ಶಿಕ್ಷಣವೇ ಶಕ್ತಿ
Tuesday, 2 February 2021
STS ತಂತ್ರಾಂಶ
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
Monday, 1 February 2021
ಕರಾವಳಿ ಪ್ರದೇಶಗಳು
ಕರಾವಳಿ ಪ್ರದೇಶಗಳು
✍ಕರಾವಳಿ ಪ್ರದೇಶಗಳು
# ಕರಾವಳಿ ಪ್ರದೇಶ ಪಶ್ಚಿಮದಲ್ಲಿ ಗುಜರಾತ್ ನ "ಕಛ್"ನಿಂದ ಪೂರ್ವದಲ್ಲಿ ಗಂಗಾನದಿಯ ಮುಖಜ ಭೂಮಿಯವರೆಗೆ ಹಬ್ಬಿದೆ.
# ಭಾರತದ ಕರಾವಳಿಯ ಉದ್ದ6,100 ಕಿ.ಮೀ (ದ್ವೀಪಗಳನ್ನು ಹೊರತುಪಡಿಸಿ).
# ಭಾರತದ ಕರಾವಳಿಯನ್ನು 2 ಭಾಗಗಳಾಗಿ ವಿಂಗಡಿಸಲಾಗಿದೆ.
ಪೂರ್ವ ಕರಾವಳಿ
ಪಶ್ಚಿಮ ಕರಾವಳಿ
👉🏾ಪೂರ್ವ ಕರಾವಳಿ
# ಉತ್ತರದ ಗಂಗಾನದಿ ಮುಖಜ ಭೂಮಿಯಿಂದ ದಕ್ಷಿಣದ ಕನ್ಯಾಕುಮಾರಿ ಯವರೆಗೂ, ಬಂಗಾಳ ಕೊಲ್ಲಿ ಮತ್ತು ಪೂರ್ವ ಘಟ್ಟಗಳ ನಡುವೆ ಹರಡಿದೆ.
# ಪೂರ್ವ ಕರಾವಳಿ ಪ್ರದೇಶವು ಹೆಚ್ಚು ಅಗಲವಾಗಿ ಮತ್ತು ಒಂದೇ ರೀತಿ ಸಮತಟ್ಟಾಗಿದೆ.
# ಪೂರ್ವ ಕರಾವಳಿ ತೀರದಲ್ಲಿ ಸಮುದ್ರದ ಉಪ್ಪು ನೀರಿನಿಂದ ನಿರ್ಮಿತವಾದ ಕೆಲವು ಲಗೂನ್ (ಸರೋವರ)ಗಳಿವೆ. ಅಂತಹ ಲಗೂನ್ ಗಳಿಗೆ ಉದಾ: ತಮಿಳುನಾಡಿನ 'ಪುಲಿಕಾಟ್' ಮತ್ತು ಒರಿಸ್ಸಾದ 'ಚಿಲ್ಕಾ' ಸರೋವರಗಳು.
# ಚಿಲ್ಕಾ ಸರೋವರ ಭಾರತದ ಅತಿ ದೊಡ್ಡ ಸರೋವರವಾಗಿದೆ.
# ಆಂಧ್ರಪ್ರದೇಶದ ಬಳಿ ಇರುವ ಶ್ರೀ ಹರಿಕೋಟಾ ದ್ವೀಪದಲ್ಲಿ ಇಸ್ರೋ (ISRO)ದ ಕೃತಕ ಉಪಗ್ರಹ ಉಡಾವಣಾ ಕೇಂದ್ರವಿದೆ.
# ಪೂರ್ವ ಕರಾವಳಿಯ ಉತ್ತರ ಭಾಗವನ್ನು "ಉತ್ಕಲ ತೀರ" ಮತ್ತು ದಕ್ಷಿಣ ಭಾಗವನ್ನು "ಕೋರಮಂಡಲ ತೀರ" ವೆಂದು ಕರೆಯುತ್ತಾರೆ.
# ಪೂರ್ವ ಕರಾವಳಿಯಲ್ಲಿ ಕಾಣ ಬಹುದುದಾದ ಪ್ರಮುಖ ಬಂದರುಗಳು ಹೀಗಿವೆ : ಪಾರಾದೀಪ್, ಹಲ್ದಿಯಾ, ಕೋಲ್ಕತ್ತಾ, ವಿಶಾಖಪಟ್ಟಣ, ಚೆನ್ನೈ ಮತ್ತು ಟುಟಿಕಾರ್ನ್.
👉🏾ಪಶ್ಚಿಮ ಕರಾವಳಿ
# ಗುಜರಾತಿನ "ಕಛ್" ಪ್ರದೇಶದಿಂದ ಕನ್ಯಾಕುಮಾರಿ ಯವರೆಗೂ, ಅರಬ್ಬೀ ಸಮುದ್ರ ಮತ್ತು ಪಶ್ಚಿಮ ಘಟ್ಟಗಳ ಮಧ್ಯೆ ಹರಡಿದೆ.
# ಪಶ್ಚಿಮ ಕರಾವಳಿಯ ಉದ್ದ ಸುಮಾರು 1,500 ಕಿಲೋ ಮೀಟರ್ ನಷ್ಟಿದೆ.
# ಈ ಕರಾವಳಿ ಪ್ರದೇಶ ನೇರವಾಗಿ ರುವುದರಿಂದಲೂ, ವರ್ಷದ 6 ತಿಂಗಳು ಮಾನ್ಸೂನ್ ಮಾರುತಗಳಿಗೆ ಒಳಗಾಗುವುದರಿಂದ ಇಲ್ಲಿ ಸ್ವಾಭಾವಿಕ ಬಂದರುಗಳು ಕಡಿಮೆ ಪ್ರಮಾಣದಲ್ಲಿವೆ.
# ಪಶ್ಚಿಮ ಕರಾವಳಿಯನ್ನು ಮಲಬಾರ್ ತೀರ, ಕರ್ನಾಟಕ ಕರಾವಳಿ, ಕೊಂಕಣಿ ತೀರ, ಗುಜರಾತ್ ಕರಾವಳಿ, ಕಛ್ ಮತ್ತು ಕಾಟೇವಾಡ ಎಂಬ ಪರ್ಯಾಯ ದ್ವೀಪಗಳೆಂದು ವಿಭಾಗಿಸಲಾಗಿದೆ.
# ಅತಿ ಹೆಚ್ಚು ಕರಾವಳಿ ಪ್ರದೇಶ ಹೊಂದಿರುವ ರಾಜ್ಯ "ಗುಜರಾತ್".# ಅತಿ ಕಡಿಮೆ ಕರಾವಳಿ ಪ್ರದೇಶ ಹೊಂದಿರುವ ರಾಜ್ಯ "ಗೋವಾ".
# ಪಶ್ಚಿಮ ಕರಾವಳಿಯ ಪ್ರಮುಖ ಬಂದರುಗಳು, ಮರ್ಮ ಗೋವಾ, ಕೊಚ್ಚಿ, ಕಾರವಾರ, ಮುಂಬಯಿ, ನವಶೇವ, ಮಂಗಳೂರು ಕಾಂಡ್ಲ .
✍ಕರಾವಳಿ ಪ್ರದೇಶದ ಉದ್ದ
👉🏾ರಾಜ್ಯಗಳು
👉🏾ಉದ್ದ
1. ಗುಜರಾತ್ ಕರಾವಳಿ ಉದ್ದ 1600 ಕಿ.ಮೀ
2. ಆಂಧ್ರಪ್ರದೇಶದ ಕರಾವಳಿ ಉದ್ದ 1000 ಕಿ.ಮೀ
3. ತಮಿಳುನಾಡು 910 ಕಿ.ಮೀ
4. ಮಹಾರಾಷ್ಟ್ರ 720 ಕಿ.ಮೀ
5. ಕೇರಳ 580 ಕಿ.ಮೀ
6. ಒರಿಸ್ಸಾ 480 ಕಿ.ಮೀ
7. ಪಶ್ಚಿಮ ಬಂಗಾಳ 350 ಕಿ.ಮೀ
8. ಕರ್ನಾಟಕ 320 ಕಿ.ಮೀ
9. ಗೋವಾ
👉🏾ಪೂರ್ವ ಕರಾವಳಿ ರಾಜ್ಯಗಳು :-
1.ಪಶ್ಚಿಮ ಬಂಗಾಳ
2.ಒರಿಸ್ಸಾ
3.ಆಂಧ್ರಪ್ರದೇಶ
4.ತಮಿಳುನಾಡು
👉🏾ಪಶ್ಚಿಮ ಕರಾವಳಿ ರಾಜ್ಯಗಳು :-
1.ಗುಜರಾತ್
2.ಮಹಾರಾಷ್ಟ್ರ
3.ಗೋವಾ
4.ಕರ್ನಾಟಕ
5.ಕೇರಳ
👉🏾ದ್ವೀಪಗಳು
# ಭಾರತಕ್ಕೆ ಸೇರಿದ 247ದ್ವೀಪಗಳಿವೆ.
# 247 ದ್ವೀಪಗಳಲ್ಲಿ 204 ದ್ವೀಪಗಳು ಬಂಗಾಳ ಕೊಲ್ಲಿಯಲ್ಲಿ ಮತ್ತು 43 ದ್ವೀಪಗಳು ಅರಬ್ಬಿ ಸಮುದ್ರದಲ್ಲಿವೆ.
# ಅಂಡಮಾನ್ & ನಿಕೋಬಾರ್ ದ್ವೀಪಗಳು ಗಟ್ಟಿಯಾದ ಜ್ವಾಲಾಮುಖಿ ನಿರ್ಮಿತ ಶಿಲೆಗಳಿಂದ ಕೂಡಿವೆ.
# ಲಕ್ಷದ್ವೀಪಗಳು ಹವಳಗಳಿಂದ ನಿರ್ಮಿತವಾಗಿವೆ.
_________________________________________
T.A.ಚಂದ್ರಶೇಖರ
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
Sunday, 31 January 2021
ಭಾರತದ ಪ್ರಮುಖ ನದಿಗಳು
ಉತ್ತರ ಹಾಗೂ ದಕ್ಷಿಣ ಭಾರತದ ಪ್ರಮುಖ ನದಿಗಳು
ಉತ್ತರ ಭಾರತದ ಪ್ರಮುಖ ನದಿಗಳು
ಸಿಂಧು
ಬ್ರಹ್ಮಪುತ್ರ
ಗಂಗಾ
ಯಮುನಾ
ಇದರಲ್ಲಿ ಸಿಂಧು ನದಿ ಪಶ್ಚಿಮಕ್ಕೆ ಹರೆಯುವುದು, ಉಳಿದವು ಪೂರ್ವಕ್ಕೆ ಹರೆಯುವ ನದಿಗಳಾಗಿವೆ
*ಸಿಂಧು ನದಿ ಕೈಲಾಸ ಪರ್ವತದಲ್ಲಿ ಹುಟ್ಟಿ ಅರಬ್ಬಿ ಸಮುದ್ರ ಸೇರುವುದು*
ಸಿಂಧು ನದಿಯನ್ನು ನದಿಗಳ ತಂದೆ ಎಂದು ಕರೆಯುತ್ತಾರೆ
ಸಿಂಧು ನದಿಯ ಉಪನದಿಗಳು
*ಜೀಲಂ*
*ಚೀನಾಬ್*
*ಸಟ್ಲೇಜ್*
*ರಾವಿ*
*ಬಿಯಾಸ್* :~ ಇವು 5 ನದಿಗಳು ಪಂಜಾಬ್ ನಲ್ಲಿ ಹರೆಯುವುದರಿಂದ! *ಪಂಜಾಬ್ ನ್ನು ಪಂಚನದಿಗ ರಾಜ್ಯ!* ಎಂದು ಕರೆಯುತ್ತಾರೆ
(ಬಿಜಾಪುರ ನ್ನು ಪಂಚನದಿಗಳ ಜಿಲ್ಲೆ ಎನ್ನುವರು)
ಭಾರತದ ರಾಷ್ಟ್ರೀಯ ನದಿ ಎಂದು ಗಂಗಾ ನದಿಯನ್ನು ಕರೆಯುತ್ತಾರೆ.
*ಗಂಗಾನದಿಯ ಡಾಲ್ಫನನ್ನು ರಾಷ್ಟ್ರೀಯ ಜಲಜರ ಪ್ರಾಣಿ ಎಂದು ಘೋಷಿಸಿದೆ*
ಗಂಗಾನದಿಯ ಉಗಮ ಸ್ಥಳ :~ *ಗಂಗೋತ್ರಿ*
ಗಂಗಾನದಿಯ ದಡದಲ್ಲಿ ಇರತ್ಕಂತ ಪ್ರಮುಖ ನಗರಗಳು :~
ವಾರಣಸಿ
ಗಾಜಿಪುರ
ಕನ್ಪುರ್
ಪಾಟ್ನಾ
ಹರಿದ್ವಾರ
ಋಷಿಕೇಶ ಇತ್ಯಾದಿ
*ಯಮುನಾ ನದಿಯ ಉಗಮ ಸ್ಥಳ*
ಯನನೋತ್ರಿ
ಯಮುನಾ ನದಿ ದಡದಲ್ಲಿ ಕಂಡು ಬರುವ ಪ್ರಮುಖ ನಗರಗಳು
ದೆಹಲಿ
ಆಗ್ರಾ
ಮಥುರಾ ಇತ್ಯಾದಿ
ಬ್ರಹ್ಮ ಪುತ್ರ ನದಿ
ಬ್ರಹ್ಮ ಪುತ್ರ ನದಿಯ ಉಗಮಸ್ಥಾನ:~ *ಚಿಮಯುಂಗಡಂಗ್*
ತಿಸ್ತಾ ನದಿ ಬ್ರಹ್ಮಪುತ್ರ ನದಿಯ ಉಪನದಿಯಾಗಿದ್ದು ಇದನ್ನು *ಸಿಕ್ಕಂನ ಜೀವನದಿ ಎನ್ನುವರು*
ದಕ್ಷಿಣ ಭಾರತದ ಪ್ರಮುಖ ನದಿಗಳು
ನರ್ಮದಾ
ತಪತಿ
ಸಾಬರಮತಿ
ಕಾಳಿ
ಮಹಾದಾಯಿ
ಲೂನಿ
ಶರಾವತಿ
ನೇತ್ರಾವತಿ
ವಿ.ಸೂಚನೆ:~*ಈ ಮೇಲಿನ ನದಿಗಳು ಪಶ್ಚಿಮಕ್ಕೆ ಹರೆದು ಅರಬ್ಬಿ ಸಮುದ್ರ ಸೇರುತ್ತವೆ*
ದಾಮೋದರ
ಮಹಾನದಿ
ಗೋದಾವರಿ
ಕೃಷ್ಣಾ
ಕಾವೇರಿ
*ಇವು ಪೂರ್ವಕ್ಕೆ ಹರೆದು ಬಂಗಾಳ ಕೊಲ್ಲಿ ಸೇರುತ್ತೇವೆ*
ಲುನಿ ನದಿಯ ಉಗಮಸ್ಥಾನ ;~ *ಅನಾಸಾಗರ*
ನರ್ಮದಾ ನದಿಯ ಉಗಮಸ್ಥಾನ :~ *ಅಮರಕಂಟಕ*
ಮಹಾದಾಯಿ ನದಿ ಗೋವಾದ ಜೀವನದಿ ಎನ್ನುವರು. *ಇದರ ಉಗಮಸ್ಥಾನ ಬೆಳಗಾವಿ ಜಿಲ್ಲೆ ಭೀಮಗಡ*
*ತಪತಿ ನದಿಯನ್ನು ಸೂರ್ಯನ ಮಗಳು ಎಂದು ಕರೆಯುತ್ತಾರೆ*,
ಶರಾವತಿ ನದಿಯ ಉಗಮಸ್ಥಾನ :~ ತೀರ್ಥಹಳ್ಲಿ ತಾಲ್ಲೂಕು *ಅಂಬುತಿರ್ಥ*
* ನೇತ್ರಾವತಿ ಉಗಮಸ್ಥಾನ :~ ಚಿಕ್ಕಮಗಳೂರು ಜಿಲ್ಲೆ ರಾಮನದುರ್ಗ*
*ಪೆರಿಯಾರ ನದಿಯನ್ನು ಕೇರಳದ ಜೀವನದಿ ಎನ್ನುವರು*
ದಾಮೋದರ ನದಿಯನ್ನು *"ಪಶ್ಚಿಮ ಬಂಗಾಳದ"* ಕಣ್ಣೀರು ನದಿ ಎಂದು ಕರೆಯುತ್ತಾರೆ.
*ಒಡಿಸ್ಸದ ಕಣ್ಣೀರು ನದಿ ಎಂದು ಮಹಾನದಿಯನ್ನು ಕರೆಯುತ್ತಾರೆ*
ಮಹಾನದಿ ಒಡಿಸ್ಸಾದ ಜೀವನದಿ ಎಂದು ಸಹ ಕರೆಯುತ್ತಾರೆ.
ದಕ್ಷಿಣ ಭಾರತದಲ್ಲಿ ಅತಿ ದೊಡ್ಡ ನದಿ- ಗೋದಾವರಿ.*
ಇದು ಮಹಾರಾಷ್ಟ್ರದ ನಾಸಿಕ ಜಿಲ್ಲೆಯಲ್ಲಿ ಉಗಮಿಸುತ್ತದೆ.
ಕೃಷ್ಣಾ ನದಿಯ ಉಗಮಸ್ಥಾನ :` *ಮಹಬಲೇಶ್ವರ*
ಕಾವೇರಿ ನದಿಯನ್ನು ದಕ್ಷಿಣದ ಗಂಗೆ ಎನ್ನುವರು.
__________________________________________
ಸಂಗ್ರಹ ✍️T.A.ಚಂದ್ರಶೇಖರ
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ವಾಯುಗೋಳ
ವಾಯುಗೋಳ
ADD ARTICLE DESCRIPTION
ಭೂಮಿಯ ಮೇಲಿನ ಎಲ್ಲಾ ಜೀವಿಗಳೂ ಬದುಕಲು ಗಾಳಿ ಬೇಕೆಂಬುದು ನಮಗೆ ತಿಳಿದಿದೆ. ನಮಗೆ ಗಾಳಿಯು ಎಲ್ಲಿಂದ ದೊರೆಯುತ್ತದೆ? ಇದು ಭೂಮಿಯ ವಾತಾವರಣದಿಂದ ದೊರೆಯುತ್ತದೆ. ಭೂಮಿಯನ್ನು ಆವರಿಸಿಕೊಂಡಿರುವ ವಾಯುವಿನ ಪದರಕ್ಕೆ ವಾಯುಗೋಳ ಎನ್ನುವರು. ವಾಯುಗೋಳವು ಹೇಗೆ ಉಂಟಾಯಿತೆಂದು ನಿಮಗೆ ಗೊತ್ತಿದೆಯೆ? ಮೊದಲು ಭೂಮಿಯು ರೂಪುಗೊಂಡಾಗ ವಾಯುಗೋಳವಿರಲಿಲ್ಲ. ಭೂಮಿಯ ಒಳಗೆ ಬಂಧಿತವಾಗಿದ್ದ ಅನಿಲಗಳನ್ನು ಮತ್ತು ಹಬೆಯನ್ನು ಜ್ವಾಲಾಮುಖಿಗಳು ಸ್ಪೂಟಗೊಂಡು ಹೊರಚಿಮ್ಮಿಸಿದವು.ಈ ಅನಿಲಗಳು ಭೂಮಿಯ ಸುತ್ತ ಲಕ್ಷಾಂತರ ವರುಷಗಳಿಂದ ಸಂಗ್ರಹಗೊಂಡು, ವಾಯುಗೋಳ ರೂಪುಗೊಂಡಿತು.
ವಾಯುಗೋಳದ ಪದರಗಳು:
೧.ಹವಾಗೋಳ: ಭೂಮಿಯ ವಾಯುಗೋಳದ ಅತ್ಯಂತ ಕೆಳಗಿನ ಪದರವನ್ನು ಹವಾಗೋಳ ಎನ್ನುವರು. ನೀರಾವಿ, ನೈಟ್ರೂಜನ್, ಅಕ್ಸಿಜನ್, ಈ ಪ್ರದೇಶದಲ್ಲಿ ಹೇರಳವಾಗಿ ಕಂಡು ಬರುತ್ತವೆ. ಹವಾಗೋಳದ ಮೇಲ್ಭಾಗದ ಗಡಿಗೆ ಹವಾಸೀಮೆ ಎನ್ನುವರು.
೨.ಸ್ತರಗೋಳ:ಹವಾಸೀಮೆಯ ಮೇಲ್ಭಾಗದ ಪದರವನ್ನು ಸ್ತರಗೋಳ ಎನ್ನುವರು. ಸ್ತರಗೋಳದ ಮೇಲ್ಬಾಗದಲ್ಲಿ ಅಪಾಯಕಾರಿ ನೇರಳಾತೀತ ವಿಕಿರಣಗಳ ವಿರುದ್ಧ ರಕ್ಷಾಕವಚದಂತೆ ವರ್ತಿಸುವ ಓಝೂನ್ ಪದರವಿದೆ.
೩.ಮಧ್ಯಗೋಳ: ಸ್ತರಗೋಳದಿಂದ ಸುಮಾರು ೩೦ಕಿ.ಮೀ. ಎತ್ತರದಲ್ಲಿರುವ ಪ್ರದೇಶವನ್ನು ಮಧ್ಯಗೋಳ ಎನ್ನುವರು. ಇದು ವಾಯುಮಂಡಲದ ಅತ್ಯಂತ ತಂಪು ಪ್ರದೇಶವಾಗಿದೆ. ಇಲ್ಲಿರುವ ಗಾಳಿಯ ಪ್ರಮಾಣ ತುಂಬಾ ಕಡಿಮೆಯಿರುತ್ತದೆ.
