಭಾವಾರ್ಥಕ್ಕೆ
(ಅ) ಅವನು ನನ್ನನ್ನು ಹೋಗ ಹೇಳಿದನು. (ಹೋಗು+ಅ=ಹೋಗ)
(ಆ) ಅವನಿಗೆ ಅಲ್ಲಿ ಮಾಡ ಕೆಲಸವಿಲ್ಲ.  (ಮಾಡು+ಅ=ಮಾಡ)
ಮೇಲಿನ ವಾಕ್ಯಗಳಲ್ಲಿನ ‘ಮಾಡ’ ‘ಹೋಗ’ ಇವು ಭಾವಾರ್ಥಕ ಕ್ರಿಯೆಗಳೆಂದು ತಿಳಿಯಬೇಕು.

[1] ವರ್ತಮಾನ ಮತ್ತು ಭವಿಷ್ಯತ್ ಕೃದಂತಗಳು ಒಂದೇ ರೂಪವಾಗಿರುತ್ತವೆ.  ಇವೆರಡು ಕೃದಂತಗಳಲ್ಲೂ ಕಾಲಸೂಚಕ ಪ್ರತ್ಯಯ ಒಂದೇ ತೆರನಾಗಿರುತ್ತದೆ.  ಕೆಲವರು ವರ್ತಮಾನ ಕೃದಂತಗಳೇ ಇರುವುದಿಲ್ಲ ಎಂದೂ ಹೇಳುವುದುಂಟು.
[2] ನಪುಂಸಕಲಿಂಗದಲ್ಲಿ-ಹೋಗುವುದರಿಂದ-ಇತ್ಯಾದಿಗಳಿಗೆ ಪ್ರತಿಯಾಗಿ ಹೋಗುವಂತಹುದರಿಂದ, ನಡೆಯುವಂಥಾದ್ದರಿಂದ, ತಿನ್ನುವವುಗಳಿಂದ ಎಂಬುದಕ್ಕೆ ತಿನ್ನುವಂತಹವುಗಳಿಂದ, ತಿನ್ನುವಂಥವುಗಳಿಂದ-ಇತ್ಯಾದಿಯಾಗಿ ಹೊಸಗನ್ನಡದಲ್ಲಿ ಉಪಯೋಗಿಸುವುದುಂಟು.  ನಡೆಯುವುದನ್ನು, ನಡೆಯುವದನ್ನು-ಹೀಗೆ ಎರಡು ರೂಪಗಳ ಪ್ರಯೋಗವೂ ರೂಢಿಯಲ್ಲುಂಟು.  ಏಕವಚನದಲ್ಲಿ ಅವನು ಎಂಬುದೂ, ಬಹುವಚನದಲ್ಲಿ ಅವರು ಎಂಬ ಸರ್ವನಾಮಗಳೂ ಆಗಮಗಳಾಗಿ ಬರುತ್ತವೆ.
[3] ಸಾಮಾನ್ಯವಾಗಿ ಎಲ್ಲ ಧಾತುಗಳ ಮೇಲೂ ಭಾವಾರ್ಥದಲ್ಲಿ ವುದು, ವಿಕೆ – ಎಂಬ ಪ್ರತ್ಯಯಗಳು ಬರುತ್ತವೆ.  ವಿಕೆ ಪ್ರತ್ಯಯಕ್ಕೆ ಪ್ರತಿಯಾಗಿ ಕೆಲವರು ಇಕೆ ಬರುತ್ತದೆಂದು ಹೇಳಿ ನೋಡುವಿಕೆ (ನೋಡು+ವ್+ಇಕೆ=ನೋಡುವಿಕೆ) ಇತ್ಯಾದಿ ರೂಪಗಳು ಆಗುತ್ತವೆನ್ನುತ್ತಾರೆ.  ಆದರೆ ಇವೆರಡೂ ಪ್ರತ್ಯಯಗಳು ಬೇರೆಬೇರೆಯೇ ಆಗಿವೆ.
[4] ಅವ್ಯಯ ಎಂದರೆ ಲಿಂಗ, ವಚನ, ವಿಭಕ್ತಿಗಳಿಂದ ವ್ಯತ್ಯಾಸವಾಗದ ಶಬ್ದರೂಪ.  ಇವುಗಳ ವಿಷಯವನ್ನು ಮುಂದೆ ತಿಳಿಯುತ್ತೀರಿ.
[5] ಉತ್ತ ಪ್ರತ್ಯಯವನ್ನು ಹೊಸಗನ್ನಡದಲ್ಲಿ ಕೆಲವರು ಉತ್ತಾ ಎಂದು ಹೇಳಿ ಹೋಗುತ್ತಾ, ಬರುತ್ತಾ, ತಿನ್ನುತ್ತಾ ಇತ್ಯಾದಿಯಾಗಿ ಕೃದಂತಾವ್ಯಯಗಳನ್ನು ಬಳಸುವುದುಂಟು.
[6] ಹೇಳ ಬಂದನು, ಹೇಳ ಬಂದಳು, ಮಾಡ ಬಂದಳು, ನುಡಿಯ ಬಂದನು, ನುಡಿಯ ಬಂದಿತು-ಇತ್ಯಾದಿಗಳು ಈ ಶಬ್ದಗಳು ಬಂದ ವಾಕ್ಯಗಳು.
[7] ಮಾಡಿ, ತಿಂದು, ನೋಡಿ, ನೀಡಿ, ಉಂಡು, ಕೊಟ್ಟು ಇವೆಲ್ಲ ಭೂತನ್ಯೂನಗಳು.
------------------------------------------------------------------------------------

 ತದ್ಧಿತಾಂತಗಳು (ತದ್ಧಿತ+ಅಂತ)
‘ತದ್ಧಿತ ಎಂಬ ಹೆಸರಿನ ಪ್ರತ್ಯಯವನ್ನು ಅಂತದಲ್ಲಿ ಉಳ್ಳುದೇ ತದ್ಧಿತಾಂತವೆನಿಸುವುದು.  ಈ ಕೆಳಗಿನ ವಾಕ್ಯಗಳನ್ನು ನೋಡಿರಿ.
(೧) ಮೋಸವನ್ನು ಮಾಡುವವನು ಇದ್ದಾನೆ.
(೨) ಅಲ್ಲಿ ಕನ್ನಡವನ್ನು ಬಲ್ಲವರು ಬಹಳ ಜನರಿದ್ದರು.
(೩) ಹಾವನ್ನು ಆಡಿಸುವವನು ಬಂದನು.
(೪) ಮಡಿಯನ್ನು ಮಾಡುವವನು ಇನ್ನೂ ಬಂದಿಲ್ಲ.
ಮೇಲಿನ ನಾಲ್ಕು ವಾಕ್ಯಗಳಲ್ಲಿ ಕೆಳಗೆ ಗೆರೆ ಎಳೆದಿರುವ ಎರಡೆರಡು ನಾಮಪದಗಳನ್ನು ಸೇರಿಸಿ ಅದೇ ಅರ್ಥಬರುವಂತೆ ಒಂದು ಪದವನ್ನಾಗಿ ಸಮಾಸದ ಹಾಗೆ ಮಾಡಬಹುದು.  ಹೀಗೆ ನಾವು ಸಂಕ್ಷೇಪಗೊಳಿಸಿ ಹೇಳಿದಾಗ ಕಾಲ, ಶ್ರಮ, ಧ್ವನಿ ಮೊದಲಾದವುಗಳ ಉಳಿತಾಯವಾಗುವುದು.  ಹಾಗಾದರೆ ಆ ಪದಗಳನ್ನು ಯಾವ ಕ್ರಮದಿಂದ ಕೂಡಿಸುತ್ತೇವೆ?  ಇತ್ಯಾದಿಗಳ ಬಗೆಗೆ ಕೆಳಗೆ ನೋಡಿರಿ.
(೧) ಮೋಸವನ್ನು ಮಾಡುವವನು-ಎಂಬಲ್ಲಿ ಮೋಸವನ್ನು ಎಂಬ ಪದದ ಮುಂದೆ ಮಾಡುವವನು ಎಂಬರ್ಥದಲ್ಲಿ ‘ಗಾರ ಪ್ರತ್ಯಯ ಸೇರಿಸಿ ಮೋಸವನ್ನು+ಗಾರ ಮಾಡುತ್ತೇವೆ.  ಒಂದೇ ಪ್ರಕೃತಿಯ ಮೇಲೆ ಎರಡು ಪ್ರತ್ಯಯ ಸೇರುವುದಿಲ್ಲ.  ಅನ್ನು ಎಂಬ ಪ್ರತ್ಯಯ ತೆಗೆದು-ಮೋಸ+ಗಾರ=ಮೋಸಗಾರ ಹೀಗೆ ಒಂದು ಹೊಸ ರೂಪ ಸಿದ್ಧವಾಯಿತು.  ಇಲ್ಲಿ ‘ಗಾರ’ ಎಂಬುದೇ ತದ್ಧಿತಪ್ರತ್ಯಯ.
(೨) ಕನ್ನಡವನ್ನು ಬಲ್ಲವನು-ಎಂಬಲ್ಲಿ ಕನ್ನಡವನ್ನು ಎಂಬುದರ ಮೇಲೆ ಬಲ್ಲವನು ಎಂಬರ್ಥದಲ್ಲಿ ‘ಇಗ’ ಪ್ರತ್ಯಯ ಸೇರಿದಾಗ ಕನ್ನಡವನ್ನು+ಇಗ=ಕನ್ನಡ+ಇಗ=ಕನ್ನಡಿಗ ಎಂಬ ರೂಪ ಸಿದ್ಧವಾಯಿತು.  ಇಲ್ಲಿ ‘ಇಗ’ ಎಂಬುದೇ ‘ತದ್ಧಿತ ಪ್ರತ್ಯಯ’.
(೩) ಹಾವನ್ನು ಆಡಿಸುವವನು-ಎಂಬಲ್ಲಿ ಹಾವನ್ನು ಎಂಬ ಪದದ ಮೇಲೆ ‘ಆಡಿಸುವವನು’ ಎಂಬರ್ಥದಲ್ಲಿ ‘ಆಡಿಗ’ ಎಂಬ ತದ್ಧಿತ ಪ್ರತ್ಯಯ ಬಂದು ಹಾವನ್ನು+ಆಡಿಗ=ಹಾವು+ಆಡಿಗಹಾವಾಡಿಗ ಎಂಬ ರೂಪ ಸಿದ್ಧವಾಯಿತು.
(೪) ಮಡಿಯನ್ನು ಮಾಡುವವನು-ಎಂಬಲ್ಲಿ ಮಾಡುವವನು’ ಎಂಬರ್ಥದಲ್ಲಿ ವಳ (ವಾಳ)ಎಂಬ ಪ್ರತ್ಯಯವು ಬಂದು ಮಡಿಯನ್ನು+ವಳ=ಮಡಿ+ವಳ=ಮಡಿವಳಎಂಬ ರೂಪವಾಯಿತು.
ಮೋಸವನ್ನು-ಮಾಡುವವನೆಂಬರ್ಥದಲ್ಲಿ-ಗಾರ.
ಕನ್ನಡವನ್ನು-ಬಲ್ಲವನು ಎಂಬರ್ಥದಲ್ಲಿ-ಇಗ.
ಹಾವನ್ನು-ಆಡಿಸುವವನು ಎಂಬರ್ಥದಲ್ಲಿ-ಆಡಿಗ.
ಮಡಿಯನ್ನು-ಮಾಡುವವನು ಎಂಬರ್ಥದಲ್ಲಿ-ವಳ.
ಹೀಗೆ ಹಲವಾರು ಅರ್ಥಗಳಲ್ಲಿ-ಗಾರಇಗಆಡಿಗವಳ-ಎಂಬ ಪ್ರತ್ಯಯಗಳು ನಾಮಪದಗಳ ಮೇಲೆ ಬಂದು ಹೋಸ ಬಗೆಯ ಪ್ರಕೃತಿಗಳಾಗುವುವು. ಇಲ್ಲಿ ಬಂದಿರುವ ಇಂಥ ಪ್ರತ್ಯಯಗಳನ್ನು ತದ್ಧಿತ ಪ್ರತ್ಯಯಗಳೆನ್ನುವರು. ಇಂಥ ತದ್ಧಿತ ಪ್ರತ್ಯಯಗಳನ್ನು ಅಂತದಲ್ಲಿ ಉಳ್ಳ ಶಬ್ದರೂಪವೇ ತದ್ಧಿತಾಂತ’ವೆನಿಸುವುದು.  ಇದರ ಸೂತ್ರವನ್ನು ಕೆಳಗಿನಂತೆ ಹೇಳಬಹುದು.