೪.ಅಯಾನುಗೋಳ: ಮಧ್ಯಗೋಳದ ನಂತರ ಇರುವ ಪದರವನ್ನು ಅಯಾನುಗೋಳ ಎನ್ನುವರು. ಇದು ಅಯಾನು ಅಥವಾ ಆವೇಶಭರಿತ ಕಣಗಳಿಂದ ಆಗಿದೆ. ಆದ್ದರಿಂದ ರೇಡಿಯೂ ಪ್ರಸರಣಕ್ಕೆ ಈ ವಲಯ ಸಹಕರಿಸುತ್ತದೆ.
೫.ಬಹಿಗೋಳ:ಭೂಮಿಯ ವಾಯುಮಂಡಲದ ಅತ್ಯಂತ ಹೊರ ಪದರವನ್ನು ಬಹುಗೋಳ ಎನ್ನುವರು. ಇದು ಹಗುರವಾದ ಅನಿಲಗಳಾದ ಹೈಡ್ರೂಜನ್ ಮತ್ತು ಹೀಲಿಯಮ್ ನಿಂದ ಕೂಡಿದೆ.ಈ ಪ್ರದೇಶದಲ್ಲಿ ಕೆಲವು ಕೃತಕ ಉಪಗ್ರಹಗಳೂ ಸುತ್ತುತ್ತಿವೆ.
__________________________________________
ವಾತಾವರಣದ (ವಾಯುಗೋಳ)ದ ಸಂಯೋಜನೆ ಮತ್ತು ಅದರ ಪ್ರಮುಖ 5 ಪದರುಗಳು
ವಾತಾವರಣದ (ವಾಯುಗೋಳ)ದ ಸಂಯೋಜನೆ ಮತ್ತು ಅದರ ಪ್ರಮುಖ 5 ಪದರುಗಳು
(The five layers of Atmosphere and its main features)
ಪರಿಸರ ವ್ಯವಸ್ಥೆ,
(Ecology, Environmental Studies)
ಭೂಗೋಳಶಾಸ್ತ್ರ
(Geography)
• ವಾಯುಗೋಳವು ವಿವಿಧ ಬಗೆಯ ಅನಿಲಗಳು, ಧೂಳಿನ ಕಣಗಳು ಮತ್ತು ನೀರಾವಿಯ ಮಿಶ್ರಣವಾಗಿದೆ.
• ವಾಯುಗೋಳದ ಮುಖ್ಯ ಅನಿಲಗಳೆಂದರೆ
- ಸಾರಜನಕ ಶೇ.78.08,
- ಆಮ್ಲಜನಕ ಶೇ.20.94,
- ಆರ್ಗಾನ್ ಶೇ.0.93,
- ಇಂಗಾಲದ ಡೈಆಕ್ಸೈಡ್ ಶೇ.03, ಮತ್ತು ಓಜೋನ್ ಶೇ. 0.000005.
• ವಾಯುಗೋಳವು ಧೂಳಿನ ಕಣಗಳನ್ನು ಸಹ ಒಳಗೊಂಡಿದ್ದು, ನೀರಿನ ಕಣಗಳ ನಿರ್ಮಾಣಕ್ಕೆ ಸಹಾಯಕವಾಗಿದೆ.
ವಾಯುಗೋಳದಲ್ಲಿರುವ ನೀರಾವಿಯು ಮೋಡದ ನಿರ್ಮಾಣ ಹಾಗೂ ವೃಷ್ಟಿಗೆ ಕಾರಣವಾಗುವುದಲ್ಲದೆ, ವಾಯುಗೋಳದ ಶಾಖ ಮತ್ತು ಶಕ್ತಿಯನ್ನು ಹಿಡಿದಿರಿಸಿಕೊಂಡು ಅದು ಒಂದು ಸ್ಥಳದ ಹವಾಮಾನದ ಪರಿಸ್ಥಿತಿಯ ಮೇಲೆ ಪ್ರಭಾವವನ್ನು ಬೀರುವುದು.
•► ವಾಯುಗೋಳದ ರಚನೆ :
ವಾಯುಗೋಳವನ್ನು ಅದರ ಹಲವಾರು ಲಕ್ಷಣಗಳನ್ನು ಆಧರಿಸಿ ಐದು ಪದರುಗಳಾಗಿ ವಿಂಗಡಿಸಲಾಗಿದೆ.
ಅವುಗಳೆಂದರೆ ;
- ಪರಿವರ್ತನಾಮಂಡಲ,
- ಸಮೋಷ್ಣಮಂಡಲ,
- ಮಧ್ಯಂತರಮಂಡಲ,
- ಉಷ್ಣತಾಮಂಡಲ ಮತ್ತು ಬಾಹ್ಯಮಂಡಲ.
•► ಪರಿವರ್ತನಾಮಂಡಲ (Troposphere ) :
- ಇದು ವಾಯುಗೋಳದ ಅತ್ಯಂತ ಕೆಳಪದರ.
- ಇದು ಸಮಭಾಜಕವೃತ್ತದ ಬಳಿ 18 ಕಿ.ಮೀ. ಎತ್ತರದವರೆಗೆ ಹಾಗೂ ಧ್ರುವಪ್ರದೇಶದ ಬಳಿ 8ಕಿ.ಮೀ. ಎತ್ತರದ ವರೆಗೆ ಕಂಡುಬರುವುದು.
- ಈ ವಲಯದಲ್ಲಿಯೇ ಹವಾಮಾನದ ಮೂಲಾಂಶಗಳಾದ ಉಷ್ಣಾಂಶ, ಒತ್ತಡ, ಮಾರುತಗಳು, ಮೋಡ, ಮಳೆ ಮೊದಲಾದ ಎಲ್ಲಾ ಅಂಶಗಳು ಕಂಡುಬರುತ್ತವೆ.
- ಹವಾಮಾನದ ಎಲ್ಲಾ ಬದಲಾವಣೆ ಕಂಡುಬರುವುದು ಈ ವಲಯದಲ್ಲಿ ಮಾತ್ರ.
- ಈ ವಲಯದಲ್ಲಿ ಎತ್ತರಕ್ಕೆ ಹೋದಂತೆ ಉಷ್ಣಾಂಶ ಮತ್ತು ಒತ್ತಡದ ಪ್ರಮಾಣ ಕಡಿಮೆಯಾಗುತ್ತವೆ.
•► ಸಮೋಷ್ಣಮಂಡಲ (Stratosphere) :
- ಇದು ವಾಯುಮಂಡಲದ ಎರಡನೆಯ ಪದರವಾಗಿದ್ದು 50 ಕಿ.ಮೀ.ವರೆಗೆ ಹಬ್ಬಿದೆ.
- ಪರಿವರ್ತನಾ ಮಂಡಲ ಮತ್ತು ಮಧ್ಯಂತರ ಮಂಡಲಗಳ ನಡುವೆ ವಿಸ್ತರಿಸಿದೆ.
- ಈ ಪದರದಲ್ಲಿ ಓಜೋನ್ ಅನಿಲವು ಅತ್ಯಂತ ಮುಖ್ಯವಾದುದು.
- ಇದು ಸೂರ್ಯನಿಂದ ಬರುವ ಅತಿನೇರಳೆ (ಅಲ್ಟ್ರಾವೈಲೆಟ್) ಕಿರಣಗಳನ್ನು ಹೀರಿಕೊಂಡು ಭೂಮಿಯ ಮೇಲಿನ ಎಲ್ಲಾ ಜೀವರಾಶಿಗಳನ್ನು ರಕ್ಷಿಸಿದೆ.
- ಈ ಪದರವು ಮೋಡ ಹಾಗೂ ಇತರೆ ಎಲ್ಲಾ ಬಗೆಯ ಹವಾಮಾನದ ಅಂಶಗಳಿಂದ ಮುಕ್ತವಾಗಿರುವುದು.
- ಇದರಿಂದ ಈ ಪದರದಲ್ಲಿ ಜೆಟ್ ವಿಮಾನಗಳು ಹಾರಾಡಲು ಸೂಕ್ತವಾಗಿದೆ.
•► ಮಧ್ಯಂತರ ಮಂಡಲ (Mesosphere ) :
- ಇದು ಸಮೋಷ್ಣಮಂಡಲದ ಮೇಲಿದ್ದು ಸುಮಾರು 80 ಕಿ.ಮೀ. ಎತ್ತರದವರೆಗೆ ವಿಸ್ತರಿಸಿದೆ.
- ಈ ವಲಯದಲ್ಲಿಯೂ ಎತ್ತರಕ್ಕೆ ಹೋದಂತೆ ಉಷ್ಣಾಂಶವು ಕಡಿಮೆಯಾಗುವುದು.
- ಈ ಪದರು ವಾಯುಮಂಡಲದ ಅತಿ ಶೀತವಾದ ವಲಯವಾಗಿದೆ.
•► ಉಷ್ಣತಾಮಂಡಲ (Thermosphere) :
- ಮಧ್ಯಂತರ ಮಂಡಲದ ನಂತರ ಉಷ್ಣತಾಮಂಡಲ ಕಂಡುಬರುತ್ತದೆ.
- ಈ ಪದರದಲ್ಲಿ ಉಷ್ಣಾಂಶವು ತೀವ್ರವಾಗಿ ಹೆಚ್ಚಾಗುತ್ತದೆ.
- ಈ ಪದರದಲ್ಲಿನ ಅತ್ಯಧಿಕ ಉಷ್ಣಾಂಶದ ಪರಿಣಾಮವಾಗಿ ಅನಿಲದ ಅಣುಗಳು ಆಯಾನುಗಳಾಗಿ ಪರಿವರ್ತನೆ ಹೊಂದಿರುತ್ತವೆ. ಆದುದರಿಂದ ಇದನ್ನು ‘ಆಯಾನುಮಂಡಲ’ವೆಂತಲೂ ಕರೆಯುವರು.
- ಇಲ್ಲಿನ ಆಯಾನುಗಳು ಭೂಮಿಯಿಂದ ಪ್ರಸಾರಗೊಂಡ ರೇಡಿಯೋ ತರಂಗಗಳನ್ನು ಪುನಃ ಭೂಮಿಯ ಕಡೆಗೆ ಪ್ರತಿಫಲಿಸುತ್ತವೆ.
•► ಬಾಹ್ಯಮಂಡಲ (Exosphere) :
- ಬಾಹ್ಯಮಂಡಲವು ವಾಯುಗೋಳದ ಅತ್ಯಂತ ಎತ್ತರದಲ್ಲಿದ್ದು ಪದರವಾಗಿದೆ.
- ಈ ಪದರಲ್ಲಿ ವಾಯುಗೋಳದ ಘಟಕಾಂಶಗಳು ವಿರಳವಾಗಿರುತ್ತದೆ ಮತ್ತು ಒತ್ತಡ ಅತ್ಯಂತ ಕಡಿಮೆ ಇರುತ್ತದೆ.
__________________________________________
ಸಂಗ್ರಹ ✍️T.A. ಚಂದ್ರಶೇಖರ
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
Saturday, 30 January 2021
ಜಲಪಾತಗಳು
ಜಲಪಾತ
ADD ARTICLE DESCRIPTION
ಜಲಪಾತಗಳು ಹರಿಯುತ್ತಿರುವ ನೀರು ಎತ್ತರದಿಂದ ದುಮುಕುವ ಒಂದು ಭೌಗೋಳಿಕ ಲಕ್ಷಣ. ಸಾಮಾನ್ಯವಾಗಿ ಬೆಟ್ಟಪ್ರದೇಶಗಳಲ್ಲಿ ಏರು ತಗ್ಗುಗಳಲ್ಲಿ ಹರಿಯುವ ನದಿಗಳು ಸೃಷ್ಟಿಸುತ್ತವೆ.ಜಲಪಾತಗಳು ಸಾಮಾನ್ಯವಾಗಿ ನದಿಯ ಮೇಲಿನ ಪಥವುಗಳಿಂದ ರಚನೆಯಾಗುತ್ತವೆ.ನೀರಿನ ರಭಸ, ಹಾಲ್ನೊರೆಯಂತಹ ಬಣ್ಣ, ಗಂಭೀರವಾದ ಸದ್ದು, ಹತ್ತಿರದ ಸ್ಥಳಗಳಲ್ಲಿ ತಂಪಾದ ನೀರಿನ ಚಿಕ್ಕ ಚಿಕ್ಕ ಹನಿಗಳ ಸಿಂಚನ, ಇವೆಲ್ಲವೂ ಜನರನ್ನು ಆಕರ್ಷಿಸುತ್ತವೆ. ಕರ್ನಾಟಕದ ಹಲವು ಜಲಪಾತಗಳು ೮ಅಬ್ಬೆ ಜಲಪಾತ
- ಇರುಪ್ಪು ಜಲಪಾತ
- ಸುತನಬ್ಬಿ / ಹನುಮನ ಗುಂಡಿ ಜಲಪಾತ
- ಹಿಡ್ಲುಮನೆ / ಹಿತ್ಲುಮನೆ ಜಲಪಾತ
- ಗಗನಚುಕ್ಕಿ ಜಲಪಾತ (ಶಿವನ ಸಮುದ್ರ">ಶಿವನ ಸಮುದ್ರ)
- ಭರಚುಕ್ಕಿ ಜಲಪಾತ (ಶಿವನ ಸಮುದ್ರ">ಶಿವನ ಸಮುದ್ರ
- ಹೆಬ್ಬೆ ಜಲಪಾತ
- ಅಬ್ಬೆ ಜಲಪಾತ
- ಮಾಗೋಡು ಜಲಪಾತ
- ಸಿರಿಮನೆ ಜಲಪಾತ
ಶಿವನ ಸಮುದ್ರ ಜಲಪಾತ
ಮಂಢ್ಯ
ಶಿವನ ಸಮುದ್ರ ಭಾರತದ ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆಯಲ್ಲಿರುವ ಒಂದು ಸಣ್ಣ ನಗರ. ಕಾವೇರಿ ನದಿಯ ದಂಡೆಯಲ್ಲಿ ಇರುವ ಈ ಊರಿನ ಬಳಿ ನದಿಯು ಎರಡು ಕವಲುಗಳಾಗಿ ಗಗನಚುಕ್ಕಿ ಮತ್ತು ಭರಚುಕ್ಕಿ ಎಂಬ ಜಲಪಾತಗಳನ್ನು ಸೃಷ್ಟಿಸುತ್ತದೆ. ಇಲ್ಲಿ ೧೯೦೨ರಲ್ಲಿ ಜಲವಿದ್ಯುತ್ ಉತ್ಪಾದನಾ ಕೇಂದ್ರ ಒಂದನ್ನು ಸ್ಥಾಪಿಸಲಾಯಿತು. ಇಡೀ ಏಷ್ಯಾ ಖಂಡದಲ್ಲಿಯೇ ಸ್ಥಾಪನೆಯಾದ ಮೊಟ್ಟ ಮೊದಲ ಜಲವಿದ್ಯುತ್ ಉತ್ಪಾದನಾ ಕೇಂದ್ರ ಇದು.ಇಷ್ಟೇ ಅಲ್ಲದೆ,ಈ ಜಲವಿದ್ಯುತ್ ಉತ್ಪಾದನಾ ಕೇಂದ್ರದಿಂದ ಮೊದಲ ಬಾರಿಗೆ ಕೋಲರಕ್ಕೆ ವಿದ್ಯುತ್ತನ್ನು ಕಳೆಸಲಾಗಿತ್ತು.



ಈ ಶಿಂಷಾ ಜಲವಿದ್ಯುದಾಗಾರದ ಬಳಿಯಿರುವ ಗಗನಚುಕ್ಕಿಯ ಹರವು ಕಡಿಮೆ. ಆದರೆ ಎತ್ತರ ಹಾಗೂ ರಭಸ ಹೆಚ್ಚು. ಮಧ್ಯರಂಗ ಕ್ಷೇತ್ರದ ಬಳಿಯಿರುವ ಭರಚುಕ್ಕಿ ಜಲಪಾತದಲ್ಲಿ ನೀರಿನ ಪ್ರಮಾಣ ಸ್ವಲ್ಪ ಕಡಿಮೆ. ಆದರೆ ನದಿಯ ಹರವು ವಿಶಾಲ. ಬೆಂಗಳೂರು-ಕೊಳ್ಳೇಗಾಲ ಹೆದ್ದಾರಿಯ ಅಂಚಿನಲ್ಲಿರುವ ಗಗನಚುಕ್ಕಿಯನ್ನು ತಲುಪುವುದು ಸುಲಭ. ಆದರೆ ಭರಚುಕ್ಕಿ ತಲುಪಲು ಸ್ವಂತ ವಾಹನವೇ ಬೇಕು. ನೀರಿನ ರಭಸ ಎರಡೂ ಕಡೆ ತೀವ್ರ. ಕಣಿವೆ ಕೊಳ್ಳ ಪ್ರದೇಶವಾದ್ದರಿಂದ ಜಲಪಾತಗಳ ತಳಕ್ಕೆ ಇಳಿಯುವುದು ಕಠಿಣ ಹಾಗೂ ಅತಿ ಅಪಾಯಕಾರಿ.
ಶಿವನ ಸಮುದ್ರ ಜಲಪಾತವು ಕಾವೇರಿ ನದಿ ನೀರಾಗಿದೆ, ನದಿ ಬಂಡೆಗಳ ಮತ್ತು ಡೆಕ್ಕನ್ ಪ್ರಸ್ಥಭೂಮಿಯ ಪ್ರಪಾತಗಳು ಮೂಲಕ ತನ್ನ ಹಾದಿಯನ್ನು ಸುತ್ತಿಕೊಂಡು ಮತ್ತು ಜಲಪಾತಗಳು ರೂಪಿಸಲು ಹರಿದು ಹೋಗುತ್ತದೆ. ಶಿವನ ಸಮುದ್ರ ದ್ವೀಪ ಪಟ್ಟಣದ ಅವಳಿ ಜಲಪಾತಗಳು ನದಿ ವಿಂಗಡಿಸುತ್ತದೆ. ಇದು ಸಹಜವಾಗಿ ನದಿಗಳ ನಾಲ್ಕನೇ ದೊಡ್ಡ ದ್ವೀಪ ಸೃಷ್ಟಿಸುತ್ತದೆ. ಪ್ರಾಚೀನ ದೇವಾಲಯಗಳ ಗುಂಪು ಇಲ್ಲಿ ಇದೆ ಮತ್ತು ಬಹುಶಃ ಹಳ್ಳಿಗಳು ಇವೆ.
ಇದು ಒಂದು ವಿಭಜನೆಗೊಳಪಟ್ಟ ಜಲಪಾತ. ನೀರಿನ ಹರಿವು ಅಡ್ಡ ಜಲಪಾತಗಳ ಮೂಲಕ ಅನೇಕ ಅಡ್ಡ ಪರಿಣಾಮವಾಗಿ ಒಂದು ಬಂಡೆಯ ಮೇಲೆ ಬೀಳುವ ಮೊದಲು ಎರಡು ಅಥವಾ ಹಲವು ಚಾನಲ್ ಗಳಾಗಿ ವಿಂಗಡಿಸಲ್ಪಟ್ಟಿದೆ. ಅಲ್ಲಿ ವಿಭಜಿತ ಜಲಪಾತಗಳು ಸಂಭವಿಸುತ್ತವೆ. ಇದು 305 ಮೀಟರ್ಗಳಷ್ಟು ಅಗಲ, 98 ಮೀ ಎತ್ತರ, ಮತ್ತು 934 ಘನ ಮೀಟರ್ / ಸೆಕೆಂಡಿಗೆ ಸರಾಸರಿ ಗಾತ್ರವನ್ನು ಹೊಂದಿರುತ್ತದೆ. ಗರಿಷ್ಠ ರೆಕಾರ್ಡ್ ಪರಿಮಾಣ 18.887 ಘನ ಮೀಟರ್ / ಸೆಕೆಂಡು ಆಗಿದೆ. ಇದು ಒಂದು ದೀರ್ಘಕಾಲಿಕ ಜಲಪಾತ. ಮಳೆಗಾಲದಲ್ಲಿ ಜುಲೈಯಿಂದ ಅಕ್ಟೋಬರವರೆಗೆ ಅತ್ಯುತ್ತಮ ಹರಿವಿನ ಸಮಯ.
ಈ ಜಲಪಾತಗಳ ಬಗ್ಗೆ ಒಂದು ಸಾಮಾನ್ಯ ತಪ್ಪು ಕಲ್ಪನೆ ಇದೆ, ಎಡ ವಿಭಾಗ ಗಗನಚುಕ್ಕಿ ಕರೆಯಲಾಗುತ್ತದೆ ಮತ್ತು ಬಲ ವಿಭಾಗ ಭರಚುಕ್ಕಿ ಕರೆಯಲಾಗುತ್ತದೆ ಎಂದು ಆದರೆ ವಾಸ್ತವದಲ್ಲಿ ಭರಚುಕ್ಕಿ ಜಲಪಾತವು ಗಗನಚುಕ್ಕಿ ಜಲಪಾತದಿಂದ ನೈಋತ್ಯ ಕೆಲವು ಕಿಲೋಮೀಟರ್ ದೂರ ಇದೆ. ಇದು ಕಾವೇರಿ ನದಿಯು ಪಶ್ಚಿಮ ಮತ್ತು ಪೂರ್ವ ವಿಭಾಗಗಳಾಗಿ ದಕ್ಷಿಣಕ್ಕೆ ಕೆಲವು ಕಿಲೋಮೀಟರ್ ದೂರ ವಿಭಜಿಸುವ ಕಾರಣವಾಗಿದೆ. ಪಶ್ಚಿಮ ಶಾಖೆ ಗಗನಚುಕ್ಕಿ ಅವಳಿ ಜಲಪಾತಗಳು ಮತ್ತು ಪೂರ್ವ ಶಾಖೆ ಭರಚುಕ್ಕಿ ಜಲಪಾತಗಳನ್ನುಂಟುಮಾಡುತ್ತದೆ. ಗಗನ ಚುಕ್ಕಿ ಜಲಪಾತಗಳು ಶಿವನ ಸಮುದ್ರ ಗಡಿಯಾರ ಗೋಪುರರಿಂದ ಉತ್ತುಮವಾಗಿ ನೋಡಲಾಗುತ್ತದೆ. ಅವಳಿ ಜಲಪಾತಗಳು ತೋರಿಸುವ ಚಿತ್ರಗಳನ್ನು ಇಲ್ಲಿಂದ ತೆಗೆದುಕೊಳ್ಳಲಾಗುತ್ತದೆ.
ದೊಡ್ಡ ಕುದುರೆಬಾಲದ ಜಲಪಾತವು ಗಗನ ಚುಕ್ಕಿ ಎಡಭಾಗದಲ್ಲಿದೆ. ನದಿ ಕಬಿನಿಯು ನದಿ ಕಾವೇರಿಯೊಂದಿಗೆ ಒಟ್ಟಾಗಿ ಪ್ರವಾಹಿಸುವ ಸಂದರ್ಭದಲ್ಲಿ ಜುಲೈ - ಆಗಸ್ಟ್ - ಸಮಯದಲ್ಲಿ ದೊಡ್ಡ ಬಂಡೆಗಳ ಮೂಲಕ ನುಗ್ಗುತ್ತಿರುವ ನದಿಯ 90 ಮೀಟರ್ ಜಲಪಾತ ಪ್ರಯಾಣಿಕರನ್ನು ಆಹ್ವಾನಿಸುತ್ತದೆ.
ಭಾರಚುಕ್ಕಿ ಬಲಭಾಗದಲ್ಲಿರುವುದು ನಿಜವಾಗಿಯೂ ಮೊನಚಾದ ರೋರಿಂಗ್ ಕ್ಯಾಸ್ಕೇಡಿಂಗ್ ಜಲಪಾತ. ಭಾರಚುಕ್ಕಿಯು ಗಗನ್ ಚುಕ್ಕಿಯ ನೈಋತ್ಯ ಕಡೆಗೆ ಕಿ.ಮೀ ದೂರದಲ್ಲಿದೆ. ಭಾರಚುಕ್ಕಿ ಮಾರ್ಗದಲ್ಲಿ, ದಡದ ಉದ್ದಕ್ಕೂ ನೆಲೆಗೊಂಡಿರುವ ಪುರಾತನ ದರ್ಗಾ ಕಾಣಬಹುದು. ಇದು ಹಲವಾರು ಮುಸ್ಲಿಮರನ್ನು ದೈನಂದಿನ ಇಲ್ಲಿಗೆ ಭೇಟಿ ಮಾಡಲು ಮತ್ತು ಪೂಜಿಸಲು ಆಕರ್ಷಿಸುತ್ತದೆ. ಮಾರ್ಗದಲ್ಲಿ ತೊಂದರೆಗಳಾವು ಇಲ್ಲದೆ, ಅನೇಕ ಬಂಡೆಗಳು ಇಲ್ಲದೆ ಬೀಳುವ ನೀರಿನ ಸ್ಥಿರ ಅಲೆಗಳ ಕಾರಣ ಗಗನ್ ಚುಕ್ಕಿ ಹೋಲಿಸಿದರೆ, ಭಾರಚುಕ್ಕಿ ನೆಮ್ಮದಿಯ ಹಾಗೆ ಕಾಣಿಸುತ್ತದೆ.
ಗಗನ ಚುಕ್ಕಿಗೆ ಮತ್ತೊಂದು ಮಾರ್ಗ ದರ್ಗಾ ಹಜರತ್ ಮರ್ದನೆ ಗೈಬ್ . ಎಚ್ಚರಿಕೆಗಳ ಪೋಸ್ಟ್ ಇದ್ದರು ಸಹ, ಜಲಪಾತಗಳನ್ನು ವೀಕ್ಷಿಸಲು ಜನರು ಬಂಡೆಗಳಲ್ಲಿ ಕೆಳಗಿಳಿದು,ಅನೇಕ ಮಾರಣಾಂತಿಕ ಅಪಘಾತಗಳಿಗೆ ಕಾರಣವಾಗಿದೆ. ಇದು ಬೆಂಗಳೂರು ನಗರದಿಂದ 139 ಕಿಮೀ ದೂರದಲ್ಲಿದೆ.
ಇಲ್ಲಿ ಶ್ರೀ ರಂಗನಾಥಸ್ವಾಮಿ ದೇವಾಲಯವನ್ನು ದ್ರಾವಿಡ ವಾಸ್ತು ಶೈಲಿಯಲ್ಲಿ ಕಟ್ಟಲಾಗಿದೆ. ಇಲ್ಲಿ ಶ್ರೀ ರಂಗನಾಥಸ್ವಾಮಿಯನ್ನು "ಮಧ್ಯ ರಂಗ" ಎಂದು ಕರೆಯಲಾಗುತ್ತದೆ. ಶ್ರೀ ವೈಷ್ಣವ ಭಕ್ತರು ಹೆಚ್ಚಾಗಿ ಪೂಜಿಸುತ್ತಾರೆ. ಎಲ್ಲಾ ಮೂರು ರಂಗಾ ನಡುವೆ, ಇಲ್ಲಿ ದೇವರ ವಿಗ್ರಹವನ್ನು ಪ್ರೀತಿಯಿಂದ ’ಮೋಹನ ರಂಗಾ’ ಮತ್ತು ’ಜಗಮೋಹನ್ ರಂಗಾ’ ಎಂದು ಕರೆಯಲಾಗುತ್ತದೆ, ದೇವರು ಯುವ ರೂಪ ಪ್ರತಿನಿಧಿಸುತ್ತದೆಂದು ನಂಬಲಾಗಿದೆ. ಮಧ್ಯ ರಂಗ ಪುರಾತನ ದೇವಸ್ಥಾನದ ವಸತಿ ಒಂದು ಸುಂದರ ಆರಾಧ್ಯ ವಿಗ್ರಹವಾಗಿದೆ, ಇದು ಸಾಮಾನ್ಯವಾಗಿ ಪ್ರಚಲಿತವಾಗಿಲ್ಲ, ಆದ್ದರಿಂದ ಕೆಲವು ಜನರು ಭೇಟಿ ನೀಡುತ್ತಾರೆ. ಇನ್ನೂ ಅರ್ಚಕ ಸಮಯಕ್ಕೆ ಸರಿಯಾಗಿ ಇರದ ಕಾರಣ ದೇವಾಲಯ ಆಗಾಗ್ಗೆ ಮುಚ್ಚಿ ಇರುತ್ತದೆ, ದುಃಖವೆಂದರೆ ಕರ್ನಾಟಕ ಸರಕಾರ ದೇವಾಲಯದ ಅಧಿಕಾರಿಗಳು ಈ ಸ್ಥಳ ನಿರ್ವಹಿಸಲು ಮತ್ತು ಪ್ರಚಾರ ಮಾಡಲು ಕಡಿಮೆ ಕೆಲಸ ಮಾಡಿದ್ದಾರೆ. ದ್ವೀಪದ ಮೂರು ಕಡೆಗಳಲ್ಲಿ ಮೂರು ದೇವಾಲಯಗಳಿವೆ.
ಪ್ರಾಚೀನ ಶ್ರೀ ಸೋಮೇಶ್ವರ ದೇವಸ್ಥಾನ ಶಿವನ ಸಮುದ್ರ ಹತ್ತಿರ ಇರುವ ಮತ್ತೊಂದು ಪ್ರಸಿದ್ಧ ದೇವಸ್ಥಾನ. ಆದಿ ಗುರು ಶ್ರೀ ಶಂಕರಾಚಾರ್ಯರ ಈ ಸ್ಥಳಕ್ಕೆ ಭೇಟಿ ನೀಡಿ ಮತ್ತು "ಶ್ರೀಚಕ್ರ" ಸ್ಥಾಪಿಸಿದ್ದಾರೆ ಎಂದು ಹೇಳಲಾಗುತ್ತದೆ. ಇಲ್ಲಿ ಸೋಮೇಶ್ವರ ಲಿಂಗವು ರಂಗನಾಥ ವಿಗ್ರಹದಗಿಂತ ಮುಂಚೆ ಇತ್ತು ಎಂದು ನಂಬಲಾಗಿದೆ. ಈ ಲಿಂಗವನ್ನು ಸಪ್ತರಿಷಿಗಳು ಪೂಜಿಸುತ್ತಿದ್ದರು ಹಾಗು ಆರಾಧಿಸುತ್ತಿದ್ದರು. ದುರ್ಗಾ ದೇವಿಯ ಶಕ್ತಿ ದೇವತೆ ದೇವಸ್ಥಾನ ಸೋಮೇಶ್ವರ ದೇವಸ್ಥಾನದಿಂದ 1 ಕಿ ಮೀ ದೊರ ಇದೆ.
ಏಷ್ಯಾದ ಮೊದಲ ಹೈಡ್ರೊ ಎಲೆಕ್ಟ್ರಿಕ್ ಪವರ್ ಸ್ಟೇಷನ್ ಜಲಪಾತ ಇದು ಮತ್ತು ಇನ್ನೂ ಕ್ರಿಯಾತ್ಮಕ ವಾಗಿದೆ. ಈ ನಿಲ್ದಾಣ ಮೈಸೂರು ದಿವಾನ್ ಸರ್ ಕೆ ಶೇಷಾದ್ರಿ ಅಯ್ಯ ನಿಯೋಜಿಸಿದ್ದರು. ವಿದ್ಯುತ್ ಉತ್ಪಾದಿಸಲಾಗುತ್ತದೆ.
ಇದು ರಚಿತವಾದ ಆರಂಭದಲ್ಲಿ ವಿದ್ಯುತನ್ನು ಕೋಲಾರ ಗೋಲ್ಡ್ ಫೀಲ್ಡ್ಸ್ ಗೆ ಬಳಸಲಾಯಿತು.
ಮಡಿಕೇರಿ:
ಕೊಡಗು ಜಿಲ್ಲೆಯ ಒಂದು ತಾಲೂಕು ಹಾಗೂ ಜಿಲ್ಲಾ ಕೇಂದ್ರ. ಕೊಡಗಿನ ರಾಜಧಾನಿ ಎಂದರೂ ತಪ್ಪಾಗಲಾರದು. ಎಲ್ಲಾ ಪ್ರಮುಖ ವ್ಯವಹಾರಗಳು ನಡೆಯುವ ಸ್ಥಳ. ಎಲ್ಲಾ ಸರ್ಕಾರಿ ಕಛೇರಿಗಳು ಮುಖ್ಯವಾಗಿ ಮಡಿಕೇರಿಯಲ್ಲಿದೆ. ಅಲ್ಲದೆ ಮಡಿಕೇರಿ ಒಂದು ಪ್ರಮುಖ ಪ್ರವಾಸಿ ಕೇಂದ್ರವೂ ಹೌದು. ಮಡಿಕೇರಿಯನ್ನು ಕರ್ನಾಟಕದ ಕಾಶ್ಮೀರ ಎಂದು ಕರೆಯುತ್ತಾರೆ.
ಬರ್ಕಣ ಜಲಪಾತ :
ಭಾರತದ ಅತ್ಯಂತ ಎತ್ತರದ ಜಲಪಾತಗಳಲ್ಲಿ ಒಂದಾಗಿದೆ. ಇದು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿದೆ. ಇದು ಸೀತಾ ನದಿಯಿಂದ ಸೃಷ್ಟಿಯಾಗುತ್ತದೆ ಹಾಗು ಒಟ್ಟು ಎತ್ತರ ಸುಮಾರು ೮೫೦ ಅಡಿಗಳಾಗಿದೆ.ಈ ಜಲಪಾತವು ಭಾರತದಲ್ಲಿ ಹತ್ತು ಎತ್ತರದ ಜಲಪಾತಗಳಲ್ಲಿ ಒಂದಾಗಿದೆ. ಈ ಜಲಪಾತವು ಕೇವಲ ಮಳೆಗಾಲದಲ್ಲಿ ಮಾತ್ರ ನೀರು ತುಂಬಿರುತ್ತದೆ.
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
Thursday, 28 January 2021
ಸಾಮಾನ್ಯ ಜ್ಞಾನ
ಸೂಕ್ಷ್ಮಜೀವಿಗಳು - ಭಯಾನಕ ವೈರಸ್ಗಳು
1.AIDSನ್ನು ವಿಸ್ತರಿಸಿ.
ಅಕ್ವೈರ್ಡ್ ಇಮ್ಯುನೋ ಡಿಫಿಷಿಯನ್ಸಿ ಸಿಂಡ್ರೋಮ್
2. ಏಡ್ಸ್ ರೋಗಕ್ಕೆ ಕಾರಣವಾದ ವೈರಸ್ನ್ನು ಹೆಸರಿಸಿ.
ಹೆಚ್, ಐ. ವಿ ((HIV)
3. ಏಡ್ಸ್ ರೋಗವನ್ನು ಮೊಟ್ಟಮೊದಲು ಎಲ್ಲಿ ಗುರ್ತಿಸಲಾಯಿತು?
1981 ರಲ್ಲಿ ಅಮೇರಿಕಾದಲ್ಲಿ ಗುರ್ತಿಸಲಾಯಿತು.
4. ಭಾರತದಲ್ಲಿ ಮೊದಲು ಎಲ್ಲಿ ಗುರ್ತಿಸಲಾಯಿತು?
1987 ರಲ್ಲಿ ಚೆನ್ನೈ ನಲ್ಲಿ ಗುರ್ತಿಸಲಾಯಿತು.
5.ಹೆಚ್, ಐ. ವಿ (HIV) ಯಲ್ಲಿ ಕಂಡುಬರುವ ಅನುವಂಶೀಯ ವಸ್ತುವನ್ನು ಹೆಸರಿಸಿ.
ಆರ್.ಎನ್.ಎ (ಖಓಂ)
6. ಹೆಚ್, ಐ. ವಿ (HIV) ಯ ಅನುವಂಶೀಯ ವಸ್ತುವಿನಲ್ಲಿ ಕಂಡುಬರುವ ಕಿಣ್ವವನ್ನು ಹೆಸರಿಸಿ.
ರಿವರ್ಸ್ ಟ್ರಾನ್ಸ್ಕ್ರಿಪ್ಟೇಸ್.
7. ಏಡ್ಸ್ ರೋಗವನ್ನು ಮೊದಲು ಯಾವ ರೋಗಗಳ ಜೊತೆಯಲ್ಲಿ ಪತ್ತೆ ಹಚ್ಚಲಾಯಿತು?
ಈ ರೋಗವನ್ನು ಮೊದಲು ಚಿಂಪಾಂಜಿ, ಗೊರಿಲ್ಲಾ ಮತ್ತು ಸಲಿಂಗಿ ಮಾನವರಲ್ಲಿ ನ್ಯುಮೋನಿಯಾ ಮತ್ತು ಚರ್ಮದ ಕ್ಯಾನ್ಸರ್ ಜೊತೆ ಪತ್ತೆ ಹಚ್ಚಲಾಯಿತು.
8. ಹೆಚ್, ಐ. ವಿ (ಊ ಗಿ) ಹರಡುವ ವಿಧಾನಗಳನ್ನು ಹೆಸರಿಸಿ.
* ಸೋಂಕಿತ ವ್ಯಕ್ತಿಯೊಡನೆ ಅಸುರಕ್ಷಿತ ಲೈಂಗಿಕ ಸಂಪರ್ಕ, * ಸೋಂಕಿತ ವ್ಯಕ್ತಿಗಳು ಬಳಸಿದ ಸೂಜಿ ಮತ್ತು ಸಿರಂಜ್ಗಳನ್ನು ಶುಷ್ಕಿಕರಿಸದೆ ಬಳಸುವುದರಿಂದ
* ಸೋಂಕಿತ ವ್ಯಕ್ತಿಯಿಂದ ರಕ್ತವನ್ನು ಪರೀಕಿಸದೆ ಪಡೆಯುವುದರಿಂದ * ಸೋಂಕಿತ ತಾಯಿ ಯಿಂದ ಮಗುವಿಗೆ
9. ಯಾವ ಅಂಗವನ್ನು ದೇಹದ ರಾಸಾಯನಿಕ ಕಾಖರ್ಾನೆ ಎಂದು ಕರೆಯಲಾಗಿದೆ?
ಪಿತ್ತಕೋಶ.
10. ಹೆಪಟೈಟಿಸ್ ರೊಗಕ್ಕೆ ಕಾರಣವಾದ ಜೀವಿಯನ್ನು ಹೆಸರಿಸಿ.
ಹೆಚ್. ಬಿ. ವಿ. (HIV)
11. ಹೆಚ್, ಐ. ವಿ (HIV) ಪತ್ತೆಹಚ್ಚುವ ಪರೀಕ್ಷೆಗಲನ್ನು ಹೆಸರಿಸಿ.
* ಎಲಿಸಾ(ಎಂಜೈಮ್ ಲಿಂಕ್ಡ್ ಇಮ್ಯುನೋ ಸಾರ್ಬೆಂಟ್ ಅಸ್ಸೆ)
* ಪಿ.ಸಿ.ಆರ್ ಪರೀಕ್ಷೆ
* ವೆಸ್ಟರ್ನ್ ಬ್ಲಾಟ್ ಪರೀಕ್ಷೆ
12. ಹೆಚ್, ಐ. ವಿ (HIV)ದೇಹದ ಯಾವ ಕಣಗಳನ್ನು ನಾಶಪಡಿಸುತ್ತದೆ?
ಟಿ- ಲಿಂಪೋಸೈಟ್ಗಳನ್ನು ನಾಶಪಡಿಸುತ್ತದೆ.
ಆಹಾರೋತ್ಪಾದನೆ ಮತ್ತು ನಿರ್ವಹಣೆ
1. ಆಹಾರ ಕಲಬೆರಕಯ ಎರಡು ವಿಧಗಳನ್ನು ಹೆಸರಿಸಿ.
ಆಕಸ್ಮಿಕ ಕಲಬೆರಕೆ ಮತ್ತು ಉದ್ದೇಶ ಪೂರ್ವಕ ಕಲಬೆರಕೆ
2. ಆಕಸ್ಮಿಕ ಕಲಬೆರಕೆಗೆ ಉದಾ.ಕೊಡಿ.
* ಹಣ್ಣುಗಳ ಮೇಲೆ ರಾಸಾಯನಿಕಗಳ ಸಿಂಪಡಣೆ * ತರಕಾರಿಗಳಮೇಲಿನ ಕೀಟನಾಶಕಗಳು
3. ಆಹಾರವಸ್ತುಗಳಿಗೆ ಸೇರಿಸುವ ಕಲಬೆರಕೆ ವಸ್ತುಗಳು:
ಕಾಫಿ ಪುಡಿ- ಹುಣಸೆಬೀಜದ ಪುಡಿ, ಟೀ ಪುಡಿ-ಕಬ್ಬಿಣದ ಚೂರುಗಳು, ಒಣಗಿದ ಮೆಣಸಿನಕಾಯಿ ಪುಡಿ-ಬಣ್ಣ ಕಟ್ಟಿದ ಮರದ ಹೊಟ್ಟು ಸಕ್ಕರೆ ಪುಡಿ- ವಾಷಿಂಗ್ ಸೋಡಾ ತುಪ್ಪ ಮತ್ತು ಬೆಣ್ಣೆ - ವನಸ್ಪತಿ, ಜೇನು ತುಪ್ಪ - ಬೆಲ್ಲ ಅಥವಾ ಸಕ್ಕರೆ ಪಾಕ
ಅಡಿಗೆ - ದತ್ತೂರಿ ಎಣ್ಣೆ ಅರಿಶಿನದ ಪುಡಿ - ಮೆಟಾನಿಲ್ ಹಳದಿ, ಹಾಲು- ನೀರು, ಅಕ್ಕಿ ಮತ್ತು ಗೋಧಿ - ಮರಳು. ಕಲ್ಲಿನ ಚೂರುಗಳು, ಮಣ್ಣಿನ ಹೇಂಟೆ
4. ಕಲಬೆರಕೆಯುಕ್ತ ಆಹಾರಪದಾರ್ಥಗಳ ಸೇವನೆಯಿಂದ ಬರುವ ರೋಗಗಳು:
* ದತ್ತೂರಿ ಎಣ್ಣೆಯುಕ್ತ ಅಡಿಗೆ ಎಣ್ಣೆ- ಜಲೋದರ ಅಥವಾ ಮಹೋದರ, * ಮೆಟಾನಿಲ್ ಹಳದಿಯುಕ್ತ ಅರಿಶಿನ ಪುಡಿ- ಕ್ಯಾನ್ಸರ್
* ಸೋಡಿಯಂ ಕಾಬರ್ೋನೇಟ್ಉಕ್ತ ಸಕ್ಕರೆ ಪುಡಿ - ಕರುಳು ಬೇನೆ
5. ಆಹಾರ ಪದಾರ್ಥಗಳು ಯಾವ ಹಂತದಲ್ಲಿ ಕಲಬೆರಕೆಯಾಗುವ ಸಂಭವ ಹೆಚ್ಚು?
ಆಹಾರ ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ಹಂತದಲ್ಲಿ ಹೆಚ್ಚು ಕಲಬೆರಕೆ ಯಾಗುತ್ತದೆ.
6. ಆಹಾರ ಕಲಬೆರಕೆ ನಿವಾರಣಾ ಕಾನೂನು ಜಾರಿಗೆ ಬಂದ ವರ್ಷ ತಿಳಿಸಿ.
1954
7. ಆಹಾರ ಗುಣಮಟ್ಟವನ್ನು ಪರೀಕ್ಷಿಸುವ ಸಂಸ್ಥೆಗಳನ್ನು ಹೆಸರಿಸಿ.
* ಆಗ್ಮಾರ್ಕ್ * ಐಎಸ್ಐ * ಸಿ.ಎಫ್.ಟಿ.ಆರ್.ಐ *ಎಫ್.ಪಿ.ಒ
8. ಸಂಸ್ಕರಿಸಿದ ಆಹಾರ ಪದಾರ್ಥಗಳು ಯಾವ ಸಂಸ್ಥೆಯ ಮೊಹರನ್ನು ಹೊಂದಿರಲೇಬೇಕು?
ಎಫ್.ಪಿ,ಒ.
9. ಆಹಾರ ವಸ್ತುಗಳನ್ನು ಕೊಂಡುಕೊಳ್ಳುವಾಗ ಪೊಟ್ಟಣದ ಮೇಲೆ ಗಮನಿಸಬೇಕಾದ ಅಂಶಗಳನ್ನು ಹೆಸರಿಸಿ.