(೯೦ತದ್ಧಿತಾಂತ-ನಾಮಪದಗಳ ಮೇಲೆಹಲವಾರು ಅರ್ಥಗಳಲ್ಲಿ ಗಾರಕಾರಇಗಆಡಿಗವಂತವಳಇಕಆಳಿ-ಇತ್ಯಾದಿ ತದ್ಧಿತಪ್ರತ್ಯಯಗಳು ಸೇರಿತದ್ಧಿತಾಂತಗಳೆನಿಸುವುವು.
ಈ ತದ್ಧಿತ ಪ್ರತ್ಯಯಗಳು ಸೇರುವಾಗ ಪ್ರಾಯಶಃ ಮಧ್ಯದ ವಿಭಕ್ತಿ ಪ್ರತ್ಯಯವು ಲೋಪವಾಗುವುದು.  ಇವುಗಳಲ್ಲಿ – (ತದ್ಧಿತಾಂತ ನಾಮ (ತದ್ಧಿತಾಂತಭಾವನಾಮ (ತದ್ಧಿತಾಂತಾವ್ಯಯಗಳೆಂದುಮೂರು ಬಗೆ.
(ತದ್ಧಿತಾಂತ ನಾಮಗಳು
ನಾಮಪದಗಳ ಮೇಲೆ ಗಾರಕಾರಇಗವಂತಇತ್ಯಾದಿ ಪ್ರತ್ಯಯಗಳು ಬಂದು ತದ್ಧಿತಾಂತ ನಾಮಗಳಾಗುವ ಬಗೆಯನ್ನು ಗಮನಿಸಿರಿ.
ಉದಾಹರಣೆಗೆ:
ತದ್ಧಿತಪ್ರತ್ಯಯ-ನಾಮಪದ+ಅರ್ಥ=ತದ್ಧಿತಪ್ರತ್ಯಯ-ತದ್ಧಿತಾಂತನಾಮ
ಗಾರ-ಮಾಲೆಯನ್ನು+ಕಟ್ಟುವವನು=ಗಾರ-ಮಾಲೆಗಾರ
ಬಳೆಯನ್ನು+ಮಾರುವವನು=ಗಾರ-ಬಳೆಗಾರ
ಮೋಸವನ್ನು+ಮಾಡುವವನು=ಗಾರ-ಮೋಸಗಾರ
ಪಾಲನ್ನು+ಹೊಂದುವವನು=ಗಾರ-ಪಾಲುಗಾರ
ಛಲವನ್ನು+ಹೊಂದಿದವನು=ಗಾರ-ಛಲಗಾರ
ಕಾರ-ಓಲೆಯನ್ನು+ತರುವವನು=ಕಾರ-ಓಲೆಕಾರ
ಕೋಲನ್ನು+ಹಿಡಿಯುವವನು=ಕಾರ-ಕೋಲುಕಾರ
ಕೈದನ್ನು+ಹಿಡಿದಿರುವವನು=ಕಾರ-ಕೈದುಕಾರ
ಇಗ-ಕನ್ನಡವನ್ನು+ಬಲ್ಲವನು=ಇಗ-ಕನ್ನಡಿಗ
ಲೆಕ್ಕವನ್ನು+ಬಲ್ಲವನು=ಇಗ-ಲೆಕ್ಕಿಗ
ಚೆನ್ನನ್ನು+ಉಳ್ಳುವ=ಇಗ-ಚೆನ್ನಿಗ
ಗಂದವನ್ನು+ಮಾರುವವನು=ಇಗ-ಗಂದಿಗ
ಗಾಣವನ್ನು+ಆಡಿಸುವವನು=ಇಗ-ಗಾಣಿಗ
ವಂತ-ಹಣವನ್ನು+ಉಳ್ಳವನು=ವಂತ-ಹಣವಂತ
ಸಿರಿಯನ್ನು+ಉಳ್ಳವನು=ವಂತ-ಸಿರಿವಂತ
ವಳ-ಮಡಿಯನ್ನು+ಮಾಡುವವನು=ವಳ-ಮಡಿವಳ
=(ವಾಳ)-ಮಡಿವಾಳ

ಹಡಪವನ್ನು+ಆಚರಿಸುವವನು=ವಳ-ಹಡಪವಳ
ಆಡಿಗ-ಹಾವನ್ನು+ಆಡಿಸುವವನು=ಆಡಿಗ-ಹಾವಾಡಿಗ

ಹೂವನ್ನು+ಕಟ್ಟುವವನು=ಆಡಿಗ-ಹೂವಾಡಿಗ
ಇಕ-ಕರಿಯದನ್ನು (ಬಣ್ಣವನ್ನು)+ಉಳ್ಳವನು=ಇಕ-ಕರಿಕ

ಬಿಳಿಯದನ್ನು(ಬಣ್ಣವನ್ನು)+ಉಳ್ಳವನು=ಇಕ-ಬಿಳಿಕ
ಆಳಿ-ಮಾತನ್ನು+ಹೆಚ್ಚು ಆಡುವ ಸ್ವಭಾವವುಳ್ಳವನು=ಆಳಿ-ಮಾತಾಳಿ

ಓದನ್ನು+ಹೆಚ್ಚು ಆಚರಿಸುವವನು=ಆಳಿ-ಓದಾಳಿ
ಆಳಿ-ಜೂದನ್ನು+ಆಡುವವನು=ಆಳಿ-ಜೂದಾಳಿ
ಗುಳಿ-ಲಂಚವನ್ನು+ತೆಗೆದುಕೊಳ್ಳುವವನು=ಗುಳಿ-ಲಂಚಗುಳಿ
ಅನೆಯ-ಹತ್ತು+ಸಂಖ್ಯೆಯನ್ನುಳ್ಳುದು=ಅನೆಯ-ಹತ್ತನೆಯ

ಒಂದು+ಸಂಖ್ಯೆಯನ್ನುಳ್ಳುದು=ಅನೆಯ-ಒಂದನೆಯ
ಆರ-ಕುಂಬವನ್ನು+ಮಾಡುವವನು=ಆರ-ಕುಂಬಾರ[1]

ಕಮ್ಮವನ್ನು+ಆಚರಿಸುವವನು=ಆರ-ಕಮ್ಮಾರ[1]
ಇದರ ಹಾಗೆಯೆ ಉಳಿದ ಕಡೆಗೆ ಬೇರೆ ಬೇರೆ ಪ್ರತ್ಯಯಗಳು ಬಂದು ತದ್ಧಿತಾಂತಗಳಾಗುತ್ತ ವೆಂದು ತಿಳಿಯಬೇಕು.

ಸ್ತ್ರೀಲಿಂಗದಲ್ಲಿ ಬರುವ ತದ್ಧಿತ ಪ್ರತ್ಯಯಗಳು
(೯೧ಸ್ತ್ರೀಲಿಂಗದಲ್ಲಿ ಇತಿಇತ್ತಿಗಿತ್ತಿತಿಇತ್ಯಾದಿ ತದ್ಧಿತ ಪ್ರತ್ಯಯಗಳು ಬಂದುಸ್ತ್ರೀಲಿಂಗದ ತದ್ಧಿತಾಂತಗಳು ಸಿದ್ಧಿಸುವುವು.
ಉದಾಹರಣೆಗೆ:
ಇತಿ – ಬೀಗಿತಿ, ಬ್ರಾಹ್ಮಣಿತಿ
ಇತ್ತಿ - ಒಕ್ಕಲಗಿತ್ತಿ, ಹೂವಾಡಗಿತ್ತಿ
ಗಿತ್ತಿ – ನಾಯಿಂದಗಿತ್ತಿ, ಅಗಸಗಿತ್ತಿ
ತಿ – ಗೊಲ್ಲತಿ, ವಡ್ಡತಿ, ಮಾಲೆಗಾರ‍್ತಿ
 – ಅರಸಿ, ಅಣುಗಿ
 – ಕಳ್ಳೆ, ಜಾಣೆ, ಗುಣವಂತೆ,  ಇತ್ಯಾದಿ-

(ತದ್ಧಿತಾಂತ ಭಾವನಾಮಗಳು 
(ಅ) ಬಡತನ ಸಿರಿತನಗಳು ಸ್ಥಿರವಲ್ಲ.
(ಆ)  ಊರ ಗೌಡಿಕೆ ರಾಮಣ್ಣನದು.
(ಇ) ನಮಗೆ ಅದೊಂದು ಹಿರಿಮೆ
ಈ ಮೇಲಿನ ಮೂರು ವಾಕ್ಯಗಳಲ್ಲಿ ಕೆಳಗೆ ಗೆರೆ ಎಳೆದಿರುವ ಬಡತನಸಿರಿತನಗೌಡಿಕೆಹಿರಿಮೆ-ಈ ಶಬ್ದಗಳನ್ನು ಯೋಚಿಸಿ ನೋಡಿದರೆ-ಬಡವನ ಭಾವವೇ-ಬಡತನಸಿರಿವಂತನಭಾವವೇ-ಸಿರಿತನಗೌಡನ ಭಾವವೇ-ಗೌಡಿಕೆಹಿರಿಯದರ ಭಾವವೇ-‘ಹಿರಿತನ’ ಎಂದು ಅರ್ಥವಾಗುವುದು.  ಇಲ್ಲಿ ಬಂದಿರುವ ತನಇಕೆಮೆ-ಪ್ರತ್ಯಯಗಳು ಭಾವಾರ್ಥದಲ್ಲಿ ಬಡವನಸಿರಿವಂತನಗೌಡನಹಿರಿಯದರ – ಇತ್ಯಾದಿ ನಾಮಪದಗಳ ಮೇಲೆ ಬಂದಿವೆ ಎಂಬುದನ್ನು ಕೆಳಗೆ ಗಮನಿಸಿರಿ.
ಬಡವ-ಬಡತನ (ಬಡವನ ಭಾವ-ತನ)
ಸಿರಿ  – ಸಿರಿತನ (ಸಿರಿ ಉಳ್ಳವನ ಭಾವ-ತನ)
ಗೌಡ-ಗೌಡಿಕೆ (ಗೌಡನ ಭಾವ-ಇಕೆ)
ಹಿರಿದು-ಹಿರಿಮೆ (ಹಿರಿದರ ಭಾವ-ಮೆ)
ಸಾಮಾನ್ಯವಾಗಿ ಈ ಪ್ರತ್ಯಯಗಳೆಲ್ಲ ಷಷ್ಠೀವಿಭಕ್ತ್ಯಂತಗಳಾದ ನಾಮಪದಗಳ ಮೇಲೆ ಬಂದಿವೆಆದುದರಿಂದ ಈ ಬಗೆಗೆ ಸೂತ್ರವನ್ನು ಹೀಗೆ ಹೇಳಬಹುದು.

(೯೨ತದ್ಧಿತಾಂತಭಾವನಾಮಗಳು-ಸಾಮಾನ್ಯವಾಗಿ ಷಷ್ಠೀವಿಭಕ್ತ್ಯಾಂತಗಳಾದನಾಮಪದಗಳ ಮುಂದೆ ಭಾವಾರ್ಥದಲ್ಲಿ ತನಇಕೆಪುಮೆ ಇತ್ಯಾದಿ ತದ್ಧಿತಪ್ರತ್ಯಯಗಳುಸೇರಿ ತದ್ಧಿತಾಂತಭಾವನಾಮಗಳೆನಿಸುವುವು.
ಉದಾಹರಣೆಗೆ:
ಪ್ರತ್ಯಯ-ನಾಮಪದ-ಭಾವಾರ್ಥದಲ್ಲಿಪ್ರತ್ಯಯ-ತದ್ಧಿತಾಂತಭಾವನಾಮ
ತನ-ದೊಡ್ಡವನ (ಭಾವ)-ತನ-ದೊಡ್ಡತನ
ಜಾಣನ (ಭಾವ)-ತನ-ಜಾಣತನ; ಇದರಂತೆ ದಡ್ಡತನ, ಚಿಕ್ಕತನ, ಸಣ್ಣತನ, ಹುಡುಗತನ, ಕಿರಿತನ, ಕಳ್ಳತನ, ಕೆಟ್ಟತನ, ಸೋಮಾರಿತನ,  -ಇತ್ಯಾದಿ
ಇಕೆ-ಬ್ರಾಹ್ಮಣನ (ಭಾವ)-ಇಕೆ-ಬ್ರಾಹ್ಮಣಿಕೆ
ಚಲುವಿನ (ಭಾವ)-ಇಕೆ-ಚಲುವಿಕೆ; ಇದರಂತೆ  ಗೌಡಿಕೆ, ಉನ್ನತಿಕೆ, ತಳವಾರಿಕೆ, -ಇತ್ಯಾದಿ
-ಕಿವುಡನ (ಭಾವ)--ಕಿವುಡು
ಕುಳ್ಳನ (ಭಾವ)--ಕುಳ್ಳು; ಇದರಂತೆ ಕುರುಡು, ಕುಂಟು, ಮೂಕು, ತೊದಲು, -ಇತ್ಯಾದಿ.
ಪು-ಬಿಳಿದರ (ಭಾವ)-ಪು-ಬಿಳುಪು[2]
ಕರಿದರ (ಭಾವ)-ಪು-ಕಪ್ಪು[2]
ಇನಿದರ (ಭಾವ)-ಪು-ಇಂಪು
ತಣ್ಣನೆಯದರ (ಭಾವ)-ಪು-ತಂಪು[2]
ನುಣ್ಣನೆಯದರ (ಭಾವ)-ಪು-ನುಣುಪು[2]
ಮೆ-ಜಾಣನ (ಭಾವ)-ಮೆ-ಜಾಣ್ಮೆ
ಜಾಣೆಯ (ಭಾವ)-ಮೆ-ಜಾಣ್ಮೆ
ಕೂರಿತ್ತರ (ಭಾವ)-ಮೆ-ಕೂರ‍್ಮೆ
ಪಿರಿದರ (ಭಾವ)-ಮೆ-ಪೆರ‍್ಮೆ
ಹಿರಿದರ (ಭಾವ)-ಮೆ-ಹಿರಿಮೆ