* ತಯಾರಿಸಿದ ದಿನಾಂಕ * ಅವದಿ ಮುಗಿಯುವ ದಿನಾಂಕ * ತಯಾರಿಸಲು ಬಳಸಿದ ವಸ್ತುಗಳು ಮತ್ತು ಪ್ರಮಾಣ
* ಪೊಟ್ಟಣದ ತೂಕ * ಬೆಲೆ . . .
10. ಕೇಂದ್ರಿಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (C F T R I )ಎಲ್ಲಿದೆ?
ಕರ್ನಾಟಕದ ಮೈಸೂರು ಜಿಲ್ಲೆ.
11. ಹಾಲಿನ ಶುದ್ಧತೆ(ಸಾಂದ್ರತೆ)ಯನ್ನು ಅಳೆಯುವ ಸಾಧನವನ್ನು ಹೆಸರಿಸಿ.
ಲ್ಯಾಕ್ಟೋಮೀಟರ್ (ದುಗ್ಧಮಾಪಕ)
12. ಬೆಣ್ಣೆ ಅಥವಾ ತುಪ್ಪದಲ್ಲಿ ಬೆರೆತಿರುವ ಕಲಬೆರಕೆ ವಸ್ತುವನ್ನು ಪತ್ತೆ ಹಚ್ಚಲು ಬಳಸುವ ಆಮ್ಲ ಯಾವುದು?
ಪ್ರಬಲ ಹೈಡ್ರೋಕ್ಲೋರಿಕ್ ಆಮ್ಲ (HCl)
13. ಅಡಿಗೆ ಎಣ್ಣೆಯಲ್ಲಿ ಮಿಶ್ರಣವಾಗಿರುವ ದತ್ತೂರಿ ಎಣ್ಣೆಯನ್ನು ಪತೆಹಚ್ಚಲು ಬಳಸುವ ಆಮ್ಲವನ್ನು ಹೆಸರಿಸಿ.
ಪ್ರಬಲ ನೈಟ್ರಿಕ್ ಆಮ್ಲ (HNO3)
ಪರಿಸರ ವಿಜ್ಞಾನ
ಕೀಟಹಾರಿ ಸಸ್ಯಗಳು ( ಡ್ರಾಸೆರಾ, ನೆಪೆಂಥಿಸ್. . .) ಕೀಟಗಳನ್ನು ಹಿಡಿದು ಭಕ್ಷಿಸಿ ಸಾರಜನಕವನ್ನು ಪಡೆಯುತ್ತವೆ.
2. ಜೀವ ಭೂ ರಾಸಾಯಿಕ ಚಕ್ರಗಳು ಎಂದರೇನು? ಅವುಗಳನ್ನು ಹೆಸರಿಸಿ. ಉದಾ.ಕೊಡಿ.
ಪರಿಸರ ವ್ಯವಸ್ಥೆಯಲ್ಲಿ ಮೂಲವಸ್ತುಗಳ ಚಕ್ರೀಯ ಚಲನೆಗೆ ಜೀವ ಭೂ ರಾಸಾಯನಿಕ ಚಕ್ರಗಳು ಎಂದು ಹೆಸರು.ಇವುಗಳಲ್ಲಿ ಎರಡು ವಿಧ: ಎ. ಅನಿಲದ ಚಕ್ರಗಳು, ಉದಾ: ಕಾರ್ಬನ್ ಚಕ್ರ, ನೈಟ್ರೋಜನ್ ಚಕ್ರ, ಆಕ್ಸಿಜನ್ ಚಕ್ರ. ಬಿ. ಚರಟದ ಚಕ್ರಗಳು, ಉದಾ: ಗಂಧಕದ ಚಕ್ರ, ರಂಜಕದ ಚಕ್ರ.
3. ಸಂಗ್ರಹ ಮೂಲ ಎಂದರೇನು? ಉದಾ.ಕೊಡಿ.
ಜೀವಿಗಳಿಗೆ ಅವಶ್ಯಕವಾದ ಪೋಷಕಾಂಶಗಳು ದೊರೆಯುವ ಪ್ರದೇಶಗಳನ್ನು ಸಂಗ್ರಹಮೂಲ ಎನ್ನುವರು. ಉದಾ: ಶಿಲಾವರಣ, ಜಲಾವರಣ ಮತ್ತು ವಾತಾವರಣ
4. ವಿನಿಮಯಮೂಲ ಎಂದರೇನು? ಉದಾ.ಕೊಡಿ.
ಪೋಷಕಾಂಶಗಳು ಬಳಸಲ್ಪಡುವ ಪ್ರದೇಶವನ್ನು ವಿನಿಮಯ ಮೂಲ ಎನ್ನುವರು. ಉದಾ. ಜೀವಿಗೋಳ
5. ಸ್ಥಿರೀಕರಣ ಎಂದರೇನು?
ರಾಸಾಯನಿಕವಸ್ತುಗಳು ಸಂಗ್ರಹಮೂಲದಿಂದ ವಿನಿಮಯ ಮೂಲಕ್ಕೆ ಚಲಿಸುವುದನ್ನು ಸ್ಥಿರೀಕರಣ ಎನ್ನುವರು.
6. ಮರುಚಕ್ರೀಕರಣ ಎಂದರೇನು?
ರಾಸಾಯನಿಕವಸ್ತುಗಳು ವಿನಿಮಯ ಮೂಲದಿಂದ ಸಂಗ್ರಹಮೂಲಕ್ಕೆ ಹರಿಯುವುದನ್ನು ಮರುಚಕ್ರೀಕರಣ ಎನ್ನುವರು.
7. ನೈಟ್ರೋಜನ್ ಸ್ಥಿರೀಕರಣ ಎಂದರೇನು?
ವಾತಾವರಣದಲ್ಲಿರುವ ಮುಕ್ತವಾದ ನೈಟ್ರೋಜನ್ ಅನಿಲವನ್ನು ಉಪಯುಕ್ತವಾದ ನೈಟ್ರೋಜನ್ ಸಂಯುಕ್ತಗಳ ರೂಪಕ್ಕೆ ಪರಿವರ್ತಿಸುವ ಕ್ರಿಯೆ, ಇದು ರಡು ವಿಧಗಳಲ್ಲಿ ನಡೆಯುತ್ತದೆ. ನೈಸಗರ್ಿಕ ಸ್ಥಿರೀಕರಣ ಮತ್ತು ಕೃತಕ ಸ್ಥಿರೀಕರಣ.
8. ನೈಸರ್ಗಿಕ ಅಥವಾ ಜೈವಿಕ ಸ್ಥಿರೀಕರಣ ಎಂದರೇನು?
ವಾತಾವರಣದಲ್ಲಿರುವ ನೈಟ್ರೋಜನ್ ಅನಿಲವು ಸೂಕ್ಷ್ಮಾಣುಜೀವಿಗಳಾದ ರೈಜೋಬಿಯಂ, ನಾಸ್ಟಾಕ್, ಅನಾಬಿನಾ ಮುಂತಾದ ಜೀವಿಗಳಿಂದ ನಡೆದರೆ ಅದು ನೈಸರ್ಗಿಕ ಅಥವಾ ಜೈವಿಕ ಸ್ಥಿರೀಕರಣ.
9. ಕೃತಕ ಸ್ಥಿರೀಕರಣ ಅಥವಾ ವಿದ್ಯುತ್ರಾಸಾಯನಿಕ ಸ್ಥಿರೀಕರಣ ಎಂದರೇನು?
ವಾತಾವರಣದಲ್ಲಿರುವ ನೈಟ್ರೋಜನ್ ಅನಿಲವು ಆಕಾಶದಲ್ಲಿ ಗುಡುಗು ಉಂಟಾದಾಗ ನಡೆಯುವ ಪ್ರಕ್ರಿಯೆ. ಈ ಪ್ರಕ್ರಿಯೆಯಲ್ಲಿ ಹೆಚ್ಚು ತಾಪಮಾನದಿಂದಾಗಿ ನೈಟ್ರೋಜನ್ ಆಕ್ಸಿಜನ್ ಜೊತೆ ಸೇರಿ ನೈಟ್ರೋಜನ್ ಆಕ್ಸೈಡ್ ಆಗಿ ನೀರಿನೊಂದಿಗೆ ಬೆರೆತು ಸಾರಜನಕ ಸಂಯುಕ್ತಗಳಾಗುತ್ತವೆ.
10. ನೈಟ್ರೋಜನ್ ಮರುಚಕ್ರೀಕರಣದಲ್ಲಿ ಪಾಲ್ಗೊಳ್ಳುವ ಬ್ಯಾಕ್ಟೀರಿಯಾಗಳನ್ನು ಹೆಸರಿಸಿ.
ರೈಜೋಬಿಯಂ ಗುಂಪಿಗೆ ಸೇರಿದ ಬ್ಯಾಕ್ಟೀರಯಾಗಳಾದ ಸೂಡೋಮೊನಾಸ್, ನೈಟ್ರಸೋಮೊನಾಸ್, ನೈಟ್ರೋಬ್ಯಾಕ್ಟರ್, ಅಜಟೋಬ್ಯಾಕ್ಟರ್. . ಇತ್ಯಾದಿ
11. ಬ್ಯಾಕ್ಟೀರಿಯಾ ಹೊರತುಪಡಿಸಿ ಇತರ ಯಾವ ಜೀವಿಗಳು ಸಾರಜನಕ ಸ್ಥಿರೀಕರಣದಲ್ಲಿ ಪಾಲ್ಗೊಳ್ಳುತ್ತವೆ ?
ನಾಸ್ಟಾಕ್, ಅನಾಬಿನಾ, ಅಜೋಲ್ಲಾ, ಅಜೋಸ್ಪೈರಿಲ್ಲಂ. . .
12. ನೈಟ್ರೋಜನ್ ಚಕ್ರದಲ್ಲಿ ಪಾಲ್ಗೊಳ್ಳುವ ಬ್ಯಾಕ್ಟೀರಿಯಾಗಳು ಮತ್ತು ಕಾರ್ಯ;
ನೈಟ್ರಸೋಮೊನಾಸ್: ಅಮೋನಿಯ ಲವಣಗಳನ್ನು ನೈಟ್ರೇಟ್ಗಳಾಗಿ ಪರಿವರ್ತಿಸುತ್ತವೆ(ನೈಟ್ರೀಕರಣ) ನೈಟ್ರೋಬ್ಯಾಕ್ಟರ್: ನೈಟ್ರೈಟ್ಗಳನ್ನು ನೈಟ್ರೇಟ್ಗಳಾಗಿ ಪರಿವರ್ತಿಸುತ್ತವೆ. (ನೈಟ್ರೀಕರಣ) ಸೂಡೋಮೊನಾಸ್: ಮಣ್ಣಿನಲ್ಲಿರುವ ನೈಟ್ರೇಟ್ಗಳನ್ನು ಮುಕ್ತ ನೈಟ್ರೋಜನ್ ಅನಿಲದ ರೂಪಕ್ಕೆ ಪರಿವರ್ತಿಸುತ್ತದೆ. (ಡಿನೈಟ್ರೀಕರಣ)
13. ಜೀವಿಗಳ ದೇಹದಲ್ಲಿನ ಶಕ್ತಿಯ ಅಣುಗಳಲ್ಲಿ ರಂಜಕದ ರೂಪಗಳನ್ನು ಹೆಸರಿಸಿ.
ಅಡಿನೋಸಿನ್ ಟ್ರೈ ಪಾಸ್ಪೇಟ್ (ATP) ಮತ್ತು ನಿಕೋಟಿನಮೈಡ್ ಅಡಿನಿನ್ ಡೈ ನ್ಯೂಕ್ಲಿಯೋಟೈಡ್ ಪಾಸ್ಪೇಟ್ (ಓಂಆಕಊ)
14. ಜೈವಿಕ ವಿಘಟನೆಗೆ ಒಳಗಾಗದ ವಸ್ತುಗಳನ್ನು ಹೆಸರಿಸಿ.
ಡಿ.ಡಿ.ಟಿ., ಗಾಜು, ಎಂಡೋಸಲ್ಪಾನ್, ಪ್ಲಾಸ್ಟಿಕ್, ಪಾಲಿತಿನ್ದಾರಗಳು, ರಬ್ಬರ್, ಸೀಸಯುಕ್ತ ರಾಸಾಯನಿಕಗಳು . . .
15. ಜೈವಿಕ ವಿಘಟನೆಗೆ ಒಳಗಾಗುವ ಮಾಲಿನ್ಯಕಾರಕಗಳನ್ನು ಹೆಸರಿಸಿ.
ಒಳಚರಂಡಿ ನೀರು, ಸಲ್ಫರ್ಡೈಆಕ್ಸೈಡ್, ಸಸ್ಯಗಳ ಕೊಳೆತ ಭಾಗಗಳು, ಕಾಗದ, ಹತ್ತಿ ಬಟ್ಟೆಗಳು, ಇತ್ಯಾದಿ. .. .
16. ದ್ಯತಿರಾಸಾಯನಿಕ ಸ್ಮಾಗ್ ಎಂದರೇನು?
ಕೆಲವು ರಾಸಾಯನಿಕಗಳು ವಾತಾವರಣದಲ್ಲಿನ ನೈಟ್ರೋಜನ್ ಆಕ್ಸೈಡ್ಗಳ ಜೊತೆ ಸೇರಿ ದ್ಯುತಿರಾಸಾಯನಿಕಕ್ರಿಯೆಗಳಿಗೆ ಒಳಗಾಗಿ ಉಂಟುಮಾಡುವ ರಾಸಾಯನಿಕ ವಸ್ತುಗಳನ್ನು ದ್ಯುತಿರಾಸಾಯನಿಕ ಸ್ಮಾಗ್ ಎನ್ನುವರು.
17. ಸ್ಮಾಗ್ನಲ್ಲಿ ಕಂಡುಬರುವ ಅನಿಲಗಳನ್ನು ಹೆಸರಿಸಿ.
ನೈಟ್ರೋಜನ್ ಡೈಆಕ್ಸೈಡ್ ಮತ್ತು ಸಲ್ಫರ್ ಡೈಆಕ್ಸೈಡ್, ಇವು ಆಮ್ಲ ಮಳೆಗೆ ಕಾರಣವಾದ ಅನಿಲಗಳು.
18. ಓಝೋನ್ ಪದರವನ್ನು ನಾಶ ಮಾಡುವಂತಹ ವಾಯುಮಾಲಿನ್ಯಕಾರಕ ಯಾವುದು?
ಕ್ಲೋರೋಫ್ಲುರೋಕಾರ್ಬನ್ (ಅ ಈ ಅ)
19. ಮಿನಮಾಟ ರೋಗ ಹರಡುವ ಮಾಲಿನ್ಯಕಾರಕವನ್ನು ಹೆಸರಿಸಿ.
ಸೀಸಯುಕ್ತನೀರು ಮತ್ತು ಆಹಾರ
20. ಕೃಷಿ ಮೂಲಗಳಿಂದ ಬರುವ ತ್ಯಾಜ್ಯಗಳನ್ನು ಹೆಸರಿಸಿ.
ರಾಸಾಯನಿಕ ಗೊಬ್ಬರಗಳ ಉಳಿಕೆಗಳು, ಕೀಟನಾಶಕಗಳು, ಕಳೆನಾಶಕಗಳು . . .
21. ಮಣ್ಣುಮಾಲಿನ್ಯದ ನಿಯಂತ್ರಣ ಕ್ರಮಗಳನ್ನು ತಿಳಿಸಿ.
* ಕೀಟನಾಶಕಗಳ ಬಳಕೆಯನ್ನು ಕಡಿಮೆ ಮಾಡುವುದು * ರಾಸಾಯನಿಕ ಗೊಬ್ಬರಗಲ ಮಿತವಾದ ಬಳಕೆ
* ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವುದು. * ಬೆಳೆ ಬದಲಾವಣೆ * ಆಸ್ಪತ್ರೆ ತ್ಯಾಜ್ಯಗಳನ್ನು ಸುಡುವುದು ಆಥವಾ ಊಳುವುದು
* ಇಳಿಜಾರು ಪ್ರದೇಶಗಳನ್ನು ಬದುಗಳನ್ನು ನಿಮರ್ಾಣ ಮಾಡುವುದು * ಹೆಚ್ಚು ಮರಗಿಡಗಳನ್ನು ಬೆಳೆಸುವುದು.
22. ಶಬ್ಧಮಾಲಿನ್ಯದ ಪರಿಣಾಮಗಳನ್ನು ಹೆಸರಿಸಿ.
* ಕಿವುಡುತನ * ರಕ್ತದೊತ್ತಡ ಏರಿಕೆ * ಮಿದುಳಿನ ಅಪಸಾಮಾನ್ಯತೆ * ಮುಂಗೋಪ * ಹೃದಯ ಸಂಬಂದಿ ಕಾಯಿಲೆ
23. ಶಬ್ಧಮಾಲಿನ್ಯದ ನಿಯಂತ್ರಣ ಕ್ರಮಗಳೇನು?
* ಹಳೆಯ ಯಂತ್ರೋಪಕರಣಗಳನ್ನು ಬದಲಾಯಿಸುವುದು * ಕೈಗಾರಿಕೆಗಳಲ್ಲಿ ಶಬ್ಧನಿಯಂತ್ರಣಗಳ ಅಳವಡಿಕೆ
ರಸ್ತೆ ಬದಿಗಳಲ್ಲಿ ಅಗಲವಾದ ಎಲೆಯುಳ್ಳ ಮರಗಳನ್ನು ಬೆಳೆಸುವುದು * ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸುವುದು
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
Wednesday, 27 January 2021
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಭಾರತದ ಒಂದು ಪಶ್ಚಿಮ ರಾಜ್ಯ ಗೋವಾ
ಗೋವ
ಭಾರತದ ಪಶ್ಚಿಮದಲ್ಲಿರುವ ರಾಜ್ಯ
ಗೋವ - ಭಾರತದ ರಾಜ್ಯಗಳಲ್ಲೊಂದು. ವಿಸ್ತೀರ್ಣದಲ್ಲಿ ಇದು ಭಾರತದ ಅತ್ಯಂತ ಸಣ್ಣ ರಾಜ್ಯ. ಭಾರತದ ಪಶ್ಚಿಮ ಕರಾವಳಿಯಲ್ಲಿರುವ ಇದು ಉತ್ತರದಲ್ಲಿ ಮಹಾರಾಷ್ಟ್ರ, ಪೂರ್ವ ಮತ್ತು ದಕ್ಷಿಣದಲ್ಲಿ ಕರ್ನಾಟಕ ಹಾಗೂ ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ ಸುತ್ತುವರಿಯಲ್ಪಟ್ಟಿದೆ. ವಿಸ್ತೀರ್ಣದಲ್ಲಿ ಗೋವಾ ಭಾರತದ ಅತಿ ಚಿಕ್ಕ ರಾಜ್ಯ ಹಾಗೂ ಜನಸಂಖ್ಯೆಯಲ್ಲಿ ನಾಲ್ಕನೇ ಅತಿ ಸಣ್ಣ ರಾಜ್ಯ. ಇದರ ವಿಸ್ತೀರ್ಣ 3,702. ಚ.ಕಿಮೀ. ಜನಸಂಖ್ಯೆ 14,57,723 (2011). ಗೋವಾದ ರಾಜಧಾನಿ ಪಣಜಿ ಹಾಗೂ ವಾಸ್ಕೋ ಡ ಗಾಮಾ ಅತಿ ದೊಡ್ಡ ನಗರವಾಗಿದೆ.
| ಗೋವ | |
| ರಾಜಧಾನಿ - ಸ್ಥಾನ | ಪಣಜಿ - 15.49° N 73.81° E |
| ಅತಿ ದೊಡ್ಡ ನಗರ | ವಾಸ್ಕೊ ಡ ಗಾಮ |
| ಜನಸಂಖ್ಯೆ (2004) - ಸಾಂದ್ರತೆ | 1,400,000 (25ನೇ) - 363/km² |
| ವಿಸ್ತೀರ್ಣ - ಜಿಲ್ಲೆಗಳು | 3,702 km² (29ನೇ) - 2 |
| ಸಮಯ ವಲಯ | IST (UTC+5:30) |
| ಸ್ಥಾಪನೆ - ರಾಜ್ಯಪಾಲ - ಮುಖ್ಯ ಮಂತ್ರಿ - ಶಾಸನಸಭೆ (ಸ್ಥಾನಗಳು) | ಮೇ ೩೦,೧೯೮೭ - ಶಿವಿಂದರ್ ಸಿಂಗ್ ಸಿದು - ದಿಗಂಬರ್ ಕಾಮತ್ - Unicameral (40) |
| ಅಧಿಕೃತ ಭಾಷೆ(ಗಳು) | ಕೊಂಕಣಿ |
| Abbreviation (ISO) | IN-GA |
| ಅಂತರ್ಜಾಲ ತಾಣ: http://www.goagovt.nic.in/ | |
ಗೋವ ರಾಜ್ಯದ ಮುದ್ರೆ | |





- ಗೋವ ಉತ್ತರದಲ್ಲಿ ತೇರೇಖೋಲ್ ನದಿಯಿಂದಾಗಿ ಮಹಾರಾಷ್ಟ್ರದಿಂದ ಪ್ರತ್ಯೇಕಿಸಲ್ಪಟ್ಟಿದೆ. ಸಹ್ಯಾದ್ರಿಯ ಸೆರಗಿನಲ್ಲಿರುವ ಗೋವದ ಪೂರ್ವಭಾಗ ಮಲೆನಾಡು. ಪೂರ್ವದಿಂದ ಪಶ್ಚಿಮಕ್ಕೆ ಹಲವಾರು ನದಿ ತೊರೆಗಳು ಹರಿದು ಅರಬ್ಬೀ ಸಮುದ್ರವನ್ನು ಸೇರುತ್ತವೆ. ಇವುಗಳಲ್ಲಿ ಮುಖ್ಯವಾದವು ಮಾಂಡವೀ, ಜ಼ುವಾರೀ (ಅಘನಾಶಿನೀ), ತೇರೇಖೋಲ್, ಚಪೋರ್ ಮತ್ತು ಬೆತುಲ್. ಇವುಗಳಿಂದ ಒಟ್ಟು ಸು. 270 ಕಿಮೀಗಳಷ್ಟು ಜಲಮಾರ್ಗಗಳು ಏರ್ಪಟ್ಟಿವೆ.
- ಮಾಂಡವೀ ಗೋವದ ಈಶಾನ್ಯ ಭಾಗದಲ್ಲಿರುವ ಪರ್ವತ ಭೀಮಗಡದಲ್ಲಿ ಹುಟ್ಟಿ ಅಗ್ವಾದ ಕಿಲ್ಲೆಯ ಹತ್ತಿರ ಅರಬ್ಬೀ ಸಮುದ್ರವನ್ನು ಸೇರುತ್ತದೆ. ಜವಾರೀ ನದಿ ಹೇಮಾಡ್ ಬಾರ್ಸೆ ಮತ್ತು ಅಷ್ಟಾಗ್ರಹಾರ ಎಂಬ ಭಾಗದಲ್ಲಿ ಹುಟ್ಟಿ ಮುರ್ಗಾಂವ್ ಕೊಲ್ಲಿಯಲ್ಲಿ ಸಮುದ್ರವನ್ನು ಸೇರುತ್ತದೆ. ತೇರೇಖೋಲ್ ಮೂರನೆಯ ದೊಡ್ಡ ನದಿ. ಮಣೇರಿಯ ಹತ್ತಿರ ಹುಟ್ಟಿ ತೇರೇಖೋಲ್ ಕಿಲ್ಲೆಯ ಹತ್ತಿರ ಸಮುದ್ರವನ್ನು ಸೇರುತ್ತದೆ. ಈ ನದಿಯ ದಡಗಳಲ್ಲಿ ತೆಂಗು ಅಡಿಕೆಗಳ ತೋಟಗಳನ್ನು ವಿಶೇಷವಾಗಿ ಕಾಣಬಹುದು.
- ಸಹ್ಯಾದ್ರಿಯ ಕವಲುಗಳು ಗೋವದಲ್ಲಿವೆ. ಇವುಗಳಲ್ಲಿ ಪುರ್ವಕ್ಕಿರುವ ಸೊಂಸೋಗಡ ಬೆಟ್ಟ ಪ್ರಸಿದ್ಧವಾಗಿದೆ. ಅದರ ಉತ್ತರಕ್ಕೆ ಸತ್ತರೀ ಮಹಾಲದಲ್ಲಿ ವಾಘೇರಿ ಬೆಟ್ಟವಿದೆ. ಇನ್ನೊಂದು ಬೆಟ್ಟ ಮೋರ್ಲೆಗಡ. ಸಮಪಾತಳಿಯ ಮೇಲೆ ಇರುವ ಚಂದ್ರನಾಥ ಬೆಟ್ಟ ಸೃಷ್ಟಿಸೌಂದರ್ಯ ವೀಕ್ಷಣೆಗೆ ಪ್ರಸಿದ್ಧವೆನಿಸಿದೆ. ಗೋವದ ಶೇ.29 ಪ್ರದೇಶ ಅರಣ್ಯಾವೃತ.
- ವೈಜ್ಞಾನಿಕವಾಗಿ ಅರಣ್ಯವನ್ನು ರಕ್ಷಿಸುವ ಕಾರ್ಯ ಇತ್ತೀಚಿನವರೆಗೂ ನಡೆದಿರಲಿಲ್ಲ. 1963 ರಿಂದೀಚೆಗೆ ಈ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಿವೆ. ನೀಲಗಿರಿ, ತೇಗ, ಗೋಡಂಬಿ, ರಬ್ಬರ್, ಬಿದಿರು, ಗಾಳಿಮರ, ಸವಾರ್, ಮಾವು-ಈ ಮರಗಳನ್ನು ಈಗ ಬೆಳೆಸಲಾಗುತ್ತಿದೆ.
ಗೋವದ ವಾಯುಗುಣ ತೇವೋಷ್ಣಮಯ. ಉಷ್ಣತೆಯಲ್ಲಿ ಹೆಚ್ಚು ವಾರ್ಷಿಕ ಅಂತರಗಳಿಲ್ಲ. 100 ಮೀಗಿಂತ ಹೆಚ್ಚು ಎತ್ತರವಿಲ್ಲದ ಪೂರ್ವಾರ್ಧ ಭಾಗದಲ್ಲಿ 90”-120” (2,800-3,500ಮಿಮೀ) ಮಳೆಯಾಗುತ್ತದೆ. ಉಷ್ಣತೆ 70° ಫ್ಯಾ. - 90° ಫ್ಯಾ. (22° ಸೆಂ-32° ಸೆಂ). ಹೆಚ್ಚು ಎತ್ತರದ ಪ್ರದೇಶವಾದ (ಗರಿಷ್ಠ ಎತ್ತರ 1,200 ಮೀ) ಪೂರ್ವಭಾಗದಲ್ಲಿ ಹೆಚ್ಚು ಮಳೆಯಾಗುತ್ತದೆ (ಗರಿಷ್ಠ 300”). ಇಲ್ಲಿ ಉಷ್ಣತೆಯ ಅಂತರವೂ ಅಧಿಕ.
- ಗೋವದಲ್ಲಿ 1.4 ಲಕ್ಷ ಹೆಕ್ಟೇರು ಪ್ರದೇಶದಲ್ಲಿ ಸಾಗುವಳಿ ಮಾಡಲಾಗುತ್ತಿದೆ. ಭತ್ತ ಇಲ್ಲಿಯ ಮುಖ್ಯ ಬೆಳೆ. ಇತರ ಮುಖ್ಯ ಬೆಳೆಗಳು ಬೇಳೆ ಮತ್ತು ಇತರ ಧಾನ್ಯಗಳು, ಕಬ್ಬು, ತರಕಾರಿ, ತೆಂಗು, ಅಡಿಕೆ, ಗೋಡಂಬಿ ಮತ್ತು ಹಣ್ಣುಗಳು.
ಗೋವದ ಮುಖ್ಯ ನೀರಾವರಿ ಯೋಜನೆಗಳು ಇವು : 1 ಸಾಂಗೆ ತಾಲ್ಲೂಕಿನ ಸಾತಾಲಿ ಮತ್ತು ದೂದ್ ಸಾಗರ್. 2 ಬಾರ್ದೇಜ್ ತಾಲ್ಲೂಕಿನಲ್ಲಿ ಅಂಜುನಾ, ಮಹಾರಾಷ್ಟ್ರದೊಂದಿಗೆ ಕೂಡಿ ತಿಲಾರಿ ಯೋಜನೆಯನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ತಿಲಾರಿ ಅಣೆಕಟ್ಟನ್ನು ನಿರ್ಮಿಸಲಾಗುತ್ತಿದೆ. 2013ರ ಹೊತ್ತಿಗೆ ಈ ಯೋಜನೆ ಪೂರ್ಣಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬರುವ ನಿರೀಕ್ಷೆಯಿದೆ.
- ವ್ಯವಸಾಯದ ಜೊತೆಗೆ ಮೀನುಗಾರಿಕೆಯೂ ಇಲ್ಲಿಯ ಜನರ ಒಂದು ಮುಖ್ಯ ಕಸಬು. ಇಲ್ಲಿ 250 ಕಿಮೀ ಉದ್ದದ ಕರಾವಳಿಯೂ ಸು 100 ಹೆಕ್ಟೇರುಗಳಷ್ಟು ವಿಸ್ತಾರವಾದ ಸಿಹಿನೀರಿನ ಸರೋವರಗಳೂ ಇವೆ. ಕಡಲತೀರದ ಮತ್ತು ಒಳನಾಡಿನ ಜಲದಲ್ಲಿ ಮತ್ಸ್ಯಸಂಪತ್ತು ಸಮೃದ್ಧವಾಗಿದೆ. ಬಂಗಡೆ, ಬೈಗೆ, ಕೊರ್ಸುಲ, ಅರ್ಕುಲೈ ಮುಖ್ಯವಾದವು. ಕರಾವಳಿಯಲ್ಲಿ ಮೀನು ಹಿಡಿಯುವ ದೋಣಿಗಳಿಗೆ ರಕ್ಷಣೆಯಾಗಿ ಹಲವಾರು ಕಡಲಚಾಚುಗಳೂ ಅಳಿವೆಗಳೂ ಇವೆ. ಮತ್ಸ್ಯೋದ್ಯಮ ರಾಜ್ಯದ ಆರ್ಥಿಕ ಸಂಪನ್ಮೂಲಗಳಲ್ಲೊಂದು.
- ಪೋರ್ಚುಗೀಸ್ ಆಡಳಿತದಿಂದ ಗೋವದ ವಿಮೋಚನೆಯಾಗುವವರೆಗೂ ಅದರ ಕೈಗಾರಿಕಾಭಿವೃದ್ಧಿಗೆ ಹೆಚ್ಚಿನ ಗಮನ ಸಂದಿರಲಿಲ್ಲ. ಅಕ್ಕಿ, ಹಿಟ್ಟು ಮತ್ತು ಎಣ್ಣೆ ಗಿರಣಿಗಳು, ಮರ ಕೊಯ್ಯುವ ಕಾರ್ಖಾನೆಗಳು, ಗೋಡಂಬಿ ಕಾರ್ಖಾನೆಗಳು ಮತ್ತು ಇಟ್ಟಿಗೆ ತಯಾರಿಕೆ-ಇವು ಅಲ್ಲಿದ್ದ ಕೆಲವು ಸಣ್ಣ ಉದ್ಯಮಗಳು. ದೋಣಿಯ ನಿರ್ಮಾಣ ಮತ್ತು ದುರಸ್ತಿ, ಮಾಂಸ, ಹಣ್ಣು ಮತ್ತು ಮೀನಿನ ರಕ್ಷಣೆ, ಕೈಮಗ್ಗ, ತೆಂಗಿನ ಎಣ್ಣೆ ತಯಾರಿಕೆ-ಇವು ಹಲವರಿಗೆ ಉದ್ಯೋಗ ದೊರಕಿಸಿಕೊಟ್ಟಿವೆ.
- ಮರಗೆಲಸ, ತೆಂಗಿನ ನಾರಿನ ವಸ್ತುಗಳ ತಯಾರಿಕೆ, ಬಿದಿರಿನ ಕೆಲಸ, ಪಾದರಕ್ಷೆ ತಯಾರಿಕೆ, ಕುಂಬಾರಿಕೆ, ಕುಶಲ ವಸ್ತುಗಳ ತಯಾರಿಕೆ-ಇವು ಹಿಂದಿನಿಂದ ಬಂದಿರುವ ಕೆಲವು ಮುಖ್ಯ ಉದ್ಯೋಗಗಳು. ಗೋವದಲ್ಲಿ ಒಟ್ಟು 60 ಮೆವಾ. ಸ್ಥಾಪಿತ ಸಾಮಥರ್ಯ್ದ ಜಲವಿದ್ಯುತ್ ಮತ್ತು ಉಷ್ಣವಿದ್ಯುತ್ ಕೇಂದ್ರಗಳಿವೆ. ನೆರೆಯ ಕರ್ನಾಟಕ, ಮಹಾರಾಷ್ಟ್ರಗಳಿಂದ ಗೋವಕ್ಕೆ ವಿದ್ಯುತ್ ಸರಬರಾಜು ಆಗುತ್ತದೆ.
- ಗೋವದಲ್ಲಿ ಖನಿಜಸಂಪತ್ತು ಧಾರಾಳವಾಗಿದೆ. ಕಬ್ಬಿಣದ ಅದಿರು, ಕೆಳಶ್ರೇಣಿಯ ಮ್ಯಾಂಗನೀಸ್ ಅದಿರು, ಬಾಕ್ಸೈಟ್ ಇವು ವಿಶೇಷವಾಗಿ ನಿರ್ಯಾತವಾಗುತ್ತವೆ. ಭಾರತದಿಂದ ರಫ್ತಾಗುವ ಕಬ್ಬಿಣ ಅದಿರಿನಲ್ಲಿ ಸುಮಾರು ಅರ್ಧಭಾಗ ಗೋವದಿಂದ ನಿರ್ಯಾತವಾಗುತ್ತದೆ. ಬಿಚೋಲಿ, ಕುದ್ನೇಮ್, ಪಾಲಿ, ಪೈಲ್ಗಾಂವ್ ಮತ್ತು ಸಿರಿಗಾಂವ್ಗಳಲ್ಲಿ ಕಬ್ಬಿಣ ಅದಿರನ್ನೂ ಸಾಂಗೆ ತಾಲ್ಲೂಕಿನಲ್ಲಿ ಮ್ಯಾಂಗನೀಸನ್ನೂ ಕೆಪೆ ತಾಲ್ಲೂಕಿನಲ್ಲಿ ಬಾಕ್ಸೈಟನ್ನೂ ತೆಗೆಯಲಾಗುತ್ತಿದೆ.
- ಕಬ್ಬಿಣ ಅದಿರಿನ ಕಬ್ಬಿಣ ಅಂಶ ಶೇ.57-ಶೇ.62. ಗೋವದಲ್ಲಿ ದೊರಕುವ ಮ್ಯಾಂಗನೀಸ್ ಅದಿರು ಪೈರೊಲುಸೈಟ್ ಮತ್ತು ಪ್ಸಿಲೊಮಿಲೇನ್. ಭಾರತದ ಇತರೆಡೆಗಳಲ್ಲಿ ದೊರಕುವ ಬಾಕ್ಸೈಟ್ ಅದಿರುಗಳಿಗಿಂತ ಗೋವದ್ದು ಭಿನ್ನವಾದ್ದು. ಇದೊಂದು ಟ್ರೈ ಹೈಡ್ರೇಟ್. ಇದರಲ್ಲಿ ನಾನಾ ದರ್ಜೆಗಳುಂಟು. ಮಧ್ಯಮ ದರ್ಜೆಯ ಅದಿರಿಗೆ ವಿದೇಶಗಳಲ್ಲಿ ಹೆಚ್ಚು ಬೇಡಿಕೆಯಿದೆ.
ಗೋವದಲ್ಲಿ ರಸ್ತೆ ಮಾರ್ಗವಿದೆ. ರಾಷ್ಟ್ರೀಯ ಹೆದ್ದಾರಿ 224 ಕಿಮೀ, ರಾಜ್ಯ ಹೆದ್ದಾರಿ 232 ಕಿಮೀ, ಜಿಲ್ಲಾ ರಸ್ತೆಗಳು 815 ಕಿಮೀ ಇವೆ. ಇಂದು ಗೋವ ರೈಲು ಮಾರ್ಗ ಬಹಳಷ್ಟು ಸುಧಾರಿಸಿದ್ದು ಮುಂಬಯಿ, ಮಂಗಳೂರು, ತಿರುವನಂತಪುರಗಳಿಗೆ ಕೊಂಕಣ ರೈಲು ಮಾರ್ಗ ಸಂಪರ್ಕ ಕಲ್ಪಿಸಿದೆ. ಮುಂಬಯಿ, ದೆಹಲಿ, ಕೊಚ್ಚಿ, ಚೆನ್ನೈ, ಬೆಂಗಳೂರು ನಗರಗಳಿಗೆ ವಿಮಾನ ಸಂಪರ್ಕವಿದೆ.
- ಗೋವದ ನದಿಗಳು ದೋಣಿಗಳ ಸಂಚಾರಕ್ಕೆ ಅನುಕೂಲವಾಗಿವೆ. ಮಾಂಡವೀ ಮತ್ತು ಜವಾರೀ ನದಿಗಳು ಈ ದೃಷ್ಟಿಯಿಂದ ಉಪಯುಕ್ತ. ಕಬ್ಬಿಣ ಅದಿರನ್ನು ರಫ್ತು ಮಾಡುವ ಸಲುವಾಗಿ ಮಾರ್ಮಗೋವ ಬಂದರಿಗೆ ಸಾಗಿಸಲು ಇವು ಬಹು ಅನುಕೂಲವಾಗಿವೆ. 100 ಕಿಮೀ ಉದ್ದದ ಕರಾವಳಿಯಿರುವ ಗೋವದ ಮುಖ್ಯ ಬಂದರು ಮಾರ್ಮಗೋವ. ಮುಂಬಯಿ, ಕೊಚ್ಚಿಗಳ ನಡುವಣ ದೊಡ್ಡ ರೇವು ಇದು.
- ಗೋವದ ಆಯಾತ-ನಿರ್ಯಾತಗಳಲ್ಲಿ ಶೇ. 90ಕ್ಕಿಂತಲೂ ಹೆಚ್ಚು ಭಾಗ ಈ ಬಂದರಿನ ಮೂಲಕ ಸಾಗುತ್ತದೆ. ಸೆಪ್ಟೆಂಬರಿನಿಂದ ಮೇ ವರೆಗೆ ಮುಂಬಯಿಯಿಂದ ಮಾರ್ಮಗೋವಕ್ಕೆ ಪ್ರಯಾಣಿಕ ನೌಕೆಗಳು ಸಂಚರಿಸುತ್ತವೆ. ಚಪೋರ, ಪಣಜಿ, ಬೇತುಲ್, ತಲ್ಪೋರ ಇವು ಇತರ ಬಂದರುಗಳು.

- ಗೋವದ ರಾಜಧಾನಿ ಪಣಜಿ. ಮಾಂಡವೀ ನದಿಯ ಎಡದಂಡೆಯ ಮೇಲೆ ಇರುವ ಪಣಜಿಯ ವಿಸ್ತೀರ್ಣ 36 ಚ.ಕಿಮೀ. ಜನಸಂಖ್ಯೆ 1,14,405 (2011). ಹಿಂದೆ ಇದು ಮೀನು ಹಿಡಿಯುವವರ ಹಳ್ಳಿಯಾಗಿತ್ತು. ಈಗ ಇದೊಂದು ಸುಂದರ ನಗರ. ಎಲ್ಲೆಲ್ಲೂ ಹಸುರು ತುಂಬಿದೆ. ಹಳೆಯ ಗೋವ ಬಹುಮಟ್ಟಿಗೆ ಪಾಳುಬಿದ್ದ ನಗರ. ಗತಕಾಲದ ಸ್ಮಾರಕಗಳಾಗಿ ಕೆಲವು ಕಟ್ಟಡಗಳು ಅಲ್ಲಿ ಉಳಿದಿವೆ.
- 1511ರಲ್ಲಿ ಕಟ್ಟಿ 1623ರಲ್ಲಿ ಜೀರ್ಣೋದ್ಧಾರವಾದ ಕ್ರೈಸ್ತ ಆರಾಧನ ಮಂದಿರ, ಸೇಂಟ್ ಫ್ರಾನ್ಸಿಸ್ ಕ್ರೈಸ್ತ ಸನ್ಯಾಸಿನಿಯರ ಮಠ, ಪ್ರಸಿದ್ಧವೂ ಸುಂದರವೂ ಆದ ಸೇಂಟ್ ಫ್ರಾನ್ಸಿಸನ ಬಾಮ್ ಜೀಸಸ್ ಎಂಬ ಸಮಾಧಿ ಭವನ, 17ನೆಯ ಶತಮಾನದ ಸೇಂಟ್ ಲೋನಿಕಾ ಕ್ರೈಸ್ತ ಸನ್ಯಾಸಿನಿಯರ ಮಠ, ಶಿಥಿಲಾವಸ್ಥೆಯಲ್ಲಿರುವ ಸೇಂಟ್ ಪಾಲ್ ಕಾಲೇಜು-ಇವು ಮುಖ್ಯವಾದವು. ಮಾರ್ಗೋವ ಎರಡನೆಯ ಮುಖ್ಯ ನಗರ. ಇದರ ಜನಸಂಖ್ಯೆ 1,06,528 (2011). ಇದು ದಕ್ಷಿಣ ಗೋವದ ಮುಖ್ಯ ವಾಣಿಜ್ಯ ಕೇಂದ್ರ.
- ಮಪುಸ 40,487 (2011) ಉತ್ತರ ಗೋವದಲ್ಲಿದೆ. ಗೋವ ರಾಜ್ಯವನ್ನು ಉತ್ತರ ಗೋವ (ವಿಸ್ತೀರ್ಣ 1736 ಚಕಿಮೀ. ದಕ್ಷಿಣ ಗೋವ (ವಿಸ್ತೀರ್ಣ 1,966 ಚ.ಕಿಮೀ) ಎಂದು ಎರಡು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ. ಪಣಜಿ ಉತ್ತರ ಗೋವದ ಆಡಳಿತ ಕೇಂದ್ರ. ಮಡಗಾಂವ್ ದಕ್ಷಿಣ ಗೋವದ ಆಡಳಿತ ಕೇಂದ್ರ. ಗೋವಾ ಭೂದಾಖಲೆಯನ್ನು ಗಣಕೀಕೃತಗೊಳಿಸಿದ ಭಾರತದ ಪ್ರಥಮ ರಾಜ್ಯವಾಗಿದೆ.

ಪ್ರಪಂಚದಲ್ಲೇ ಅತ್ಯಂತ ಸುಂದರವಾದ ಕೆಲವು ಬೀಚುಗಳು ಗೋವದಲ್ಲಿವೆ. ಕಲಾಂಗೂಟೆ, ಕೋಲ್ವ, ದೋನಾ ಪಾಲಾ, ಸಿರಿದಾವೊ, ವಾಗತೋರ, ಮಾಂದ್ರೇ ಮತ್ತು ಮೋರ್ಜಿ ಬೀಚುಗಳಿಗೆ ಪ್ರವಾಸಿಗಳು ಅಧಿಕ ಸಂಖ್ಯೆಯಲ್ಲಿ ಬರುತ್ತಾರೆ.
ಗೋವ ಭಾರತದಲ್ಲೇ ಅತ್ಯಂತ ಶ್ರೀಮಂತ ರಾಜ್ಯವಾಗಿದೆ. ಇಲ್ಲಿಯ ಜಿಡಿಪಿಯು ಭಾರತದ ಸರಾಸರಿ ಜಿಡಿಪಿಗಿಂತ ಎರಡೂವರೆ ಪಟ್ಟು ಹೆಚ್ಚಿದೆ.