(ತದ್ಧಿತಾಂತಾವ್ಯಯಗಳು
(ಅ) ಅವನು ರಾಮನಂತೆ ಕಾಣುವನು
(ಆ) ಊರವರೆಗೆ ನಡೆದನು
(ಇ) ಮನೆಯತನಕ ಕಳಿಸು
(ಉ) ಅವನಿಗೋಸುಗ ಬಂದೆನು
(ಊ) ಅವನಿಗಿಂತ ಚಿಕ್ಕವನು
ಮೇಲಿನ ವಾಕ್ಯಗಳಲ್ಲಿ ಕೆಳಗೆ ಗೆರೆ ಎಳೆದಿರುವ ರಾಮನಂತೆಊರವರೆಗೆಮನೆಯತನಕಅವನಿಗೋಸುಗಅವನಿಗಿಂತ – ಇತ್ಯಾದಿ ಪದಗಳನ್ನು ಬಿಡಿಸಿದರೆ ರಾಮನ+ಅಂತೆಊರ+ವರಗೆಮನೆಯ+ತನಕಅವನಿಗೆ+ಓಸುಗಅವನಿಗೆ+ಇಂತ-ಹೀಗಾಗುವುವು.  ಇಲ್ಲಿ ಬಂದಿರುವ ಅಂತೆವರೆಗೆತನಕಓಸುಗಇಂತ – ಇತ್ಯಾದಿ ಪ್ರತ್ಯಯಗಳು ನಾಮ ಪದಗಳ ಮುಂದೆ ಸೇರುವುವು.  ಆಗ ನಾಮಪದಗಳಲ್ಲಿರುವ ಗೆಗೆ – ಈ ನಾಮವಿಭಕ್ತಿಪ್ರತ್ಯಯಗಳು ಲೋಪವಾಗುವುದಿಲ್ಲ.  ಇಂಥ ಪದಗಳನ್ನು ತದ್ಧಿತಾಂತಾವ್ಯಯಗಳೆಂದು ಕರೆಯುವುದು ವಾಡಿಕೆ.

(೯೩ನಾಮಪದಗಳ ಮುಂದೆ ಅಂತೆವೊಲ್ವೊಲುವೋಲ್ವೋಲುತನಕವರೆಗೆಮಟ್ಟಿಗೆಓಸ್ಕರಇಂತಆಗಿಓಸುಗ-ಇತ್ಯಾದಿಪ್ರತ್ಯಯಗಳು ಸೇರಿತದ್ಧಿತಾಂತಾವ್ಯಯಗಳೆನಿಸುವುವು.
ಈ ಪ್ರತ್ಯಯಗಳು ಬಂದಾಗ ನಾಮಪದದಲ್ಲಿರುವ ವಿಭಕ್ತಿಪ್ರತ್ಯಯವು ಲೋಪವಾಗುವುದಿಲ್ಲ.
ಉದಾಹರಣೆಗೆ:
ಅಂತೆ-ರಾಮನಂತೆ, ಚಂದ್ರನಂತೆ, ಭೀಮನಂತೆ, ಅವನಂತೆ
ವೊಲ್-ರಾಮನವೊಲ್, ಚಂದ್ರನವೊಲ್, ಭೀಮನವೊಲ್, ಅವನವೊಲ್
ವೊಲು-ರಾಮನವೊಲು, ಚಂದ್ರನವೊಲು, ಭೀಮನವೊಲು, ನಿನ್ನವೊಲು
ವೋಲು-ಮನೆಯವೋಲು, ಅವನವೋಲು, ಚಂದ್ರನವೋಲು
ವೋಲ್-ಮನೆಯವೋಲ್, ಅವನವೋಲ್, ಚಂದ್ರನವೋಲ್
ತನಕ-ಮನೆಯತನಕ, ಊರತನಕ, ಅಲ್ಲಿಯತನಕ
ವರೆಗೆ-ಊರವರೆಗೆ, ಚಂದ್ರನವರೆಗೆ
ಮಟ್ಟಿಗೆ-ಅವನಮಟ್ಟಿಗೆ, ನನ್ನಮಟ್ಟಿಗೆ, ನಿನ್ನಮಟ್ಟಿಗೆ
ಓಸ್ಕರ-ಅವನಿಗೋಸ್ಕರ, ರಾಮನಿಗೋಸ್ಕರ
ಸಲುವಾಗಿ-ನನ್ನ ಸಲುವಾಗಿ, ನಿನ್ನ ಸಲುವಾಗಿ
ಇಂತ-ಅವನಿಗಿಂತ, ಇವನಿಗಿಂತ
ಆಗಿ-ಅವನಿಗಾಗಿ, ನನಗಾಗಿ, ನಿನಗಾಗಿ
ಓಸುಗ-ರಾಮನಿಗೋಸುಗ, ಕಳ್ಳನಿಗೋಸುಗ

[1] ಕುಂಭಕಾರ, ಕರ್ಮಕಾರ-ಎಂಬ ಸಂಸ್ಕೃತ ಪದಗಳು ತದ್ಭವವಾಗಿ, ಕುಂಬಾರ, ಕಮ್ಮಾರ ಪದಗಳು ಸಿದ್ಧಿಸಿದೆ ಎಂಬುದು ಕೆಲವರ ಮತ.  ಆದರೆ ಹಳಗನ್ನಡದಲ್ಲಿ ಆರ ಪ್ರತ್ಯಯ ಬಂದು ಕುಂಬರ, ಕಮ್ಮರ ಎಂದಾದ ಈ ಶಬ್ದಗಳು ಹೊಸಗನ್ನಡದಲ್ಲಿ ಕುಂಬಾರ, ಕಮ್ಮಾರ-ಎಂದು ಆದುವೆಂದು ತಿಳಿಯುವುದು ಯುಕ್ತ.
[2] ಹಳಗನ್ನಡದಲ್ಲಿ ಇವುಗಳ ರೂಪಗಳು ಬೆಳ್ಪು, ಕರ್ಪು, ತುಣ್ಪು, ನುಣ್ಪು-ಇತ್ಯಾದಿಯಾಗಿ ಆಗುವುವು.

_________________________________________

Friday, 14 May 2021

ಜಗಜ್ಯೋತಿ ಬಸವೇಶ್ವರರು

ಬಸವೇಶ್ವರ

ಸಮಾಜ ಸುಧಾರಕ


ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು. ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು ಅನುಭವ ಮಂಟಪ (ಅಥವಾ, "ಆಧ್ಯಾತ್ಮಿಕ ಅನುಭವದ ಭವನ), ಇಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷ ಮತ್ತು ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚಿಸಲು ಸ್ವಾಗತಿಸಿತು.ಬಸವಣ್ಣನವರ ಜೊತೆ ೭೭೦ ಅಮರಗಣಂಗಳು ಇದ್ದರೆಂದು ಮತ್ತು ೧,೯೬,೦೦೦ ಶರಣರಿದ್ದರೆಂದು ಐತಿಹಾಸಿಕ ಪುರಾವೆಗಳಿವೆ.  

Quick Facts ಜಗದ್ಗುರು ಬಸವೇಶ್ವರ, ಜನನ ...

ಜಗದ್ಗುರು ಬಸವೇಶ್ವರ
ಗುರು ಬಸವಣ್ಣ
ಜನನಕ್ರಿ.ಶ. ೧೧೩೪
ಬಸವನ ಬಾಗೇವಾಡಿ ವಿಜಯಪುರ ಜಿಲ್ಲೆಕರ್ನಾಟಕಭಾರತ
ಮರಣಕ್ರಿ.ಶ. ೧೧೯೬
ಕೂಡಲಸಂಗಮಕರ್ನಾಟಕಭಾರತ
ಗೌರವಗಳು/honoursಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ
ತತ್ವಶಾಸ್ತ್ರಶರಣ ಶರಣೆಯರ ಲಿಂಗಾಯತ ದರ್ಶನ",
ಸಾಹಿತ್ಯದ ಕೆಲಸಗಳುವಚನ ಸಾಹಿತ್ಯ ವಚನಗಳು
ನುಡಿಅರಿತಡೆ ಶರಣ-ಮರೆತಡೆ ಮಾನವ , ಕಾಯಕ ದಾಸೋಹ , ಜಂಗಮ
ಅಧ್ಯಾತ್ಮಜ್ಞಾನೀ ಅರ್ಥಶಾಸ್ತ್ರಜ್ಞ

ಸಾಂಪ್ರದಾಯಿಕ ದಂತಕಥೆಗಳು ಮತ್ತು ವಿದ್ವತ್ಪೂರ್ಣ ಗ್ರಂಥಗಳು ಲಿಂಗಾಯ ಸ್ಥಾಪಕ ಬಸವಣ್ಣ ಎಂದು ಉಲ್ಲೇಖಿಸುತ್ತವೆ . ಆದಾಗ್ಯೂ, ಆಧುನಿಕ ಕಲಾಚುರಿ ಶಾಸನಗಳಂತಹ ಐತಿಹಾಸಿಕ ಸಾಕ್ಷ್ಯವನ್ನು ಅವಲಂಬಿಸಿದೆ ಬಸವ ಕವಿ ತತ್ತ್ವಜ್ಞಾನಿಯಾಗಿದ್ದು, ಈಗಾಗಲೇ ಅಸ್ತಿತ್ವದಲ್ಲಿದ್ದ ಸಂಪ್ರದಾಯವನ್ನು ಸಂಸ್ಕರಿಸಿದರು ಮತ್ತು ಶಕ್ತಿಯನ್ನು ತುಂಬಿದರು ಎಂದು ಉಲ್ಲೇಖಿಸುತ್ತವೆ.ಕನ್ನಡ ಕವಿ ಹರಿಹರರಿಂದ ರಚಿತ (c.1180) ಬಸವರಾಜದೇವರ ರಗಳೆ (ಸಿ.ಎಸ್ .8080 ರಲ್ಲಿ 25 ವಿಭಾಗಗಳು ಲಭ್ಯವಿದೆ) ಸಾಮಾಜಿಕ ಸುಧಾರಕನ ಜೀವನದ ಬಗ್ಗೆ ಲಭ್ಯವಿರುವ ಅತ್ಯಂತ ಆರಂಭಿಕ ಖಾತೆಯಾಗಿದೆ ಮತ್ತು ಲೇಖಕನು ತನ್ನ ನಾಯಕನ ಸಮಕಾಲೀನ ಸಮೀಪದಲ್ಲಿದ್ದ ಕಾರಣದಿಂದಾಗಿ ಅದು ಮುಖ್ಯವೆಂದು ಪರಿಗಣಿಸಲಾಗಿದೆ.ಬಸವನ ಜೀವನ ಮತ್ತು ವಿಚಾರಗಳ ಸಂಪೂರ್ಣ ವಿವರ 13 ನೇ ಶತಮಾನದ ಪವಿತ್ರ ತೆಲುಗು ಪಠ್ಯ ಪಾಲ್ಕುರಿಕಿ ಸೋಮನಾಥರ ಬಸವ ಪುರಾಣದಲ್ಲಿ ನಿರೂಪಿಸಲ್ಪಟ್ಟಿದೆ. ಬಸವ ಸಾಹಿತ್ಯ ಕೃತಿಗಳು ಕನ್ನಡ ಭಾಷೆಯಲ್ಲಿ ವಚನ ಸಾಹಿತ್ಯವನ್ನು ಒಳಗೊಂಡಿದೆ.ಅವರನ್ನು ಭಕ್ತಿಭಂಡಾರಿ ಎಂದೂ ಕರೆಯುತ್ತಾರೆ (ಅಕ್ಷರಶಃ, ಭಕ್ತಿಯ ಖಜಾಂಚಿ),ಬಸವಣ್ಣ (ಹಿರಿಯ ಸಹೋದರ ಬಸವ) ಅಥವಾ ಬಸವೇಶ್ವರ .

ಬಾಲ್ಯ ಜೀವನ

ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾರೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.

ಬಸವಣ್ಣ ಹನ್ನೆರಡು ವರ್ಷಗಳ ಕಾಲ ಕುಂಡಲಸಂಗಮದಲ್ಲಿ ಹಿಂದೂ ದೇವಸ್ಥಾನದಲ್ಲಿ ಅಧ್ಯಯನ ಮಾಡುತ್ತಿದ್ದರು.ನಂತರ ಲಕುಲಿಶಾ-ಪಶುಪಾಟ ಸಂಪ್ರದಾಯದ ಒಂದು ಶೈವ ಕಲಿಕೆಯ ಕಲಿಕೆಯಲ್ಲಿ ಸಂಗಮೇಶ್ವರದಲ್ಲಿ ಮುಗಿಸಿದರು ಬಸವ ತನ್ನ ತಾಯಿಯ ಕಡೆಯಿಂದ ಸೋದರ ಸಂಬಂಧಿಯನ್ನು ಮದುವೆಯಾದ. ಅವರ ಪತ್ನಿ ಗಂಗಾಂಬಿಕೆ ಕಲಚುರಿ ರಾಜ ಬಿಜ್ಜಳ ಪ್ರಧಾನ ಮಂತ್ರಿಯ ಮಗಳು,

ಧಾರ್ಮಿಕ ಬೆಳವಣಿಗೆಗಳು

[ಸೂಕ್ತ ಉಲ್ಲೇಖನ ಬೇಕು]

  • ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವನಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾಮೋಹ ಹೊಂದುವುದು ಘೋರ ಅಪರಾಧ.
  • ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗ ಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು.
  • ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಎಂದೂ ಕರೆಯಲಾಗುತ್ತದೆ. ಮಾನವಿಯತೆ. ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು.
  • ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ.
  • ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ.
  • ಬೆಳಗಾವಿ ಜಿಲ್ಲೆಯ ಅರ್ಜುನವಾಡದ ಶಿಲಾಶಾಸನದಲ್ಲಿ ಉಲ್ಲೇಖಿತವಾಗಿರುವ ಸಂಗಣಬಸವ ಎಂಬ ಹೆಸರು ವಚನಕಾರ ಬಸವಣ್ಣನವರದ್ದೇ ಎಂದು ವಿದ್ವಾಂಸರು ಊಹಿಸಿದ್ದಾರೆ. "ನಮನ" ( ಪ್ರೊ.ಚಿದಾನಂದ ಮೂರ್ತಿ­ಯವರಂಥ ಹಿರಿ­ಯರೂ ಕೆಲವು ಗೌರವಾನ್ವಿತ ಸಂಪ್ರದಾಯ ಪರಾ­ಯಣ ಮಠಾಧಿಪತಿಗಳೂ ವೀರಶೈವ ಧರ್ಮದ ಪ್ರತ್ಯೇಕ ಅಸ್ತಿತ್ವ­ವನ್ನೊಪ್ಪದೆ ಅದು ಹಿಂದೂ ಧರ್ಮದ ಒಂದು ಭಾಗವೆಂದು ಘಂಟಾ­ಘೋಷವಾಗಿ ಸಾರಿದ್ದಾರೆ.

ಸಾಮಾಜಿಕ ಸಮಾನತೆ

[ಸೂಕ್ತ ಉಲ್ಲೇಖನ ಬೇಕು]

ಅಣ್ಣ ಬಸವಣ್ಣ

ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ
ಇವ ನಮ್ಮವ ಇವ ನಮ್ಮವ ಇವ ನಮ್ಮವ ನೆಂದೆನಿಸಯ್ಯಾ
ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ.

  • ಶೂದ್ರರಾದ ರೈತಾಪಿ ಜನರು, ಕಾಯಕಜೀವಿಗಳು, ಮಹಿಳೆಯರು ಮತ್ತು ಪಂಚಮರು ಈ ದೇಶದಲ್ಲಿ ಸಹಸ್ರಾರು ವರ್ಷಗಳಿಂದ ಮನುಧರ್ಮದ ಪುರುಷ ಪ್ರಧಾನವಾದ ವರ್ಣ ವ್ಯವಸ್ಥೆಯಿಂದಾಗಿ ಪಡಬಾರದ ಕಷ್ಟಪಟ್ಟಿದ್ದಾರೆ. ಮೇಲ್ವರ್ಗ ಮತ್ತು ಮೇಲ್ಜಾತಿಯ ಅನುತ್ಪಾದಕ ಪುರುಷರಿಗಾಗಿಯೇ ಬದುಕಿನ ಎಲ್ಲ ಸುಖಭೋಗಗಳು ಮೀಸಲಾಗಿದ್ದವು. ಇವರು ಮಾತ್ರ ಜನಿವಾರ ಧರಿಸುವ ಹಕ್ಕನ್ನು ಪಡೆದಿದ್ದರು.
  • ಜನಿವಾರ ಧರಿಸುವ ಬ್ರಾಹಣ ಓದಿರಬಹುದು, ಬರೆದಿರಬಹುದು ಆದರೆ ಕಾಯಕಜೀವಿಯಾಗಿ ಉತ್ಪಾದನೆಯಲ್ಲಿ ತೊಡಗಿಲ್ಲ. ಉತ್ಪಾದನೆಯ ಅನುಭವದಿಂದ ಬರುವ ಜ್ಞಾನವನ್ನು ಹಿಂದಿನ ಕಾಲದಲ್ಲಿ ಅವನೆಂದೂ ಪಡೆಯಲಿಲ್ಲ. ಕ್ಷತ್ರಿಯ ಕಾದಿರಬಹುದು ಆದರೆ ಉತ್ಪಾದನೆಯಲ್ಲಿ ತೊಡಗಲಿಲ್ಲ. ವೈಶ್ಯ ವಸ್ತುಗಳ ಮಾರಾಟ ಮಾಡಿರಬಹುದು, ಕೃಷಿಭೂಮಿಯ ಒಡೆಯನೂ ಆಗಿರಬಹುದು ಆದರೆ ಸ್ವತಃ ಉತ್ಪಾದನೆ ಮಾಡಲಿಲ್ಲ. ಈ ಮೂರೂ ವರ್ಣದವರಿಗೂ ಜನಿವಾರ ಇದೆ.
  • ಆದರೆ ಉತ್ಪಾದನೆಯಲ್ಲಿ ತೊಡಗಿದ ಕಾಯಕ ಜೀವಿಗಳಿಗೆ ಮತ್ತು ಪಂಚಮರಿಗೆ ಜನಿವಾರ ಇಲ್ಲ. ಯಾರಿಗೆ ಜನಿವಾರ ಇತ್ತೋ ಅವರು ದುಡಿಯದೆ ಸುಖ ಜೀವನವನ್ನು ಅನುಭವಿಸಿದರು. ಯಾರಿಗೆ ಜನಿವಾರ ಇದ್ದಿದ್ದಿಲ್ಲವೂ ಅವರು ದುಡಿದೂ ಕಷ್ಟ ಜೀವನವನ್ನು ಅನುಭವಿಸಿದರು. ಅಂತೆಯೆ ಬಸವಣ್ಣನವರು ಕಟ್ಟ ಕಡೆಗೆ ಮನುಷ್ಯನ ಕಡೆಗೆ ಬಂದರು ಈ ಅನ್ಯಾಯದ ವಿರುದ್ಧ ಸಿಡಿದೆದ್ದರು.
  • "ಜಾತಿ ಸಂಕರವಾದ ಬಳಿಕ ಕುಲವನರಸುವರೆ ?" ಎಂದು ಪ್ರಶ್ನಿಸಿ ಕಾಯಕಜೀವಿಗಳ ಕೇಂದ್ರಿತ ಶರಣ ಸಂಕುಲವನ್ನು ಸೃಷ್ಟಿಸಿದರು. ವಿವಿಧ ಕಾಯಕಗಳ ಶೂದ್ರರಿಗೆ, ಮಹಿಳೆಯರಿಗೆ ಮತ್ತು ಪಂಚಮರಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವ ವ್ಯವಸ್ಥೆ ಮಾಡಿದರು. ಅವರೆಲ್ಲ ಅನುಭವ ಮಂಟಪದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು.
  • ಭಾರತದಲ್ಲಿ ವಿವಿಧ ಜಾತಿಗಳ ಕಾಯಕಜೀವಿಗಳು ಮೊದಲ ಬಾರಿಗೆ ಜಾತಿಯನ್ನು ಮೀರಿ ಒಂದು ವರ್ಗವಾಗಿದ್ದು ಶರಣ ಸಂಕುಲದಲ್ಲಿ ಎಂಬುದು ಹೆಮ್ಮೆಯ ವಿಚಾರವಾಗಿದೆ. ಅವರೆಲ್ಲ ತಮ್ಮ ಕಾಯಕಗಳ ಹೆಸರುಗಳನ್ನು ಅಭಿಮಾನದಿಂದ ಉಳಿಸಿಕೊಂಡರು. ಆದರೆ ಆ ಕಾಯಕಗಳ ಒಳಗೆ ಇದ್ದ ಜಾತಿ ವಿಷವನ್ನು ಹೊರ ಹಾಕಿದರು. ಹೀಗೆ ಶರಣರಲ್ಲಿ ಸಮಗಾರ, ಮಾದಾರ, ಮೇದಾರ, ಡೋಹರ, ಅಂಬಿಗ ಮುಂತಾದ ಪದಗಳು ಜಾತಿ ಸೂತಕವನ್ನು ಕಳೆದುಕೊಂಡು ಕಾಯಕ ಸೂಚಕಗಳಾಗಿ ಉಳಿದವು.