ಗೋವದ ಐತಿಹಾಸಿಕ ಜನಸಂಖ್ಯೆಯ ಏರಿಕೆಯನ್ನು ಈ ಕೆಳಗಿನ ತಖ್ತೆಯಲ್ಲಿ ಕೊಡಲಾಗಿದೆ.
| Population Growth | |||
|---|---|---|---|
| Census | Pop. | %± | |
| 1951 | ೫,೪೭,೦೦೦ | ||
| 1961 | ೫,೯೦,೦೦೦ | 7.9% | |
| 1971 | ೭,೯೫,೦೦೦ | 34.7% | |
| 1981 | ೧೦,೦೮,೦೦೦ | 26.8% | |
| 1991 | ೧೧,೭೦,೦೦೦ | 16.1% | |
| 2001 | ೧೩,೪೭,೬೬೮ | 15.2% | |
| 2011 | ೧೪,೫೭,೭೨೩ | 8.2% | |
- ಹಳೆಯ ಗೋವದಲ್ಲಿ ಕ್ರೈಸ್ತರು ಹೆಚ್ಚು; ಹೊಸ ಗೋವದಲ್ಲಿ (ನೊವ ಗೋವ) ಹಿಂದುಗಳು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಪೋರ್ಚುಗೀಸರ ಅಂತರ ವಿವಾಹಗಳಿಂದ ಸ್ವಲ್ಪಮಟ್ಟಿಗೆ ಸಂಮಿಶ್ರ ಜನಾಂಗದವರಿದ್ದಾರೆ. ಇಲ್ಲಿಯ ಜನರ ಮಾತೃಭಾಷೆ ಕೊಂಕಣಿ. ಸಾಮಾನ್ಯವಾಗಿ ಕ್ರಿಶ್ಚಿಯನರು ಪೋರ್ಚುಗೀಸ್ ಭಾಷೆಯನ್ನೂ ಹಿಂದುಗಳು ಕೊಂಕಣಿ ಭಾಷೆಯನ್ನೂ ಆಡುತ್ತಾರೆ.
- ಜನಸಾಂದ್ರತೆ ಹಾಗೂ ಪೋರ್ಚುಗೀಸರ ಮಿತಿಮೀರಿದ ತೆರಿಗೆಯಿಂದಾಗಿ ಜನರು ಅನೇಕ ಕಡೆಗಳಿಗೆ ವಲಸೆ ಹೋದರು. ಅನೇಕರು ಆಫ್ರಿಕದತ್ತ ಸಾಗಿ ಮೊಜ಼ಾಂಬಿಕ್ ಹಾಗೂ ನೇಟಾಲ್ಗಳಲ್ಲಿ ನೆಲೆಸಿದರು. ಮುಂಬಯಿಗೆ ತೆರಳಿದ ಗೋವನರೇ ಹೆಚ್ಚು.
- ಗೋವದಲ್ಲಿ ಹಿಂದೂ ಹಾಗೂ ಕ್ರೈಸ್ತ ಮತಗಳು ಪ್ರಚಾರದಲ್ಲಿವೆ. ಕದಂಬರ ಕಾಲದ ಸಪ್ತಕೋಟೀಶ್ವರ ದೇವಾಲಯ, ಸೇಂಟ್ ಫ್ರಾನ್ಸಿಸ್ ಜೇ಼ವಿಯರನ ಸಮಾಧಿಭವನ ಪ್ರಸಿದ್ಧವಾದವು. ಸಂತ ಜೇ಼ವಿಯರನ ಪಾರ್ಥಿವ ಶರೀರವನ್ನು ಭಕ್ತರಿಗೆ ಹತ್ತು ವರ್ಷಗಳಿಗೊಮ್ಮೆ ಪ್ರದರ್ಶಿಸುತ್ತಾರೆ. ಹಳೆಯ ಗೋವದಲ್ಲಿ ಲೆಂಟ್ ಉಪವಾಸ ದಿನಗಳಲ್ಲಿ ಸಂತರ ವಿಗ್ರಹಗಳನ್ನು ಮೆರೆವಣಿಗೆ ಮಾಡುತ್ತಾರೆ. ಪೋರ್ಚುಗೀಸರು ಬಂದಮೇಲೆ ಗೋವದಲ್ಲಿ ಕ್ರೈಸ್ತಮತ ಪ್ರಚಾರವಾಯಿತು. ಡಾಮಿನಿಕ್ ಪಂಥದ ಕ್ರೈಸ್ತ ಸನ್ಯಾಸಿಗಳು ಗೋವಕ್ಕೆ ಬಂದದ್ದು 1510ರಲ್ಲಿ.
- 1517ರಲ್ಲಿ ಬಂದ ಫ್ರಾನ್ಸಿಸ್ಕನ್ ಪಾದ್ರಿಗಳು ಕ್ರೈಸ್ತಮತ ಪ್ರಚಾರವನ್ನು ಆರಂಭಿಸಿದರು. ಫ್ರಾನ್ಸಿಸ್ಕನ್ ಪಂಥದ ಸನ್ಯಾಸಿ ಜೊವಾನ್ ದ ಆಲ್ಬುಕರ್ಕ್ 1538ರಲ್ಲಿ ಗೋವದ ಪ್ರಥಮ ಬಿಷಪ್ ಆಗಿ ನೇಮಕವಾದ. 1542ರಲ್ಲಿ ಫ್ರಾನ್ಸಿಸ್ಕ್ ಜೇವಿಯರ್ ಸ್ಥಳೀಯ ಮತಪ್ರಚಾರಕರಿಗೆ ತರಬೇತು ನೀಡುವ ಸಾಂತಾಫಿ ಕಾಲೇಜಿನ ಮೇಲ್ವಿಚಾರಕನಾದ. ತರುವಾಯ ಈ ಕಾಲೇಜಿಗೆ ಸೇಂಟ್ ಪಾಲ್ ಕಾಲೇಜು ಎಂದು ಹೆಸರಾಯಿತು.
- 1557ರ ಫೆಬ್ರವರಿ 4 ಪೋಪ್ ಹೊರಡಿಸಿದ ಆಜ್ಞೆಯ ಪ್ರಕಾರ ಗೋವವೂ ಆರ್ಚ್ಬಿಷಪನ ಅಧಿಕಾರವ್ಯಾಪ್ತಿಯ ಕೇಂದ್ರವೂ ಪ್ರಾಚ್ಯಪ್ರಾಂತಗಳ ರೋಮನ್ ಕೆಥೊಲಿಕ್ ಪಾದ್ರಿಗಳ ಕೇಂದ್ರವೂ ಆಯಿತು. 20ನೆಯ ಶತಮಾನದಲ್ಲಿ ಪೋಪ್ ಹೊರಡಿಸಿದ ಅಧಿಕೃತ ನಿಯಮಗಳ ಪ್ರಕಾರ ಗೋವದ ಆರ್ಚ್ಬಿಷಪ್ ಅಧಿಕಾರ ಇಡೀ ಪೋರ್ಚುಗೀಸ್ ಭಾರತಕ್ಕೆ ಅನ್ವಯಿಸಿತು. ಇಲ್ಲಿಯ ಜನರ ಭಾಷೆ ಮುಖ್ಯವಾಗಿ ಕೊಂಕಣಿ. ಕನ್ನಡ,ಮರಾಠಿ, ಹಿಂದಿ ಭಾಷೆಗಳೂ ಬಳಕೆಯಲ್ಲಿವೆ.
| Languages in Goa | ||||
|---|---|---|---|---|
| Konkani | 61% | |||
| Kannada | 19% | |||
| Marathi | 7% | |||
| Hindi | 5% | |||
| Urdu | 4% | |||
| Others | 4% | |||


- ಗೋವದ ಇತಿಹಾಸ ಪ್ರಾಚೀನವಾದ್ದು. ಹಲವು ಪುರಾಣಗಳಲ್ಲೂ ಶಾಸನಗಳಲ್ಲೂ ಗೋವದ ಉಲ್ಲೇಖಗಳಿವೆ. ಪರಶುರಾಮ ಮಿಥಿಲೆಯಿಂದ ಬ್ರಾಹ್ಮಣ ಕುಟುಂಬಗಳನ್ನು ಕರೆತಂದು ಇಲ್ಲಿ ನೆಲೆಗೊಳಿಸಿದನೆಂದು ಪ್ರತೀತಿಯಿದೆ. ಇತಿಹಾಸಕಾಲದಲ್ಲಿ ಗೋವ ಮೌರ್ಯ ಸಾಮ್ರಾಜ್ಯದ ಭಾಗವಾಗಿತ್ತು. ದಖನಿನಲ್ಲಿ ಸಾಮ್ರಾಜ್ಯ ಸ್ಥಾಪಿಸಿ ದೀರ್ಘಕಾಲ ರಾಜ್ಯವಾಳಿದ ಶಾತವಾಹನರು ತಮ್ಮ ಸಾರ್ವಭೌಮತ್ವವನ್ನು ಗೋವದ ಮೇಲೂ ಸ್ಥಾಪಿಸಿದ್ದರು. ರೋಮನ್ ಸಾಮ್ರಾಜ್ಯಕ್ಕೂ ದಖನ್ ಪ್ರದೇಶಕ್ಕೂ ವ್ಯಾಪಾರ ಸಂಪರ್ಕವಿತ್ತು.
- ಗೋವ ಪಟ್ಟಣ ಮುಖ್ಯ ವ್ಯಾಪಾರ ಕೇಂದ್ರ ಹಾಗೂ ಪ್ರಮುಖ ಬಂದರು ಆಗಿತ್ತೆಂದು ತಿಳಿದುಬರುತ್ತದೆ.ಶಾತವಾಹನರ ಸಾಮ್ರಾಜ್ಯ ಅವನತಿ ಹೊಂದಿದ ಅನಂತರ ತಲೆಯೆತ್ತಿದ ಬನವಾಸಿ ಕದಂಬ ಮನೆತನ ಗೋವದ ಬಹುಭಾಗದಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸಿತ್ತು. ಆರನೆಯ ಶತಮಾನದ ಕೊನೆಯಲ್ಲಿ ಬಾದಾಮಿ ಚಾಳುಕ್ಯ ಮನೆತನ ಪ್ರಬಲವಾಗಿ ಕದಂಬರನ್ನು ಸೋಲಿಸಿತು. ಒಂದನೆಯ ಕೀರ್ತಿವರ್ಮ ಕೊಂಕಣದ ಹಲವು ಪ್ರದೇಶಗಳ ಮೇಲೆ ಚಾಳುಕ್ಯರ ಅಧಿಕಾರವನ್ನು ಸ್ಥಾಪಿಸಿದ.
- ಇಮ್ಮಡಿ ಪುಲಕೇಶಿ ತನ್ನ ದಿಗ್ವಿಜಯ ಕಾಲದಲ್ಲಿ ಕೊಂಕಣ ಪ್ರದೇಶವನ್ನು ಪುರ್ಣವಾಗಿ ಜಯಿಸಿ ತನ್ನ ಸಾಮ್ರಾಜ್ಯಕ್ಕೆ ಸೇರಿಸಿಕೊಂಡ. ಇವನು ಗೋವದ ಉತ್ತರ ಪ್ರದೇಶದಲ್ಲಿ ಆಳುತ್ತಿದ್ದ ಮೌರ್ಯ ಶಾಖೆಯ ರಾಜನನ್ನು ಸೋಲಿಸಿದ ಸಂಗತಿ ಐಹೊಳೆಯ ಶಾಸನದಿಂದ ತಿಳಿದುಬರುತ್ತದೆ. ಬಾದಾಮಿ ಚಾಳುಕ್ಯ ಸಾಮ್ರಾಜ್ಯ 757ರಲ್ಲಿ ಕೊನೆಗೊಂಡ ಅನಂತರ ಗೋವ ಪ್ರದೇಶ ರಾಷ್ಟ್ರಕೂಟ ಸಾಮ್ರಾಜ್ಯದ ಭಾಗವಾಯಿತು.
- ಚಾಳುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಟರ ಕಾಲದಲ್ಲಿ ಅರೇಬಿಯ, ಪರ್ಷಿಯ ಮತ್ತು ದಖನ್ಗಳ ನಡುವೆ ವ್ಯಾಪಾರ ಸಂಪರ್ಕ ವಿಶೇಷವಾಗಿ ಅಭಿವೃದ್ಧಿ ಹೊಂದಿತ್ತು. ವಿದೇಶೀ ಹಡಗುಗಳು ಗೋವ ಬಂದರಿಗೆ ಬರುತ್ತಿದ್ದುವು. ಗೋವ ಪಟ್ಟಣ ಪಶ್ಚಿಮ ತೀರದ ಮುಖ್ಯ ವ್ಯಾಪಾರ ಕೇಂದ್ರಗಳಲ್ಲೊಂದಾಗಿತ್ತು. ರಾಷ್ಟ್ರಕೂಟರ ಕೊನೆಗಾಲದಲ್ಲಿ ಗೋವ ಪ್ರದೇಶದಲ್ಲಿ ಕದಂಬರು ರಾಜ್ಯ ಸ್ಥಾಪಿಸಿದರು. ಇವರಿಗೆ ಗೋವೆಯ ಕದಂಬರೆಂದೇ ಹೆಸರಾಗಿದೆ. ಗೋವದ ಕದಂಬ ಮನೆತನ ಕದಂಬ ಮನೆತನದ ಉಪಶಾಖೆಗಳಲ್ಲೊಂದಾಗಿತ್ತು.
- ಗೋವದ ಸಮೀಪದ ಚಂದ್ರಪುರ (ಇಂದಿನ ಚಂದೂರು) ಇವರ ರಾಜಧಾನಿಯಾಗಿತ್ತು. ಈ ಶಾಖೆಯ ಆರಂಭ ಕಾಲದ ಕಂಟಕಾಚಾರ್ಯ, ನಾಗವರ್ಮ, 1ನೆಯ ಗುಹಲದೇವ ಮೊದಲಾದವರು ಅಷ್ಟು ಪ್ರಬಲರಾಗಿರಲಿಲ್ಲ. ಒಂದನೆಯ ಷಷ್ಟದೇವ ಅಥವಾ ಚತುರ್ಭುಜನೆಂಬ ರಾಜ 970ರ ಸುಮಾರಿನಲ್ಲಿ ಪ್ರಬಲನಾಗಿದ್ದುದಲ್ಲದೆ ರಾಷ್ಟ್ರಕೂಟ ಸಾಮ್ರಾಜ್ಯವನ್ನು ಕೊನೆಗಾಣಿಸುವಲ್ಲಿ ಕಲ್ಯಾಣಿ ಚಾಳುಕ್ಯ ತೈಲಪನಿಗೆ ಸಹಾಯ ಮಾಡಿದನೆಂದು ತಿಳಿದುಬಂದಿದೆ.
- 11ನೆಯ ಶತಮಾನದ ಪ್ರಾರಂಭದಲ್ಲಿ ಆಳುತ್ತಿದ್ದ 2ನೆಯ ಗುಹಿಲದೇವನ ಕಾಲದಲ್ಲಿ ಗೋವ ಪ್ರಸಿದ್ಧವಾದ ವಾಣಿಜ್ಯ ಕೇಂದ್ರವೂ ರೇವು ಪಟ್ಟಣವೂ ಆಗಿತ್ತೆಂದೂ ಆ ವೇಳೆಗೆ ಅರಬ್ ವರ್ತಕರು ಗೋವೆಯಲ್ಲಿ ನೆಲಸಿದ್ದರೆಂದೂ ತಿಳಿದುಬರುತ್ತದೆ. ಅನಂತರ ಆಳಿದ 2ನೆಯ ಷಷ್ಟದೇವ ಇಡೀ ಕೊಂಕಣ ಪ್ರದೇಶದ ಮೇಲೆ ತನ್ನ ಆಳಿಕೆ ಸ್ಥಾಪಿಸಿದ. ಇವನಿಗೆ ಚಟ್ಟಲ ಮತ್ತು ಚಟ್ಟಯ್ಯ ಎಂಬ ಹೆಸರುಗಳಿದ್ದುವು. ಚಾಳುಕ್ಯ ಜಯಸಿಂಹನ ಆಶ್ರಿತನಾಗಿದ್ದ ಇವನ ಆಳಿಕೆಯಲ್ಲಿ ಗೋವ ಪಟ್ಟಣ ವಾಣಿಜ್ಯ ಕೇಂದ್ರವಾಗಿ ವಿಶೇಷ ಪ್ರಸಿದ್ಧಿ ಪಡೆದಿತ್ತು.
- ಗೋವ ರೇವು ಪಟ್ಟಣ ಭವ್ಯ ಭವನಗಳಿಂದಲೂ ಇಬ್ಬದಿಯ ದೊಡ್ಡ ದೊಡ್ಡ ಮಳಿಗೆಗಳಿಂದ ಕೂಡಿದ ವಿಶಾಲ ಬೀದಿಗಳಿಂದಲೂ ಉದ್ಯಾನಗಳಿಂದಲೂ ಕಂಗೊಳಿಸುತ್ತಿತ್ತೆಂದು ಆ ಕಾಲದ ಶಾಸನಗಳಲ್ಲಿ ವರ್ಣಿಸಲಾಗಿದೆ. ಷಷ್ಟದೇವನ ಅನಂತರ ಅವನ ಮಗನಾದ 1ನೆಯ ಜಯಕೇಶಿ ಗೋವದ ರಾಜನಾದ. ಗೋವ ರಾಜ್ಯ ಇವನ ಆಳಿಕೆಯ ಕಾಲದಲ್ಲಿ ಕಪಾರ್ಡಿಕ ದ್ವೀಪ, ಕೊಂಕಣ, ಹೈವೆ, ಹಲಸೀಗೆ ಮೊದಲಾದ ಪ್ರದೇಶಗಳನ್ನೊಳಗೊಂಡಿತ್ತು.
- ಪರಾಕ್ರಮಿಯೂ ದೂರದರ್ಶಿಯೂ ಆದ ಈತ ಕಲ್ಯಾಣಿ ಚಾಳುಕ್ಯ ವಿಕ್ರಮಾದಿತ್ಯನಿಗೆ ತನ್ನ ಒಬ್ಬ ಮಗಳನ್ನೂ ಅನಿಲ್ವಾಡದ ಚಾಳುಕ್ಯ ಕರ್ಣನಿಗೆ ತನ್ನ ಮತ್ತೊಬ್ಬ ಮಗಳನ್ನೂ ಕೊಟ್ಟು ವಿವಾಹ ಮಾಡಿ ಗೋವ ಕದಂಬ ಸಂತತಿಯ ಪ್ರಭಾವವನ್ನು ವಿಸ್ತರಿಸಿದ. ಈತ ಗೋವ ಪಟ್ಟಣವನ್ನು ತನ್ನ ರಾಜಧಾನಿಯನ್ನಾಗಿ ಮಾಡಿಕೊಂಡ. ಅನೇಕ ಸಮಕಾಲೀನ ಶಾಸನಗಳಲ್ಲಿ ಅಂದಿನ ಗೋವ ನಗರದ ಸೌಂದರ್ಯವೂ ಐಶ್ವರ್ಯವೂ ವರ್ಣಿಸಲ್ಪಟ್ಟಿವೆ.
- ರಾಜಮಾರ್ಗಗಳಲ್ಲಿ ಪಂಡಿತರೂ ಶ್ರೀಮಂತರೂ ಧನಕನಕ ಐಶ್ವರ್ಯಾದಿಗಳೂ ಕಣ್ಮನಗಳಿಗೆ ಹಬ್ಬವನ್ನುಂಟು ಮಾಡುತ್ತ ನಗರ ಅಮರಪುರಿಯಂತೆ ಕಂಗೊಳಿಸುತ್ತದೆ ಎಂಬುದಾಗಿ ಹಲವು ಶಾಸನಗಳಲ್ಲಿ ವರ್ಣಿಸಲಾಗಿದೆ. ಒಂದನೆಯ ಜಯಕೇಶಿಯ ಪ್ರಧಾನಮಂತ್ರಿಯಾಗಿದ್ದ, ಅರಬ್ ಮೂಲದ ಸದನೋ ಎಂಬವನು ಗೋವ ನಗರದ ಮತ್ತು ಪ್ರಜೆಗಳ ಸರ್ವತೋಮುಖ ಅಭಿವೃದ್ಧಿಗೆ ವಿಶೇಷವಾಗಿ ಶ್ರಮಿಸಿದ. ಗೋವ ಬಂದರನ್ನು ಅಭಿವೃದ್ಧಿಪಡಿಸಿ ಸಾಗರೋತ್ತರ ವ್ಯಾಪಾರವನ್ನು ಪ್ರೋತ್ಸಾಹಿಸಿದ. ಗೋವದ ಜನರು ಐಶ್ವರ್ಯ ಮತ್ತು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು. *1053ರಲ್ಲಿ ಈ ಮಂತ್ರಿ ಬಡಬಗ್ಗರ ಸಹಾಯಕ್ಕಾಗಿ ಒಂದು ಸಂಸ್ಥೆಯನ್ನು ಸ್ಥಾಪಿಸಿದ. ನಿರ್ಗತಿಕರಿಗೂ ಅಂಗವಿಕಲರಿಗೂ ಉಚಿತ ಊಟ ವಸತಿಯನ್ನು ಒದಗಿಸಿದ. ಈ ಸಂಸ್ಥೆಯ ವೆಚ್ಚಕ್ಕಾಗಿ ಹೊರಗಿನಿಂದ ಗೋವ ಬಂದರಿಗೆ ಬರುತ್ತಿದ್ದ ವ್ಯಾಪಾರಿ ಹಡಗುಗಳ ಮೇಲೆ ನಿಗದಿಯಾದ ಸುಂಕ ವಿಧಿಸಿದ. ಅಲ್ಲದೆ ಗೋವ ರಾಜ್ಯದಲ್ಲಿ ಸಂತಾನವಿಲ್ಲದೆ ಮರಣ ಹೊಂದಿದ ಶ್ರೀಮಂತರ ಆಸ್ತಿ ಈ ಸಂಸ್ಥೆಗೆ ಸೇರತಕ್ಕದ್ದೆಂದು ಕಾನೂನು ಜಾರಿಗೆ ಬಂತು. ಈ ಸಂಸ್ಥೆಯ ಆದಾಯ ಹೇರಳವಾಗಿತ್ತು.