ಸಂಕ್ಷಿಪ್ತ ಪರಿಚಯ

  • ವಿಶ್ವಗುರು ಬಸವಣ್ಣನವರು ಪರಮಾತ್ಮನ ಕರುಣೆಯ ಕಂದರಾಗಿ ಅವತರಿಸಿ, ಲೋಕಕ್ಕೆ ಹೊಸ ಧರ್ಮವೊಂದನ್ನು ಕೊಟ್ಟರು. ಇಂಗಳೇಶ್ವರ ಬಾಗೇ ವಾಡಿಯಲ್ಲಿ ಶೈವ ಬ್ರಾಹ್ಮಣ ದಂಪತಿಗಳಾದ ಮಾದರಸ-ಮಾದಲಾಂಬಿಕೆಯರ ಮಗನಾಗಿ ಆನಂದನಾಮ ಸಂವತ್ಸರದಲ್ಲಿ ವೈಶಾಖಮಾಸದ ಅಕ್ಷಯ ತೃತೀಯದಂದು (ದಿ. ಎಪ್ರಿಲ್ ೩೦ ೧೧೩೪) ರೋಹಿಣಿ ನಕ್ಷತ್ರದಲ್ಲಿ ಜನಿಸಿದರು.
  • ಇವರು ಯಾವುದೇ ಅಂಧಶ್ರದ್ಧೆ ಜಡ ಸಂಪ್ರದಾಯಗಳನ್ನೊಪ್ಪದ ಸತ್ಯಾನ್ವೇಷಕರಾಗಿ ಹೆತ್ತವರನ್ನು, ಬಂಧು ಬಾಂಧವರನ್ನು ತೊರೆದು ವಿದ್ಯಾಕಾಂಕ್ಷಿಯಾಗಿ ಕೂಡಲ ಸಂಗಮದ ಗುರುಕುಲಕ್ಕೆ ಬಂದರು. ಶಾಸ್ತ್ರಾಧ್ಯಯನ, ಯೋಗಾಭ್ಯಾಸಗಳಲ್ಲಿ ಬಾಲ್ಯವನ್ನು ಕಳೆದು ತಾರುಣ್ಯಕ್ಕೆ ಕಾಲಿರಿಸಿದರು. ಜನರಲ್ಲಿ ಮನೆ ಮಾಡಿಕೊಂಡಿದ್ದ ಮೌಢ್ಯತೆ, ಕಂದಾಚಾರ, ಜಾತೀಯತೆಗಳನ್ನು ಕಂಡು ಮನನೊಂದು ಪರಿಹಾರವನ್ನು ಅರಸತೊಡಗಿದರು.
  • ಒಂದು ದಿನ (ದಿ. ೧೪ನೇ ಜನವರಿ ೧೧೫೫) ಪರಮಾತ್ಮನ ದಿವ್ಯ ದರ್ಶನವಾಯಿತು; ಅನುಗ್ರಹಿತರಾದರು. ಬ್ರಹ್ಮ-ವಿಷ್ಣು-ಮಹೇಶ್ವರರೆಂಬ ತ್ರಿಮೂರ್ತಿಗಳನ್ನು ಮೀರಿದ ಸೃಷ್ಟಿಕರ್ತನೇ ಶ್ರೇಷ್ಠವೆಂದು ಘೋಷಿಸಿ ಆ ದೇವನನ್ನು ಲಿಂಗದೇವ ಎಂದು ಕರೆದರು. ನಿರಾಕಾರ ದೇವನಿಗೆ ಮನುಷ್ಯರ, ಪ್ರಾಣಿಗಳ ಆಕಾರ ಕೊಡುವುದು ಸರಿಯಲ್ಲ ಎಂಬ ಭಾವ ತಳೆದು, ದೇವನ ಸಾಕಾರ ಕೃತಿಯೇ ಬ್ರಹ್ಮಾಂಡ, ಇದು ಗೋಲಾಕಾರದಲ್ಲಿದೆ.
  • ಆದ್ದರಿಂದ ಲಿಂಗದೇವನನ್ನು ವಿಶ್ವದಾಕಾರದಲ್ಲಿ ಪೂಜಿಸುವುದು ಸರಿ ಎಂದು ಇಷ್ಟಲಿಂಗದ ಪರಿಕಲ್ಪನೆ ಕೊಟ್ಟರು. ದೇವರ ಕುರುಹಾದ ಇಷ್ಟಲಿಂಗವು ಮಾನವನ ಜಾತಿ, ವರ್ಣ, ವರ್ಗ ಭೇದಗಳನ್ನು ಕಳೆದು ಶರಣನನ್ನಾಗಿ ಮಾಡುವ ಸಾಧನವಾಗಬೇಕೆಂದು ಅದನ್ನು ಗಣ ಲಾಂಛನವನ್ನಾಗಿ ಮಾಡಿದರು. ಪರಮಾತ್ಮನ ದಿವ್ಯಾನುಭವ ಪಡೆದು, ನವ ಸಮಾಜ ನಿರ್ಮಾಣದ ರೂಪುರೇಷೆಗಳನ್ನು ತಮ್ಮ ಮನದಲ್ಲಿ ಹೊಂದಿ ಕಲ್ಯಾಣದ ಕಾರ್ಯಕ್ಷೇತ್ರವನ್ನು ಪ್ರವೇಶಿಸಿದರು.
  • ಸೋದರ ಮಾವನ ಮಗಳು ನೀಲಾ೦ಬಿಕೆಯನ್ನು ವಿವಾಹವಾಗಿ ಕರಣಿಕ ಕಾಯಕ ಕೈಗೊಂಡರು. ಅಲ್ಲಿಂದ ಮುಂದೆ ಭಂಡಾರಿಯಾಗಿ, ಪ್ರಧಾನಿ(ದಂಡನಾಯಕ)ಯಾಗಿ ಕಾಯಕ ನಿರ್ವಹಿಸಿದರು. ಅನುಭವ ಮಂಟಪ ಸ್ಥಾಪಿಸಿ ಧರ್ಮ ಪ್ರಚಾರ ಮಾಡಿದರು. ಎಲ್ಲರ ಮನೆ, ಮನಗಳ ಬಾಗಿಲಿಗೂ ಧರ್ಮಗಂಗೆ ಹರಿಯುವಂತೆ ಮಾಡಿದರು. ಇಷ್ಟಲಿಂಗವೆಂಬ ಗಣಲಾಂಛನವನ್ನು ಧರಿಸಿ ಲಿಂಗಾಯತರಾದ ಎಲ್ಲ ಶರಣ ಬಂಧುಗಳನ್ನು ಸಮಾನ ಭಾವದಿಂದ ಕಂಡರು.
  • ಹುಟ್ಟಿನಿಂದ ಬ್ರಾಹ್ಮಣರಾಗಿ, ಸಂಸ್ಕಾರದಿಂದ ಶರಣರಾದ ಮಧುವರಸರ ಮಗಳನ್ನು ಹುಟ್ಟಿನಿಂದ ಸಮಗಾರರಾಗಿ ಸಂಸ್ಕಾರದಿಂದ ಶರಣರಾದ ಹರಳಯ್ಯನವರ ಮಗನಿಗೆ ಕೊಟ್ಟು ವಿವಾಹ ಮಾಡಲು ಪ್ರೇರಣೆ ನೀಡಿದರು. ಈ ವಿವಾಹದಿಂದ ಸಂಪ್ರದಾಯವಾದಿಗಳು ಸಿಡಿದೆದ್ದು ಬಿಜ್ಜಳ ಮಹಾರಾಜನನ್ನು ಬಸವಣ್ಣನವರ ವಿರುದ್ದ ಪ್ರೇರೇಪಿಸಿ ಧರ್ಮಗುರು ಬಸವಣ್ಣನವರಿಗೆ ಗಡಿಪಾರು ಶಿಕ್ಷೆ ನೀಡುವಂತೆ ಮಾಡಿದರು.
  • ಧರ್ಮಪಿತರು ಗಡಿಪಾರು ಶಿಕ್ಷೆ ಸ್ವೀಕರಿಸಿ ಕಲ್ಯಾಣದಿಂದ ಹೊರಟ ನಂತರ ಹರಳಯ್ಯ, ಮಧುವರಸ, ಶೀಲವಂತರ ಬಂಧನವಾಗಿ ಅವರು ವರ್ಣಾಂತರ ವಿವಾಹದಲ್ಲಿ ಭಾಗಿಯಾದುದ ಕ್ಕಾಗಿ ಕಣ್ಣು ಕೀಳಿಸುವ ಶಿಕ್ಷೆ, ಎಳೆ ಹೊಟ್ಟೆ ಶಿಕ್ಷೆಗೆ ಒಳಗಾಗಿ ಪ್ರಾಣ ಬಿಡಬೇಕಾಯಿತು. ಜಾತಿವಾದಿಗಳು ವಚನ ಸಾಹಿತ್ಯವನ್ನು ನಾಶ ಮಾಡಲು ಸನ್ನದ್ಧರಾದಾಗ, ವೀರಮಾತೆ ಅಕ್ಕನಾಗಲಾಂಬಿಕೆ, ಚಿನ್ಮಯಜ್ಞಾನಿ ಚೆನ್ನಬಸವಣ್ಣ, ವೀರ ಗಣಾಚಾರಿ ಮಡಿವಾಳ ಮಾಚಯ್ಯನವರು ವೀರಾಗ್ರಣಿಗಳಾಗಿ ಕಾದಾಡಿ ವಚನ ವಾಙ್ಮಯ ನಿಧಿಯನ್ನು ಉಳಿಸಿಕೊಟ್ಟರು. ಅದಿಂದು ನಮ್ಮೆಲ್ಲರ, ಕರ್ನಾಟಕದ, ಭಾರತದ, ವಿಶ್ವದ ಹೆಮ್ಮೆಯ ಆಸ್ತಿಯಾಗಿದೆ.
  • ಇಂತಹ ಮಹಾನ್ ನೇತಾರರಾದ ಬಸವಣ್ಣನವರು ಲಿಂಗಾಯತ ಧರ್ಮದ ಸಂಸ್ಥಾಪಕರು; ಧರ್ಮಪಿತರು, ಮಂತ್ರಪುರುಷರು. ೬೨ ವರ್ಷ ೩ ತಿಂಗಳು ೨ ದಿವಸಗಳ ಕಾಲ ಇಳೆಯಲ್ಲಿ ಬಾಳಿದ ಬಸವಣ್ಣನವರು ನಳನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು (ದಿ. ಜುಲೈ ೭ ೧೧೯೬) ಉರಿಯುಂಡ ಕರ್ಪುರದಂತೆ ಲಿಂಗೈಕ್ಯರಾದರು.
  • ಮಂಗಳವೇಡದ ರಾಜ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾದ ಬಸವಣ್ಣ ಹಲವಾರು ಜನಪರ ಮತ್ತು ಸಮಾಜ ಸುಧಾರಣೆ ಕ್ರಮಗಳನ್ನು ಕೈಗೊಂಡರು. ಕಾಯಕವೇ ಕೈಲಾಸ ವೆಂದು ಸಾರಿ, ಜನರನ್ನು ದುಡಿದು ಬದುಕುವ ಪಥದಲ್ಲಿ ಮುನ್ನೆಡೆಸಿದರು. ಜಾತಿ, ಲಿಂಗ, ಭಾಷೆ ಭೇದವಿಲ್ಲದೆ, ಶರಣ ತತ್ವದಲ್ಲಿ, ಸಮಾನತೆಯಲ್ಲಿ ಮತ್ತು ಕಾಯಕ ನಿಷ್ಠೆಯಲ್ಲಿ ನಂಬಿಕೆಯುಳ್ಳವರನ್ನು ನಿಜವಾದ " ಶಿವಶರಣ " ರೆಂದು ಕರೆದರು.
  • ದಂಪತಿಗಳನ್ನು ಮತ್ತು ನವ ವಧುವರಾರಾದ ಶೀಲವಂತ-ಲಾವಣ್ಯರನ್ನು ಆನೆಯ ಕಾಲಿಗೆ ಕಟ್ಟಿಸಿ, ಊರ ತುಂಬಾ ನೆಲದ ಮೇಲೆ ಎಳೆಸಿ ಕೊಲ್ಲುವ ಕ್ರೂರವಾದ ಎಳೆಹೂಟೆ ಶಿಕ್ಷೆಗೆ ಗುರಿಪಡಿಸಿ, ಕೊಲ್ಲುತ್ತಾನೆ. ಬಿಜ್ಜಳನ ಸೇನೆ ಶಿವಶರಣರನ್ನು ಕಂಡಲ್ಲಿ ಕೊಲ್ಲ ತೊಡಗಿ, ರಕ್ತದ ಹೊಳೆ ಹರಿಸುತ್ತದೆ. ಬಸವಣ್ಣನವರು ೧೧೯೬ ರಲ್ಲಿ ಕೂಡಲಸಂಗಮಕ್ಕೆ ಮರಳಿ ಅಲ್ಲೇ ಲಿಂಗೈಕ್ಯರಾದರು. ಅವರ ಸಮಾಧಿಯು ಅಲ್ಲಿಯೇ ಇದೆ. ಅವರ ಸಮಾಧಿಯನ್ನು ಕರ್ನಾಟಕ ಸರಕಾರದಿಂದ ಬಸವ ಸಾಗರ ಹಿನ್ನಿರಿನಲ್ಲಿ ಮುಳಗದಂತೆ ರಕ್ಷಿಸಿಲ್ಪಟ್ಟಿದೆ.

ಬಸವಣ್ಣನವರ ಕಾಯಕದ ಮಹತ್ವ ಮತ್ತು ಕಾಯಕ ಸಮಾನತೆ

"ದೇವ ಸಹಿತ ಮನೆಗೆ ಬಂದಡೆ
ಕಾಯಕವಾವುದೆಂದು ಬೆಸಗೊಂಡಡೆ
ನಿಮ್ಮಾಣೆ, ನಿಮ್ಮ ಪುರಾತರಾಣೆ! ತಲೆದಂಡ! ತಲೆದಂಡ! ತಲೆದಂಡ!
ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಿಸಿದಡೆ
ನಿಮ್ಮ ರಾಣಿವಾಸದಾಣೆ."

ಹೀಗೆ ಬಸವಣ್ಣನವರು ಭಕ್ತರಲ್ಲಿ ಸರ್ವಸಮಾನತೆಯನ್ನು ಕಾಣುತ್ತಾರೆ. ಶರಣರ ದೃಷ್ಟಿಯಲ್ಲಿ ಯಾವ ಕಾಯಕವೂ ಚಿಕ್ಕದಲ್ಲ ಅಥವಾ ದೊಡ್ಡದಲ್ಲ.
"ಮನೆ ನೋಡಾ ಬಡವರು, ಮನ ನೋಡಾ ಘನ
ಸೋಂಕಿನಲ್ಲಿ ಶುಚಿ; ಸರ್ವಾಂಗ ಕಲಿಗಳು.
ಪಸರಕ್ಕನುವಿಲ್ಲ; ಬಂದ ತತ್ಕಾಲಕ್ಕೆ ಉಂಟು.
ಕೂಡಲಸಂಗನ ಶರಣರು ಸ್ವತಂತ್ರ ಧೀರರು."
ಎಂದು ಬಸವಣ್ಣನವರು ಕಾಯಕಜೀವಿಗಳಾದ ಆಯ್ದಕ್ಕಿ ಲಕ್ಕಮ್ಮ ಮತ್ತು ಮಾರಯ್ಯನವರ ವ್ಯಕ್ತಿತ್ವವನ್ನು ಕುರಿತು ಕಣ್ಣಿಗೆ ಕಟ್ಟುವಂತೆ ಹೇಳಿದ್ದಾರೆ. ಅವರು ಘನಮನದವರೂ ಪರಿಶುದ್ಧ ರೂ ಸ್ವತಂತ್ರ ಧೀರರೂ ಆಗಿದ್ದಾರೆ.