- ಒಂದನೆಯ ಜಯಕೇಶಿಯ ಆಳಿಕೆಯಲ್ಲಿ ಗೋವ ರಾಜ್ಯ ಸರ್ವತೋಮುಖ ಅಭಿವೃದ್ಧಿ ಹೊಂದಿ ನೆಮ್ಮದಿಯ ಬೀಡಾಗಿತ್ತು. ಇವನ ಅನಂತರ 3ನೆಯ ಗುಹಿಲದೇವ ಮತ್ತು ವಿಜಯಾದಿತ್ಯ ಎಂಬುವರು ಅನುಕ್ರಮವಾಗಿ ಗೋವ ರಾಜ್ಯವನ್ನಾಳಿದರು. ವಿಜಯಾದಿತ್ಯನ ಮರಣಾನಂತರ ಅವನ ಮಗನಾದ 2ನೆಯ ಜಯಕೇಶಿ ರಾಜನಾಗಿ 1104ರಿಂದ 1148ರ ವರೆಗೆ ಆಳಿದ. ಎರಡನೆಯ ಜಯಕೇಶಿಯ ಆಳಿಕೆಯಲ್ಲಿ ಗೋವ ರಾಜ್ಯ ಉನ್ನತಿಯ ಶಿಖರ ಮುಟ್ಟಿತು.
- ವಿವೇಕಿಯೂ ಪರಾಕ್ರಮಿಯೂ ಆದ ಜಯಕೇಶಿ ಕಲ್ಯಾಣಿ ಚಾಳುಕ್ಯರ ಅಧೀನತೆಯಿಂದ ಸ್ವತಂತ್ರನಾಗಲು ಹವಣಿಸಿ ಕೊಂಕಣ ಚಕ್ರವರ್ತಿ ಎಂಬ ಬಿರುದನ್ನು ಧರಿಸಿದ. ದೂರದರ್ಶಿಯಾದ ಚಾಳುಕ್ಯ ಸಾರ್ವಭೌಮ 6ನೆಯ ವಿಕ್ರಮಾದಿತ್ಯ ತನ್ನ ಮಗಳನ್ನು ಜಯಕೇಶಿಗೆ ಕೊಟ್ಟು ವಿವಾಹ ಮಾಡಿ ಗೋವ ಮತ್ತು ಕಲ್ಯಾಣಿ ಮನೆತನಗಳ ಮಧ್ಯೆ ಮಧುರ ಬಾಂಧವ್ಯವನ್ನು ಏರ್ಪಡಿಸಿದ. ವಿಕ್ರಮಾದಿತ್ಯನ ಮರಣಾನಂತರ ದೋರಸಮುದ್ರದ ಹೊಯ್ಸಳ ವಿಷ್ಣುವರ್ಧನ ಚಾಳುಕ್ಯ ಮಾಂಡಲಿಕರನ್ನು ಸೋಲಿಸಿ ಕೃಷ್ಣಾ ನದಿಯವರೆಗೂ ದಂಡೆತ್ತಿ ಹೋದ.
- ಅವನು ಜಯಕೇಶಿಯನ್ನು ಸೋಲಿಸಿ ಹಾನಗಲ್, ಹಲಸೀಗೆ ಮೊದಲಾದ ಪ್ರದೇಶಗಳನ್ನು ವಹಿಸಿಕೊಂಡ. ಆದರೆ 1142ರಲ್ಲಿ ವಿಷ್ಣುವರ್ಧನ ಮರಣ ಹೊಂದಿದ ಅನಂತರ ಜಯಕೇಶಿ ತಾನು ಕಳೆದುಕೊಂಡಿದ್ದ ಪ್ರದೇಶವನ್ನು ಪುನಃ ವಶಪಡಿಸಿಕೊಂಡ. ಜಯಕೇಶಿಯ ಆಳಿಕೆಯಲ್ಲಿ ಗೋವ ರಾಜ್ಯದಲ್ಲಿ ವ್ಯವಸ್ಥಿತ ಆಡಳಿತವಿದ್ದು ಜನರು ನೆಮ್ಮದಿಯಿಂದಿದ್ದರು. ಇವನ ಅನೇಕ ಶಾಸನಗಳಲ್ಲಿ ಆಡಳಿತ, ಸಾಮಾಜಿಕ ಜೀವನ ಮತ್ತು ಆರ್ಥಿಕ ಪುರೋಭಿವೃದ್ಧಿಗೆ ಸಂಬಂಧಿಸಿದ ಮಾಹಿತಿಗಳು ದೊರೆಯುತ್ತವೆ.
- ಎರಡನೆಯ ಜಯಕೇಶಿಯ ಮರಣಾನಂತರ ಅವನ ಮಗ ಪೆರ್ಮಾಡಿದೇವ ರಾಜನಾದ. ಇವನಿಗೆ ಶಿವಚಿತ್ತ, ವಿಷ್ಣುಚಿತ್ತ ಎಂಬ ಹೆಸರುಗಳೂ ಇದ್ದುವು. ಇವನ ರಾಣಿಯಾದ ಕಮಲಾದೇವಿ ಗೋವದಲ್ಲಿ ಅನೇಕ ಅಗ್ರಹಾರಗಳನ್ನು ಸ್ಥಾಪಿಸಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿದಳಲ್ಲದೆ ದೇಗಾಂವೆ ಎಂಬಲ್ಲಿ ಶ್ರೀ ಕಮಲನಾರಾಯಣ ಮತ್ತು ಶ್ರೀ ಮಹಾಲಕ್ಷ್ಮಿ ದೇವಾಲಯಗಳನ್ನು ಕಟ್ಟಿಸಿದಳು.
- ಗೋವದ ಕದಂಬ ರಾಜರು 1156ರ ವರೆಗೂ ಕಲ್ಯಾಣಿ ಚಾಳುಕ್ಯರ ಸಾಮಂತರಾಗಿದ್ದರು. ಕಲ್ಯಾಣಿಯಲ್ಲಿ ರಾಜ್ಯ ವಿಪ್ಲವ ನಡೆದು ಕಳಚುರಿ ಬಿಜ್ಜಳ ಚಕ್ರವರ್ತಿಯಾದ ಅನಂತರ ಗೋವದ ರಾಜ ಸ್ವತಂತ್ರನಾದ. ಕಳಚುರಿಗಳ ಮತ್ತು ಹೊಯ್ಸಳರ ನಡುವೆ ಅನೇಕ ಯುದ್ಧಗಳು ನಡೆದು ಕಳಚುರಿಗಳ ಪ್ರಭಾವ ಕುಂದಿತು. ಹೊಯ್ಸಳ ವೀರಬಲ್ಲಾಳ 1182ರಲ್ಲಿ ಗೋವದ ರಾಜನನ್ನು ಸೋಲಿಸಿ ಕಪ್ಪಕಾಣಿಕೆ ಸ್ವೀಕರಿಸಿ ಆಶ್ರಿತ ರಾಜನನ್ನಾಗಿ ಮಾಡಿಕೊಂಡ. ಅನಂತರ ಸೇವುಣರಿಗೂ ಹೊಯ್ಸಳರಿಗೂ ದಖನಿನ ಸಾರ್ವಭೌಮತ್ವಕ್ಕಾಗಿ ಹೋರಾಟ ನಡೆಯಿತು.
- 1214ರ ಅನಂತರ ಗೋವದ ರಾಜನಾದ 3ನೆಯ ಜಯಕೇಶಿ ದೇವಗಿರಿಯ ಸಿಂಗಣನ ಆಶ್ರಿತ ರಾಜನಾದ. 1310ರಲ್ಲಿ ಮಲಿಕ್ ಕಾಫೂರನ ದಂಡಯಾತ್ರೆಯಿಂದ ದೇವಗಿರಿ ಸೇವುಣರ ಆಡಳಿತ ಕೊನೆಗೊಂಡಿತು. ಗೋವದ ರಾಜ ಸ್ವತಂತ್ರವಾಗಿ ಆಳಲು ಪ್ರಾರಂಭಿಸಿದ. ಆದರೆ ಮಲಿಕ್ ಕಾಫೂರನು ಗೋವ ರಾಜ್ಯವನ್ನು ಸೂರೆಮಾಡಿ ರಾಜಧಾನಿಯನ್ನು ಆಕ್ರಮಿಸಿದ. ಅವನು ಹಿಂದಿರುಗಿದ ಅನಂತರ ಗೋವದ ರಾಜ ಚಂದ್ರಪುರವನ್ನು ರಾಜಧಾನಿಯಾಗಿ ಮಾಡಿಕೊಂಡು ಆಳಲುಪಕ್ರಮಿಸಿದ.
- 1350ರ ವೇಳೆಗೆ ಮಹಮದ್ ಬಿನ್ ತುಗಲಕನ ದಳಪತಿಯೊಬ್ಬ ಚಂದ್ರಪುರವನ್ನು ಮುತ್ತಿ ನಾಶಮಾಡಿದ. ಸಹಸ್ರಾರು ಮಂದಿ ಹಿಂದೂ ಸೈನಿಕರೂ ಗೋವದ ರಾಜಪರಿವಾರದವರೂ ಮರಣ ಹೊಂದಿದ್ದಾಗಿ ಇಬ್ನ್ ಬತೂತನ ಬರೆವಣಿಗೆಯಿಂದ ತಿಳಿದುಬರುತ್ತದೆ. ಸುಮಾರು 350 ವರ್ಷಗಳ ಗೋವ ಕದಂಬ ಮನೆತನ ಕೊನೆಗೊಂಡಿತು. ಗೋವ ರಾಜ್ಯ ಬಹುಕಾಲ ಮಹಮ್ಮದೀಯರ ಆಳಿಕೆಯಲ್ಲಿ ಉಳಿಯಲಿಲ್ಲ.
- ವಿಜಯನಗರದ ಹರಿಹರ ಮತ್ತು ಬುಕ್ಕರು ಗೋವ ಪ್ರಾಂತವನ್ನು ಮಹಮ್ಮದೀಯರ ಆಳಿಕೆಯಿಂದ ವಿಮೋಚನೆಗೊಳಿಸಿ ತಮ್ಮ ರಾಜ್ಯಕ್ಕೆ ಸೇರಿಸಿಕೊಂಡರು. 1470ರ ವರೆಗೂ ಗೋವ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು. ಅನಂತರ ಬಿಜಾಪುರದ 2ನೆಯ ಮಹಮ್ಮದನ ಮಂತ್ರಿಯಾದ ಮಹಮದ್ ಗವಾನ ಗೋವವನ್ನು ಗೆದ್ದು ಬಿಜಾಪುರ ರಾಜ್ಯಕ್ಕೆ ಸೇರಿಸಿಕೊಂಡ. ಸ್ವಲ್ಪ ಕಾಲ ಆದಿಲ್ಷಾಹಿ ಆಡಳಿತ ಮುಂದುವರಿಯಿತು. ಅನಂತರ ಅದು ಪೋರ್ಚುಗೀಸರ ವಶವಾಯಿತು.
- ಆಲ್ಬಕರ್ಕ್ 1510ರಲ್ಲಿ ಗೋವವನ್ನು ಪೋರ್ಚುಗೀಸರ ವಸಾಹತಾಗಿ ಮಾರ್ಪಡಿಸಿದ. ಆದರೆ ಅದೇ ವರ್ಷ ಆಗಸ್ಟ್ 15ರ ಸಮಯಕ್ಕೆ ಬಿಜಾಪುರದ ಯೂಸುಫ್ ಆದಿಲ್ಷಹ ಅವನನ್ನು ಸೋಲಿಸಿದ. ಪುನಃ ಆಲ್ಬಕರ್ಕ್ ಸ್ವಲ್ಪ ಕಾಲದಲ್ಲೇ ಗೋವವನ್ನು ವಶಪಡಿಸಿಕೊಂಡು ಪೋರ್ಚುಗೀಸರ ಆಡಳಿತವನ್ನು ಸ್ಥಾಪಿಸಿದ. ಅಂದಿನಿಂದ ಗೋವ ಪೋರ್ಚುಗೀಸರ ವಸಾಹತಾಯಿತು. ಕ್ರಮೇಣ ದೀವ್ ಮತ್ತು ದಮನ್ಗಳ ಮೇಲೂ ಪೋರ್ಚುಗೀಸರು ಅಧಿಕಾರ ಸ್ಥಾಪಿಸಿದರು.
- ಮರಾಠರು ಹಲವು ಸಾರಿ ಗೋವವನ್ನು ಮುತ್ತಿದರು. ಆದರೂ ಗೋವದ ಮೇಲೆ ಪೋರ್ಚುಗೀಸರ ಆಡಳಿತ 450 ವರ್ಷಗಳ ಕಾಲ ಮುಂದುವರಿಯಿತು. ಗೋವದಲ್ಲಿ ಕ್ರೈಸ್ತಮತ ವಿಶೇಷವಾಗಿ ಪ್ರಚಾರವಾಯಿತು. 17ನೆಯ ಶತಮಾನದಲ್ಲಿ ಗೋವವನ್ನು ಸಂದರ್ಶಿಸಿದ್ದ ಪಾಶ್ಚಾತ್ಯ ಪ್ರವಾಸಿಯೊಬ್ಬ ಗೋವ ಪಟ್ಟಣ ಕ್ರೈಸ್ತ ದೇವಾಲಯಗಳಿಂದಲೂ ಮಠಗಳಿಂದಲೂ ಸುಂದರವಾದ ಭವನಗಳಿಂದಲೂ ಐಶ್ವರ್ಯದಿಂದಲೂ ತುಂಬಿತುಳುಕುವ ನಗರಗಳಲ್ಲೊಂದಾಗಿದೆಯೆಂದು ಪ್ರಶಂಸಿಸಿದ್ದ.
- ಪೋರ್ಚುಗೀಸರ ದಬ್ಬಾಳಿಕೆಯ ವಿರುದ್ಧವಾಗಿ ಅಲ್ಲಿಯ ಜನ ಸುಮಾರು 20 ಸಂದರ್ಭಗಳಲ್ಲಿ ದಂಗೆಯೆದ್ದಿದ್ದರು. ಆದರೆ ಪೋರ್ಚುಗೀಸ್ ಸರ್ಕಾರ ದಂಗೆಯನ್ನು ಉಗ್ರವಾಗಿ ಹತ್ತಿಕ್ಕಿತು. ಹತ್ತೊಂಬತ್ತನೆಯ ಶತಮಾನದಲ್ಲಿ ಪ್ರಾರಂಭವಾದ ರಾಷ್ಟ್ರೀಯ ಚಳವಳಿ ಗೋವವನ್ನೂ ಕ್ರಮೇಣ ಪ್ರವೇಶಿಸಿತು. ಮಹಾತ್ಮ ಗಾಂಧಿ ಭಾರತ ರಾಷ್ಟ್ರೀಯ ಚಳವಳಿಯ ನಾಯಕತ್ವವನ್ನು ವಹಿಸಿದ ಕೂಡಲೇ ಗೋವದಲ್ಲೂ ಚಳವಳಿಗೆ ಕರೆಕೊಟ್ಟರು. 1928ರಲ್ಲಿ ಗೋವದಲ್ಲಿ ಸ್ವಾತಂತ್ರ್ಯ ಚಳವಳಿಗಾಗಿ ಸಮಿತಿಯೊಂದು ಸ್ಥಾಪಿತವಾಯಿತು.
- 1930ರಲ್ಲಿ ಗೋವ ಕಾಂಗ್ರೆಸ್ ಸಮಿತಿಯನ್ನು ಸ್ಥಾಪಿಸಲಾಯಿತು. ಪೋರ್ಚುಗೀಸ್ ಸರ್ಕಾರ ಗೋವದಲ್ಲಿ ಚಳವಳಿಗಳನ್ನು ಉಗ್ರವಾಗಿ ಹತ್ತಿಕ್ಕಿತು. 1947ರಲ್ಲಿ ಭಾರತ ಸ್ವತಂತ್ರವಾದ ಅನಂತರ ಭಾರತ ಸರ್ಕಾರ ಗೋವ ಪ್ರದೇಶದಿಂದ ಪೋರ್ಚುಗಲ್ ತನ್ನ ಆಡಳಿತವನ್ನು ತೆರವು ಮಾಡಬೇಕೆಂದು ಸೂಚಿಸಿತು. ಆದರೂ ಪೋರ್ಚುಗೀಸ್ ಸರ್ಕಾರ ಬಿಗಿಮುಷ್ಟಿಯ ವಸಾಹತು ನೀತಿಯನ್ನು ಮುಂದುವರಿಸಿತು. ದೆಹಲಿ ಮತ್ತು ಲಿಸ್ಬನ್ಗಳ ನಡುವೆ ಅನೇಕ ಸುತ್ತಿನ ಮಾತುಕತೆಗಳು ನಡೆದರೂ ಪ್ರಯೋಜನವಾಗಲಿಲ್ಲ.
- 1947ರಿಂದ 1954ರ ವರೆಗೆ ನಡೆದ ವಿಮೋಚನಾ ಹೋರಾಟದ ಮುಖಂಡರನ್ನು ಪೋರ್ಚುಗೀಸ್ ಸರ್ಕಾರ ವರ್ಣನಾತೀತ ಶಿಕ್ಷೆಗಳಿಗೆ ಗುರಿ ಮಾಡಿತು. ಪೋರ್ಚುಗಲ್ ಮತ್ತು ಭಾರತದ ಮಧ್ಯೆ ರಾಜತಾಂತ್ರಿಕ ಸಂಬಂಧ 1955ರಲ್ಲಿ ಕಡಿದುಬಿತ್ತು. ಅದೇ ವರ್ಷ ಗೋವ ವಿಮೋಚನೆಗಾಗಿ ಶಾಂತಿಯುತ ಚಳವಳಿ ಪ್ರಾರಂಭವಾಯಿತು. ಚಳವಳಿ 1961ರ ವರೆಗೂ ಸತತವಾಗಿ ಮುಂದುವರಿಯಿತು. ಪೋರ್ಚುಗಲ್ ಸರ್ಕಾರ ಅನೇಕ ಸತ್ಯಾಗ್ರಹಿಗಳನ್ನು ಗುಂಡಿಟ್ಟು ಕೊಂದಿತು. ಮುಖಂಡರನ್ನು ನಾನಾಬಗೆಯ ಚಿತ್ರಹಿಂಸೆಗಳಿಗೆ ಗುರಿಪಡಿಸಿತು.
- ಸರ್ಕಾರದ ಉಗ್ರನೀತಿ ಮತ್ತು ದಂಡನೆಗಳು ಮುಂದುವರಿದುವು. ಭಾರತ ಸರ್ಕಾರದ ಸಂಯಮವನ್ನು ಪೋರ್ಚುಗಲ್ಲಿನ ವಸಾಹತು ನೀತಿ ಅಲುಗಿಸಿತು. ಪೋರ್ಚುಗೀಸ್ ಸೈನಿಕರು ಗೋವದ ಗಡಿಯಲ್ಲಿ ಭಾರತದ ಹಳ್ಳಿಗಳನ್ನು ಲೂಟಿ ಮಾಡಲುಪಕ್ರಮಿಸಿದರು. ಕೊನೆಗೆ 1961ರ ಡಿಸೆಂಬರ್ 17-18ರ ಮಧ್ಯರಾತ್ರಿಯ ವೇಳೆಗೆ ಪೋರ್ಚುಗೀಸರ ಆಡಳಿತಕೇಂದ್ರವಾದ ಪಣಜಿಯನ್ನು ಭಾರತ ಸೈನ್ಯ ಸುತ್ತುಗಟ್ಟಿತು.
- ಅಲ್ಲಿದ್ದ ಪೋರ್ಚುಗೀಸ್ ದಳಗಳು ಭಾರತೀಯ ಸೈನ್ಯಕ್ಕೆ ಶರಣಾಗತವಾದುವು. ಕೇವಲ 36 ಗಂಟೆಗಳಲ್ಲಿ ಹೋರಾಟ ಕೊನೆಗೊಂಡಿತು. ಪೋರ್ಚುಗೀಸ್ ಆಳಿಕೆಯಿಂದ ಗೋವ ವಿಮೋಚನೆಗೊಂಡಿತು. ಡಿಸೆಂಬರ್ 20ರಂದು ಗೋವ ಭಾರತದಲ್ಲಿ ವಿಲೀನವಾಯಿತು.




- ಪಶ್ಚಿಮ ಕರಾವಳಿಯಲ್ಲಿದ್ದು ಭೌಗೋಳಿಕವಾಗಿಯೂ ಚಾರಿತ್ರಿಕವಾಗಿಯೂ ವಿಶಿಷ್ಟ ಸ್ಥಾನವನ್ನು ಪಡೆದಿರುವ ಗೋವದ ವಾಸ್ತುಶಿಲ್ಪ ದೇಶೀಯ ಮತ್ತು ವಿದೇಶೀಯ ಪ್ರಭಾವಗಳಿಗೆ ಒಳಗಾಗಿರುವುದು ಸ್ವಾಭಾವಿಕ. ಇಲ್ಲಿಯ ವಾಸ್ತುಶಿಲ್ಪ ಬೆಳೆವಣಿಗೆಯ ಕುರುಹುಗಳು ಅತಿ ಪ್ರಾಚೀನಕಾಲದಿಂದಲೂ ಕಂಡುಬರುತ್ತವೆ. ಆದರೆ 16ನೆಯ ಶತಮಾನದಲ್ಲಿ ಈ ಪ್ರಾಂತವನ್ನಾಕ್ರಮಿಸಿಕೊಂಡ ಪೋರ್ಚುಗೀಸರ ಕಾಲದಲ್ಲಿ ನಡೆದ ಕ್ರೈಸ್ತಮತ ಪ್ರಚಾರದ ಫಲವಾಗಿ ನೂರಾರು ದೇವಾಲಯಗಳು ನೆಲಸಮವಾದವು. ಈ ಸ್ಥಳಗಳಲ್ಲಿ ಚರ್ಚುಗಳು ನಿರ್ಮಿತವಾದವು.