"ಮನಶುದ್ಧವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ
ಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿ
ಸದ್ಭಕ್ತಂಗೆ ಎತ್ತ ನೋಡಿದತ್ತ ಲಕ್ಷ್ಮಿ ತಾನಾಗಿಪ್ಪಳು
ಮಾರಯ್ಯಪ್ರಿಯ ಅಮರೇಶ್ವರ ಲಿಂಗದ
ಸೇವೆಯುಳ್ಳನ್ನಕ್ಕರ"
ಎಂದು ಆಯ್ದಕ್ಕಿ ಲಕ್ಕಮ್ಮ ಕಾಯಕದ ಮಹತ್ವ ವ್ಯಕ್ತಪಡಿಸುತ್ತಾಳೆ.

"ಗುರುವಾದರೂ ಕಾಯಕದಿಂದಲೇ ಜೀವನ್ಮುಕ್ತಿ
ಲಿಂಗವಾದರೂ ಕಾಯಕದಿಂದಲೇ ಶಿಲೆಯ ಕುಲ ಹರಿವುದು
ಜಂಗಮವಾದರೂ ಕಾಯಕದಿಂದಲೇ ವೇಷ ಪಾಶ ಹರಿವುದು
ಇದು ಚೆನ್ನಬಸವಣ್ಣಪ್ರಿಯ ಚಂದೇಶ್ವರ ಲಿಂಗದ ಅರಿವು"
ಎಂದು ನುಲಿಯ ಚಂದಯ್ಯನವರು ಕಾಯಕದ ಮಹತ್ವವನ್ನು ಸಾರಿದ್ದಾರೆ. ಗುರು-ಲಿಂಗ-ಜಂಗಮಕ್ಕೆ ಕಾಯಕವೇ ಆಧಾರವಾಗಿದೆ ಎಂದು ಮನಂಬುಗುವಂತೆ ಹೇಳಿದ್ದಾರೆ.
"ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದರೂ ಮರೆಯಬೇಕು
ಲಿಂಗಪೂಜೆಯಾದರೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದರೂ ಹಂಗು ಹರಿಯಬೇಕು
ಕಾಯಕವೇ ಕೈಲಾಸವಾದ ಕಾರಣ
ಅಮರೇಶ್ವರ ಲಿಂಗವಾಯಿತ್ತಾದರೂ ಕಾಯಕದೊಳಗು."
ಎಂದು ಆಯ್ದಕ್ಕಿ ಮಾರಯ್ಯ ಹೇಳುವಲ್ಲಿ ಕಾಯಕದ ಮಹತ್ವ ಪರಾಕಾಷ್ಠೆಯನ್ನು ತಲುಪುತ್ತದೆ.
"ಆವ ಕಾಯಕವಾದರೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು,
ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು, ಬೇನೆ ಬಂದಡೆ ಒರಲು,
ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ,
ಭಾಪು ಲದ್ದೆಯ ಸೋಮಾ."
ಹುಲ್ಲಿನ ಹೊರೆ ಹೊರುವ ಕಾಯಕದ ಸೋಮಯ್ಯ ಬದುಕೆಂಬುದು ಜೈವಿಕ ಪ್ರಕ್ರಿಯೆ ಎಂದು ಹೀಗೆ ಸೂಚಿಸುತ್ತಾನೆ. ಆ ಮೂಲಕ ಸಾವನ್ನು ಗೆಲ್ಲುತ್ತಾನೆ. ದೇವರ ಹಂಗಿಗೆ ಒಳಗಾಗದೆ ದೇವರನ್ನು ಆರಾಧಿಸುವ ಕ್ರಮವನ್ನು ನಮಗೆ ಕಲಿಸಿಕೊಟ್ಟಿದ್ದಾನೆ. ಜನಸಾಮಾನ್ಯರು ಶರಣಸಂಕುಲ ಸೇರಿ ಹೀಗೆ ಆತ್ಮಸ್ಥೈರ್ಯ ಪಡೆದು ಅಸಾಮಾನ್ಯರಾಗುವಲ್ಲಿ ಬಸವಣ್ಣನವರ ಅಪಾರ ಶ್ರಮ ಅಡಗಿದೆ. ಅಂತೆಯೆ ಶರಣರಿಗೆ ಬದುಕೆಂಬುದು ದುಃಖದ ಆಗರವೆಂದು ಅನಿಸುವುದಿಲ್ಲ. ಶರಣರು ಸವಾಲನ್ನು ಎದುರಿಸುತ್ತ ಆನಂದವನ್ನು ಅನುಭವಿಸುವವರು.
"ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ
ಸತ್ಯಶುದ್ಧವಿಲ್ಲದುದು ಕಾಯಕವಲ್ಲ
ಆಸೆಯೆಂಬುದು ಭವದ ಬೀಜ
ನಿರಾಸೆಯೆಂಬುದು ನಿತ್ಯಮುಕ್ತಿ
ಉರಿಲಿಂಗಪೆದ್ದಿಗಳರಸನಲ್ಲಿ ಸದರವಲ್ಲ ಕಾಣವ್ವಾ." ಎಂದು ಉರಿಲಿಂಗಪೆದ್ದಿಗಳ ಮುಣ್ಯಸ್ತ್ರೀ ಕಾಳವ್ವೆ ಹೇಳುತ್ತಾಳೆ.
ಕಾಯಕದಲ್ಲಿ ಮುಕ್ತಿ ಕಾಣುವ ಪರಿ ಇದು. ಒಬ್ಬ ದಲಿತ ಮಹಿಳೆ ಶರಣಸಂಕುಲದೊಳಗೆ ಬಂದು ಇಷ್ಟೊಂದು ಮಹತ್ತರವಾದ ವಿಚಾರವನ್ನೊಳಗೊಂಡ ವಚನರಚನೆ ಮಾಡಿದ್ದಾಳೆಂದರೆ ಬಸವಣ್ಣನವರು ಜಗತ್ತಿನಲ್ಲಿ ಮೊದಲಬಾರಿಗೆ ಯಾವ ರೀತಿ ವಯಸ್ಕರ ಶಿಕ್ಷಣದ ವ್ಯವಸ್ಥೆ ಮಾಡಿರಬಹುದು ಎಂಬುದರ ಕುರಿತು ಸಂಶೋಧನೆಯಾಗಬೇಕಿದೆ. ಶರಣರ ವಚನಗಳು ಮತ್ತು ತತ್ತ್ವ ಕೂಡ ಕಾಯಕದ ಉತ್ಪತ್ತಿಯಾಗಿವೆ ಎಂಬುದನ್ನು ಮರೆಯಬಾರದು. ವಚನಗಳು ಅನನ್ಯವಾಗಿರುವುದು ಇದೇ ಕಾರಣದಿಂದ. ಅನೇಕ ವಚನಕಾರರು ತಮ್ಮ ಕಾಯಕಗಳ ಅನುಭದ ಮೂಲಕವೇ ಅನುಭವಿಯಾಗಿದ್ದಾರೆ. ಅವರ ವಚನಗಳಲ್ಲಿನ ಪ್ರತಿಮೆ, ಪ್ರತೀಕ ಮತ್ತು ಸಂಕೇತಗಳು ಅವರವರ ಕಾಯಕಗಳ ಅನುಭವದ ಮೂಲಕವೇ ಸೃಷ್ಟಿಯಾಗಿವೆ. ಕಾಯಕದ ವಸ್ತುಗಳು ಹೀಗೆ ಕಾವ್ಯ ಪ್ರತಿಮೆಗಳಾಗುತ್ತಲೇ ತತ್ತ್ವವನ್ನು ಸ್ಫುರಿಸತೊಡಗುತ್ತವೆ.

ಬಸವಣ್ಣನವರ ಅಂಚೆ ಚೀಟಿ ಮತ್ತು ನಾಣ್ಯ

[ಸೂಕ್ತ ಉಲ್ಲೇಖನ ಬೇಕು]

ಗುರು ಬಸವಣ್ಣನವರ ಚಿತ್ರವನ್ನೊಳಗೊಂಡ ಅಂಚೆಚೀಟಿಗಳು

ಗುರು ಬಸವಣ್ಣವರ ೮೦೦ನೇಯ ಲಿಂಗೈಕ್ಯ ದಿನಾಚರಣೆ ನಿಮಿತ್ತ ಭಾರತ ಸರಕಾರದ ಅಂಚೆ ಇಲಾಖೆಯು ೧೧ನೇ ಮೇ ೧೯೬೭ರಲ್ಲಿ ೧೫ ಪೈಸೆ ಮುಖ ಬೆಲೆಯುಳ್ಳ ಅಂಚೆ ಚೀಟಿ ಯನ್ನು ಮುದ್ರಿಸಿತು. ಮತ್ತೊಮ್ಮೆ ೧೯೯೭ರಲ್ಲಿ ೨ ರೂಪಾಯಿ ಮುಖ ಬೆಲೆಯುಳ್ಳ ಅಂಚೆ ಚೀಟಿಯನ್ನು ಮುದ್ರಿಸಿತು. ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳನ್ನು ಡಾ. ಮನಮೋಹನ ಸಿಂಗ್ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಬಸವಣ್ಣನವರು ನಾಣ್ಯದ ಮೇಲೆ ಪ್ರಕಟಿಸಲ್ಪಟ್ಟವರಲ್ಲಿ ಪ್ರಥಮ ಕನ್ನಡಿಗ ರಾಗಿದ್ದಾರೆ. ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ್ ನಲ್ಲಿ ೨೮ನೇ ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯತು.

ವಚನಗಳು

  • ಅಡವಿಯಲೊಬ್ಬ ಕಡು ನೀರಡಿಸಿ.
  • ಅಭ್ಯಾಸವೆನ್ನ ವರ್ತಿಸಿತ್ತಯ್ಯಾ.

ಚಿತ್ರಗಳು

__________________________________________
ಜಗಜ್ಯೋತಿ ಬಸವೇಶ್ವರ ಜಯಂತಿ-

ವೈಶಾಖ ಶುದ್ಧ ತದಿಗೆಯಂದು, ಲಿಂಗಾಯತ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಹಾಗೂ ಸರ್ವಧರ್ಮೀಯರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.

ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು. ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳಮಾಚಯ್ಯ ಮುಂತಾದ ಶಿವಶರಣರ ಕಾಲದಲ್ಲಿಯೇ ಜೀವಿಸಿದ್ದ ಜಗಜ್ಯೋತಿ ಬಸವಣ್ಣನವರ ಪ್ರಭಾವದ ಕಾರಣ ಆ ಕಾಲವನ್ನು ಬಸವಯುಗವೆಂದೇ ಕರೆಯುತ್ತಾರೆ.


_“ಕಾಯಕವೇ ಕೈಲಾಸ” (Work is Workship) ಪ್ರತಿಯೊಬ್ಬರೂ ತಮ್ಮ ತಮ್ಮ ಜೀವನೋಪಾಯಕ್ಕಾಗಿ ಒಂದು ವೃತ್ತಿಯನ್ನು ಮಾಡಲೇಬೇಕು. ಮಾಡುವ ಕೆಲಸದಲ್ಲಿಯೇ ದೇವರನ್ನು ಕಾಣಬೇಕು. ಕೆಲಸವೇ ಪೂಜೆ, ಕೆಲಸವೇ ದೇವರು. ಕೆಲಸದಲ್ಲಿಯೇ ಕೈಲಾಸವನ್ನು ಕಾಣಬೇಕೆಂದು ಹೇಳಿದವರು

🔯🔯 ಜಗಜ್ಯೋತಿ ಬಸವೇಶ್ವರರು._🔯🔯

_ವಿಶ್ವಗುರು ಬಸವಣ್ಣನವರು ಪರಮಾತ್ಮನ ಕರುಣೆಯ ಕಂದರಾಗಿ ಅವತರಿಸಿದರು._ _ಇಂಗಳೇಶ್ವರ ಬಾಗೇವಾಡಿಯಲ್ಲಿ ಶೈವ ಬ್ರಾಹ್ಮಣ ದಂಪತಿಗಳಾದ ಮಾದರಸ-ಮಾದಲಾಂಬಿಕೆಯ ಮಗನಾಗಿ ಆ.ನಂದನಾಮ_ ಸಂವತ್ಸರದಲ್ಲಿ _ವೈಶಾಖಮಾಸದ ಅಕ್ಷಯ ತೃತೀಯದಂದು  ಏಪ್ರಿಲ್ 30 1134 ರೋಹಿಣ  ನಕ್ಷತ್ರದಲ್ಲಿ ಜನಿಸಿದರು. ಯಾವುದೇ_ _ಅಂಧಶ್ರದ್ಧೆ ಜಡ ಸಂಪ್ರದಾಯಗಳನ್ನೊಪ್ಪದ  ಸತ್ಯಾನ್ವೇಷಕರಾಗಿ ಹೆತ್ತವರನ್ನು, ಬಂಧು-ಬಾಂಧವರನ್ನು ತೊರೆದು ವಿದ್ಯಾಕಾಂಕ್ಷಿಯಾಗಿ ಕೂಡಲ ಸಂಗಮದ ಗುರುಕುಲಕ್ಕೆ ಹೋದರು. ಶಾಸ್ತ್ರಾಧ್ಯಯನ, ಯೋಗಾಭ್ಯಾಸಗಳಲ್ಲಿ ಬಾಲ್ಯವನ್ನು ಕಳೆದು ತಾರುಣ್ಯಕ್ಕೆ ಕಾಲಿರಿಸಿದರು. ಜನರಲ್ಲಿ ಮನೆ ಮಾಡಿಕೊಂಡಿದ್ದ ಮೌಢ್ಯತೆ, ಕಂದಾಚಾರ,_ _ಜಾತೀಯತೆಗಳನ್ನು ಕಂಡು ಮನನೊಂದು ಪರಿಹಾರವನ್ನು ಅರಸತೊಡಗಿದರು. ಎಲ್ಲ ದೇವರನ್ನು ಮೀರಿದ ಸೃಷ್ಟಿಕರ್ತನೇ ಶ್ರೇಷ್ಠವೆಂದು ಘೋಷಿಸಿ ಆ ದೇವನನ್ನು ಲಿಂಗದೇವ ಎಂದು ಕರೆದರು. ನಿರಾಕಾರ ದೇವನಿಗೆ ಮನುಷ್ಯರ ಪ್ರಾಣ ಗಳ ಆಕಾರ ಕೊಡುವುದು ಸರಿಯಲ್ಲ ಎಂಬ ಭಾವ ತಳೆದು ದೇವನ ಸಾಕಾರ ಕೃತಿಯೇ ಬ್ರಹ್ಮಾಂಡ ಇದು ಗೋಲಾಕಾರದಲ್ಲಿದೆ. ಆದ್ದರಿಂದ ಲಿಂಗದೇವನನ್ನು ವಿಶ್ವಾದಾಕಾರದಲ್ಲಿ ಪೂಜಿಸುವುದು ಸರಿ ಎಂದು ಇಷ್ಟ ಲಿಂಗದ ಪರಿಕಲ್ಪನೆ ನೀಡಿದರೂ, ದೇವರ ಕುರುಹಾದ ಇಷ್ಟಲಿಂಗವು ಮಾನವನ ಜಾತಿ, ವರ್ಣ, ವರ್ಗ ಭೇದಗಳನ್ನು ಕಳೆದು ಶರಣನಾಗಬೇಕು._ _ನವ ಸಮಾಜ ನಿರ್ಮಾಣದ ರೂಪುರೇಷಗಳನ್ನು ತಮ್ಮ ಮನದಲ್ಲಿ ಹೊಂದಿ ಕಲ್ಯಾಣದ ಕಾರ್ಯಕ್ಷೇತ್ರವನ್ನು_ _ಪ್ರವೇಶಿಸಿದರು. ಸೋದರ ಮಾವನ ಮಗಳು ನೀಲಾಂಬಿಕೆಯನ್ನು ವಿವಾಹವಾಗಿ ಕರಣ ಕ ಕಾಯಕ ಕೈಗೊಂಡರು. ಅಲ್ಲಿಂದ ಮುಂದೆ ಭಂಡಾರಿಯಾಗಿ ಪ್ರಧಾನಿ (ದಂಡನಾಯಕ) ಯಾಗಿ ಕಾರ್ಯ ನಿರ್ವಹಿಸಿದರು._ _

ಬಸವ ಕಲ್ಯಾಣದಲ್ಲಿ ಬಸವಣ್ಣನವರು ಶರಣರ ಜೊತೆ ಸೇರಿ ಅನುಭವ ಮಂಟಪ_ _ಸ್ಥಾಪಿಸಿದರು. ಅನುಭವ ಮಂಟಪವು ವಿಶ್ವ ಮಾನವ ಸಂದೇಶ ಮತ್ತು ವಿಚಾರಗಳ ಬಗೆಗೆ ಮುಕ್ತವಾಗಿ ಚರ್ಚಿಸಬಹುದಾದ ವೇದಿಕೆಯಾಗಿದೆ_ .

  _ಅನುಭವ ಮಂಟಪದಿಂದ ಧರ್ಮ ಪ್ರಚಾರ ಮಾಡಿದರು. ಎಲ್ಲರ ಮನಗಳ ಬಾಗಿಲಿಗೂ ಧರ್ಮಗಂಗೆ ಹರಿಯುವಂತೆ ಮಾಡಿದರು. ಇಷ್ಟಲಿಂಗವೆಂಬ_ _ಗಣಲಾಂಛನವನ್ನು ಧರಿಸಿ ಲಿಂಗಾಯತರಾದ ಎಲ್ಲ ಶರಣ ಬಂಧುಗಳನ್ನು ಸಮಾನ ಭಾವದಿಂದ ಕಂಡರು._
_ಮಂಗಳವೇಡದ ರಾಜ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾದ ಬಸವಣ್ಣ ಹಲವಾರು ಜನಪರ ಮತ್ತು ಸಮಾಜ ಸುಧಾರಣೆ ಕ್ರಮಗಳನ್ನು ಕೈಗೊಂಡರು. ಕಾಯಕವೇ ಕೈಲಾಸವೆಂದು ಸಾರಿದರು. ಅಸ್ಪ್ರಶ್ಯತೆಯ ಹೆಸರಿನಲ್ಲಿ ಊರ ಹೊರಗೆ ಇರಿಸಲಾದ ದಲಿತರನ್ನು ಕರೆತಂದು ಸಮಾಜದ ಭಾಗವನ್ನಾಗಿ ಮಾಡಿದರು_ . _ದೇವಾಲಯ, ಕುಡಿಯುವ ನೀರಿನ ಬಾವಿ-ಕೆರೆಗಳನ್ನು ಬಳಸಲು ಇವರಿಗೂ ಸಮಾನ ಹಕ್ಕಿದೆಯಂದು ತೋರಿಸಿದರು._ _

ಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯ”_ _ಎಂದು ಬಸವಣ್ಣನವರು ಪುರೋಹಿತಶಾಹಿ ವ್ಯವಸ್ಥೆ ಮತ್ತು ಧರ್ಮದ ಹೆಸರಿನಲ್ಲಿ ಜನಸಾಮಾನ್ಯರ_ _ಶೋಷಣೆಯನ್ನು ಖಂಡಿಸಿದ್ದರು. ಬ್ರಾಹ್ಮಣ ಸಮಾಜದ ಶರಣರಾದ ಮಧುವರಸರ ಮಗಳನ್ನು ಸಮಗಾರ ಸಮಾಜದ ಶರಣರಾದ ಹರಳಯ್ಯನವರ ಮಗನಿಗೆ ಕೊಟ್ಟು ವಿವಾಹ ಮಾಡಲು ಪ್ರೇರಣೆ ನೀಡಿದರು._ _ಈ ವಿವಾಹದಿಂದ ಸಂಪ್ರದಾಯವಾದಿಗಳು ಸಿಡಿದೆದ್ದು ಬಿಜ್ಜಳ ಮಹಾರಾಜನನ್ನು ಬಸವಣ್ಣನವರ ವಿರುದ್ಧ ಪ್ರೇರೇಪಿಸಿ ಬಸವಣ್ಣನವರಿಗೆ ಗಡಿಪಾರು ಶಿಕ್ಷೆ ನೀಡುವಂತೆ ಮಾಡಿದರು. ಧರ್ಮಪಿತರು ಗಡಿಪಾರು ಶಿಕ್ಷೆ ಸ್ವೀಕರಿಸಿ ಕಲ್ಯಾಣದಿಂದ ಹೊರಟ ನಂತರ ಹರಳಯ್ಯ, ಮಧುವರಸ, ಶೀಲವಂತರ ಬಂಧನ ಮಾಡಿ ಅವರು ವರ್ಣಾಂತರ_ _ವಿವಾಹದಲ್ಲಿ ಭಾಗಿಯಾದುದಕ್ಕಾಗಿ ಕಣ್ಣು ಕೀಳಿಸುವ ಶಿಕ್ಷೆ._ _ಎಳೆ ಹೊಟ್ಟೆ ಶಿಕ್ಷೆಗೆ ಒಳಗಾಗಿ ಪ್ರಾಣ ಬಿಡಬೇಕಾಯಿತು. ಜಾತಿವಾದಿಗಳು ವಚನ ಸಾಹಿತ್ಯವನ್ನು ನಾಶ ಮಾಡಲು  ಸನ್ನದ್ಧರಾದಾಗ ವೀರಮಾತೆ ಅಕ್ಕನಾಗಲಾಂಬಿಕೆ, ಚೆನ್ನಬಸವಣ್ಣ, ವೀರ ಗಣಾಚಾರಿ, ಮಡಿವಾಳ, ಮಾಚಯ್ಯನವರು ವೀರಾಗ್ರಣ ಗಳಾಗಿ ಕಾದಾಡಿ ವಚನ ಸಾಹಿತ್ಯ ನಿಧಿಯನ್ನು ಉಳಿಸಿಕೊಟ್ಟರು._ _ಇದೇ ಸಮಯದಲ್ಲಿ ಚೆನ್ನಬಸವಣ್ಣನವರು ಉತ್ತರ ಕನ್ನಡ ಜಿಲ್ಲೆಯ ಉಳವಿಗೆ ಬಂದು ನೆಲೆಸಿದರು._  

ಲಿಂಗೈಕ್ಯ
_ಬಸವಣ್ಣನವರು 1196 ರಲ್ಲಿ ಕೂಡಲಸಂಗಮಕ್ಕೆ ಮರಳಿ ಬಂದರು. 7 ಜುಲೈ 1196 ನಳನಾಮ ಸಂವತ್ಸರದ_ _ಶ್ರಾವಣ ಶುದ್ಧ ಪಂಚಮಿಯಂದು ಉರಿಯುಂಡ ಕರ್ಪೂರದಂತೆ ಲಿಂಗೈಕ್ಯರಾದರು. ಅವರ ಸಮಾಧಿಯು ಅಲ್ಲಯೇ ಇದೆ._ _ಅವರ ಸಮಾಧಿಯನ್ನು ಕರ್ನಾಟಕ ಸರಕಾರದಿಂದ ಬಸವ ಸಾಗರ ಹಿನ್ನೀರಿನಲ್ಲಿ ಮುಳಗದಂತೆ ರಕ್ಷಿಸಿಲ್ಪಟ್ಟಿದೆ._ 

🔯🔯 _ *ಬಸವಣ್ಣನವರ ತತ್ವಗಳು*:-_ 🔯🔯

_ದೇವನೊಬ್ಬ ನಾಮ ಹಲವು  ನಮ್ಮನ್ನೆಲ್ಲ ಸೃಷ್ಟಿಸಿದ ದೇವರು ಒಬ್ಬನೇ, ಮಾನವನಿಗೆ ಯಾವುದೇ ರೀತಿ_ _ಜಾತಿಕುಲಗಳಿಲ್ಲ ಮಾನವ ಜಾತಿ ಒಂದೇ. 

ಸ್ವರ್ಗ-ನರಕಗಳು ಬೇರಿಲ್ಲ :- ಪಾಪ-ಪುಣ್ಯ ಫಲವಾಗಿ ಸ್ವರ್ಗ-ನರಕಗಳು ಬೇರಿಲ್ಲ, ಅಯ್ಯಾ ಎಂದೊಡಿ ಸ್ವರ್ಗ, ಎಲವೇ ಎಂದರೆ ನರಕ, ಆಚಾರವೇ ಸ್ವರ್ಗ,_ ಅನಾಚಾರವೇ ನರಕ, ಸತ್ಯ _ನುಡಿವುದೇ ದೇವಲೋಕ ಮಿಥ್ಯ ನುಡಿಯುವುದೇ ಮೃತ್ರ್ಯಲೋಕ ಎಂದು ತಿಳಿಸಿದರು. 

ದಯವೇ ಧರ್ಮದ.ಮೂಲ_ :- _⤵️⤵️⤵️

ಯಾವುದೇ ಧರ್ಮದ ಮೂಲ ದಯೆ ದಯವಿಲ್ಲದ ಧರ್ಮ ಅದಾವುದಯ್ಯ? ದಯವಿರಬೇಕು ಸಕಲ ಪ್ರಾಣ ಗಳೆಲ್ಲರಲ್ಲಿ ಎಂದು ತಿಳಿಸಿ ಹಿಂಸಾಚಾರವನ್ನು ತಡೆಗಟ್ಟಿದರು._
_ಕಾಯಕವೇ ಕೈಲಾಸ :-_ _ಪ್ರತಿಯೊಬ್ಬರೂ ತಮ್ಮ ತಮ್ಮ ಜೀವನೋಪಾಯಕ್ಕಾಗಿ ಒಂದು ವೃತ್ತಿಯನ್ನು ಮಾಡಲೇ ಬೇಕಾಗುವುದು. ಅದರಲ್ಲಿಯೇ ದೇವರನ್ನು ಕಾಣ ರೋ ಎಂದರು._ _

ಸಮತಾವಾದ :- ನಮ್ಮ ದೇಶದಲ್ಲಿ  12 ನೇ ಶತಮಾನದಲ್ಲಿ ಸಮತಾವಾದದ ಬೀಜ ಬಿತ್ತಿದ ಪ್ರಥಮ ವ್ಯಕ್ತಿ_ _ಎಂದರೆ ಶ್ರೀ ಬಸವಣ್ಣನವರು. ಜಾತಿ ಪದ್ಧತಿಗಳು ಕೇವಲ ಉದ್ಯೋಗದಿಂದ ಹುಟ್ಟಿ ಬಂದವುಗಳು, ಅವುಗಳನ್ನು ನಾವೇ ಮಾಡಿಕೊಂಡಿದ್ದೇವೆ. ಆದರೆ ಮಾನವ ಜಾತಿ ಒಂದೇ.

ರಮಜಾನ್ ಹಬ್ಬ

ರಂಜಾನ್


ರಂಜಾನ್ ಅಥವ ರಮದಾನ್ (ಅರೇಬಿಕ್‌ ಭಾಷೆಯಲ್ಲಿ: رمضان ) ಇಸ್ಲಾಮ್ ಕ್ಯಾಲೆಂಡರ್‌ನಲ್ಲಿ ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್‌ನ ಐದು ಕಂಬಗಳಲ್ಲಿ ನಾಲ್ಕನೆಯದು ಹಾಗೂ ರಮದಾನ್‌ನ ಸಮಯದಲ್ಲಿ ಉಪವಾಸ ನಡೆಯುತ್ತದೆ.

ಕ್ರೆಸೆಂಟ್ ವರ್ಣರಂಜಿತವಾಗಿ ಅಲಂಕರಿಸಲ್ಪಟ್ಟಿದೆ ಮತ್ತು ರಮದಾನ್ ಸಮಯದಲ್ಲಿ ಸುಂದರವಾಗಿ ಪ್ರಕಾಶಿಸಲ್ಪಟ್ಟಿದೆ.

ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ ರಮದಾನ್ ತಿಂಗಳ ಸಂಪೂರ್ಣ ವ್ರತಾಚರಣೆ ಯಾಗಿದೆ. ಮಾನವಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್(ಸ)ರವರ ಮೇಲೆ ಇದೇ ತಿಂಗಳಲ್ಲಿ ಪವಿತ್ರ ಕುರ್ಆನ್ ಅವತೀರ್ಣಗೊಂಡಿತು.ಇದರ ಗೌರವಾರ್ಹ ಪ್ರತಿವರ್ಷವೂ ಈ ಒಂದು ತಿಂಗಳ ವ್ರತಾಚರಣೆಯನ್ನು ಕಡ್ಡಾಯ ಗೊಳಿಸಲಾಯಿತು. ಪ್ರಭಾತಕಾಲ ದಿಂದ ಹಿಡಿದು ಸೂರ್ಯಾಸ್ತಮದವರೆಗೆ ಇತರ ಸಮಯಗಳಲ್ಲಿ ಧರ್ಮಸಮ್ಮತ ವಾದ ಅನ್ನ ಪಾನೀಯಗಳನ್ನು ಮತ್ತು ಕಾಮಾಸಕ್ತಿಯ ಚಟುವಟಿಕೆಗಳನ್ನು ತ್ಯಜಿಸುವುದನ್ನೇ ಇಸ್ಲಾಮಿನಲ್ಲಿ ಉಪವಾಸ ಅಥವಾ ವ್ರತಾಚರಣೆ ಎನ್ನಲಾಗಿದೆ. ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂಥ ಎಲ್ಲ ವಿಧ ಮಾನವೀಯ ದೌರ್ಬಲ್ಯಗಳಿಂದ ಮನುಷ್ಯನನ್ನು ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿ ಸುವುದೇ ಒಂದು ತಿಂಗಳ ಪೂರ್ಣ ವ್ರತಾಚರಣೆಯ ಉದ್ದೇಶವಾಗಿದೆ.

ಇಸ್ಲಾಂ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ಧಾರ್ಮಿಕವಾಗಿ ಈದ್-ಉಲ್-ಫಿತರ್ ಎಂತಲೂ ಕರೆಯುತ್ತಾರೆ.


ಒಂದು ತಿಂಗಳ ಕಠಿಣ ವೃತಾಚರಣೆಯ ಬಳಿಕ ಈದ್-ಉಲ್-ಫಿತರ್ ಬಂದಿದೆ. ರಂಜಾನ್ ತಿಂಗಳ ಹಗಲಿನಲ್ಲಿ ತೊಟ್ಟು ನೀರೂ ಕುಡಿಯದೆ, ಕಠಿಣ ವೃತದ ಮೂಲಕ ಹಸಿವಿನ ಕಠಿಣತೆಯನ್ನು ಅರಿತು, ವಿಶ್ವ ಮುಸ್ಲಿಮರೆಲ್ಲರು ಸಮಾನರೆನಿಸಿದರು. ಅಲ್ಲಿ ಬಡವ - ಶ್ರೀಮಂತರೆನ್ನುವ ಭೇಧವಿಲ್ಲದೆ ಎಲ್ಲರೂ ವೃತಾಚರಣೆಯಲ್ಲಿ ತೊಡಗಿದರು. ದೇವಲೀನರಾಗಿ ಅಲ್ಲಾಹನನ್ನು ಪ್ರಾರ್ತಿಸುತ್ತಾ ಎಲ್ಲ ರೀತಿಯ ತಪ್ಪುಗಳಿಂದ ದೂರವಿದ್ದ ಒಂದು ತಿಂಗಳು ಕಳೆದು ಈದ್-ಉಲ್-ಫಿತರ್ ಬಂದಿದೆ. ಇದು ದಾನದ ಹಬ್ಬ. ಒಂದು ತಿಂಗಳ ಹಸಿವೆಯ ಪಾಠದಿಂದ ಬಡತನ ಹಸಿವು ಏನೆಂಬುದು ಅರಿತ ಮುಸ್ಲಿಮನಿಗೆ ಈಗ ಬಡವನಿಗೆ -ಹಸಿದವನಿಗೆ ದಾನದ ಮೂಲಕ ಸಹಾಯಿಯಾಗುವುದು ಕರ್ತವ್ಯ. ಇಸ್ಲಾಂ ಎಂದೂ ಸಂಪತ್ತಿನ ಕೇಂದ್ರೀಕರಣ ವನ್ನು ವಿರೋಧಿಸುತ್ತದೆ. ಯಾವತ್ತೂ ಶೀಮಂತನನ್ನು ದಾನ ನೀಡುವುದಕ್ಕೆ ಪ್ರೇರೇಪಿಸುತ್ತದೆ. ಇಸ್ಲಾಮಿನ ಐದು ಪ್ರಧಾನ ಕರ್ಮಗಳಲ್ಲಿ ಒಂದಾದ 'ಝಕಾತ್' ಇದಕ್ಕೆ ಪುಷ್ಟಿ ನೀಡುತ್ತದೆ. ಅದಲ್ಲದೇ ಹಲವಾರು ಪುಣ್ಯ ಕಾರ್ಯಗಳ ಸಂದರ್ಭಗಳಲ್ಲೂ ದಾನ ನೀಡುವುದು ಕಡ್ಡಾಯಗೊಳಿಸುತ್ತದೆ. ಅಂತಹ ಒಂದು ಹಬ್ಬವಾಗಿದೆ ಈದ್-ಉಲ್-ಫಿತರ್ಇಸ್ಲಾಂ ಆಚರಿಸುವ ಎರಡೂ ಹಬ್ಬಗಳೂ ದಾನವನ್ನು ಪ್ರೋತ್ಸಾಹಿಸುತ್ತದೆ. ಅದರಲ್ಲೂ ಈಗ ಬಂದಿರುವ ಈದ್-ಉಲ್-ಫಿತರ್ ಸಂದರ್ಭೋಚಿತವಾಗಿ 'ದಾನ್ಯ' ದಾನ ಮಾಡುವುದನ್ನು ಹೇಳುತ್ತದೆ. ಇದು ಪ್ರತೀ ಮುಸ್ಲಿಮನ ಕಡ್ಡಾಯ ಕರ್ಮವಾಗಿದೆ. ಈದ್ ದಿನದಂದು ಯಾರೂ ಹಸಿದಿರಬಾರದು ಎಂಬುದು ಈ ದಾನದಿಂದ ಉಧ್ದೇಶಿಸಲಾಗಿದೆ. ಒಬ್ಬ ಮುಸ್ಲಿಮ ಆತನ ಈದ್ ದಿನದ ಹಗಲಿನ ಮತ್ತು ಆರಾತ್ರಿಯ ಖರ್ಚುಗೆ ಬೇಕಾದ ಸ್ವತ್ತು ಕಳೆದು ಬೇರೇನಾದರೂ ಉಳಿದಲ್ಲಿ, ಖಡ್ಡಾಯ ವಾಗಿ ದಾನ ನೀಡ ತಕ್ಕದ್ದು. ಅದು ಆ ಊರಿನ ಆಹಾರ ದಾನ್ಯ ವಾಗಿರಬೇಕು ಮತ್ತು ಅದಕ್ಕಾಗಿ ಒಂದು ಅಳತೆಯನ್ನು ನಿಗದಿಪಡಿಸಿದೆ(ಪ್ರತೀ ವ್ಯಕ್ತಿಯ ಮೇಲೂ ಸುಮಾರು 3 ಕೆಜಿ - ಇದು ಮಝಹಬ್ ಗಳಿಗೆ ಅನುಸರಿಸಿ ಬದಲಾಗಬಹುದು). ಯಾರೆಲ್ಲ ಈ ದಾನ ನೀಡಲು ಸಮರ್ಥರಲ್ಲವೋ ಅವರೆಲ್ಲ ದಾನಪಡಯಲು ಅರ್ಹರು. ಆದರೆ ಈ ದಾನದ ಲೆಕ್ಕಾಚಾರದಲ್ಲಿ ಒಬ್ಬಾತನ ಮನೆಯಲ್ಲಿರುವ ಪಾತ್ರೆ ಮೊದಲಾದ ವಸ್ತುಗಳೂ ಒಳಗೊಳ್ಳುತ್ತದೆ. ಅಂದರೆ ಪಾತ್ರೆಗಳನ್ನು ಮಾರಿಯಾದರೂ ದಾನ ನಿಡಬೇಕು!!!. ಮಾತ್ರವಲ್ಲ ಒಂದು ಮನೆಯಲ್ಲಿರುವ ಪ್ರತಿವ್ಯಕ್ತಿಯ ಮೇಲೂ ಈ ದಾನ ಖಡ್ಡಾಯ ವಾಗಿದೆ.

ಹಾಗಿದ್ದರೆ ಯೋಚಿಸಿ ನೋಡಿ ವಿಶ್ವದ ಎಲ್ಲ ಮುಸ್ಲಿಮ ಈ ದಾನವನ್ನು ನೀಡಿದರೆ ಕನಿಷ್ಟ ಒಂದು ವಾರವಾದರೂ ಹಸಿವಿಲ್ಲದ ವಾರ ವಾಗಿರಬಹುದು!!. "ಜಿಹಾದ್-ಜಿಹಾದ್" ಅನ್ನುವ ನಾಮಧಾರಿ ಮುಸ್ಲಿಮ "ಝಕಾತ್ - ಝಕಾತ್" (ದಾನ) ಅಂದರೆ ಇಂದು ಹಸಿವಿನಿಂದ ಸಾಯುವವರ ಸಂಖ್ಯೆ ಬಹಳ ಕಡಿಮೆ ಇರುತ್ತಿತ್ತು.

ಸಾಹೋದರ್ಯ ಭಾವ ತುಂಬಿಸುವ ಈದ್ ನ ಈ ದಿನ ಎಲ್ಲರೂ ದಾನ ಕರ್ಮಗಳಿಂದ ಸುಂದರವಾಗಿಸಲು, ಸೃಷ್ಟಿಕರ್ತ ನಮನ್ನು ಕರುಣಿಸಲೀ (ಆಮೀನ್) ಎಂದು ಪ್ರಾರ್ತಿಸುತ್ತೇನೆ. ಎಲ್ಲರಿಗೂ ಈದ್-ಉಲ್-ಫಿತರ್ (ದಾನ್ಯ ದಾನದ ಹಬ್ಬ) ನ ಶುಭಾಶಯಗಳು.

ಪ್ರಮುಖ ಅಂಶಗಳು

SSLC CORNER

Class-10 Study-Materials Final Exam Papers   Notes & Solutions   Model & Blue-Print   Pre Board Papers    Half Yearly ...

ಪ್ರಮುಖ ಕಲಿಕಾಂಶಗಳು