- ಆದ್ದರಿಂದ ಗೋವದಲ್ಲಿ ಪುರಾತನ ವಾಸ್ತುಶಿಲ್ಪ ಮಾದರಿಗಳು ಕೆಲವೇ ಉಳಿದಿವೆ. ಅಲ್ಲಲ್ಲಿ ಮುರಿದುಬಿದ್ದಿರುವ ಮೂರ್ತಿಗಳು ಮತ್ತು ಇತರ ಶಿಲ್ಪಗಳಿಂದ ಮಾತ್ರ ಅವನ್ನು ತಿಳಿದುಕೊಳ್ಳಲು ಸಾಧ್ಯ. ಪೋರ್ಚುಗೀಸರಿಂದ ನಾಶಗೊಂಡ ಕೆಲವು ದೇವಾಲಯಗಳ ಮೂಲಮೂರ್ತಿಗಳನ್ನು ಬೇರೆಡೆಗೆ ಕೊಂಡೊಯ್ದು ಅವುಗಳಿಗಾಗಿ ಕಟ್ಟಿಸಿದ ದೇವಾಲಯಗಳು ಕೆಲವು ಗೋವದಲ್ಲಿ ಈಚೆಗೆ ಬೆಳೆದುಬಂದ ವಾಸ್ತು ಮಾದರಿಯನ್ನು ಸೂಚಿಸುತ್ತವೆ.
- ಮುಸ್ಲಿಂ ಶೈಲಿಯ ಕೆಲವು ಕಟ್ಟಡಗಳನ್ನು ಗೋವವನ್ನು ಗೆದ್ದ ಆದಿಲ್ಷಾಹಿ ಮನೆತನದವರು ಕಟ್ಟಿಸಿದರೂ ಪೋರ್ಚುಗೀಸರು ಹಲವು ಕಟ್ಟಡಗಳನ್ನು ನಾಶಮಾಡಿ ಮತ್ತೆ ಕೆಲವನ್ನು ಮಾರ್ಪಡಿಸಿ ಸಚಿವಾಲಯಗಳನ್ನಾಗಿ, ಕಚೇರಿಗಳನ್ನಾಗಿ ಮಾಡಿಕೊಂಡರು. ಪೋರ್ಚುಗೀಸರು ಕಟ್ಟಿಸಿದ ಕೆಲವು ಚರ್ಚುಗಳು ಮತ್ತು ಇತರ ಕಟ್ಟಡಗಳು ಸುಂದರವಾಗಿವೆ; ಗೋವದಲ್ಲಿ ಪ್ರೇಕ್ಷಣೀಯ ಸ್ಮಾರಕಗಳಾಗಿ ನಿಂತಿವೆ.
- ಪ್ರಸಕ್ತಶಕದ ಆದಿಕಾಲದಲ್ಲೇ ಗೋವದಲ್ಲಿ ವಾಸ್ತುಶಿಲ್ಪ ಆರಂಭವಾದ್ದನ್ನು ಕಾಣಬಹುದು. ಹರವಳೆ ಎಂಬಲ್ಲಿ ಗುಡ್ಡವನ್ನು ಕೊರೆದು ನಿರ್ಮಿಸಿರುವ ಗುಹೆಗಳಿವೆ. ಇವುಗಳಲ್ಲಿ ದೊರೆತ ಬ್ರಾಹ್ಮಿಲಿಪಿಯ ಶಾಸನ 1ನೆಯ ಶತಮಾನಕ್ಕೆ ಸೇರಿದ್ದು. ಇದೇ ಗೋವದ ಅತ್ಯಂತ ಪ್ರಾಚೀನ ಶಾಸನ. ಕೋಲ್ವಲೆಯ ಬಳಿ ಬೌದ್ಧಮೂರ್ತಿಯೊಂದು ದೊರೆತಿದೆ. ಈ ಪ್ರಾಂತದಲ್ಲಿ ಬೌದ್ಧಶಿಲ್ಪ ಇದ್ದದ್ದಕ್ಕೆ ಕುರುಹಾಗಿ ಉಳಿದಿದೆ. ಚಂದ್ರವರ್ಮನೆಂಬ ರಾಜ ಶಿವಪುರದಲ್ಲಿಯ ಬೌದ್ಧ ಮಹಾವಿಹಾರವೊಂದಕ್ಕೆ ದತ್ತಿ ಬಿಟ್ಟುದಾಗಿ 5ನೆಯ ಶತಮಾನದ ಶಾಸನವೊಂದು ತಿಳಿಸುತ್ತದೆ. *ರಾಷ್ಟ್ರಕೂಟರ ಸಾಮಂತರಾಗಿ ವಲಿಪುರದಿಂದ ಆಳುತ್ತಿದ್ದ ಶಿಲಹಾರರು ನೆತರ್ಲೆ ಎಂಬಲ್ಲಿ ಮಹಾಲಕ್ಷ್ಮಿಯ ದೇವಾಲಯವೊಂದನ್ನು ನಿರ್ಮಿಸಿದ್ದರು. ಕಲ್ಯಾಣಿ ಚಾಳುಕ್ಯರ ಸಾಮಂತರಾಗಿ ಮೊದಲು ಚಂದ್ರಪುರದಿಂದಲೂ ಅನಂತರ ಗೋವ ಪಟ್ಟಣ ಅಥವಾ ಗೋವಪುರಿಯಿಂದಲೂ ಆಳುತ್ತಿದ್ದ ಗೋವೆ ಕದಂಬರು ಅನೇಕ ದೇವಾಲಯಗಳನ್ನು ಕಟ್ಟಿಸಿದ್ದರು. ಸವಾಯ್ವೆರೆ ಎಂಬಲ್ಲಿ ಮೂರ್ತಿನಾರಾಯಣನ ದೇವಾಲಯ, ಗೋವಪುರಿಯಲ್ಲಿ ಸರಸ್ವತಿ ದೇವಾಲಯ, ದೇಗಾಂವೆಯಲ್ಲಿ ಕಮಲನಾರಾಯಣ ಮತ್ತು ಮಹಾಲಕ್ಷ್ಮಿ ದೇವಾಲಯಗಳು-ಇವೇ ಮೊದಲಾದವು ಇವರ ಕಾಲದಲ್ಲಿ ನಿರ್ಮಿತವಾದುವು.
- ಆದರೆ ಬೆಳಗಾಂವಿ ಜಿಲ್ಲೆಯ ದೇಗಾಂವೆಯಲ್ಲಿರುವ ಸುಂದರವಾದ ಕಮಲನಾರಾಯಣ ದೇವಾಲಯವನ್ನು ಬಿಟ್ಟರೆ ಬೇರೆ ದೇವಾಲಯಗಳು ಉಳಿದುಬಂದಿಲ್ಲ. ಸಪ್ತಕೋಟೀಶ್ವರ ಈ ರಾಜರ ಆರಾಧ್ಯದೇವತೆ. ಶ್ರೀಸಪ್ತಕೋಟೀಶಲಬ್ಧವರವೀರ ಎಂಬುದು ಇವರ ಬಿರುದುಗಳಲ್ಲೊಂದು. ದೀವರ್ ದ್ವೀಪದ ಬಳಿ ನಾರ್ವೆಯಲ್ಲಿ ಇವರು ಸಪ್ತಕೋಟೀಶ್ವರ ದೇವಾಲಯವನ್ನು ಕಟ್ಟಿಸಿದ್ದರು. ವಿಜಯನಗರದ ಮಾಧವ ಮಂತ್ರಿ ಈ ದೇವಾಲಯವನ್ನು ಜೀರ್ಣೋದ್ಧಾರ ಮಾಡಿದ್ದ.
- ಪೋರ್ಚುಗೀಸರಿಂದ ಇದು ನಾಶವಾದ ಮೇಲೆ ಸಪ್ತಕೋಟೀಶ್ವರಲಿಂಗವನ್ನು ಬಿಳಿಚೊಂನಲ್ಲಿಯ ನಾರ್ವೆಯಲ್ಲಿ ಪ್ರತಿಷ್ಠಾಪಿಸಿದ್ದರು. ಮುಂದೆ ಶಿವಾಜಿ ಈಗ ಇರುವ ದೇವಾಲಯವನ್ನು ನಿರ್ಮಿಸಲು ಕಾರಣನಾದ. ಕದಂಬ ಜಯಕೇಶಿಯ ಆಳಿಕೆಯಲ್ಲಿ ಮಂತ್ರಿಯಾಗಿದ್ದ ಛದಮ ಎಂಬ ಅರಬ್ ವ್ಯಾಪಾರಿ ಗೋವಪುರಿಯಲ್ಲಿ ಒಂದು ಮಸೀದಿಯನ್ನು ಕಟ್ಟಿಸಿದ್ದ. ಯಾದವರ ಕಾಲದಲ್ಲಿ ಹೇಮಾಡ್ಪಂಥ್ ಶೈಲಿಯ ಹಲವು ದೇವಾಲಯಗಳನ್ನು ಗೋವದಲ್ಲಿಯೂ ಕಟ್ಟಿದ್ದಿರಬೇಕು.
- ಬಹುಶಃ ಈ ಕಾಲದಲ್ಲಿ ನಿರ್ಮಿತವಾಗಿದ್ದು ಇನ್ನೂ ಉಳಿದುಬಂದಿರುವ ಪ್ರಾಚೀನ ದೇವಾಲಯವೆಂದರೆ ತಾಂಬಡಿ-ಸುರ್ಲ ಎಂಬಲ್ಲಿ ದಟ್ಟ ಕಾಡಿನ ನಡುವೆ ನಿಂತಿರುವ ಮಹದೇವ ದೇವಾಲಯ ಒಂದೇ. ಚಾಳುಕ್ಯಶೈಲಿಯಲ್ಲಿ ಸರಳವಾಗಿ ಕಟ್ಟಿರುವ ಈ ದೇವಾಲಯಕ್ಕೆ ಗರ್ಭಗೃಹ, ಅರ್ಧಮಂಟಪ ಮತ್ತು ಭೋಗಮಂಟಪಗಳೂ ಎರಡು ಅಂತಸ್ತುಗಳ ಕಲ್ಲುಗೋಪುರವೂ ಇವೆ. ಇದನ್ನು ಬಿಟ್ಟರೆ ಕೇರಿ ಎಂಬಲ್ಲಿ ಬೇತಾಳ ದೇವಾಲಯದಲ್ಲಿರುವ ಗಜಲಕ್ಷ್ಮೀ, ಪರ್ಸೆಯಲ್ಲಿರುವ ಬ್ರಹ್ಮನ ಮೂರ್ತಿ, ಕೇರಿವೆರೆ ಕಾಡಿನಲ್ಲಿ ಬಿದ್ದಿರುವ ನಾರಾಯಣನ ವಿಗ್ರಹ, ಕುಡ್ನೆಯಲ್ಲಿರುವ ಸೂರ್ಯಬಿಂಬ, ಉಮಾಸಹಿತ ಶಿವ, ಸೇಂಟ್ ಫ್ರಾನ್ಸಿಸ್ ಕತೀಡ್ರಲಿನÀ ವಸ್ತುಸಂಗ್ರಹಾಲಯ ದಲ್ಲಿರುವ ಕೆಲವು ಮೂರ್ತಿಗಳು ಮುಂತಾದವು ಆ ಕಾಲದ ಶಿಲ್ಪದ ಮಾದರಿಗಳಾಗಿ ಉಳಿದುಬಂದಿವೆ.
- ಪೋರ್ಚುಗೀಸರು ನಾಶಮಾಡಿದ ದೇವಾಲಯಗಳಿಂದ ಮೂರ್ತಿಗಳನ್ನು ಬೇರೆ ಕಡೆಗೆ ಸಾಗಿಸಿ ಕಟ್ಟಿರುವ 16 ನೆಯ ಶತಮಾನದಿಂದೀಚಿನ ಕಟ್ಟಡಗಳಲ್ಲಿ ಕುಶಸ್ಥಲಿಯಲ್ಲಿದ್ದು ಪ್ರಿಯೋಲಿಗೆ ವರ್ಗಾಯಿಸಿದ ಮಂಗೇಶದೇವಾಲಯ, ಕದಲಿವನದಿಂದ ಕವಲೆಗೆ ಬದಲಾಯಿಸಿದ ಶಾಂತದುರ್ಗ ದೇವಾಲಯ, ನಾರ್ವೆಯಲ್ಲಿರುವ ಸಪ್ತಕೋಟೀಶ್ವರ, ಮರ್ದೊಲಿನ ಮಹಾಲಸ ದೇವಿಯ ಆಲಯ, ಕೊಲ್ವದಲ್ಲಿದ್ದು ಬಾಂದೋರಕ್ಕೆ ಬದಲಾಯಿಸಿದ ಮಹಾಲಕ್ಷ್ಮೀ ದೇವಾಲಯ, ಚಂದ್ರನಾಥ ಬೆಟ್ಟದ ಮೇಲಿರುವ ಚಂದ್ರನಾಥ ದೇವಾಲಯ- ಇವನ್ನು ಹೆಸರಿಸಬಹುದು.
- ಹಲವು ಶೈಲಿಗಳ ಸಂಮಿಶ್ರಣವನ್ನು ಈ ಕಟ್ಟಡಗಳಲ್ಲಿ ಕಾಣಬಹುದು. ಒಳಭಾಗದಲ್ಲಿ ಹಲವು ಕಂಬಗಳಿರುವ ಭೋಗಮಂಟಪ, ಜಗತಿಗಳು, ದೇವಾಲಯದ ಒಳಗೂ ಸುತ್ತಲೂ ಹಾಸುಗಲ್ಲುಗಳನ್ನು ಹಾಕಿಸುವುದು ಮುಂತಾದವುಗಳಲ್ಲಿ ವಿಜಯನಗರದ ಶೈಲಿಯ ಪ್ರಭಾವ ಕಂಡುಬಂದರೆ, ಹಲವು ದೇವಾಲಯಗಳ ಹೊರನೋಟದಲ್ಲಿ ಮುಸ್ಲಿಂ ಶೈಲಿಯ ಪ್ರಭಾವ ಎದ್ದುಕಾಣುತ್ತದೆ. ಈ ಕೆಲವು ದೇವಾಲಯಗಳನ್ನು ಅವುಗಳ ಮೇಲಿನ ಕಲಶಗಳಿಂದ ಮಾತ್ರ ದೇವಾಲಯಗಳೆಂದು ಗುರುತಿಸಬೇಕಾಗುತ್ತದೆ.
- ಇವೆಲ್ಲಕ್ಕಿಂತ ಹೆಚ್ಚಾಗಿ ಗೋವದ ದೇವಾಲಯಗಳಲ್ಲಿ ಲ್ಯಾಟಿನ್ ಶೈಲಿಯ ಪ್ರಭಾವವನ್ನೂ ವಿಶೇಷವಾಗಿ ಕಾಣಬಹುದು. ದೇವಸ್ಥಾನಗಳ ಮುಂದೆ ಹಲವು ಅಂತಸ್ತುಗಳಲ್ಲಿ ನೇರವಾಗಿ ಮೇಲೆದ್ದಿರುವ ಭವ್ಯವಾದ ಗೋಪುರಗಳಿರುವುದು ಇಲ್ಲಿಯ ದೇವಾಲಯಗಳ ಒಂದು ವಿಶೇಷ. ಮರಾಠಾ ರಾಜನಾದ, ಸಾತಾರೆಯ ಸಾಹು ರಾಜ ಕಟ್ಟಿಸಿದ ಶಾಂತದುರ್ಗ ದೇವಾಲಯದ ಕಂಬಗಳು ಮತ್ತು ಒಳಭಾಗದ ಅಲಂಕರಣಗಳು ಸುಂದರವಾಗಿವೆ.
- 17 ನೆಯ ಶತಮಾನದ ಆದಿಭಾಗದಲ್ಲಿ ಮರ್ದೊಲಿನಲ್ಲಿ ಕಟ್ಟಿರುವ ಮಹಾಲಸದೇವಿಯ ಆಲಯದಲ್ಲಿರುವ, ಮರದಲ್ಲಿ ಕೆತ್ತಿರುವ ಶಿಲ್ಪ ಅತ್ಯಂತ ಸುಂದರವಾಗಿದೆ. ಮುಸ್ಲಿಂ ಶೈಲಿಯ ಕಟ್ಟಡಗಳಲ್ಲಿ ಅತ್ಯಂತ ಭವ್ಯವಾಗಿದ್ದದ್ದು ಗೋವೆಯ ಆದಿಲ್ಷಹ ಕಟ್ಟಿಸಿದ ರಾಜವಾಡೆ. ಕೆಲವು ಮಾರ್ಪಾಟು ಗಳನ್ನು ಹೊಂದಿ ಡಿ-ಪೆಲೇಶಿಯೊ-ಇದಾಲ್ಶಿಯೊ ಎಂಬ ಹೆಸರಿಂದ ಇಂದಿಗೂ ಅದು ಉಪಯೋಗದಲ್ಲಿದೆ. ಮಸೀದಿಗಳು ಕೆಲವು ಚರ್ಚುಗಳಾಗಿ ಮಾರ್ಪಟ್ಟಿವೆ. ಉಳಿದ ಕಟ್ಟಡಗಳು ನಾಶವಾಗಿವೆ.
- ಸೆ ಪ್ರಿಮೇಶಿಯಲ್ ಡಿ ಗೋವಾ ಅಥವಾ ಸೆ ಕತೀಡ್ರಲ್ ಎಂಬುದು ಗೋವದ ಚರ್ಚುಗಳಲ್ಲಿ ಪುರಾತನವೂ ಭವ್ಯವೂ ಆದದ್ದು. ಆಲ್ಬಕರ್ಕ್ ಹಳೆಯ ಗೋವೆಯನ್ನು ಗೆದ್ದಾಗ ಸೇಂಟ್ ಕ್ಯಾದರಿನ್ ನೆನಪಿಗಾಗಿ ಕಟ್ಟಲು ಆಲೋಚಿಸಿದ್ದ ಚರ್ಚು ಇದು. ಇದನ್ನು ಕಟ್ಟಿ ಪೂರೈಸಲು 75 ವರ್ಷಗಳಿಗೂ ಹೆಚ್ಚು ಕಾಲವಾಯಿತು. ಭವ್ಯತೆಯಲ್ಲಿ ಇದನ್ನು ಮೀರಿಸಿದ ಕಟ್ಟಡ ಗ್ರೇಟ್ ಬ್ರಿಟನಿನಲ್ಲಿ ಕೂಡ ಇಲ್ಲವೆನ್ನಲಾಗಿದೆ. ಹೊರಭಾಗ ಟಸ್ಕನ್ ಮತ್ತು ಡೋರಿಕ್ ಶೈಲಿಗಳಲ್ಲೂ ಒಳಭಾಗ ಕಾರಿಂತಿಯನ್ ಶೈಲಿಯಲ್ಲೂ ನಿರ್ಮಿತವಾಗಿರುವ ಈ ಕಟ್ಟಡ ಅದರ ಗಾತ್ರ ಮತ್ತು ಅಳತೆಗೆ ಹೆಸರಾದ್ದು. ಇದರ ಒಂದು ಭಾಗದ ಗೋಪುರ ಈಗ ಬಿದ್ದುಹೋಗಿದೆ. ಈ ಚರ್ಚಿನ ಒಳಭಾಗ ಅತ್ಯಂತ ರಮಣೀಯವಾಗಿದೆ.
- ಇಷ್ಟೇ ರಮಣೀಯವೂ ಭವ್ಯವೂ ಆಗಿರುವ ಸೇಂಟ್ ಕೆಸರನ್ ಚರ್ಚು ರೋಮಿನಲ್ಲಿರುವ ಸೇಂಟ್ ಪೀಟರನ ಬೆಸಿಲಿಕದಂತಿದೆ ; ಇದು ಕಾರಿಂತಿಯನ್ ಶೈಲಿಯಲ್ಲಿದೆ. ಹಳೆಯ ಗೋವದಲ್ಲಿರುವ ಬಾಮ್ ಜೀಸಸ್ ಚರ್ಚು ಅತ್ಯಂತ ಪ್ರಸಿದ್ಧವಾದ್ದು. ಇಲ್ಲೇ ಸೇಂಟ್ ಜೇವಿಯರನ ಸಮಾಧಿಯಿದೆ. ಇಲ್ಲಿಯ ಕಂಚಿನ ಕೆತ್ತನೆ ಆಕರ್ಷಕವಾದ್ದು. ಇದರ ಭಿತ್ತಿಯ ಮೇಲೆ ಜೇ಼ವಿಯರನ ಜೀವನಕ್ಕೆ ಸಂಬಂಧಿಸಿದ ಹಲವು ಚಿತ್ರಗಳಿವೆ. ಗೋವದಲ್ಲಿ ಗಾತಿಕ್ ಶೈಲಿಯಲ್ಲಿ ಕಟ್ಟಿರುವ ಅದ್ಭುತವಾದ ವಾಸ್ತು ಇದು.
- 1517 ರಲ್ಲಿ ಫ್ರಾನ್ಸಿಸ್ಕನರು ಕಟ್ಟಿಸಿದ ಸೇಂಟ್ ಫ್ರಾನ್ಸಿಸ್ ಕತೀಡ್ರಲ್ ಮೆನುಲಿನ್ ಶೈಲಿಯ ಉತ್ಕೃಷ್ಟ ಶಿಲ್ಪವನ್ನೊಳಗೊಂಡಿದೆ. ಹಿಂದೆ ಪೋರ್ಚುಗೀಸರು ಭಗ್ನಗೊಳಿಸಿದ್ದ ದೇವಾಲಯಗಳಿಂದ ತಂದಿಟ್ಟಿರುವ ಮೂರ್ತಿಗಳು ಇರುವುದು ಈ ಕಟ್ಟಡದಲ್ಲೇ. ಇದು ಒಂದು ವಸ್ತುಸಂಗ್ರಹಾಲಯವಾಗಿ ಮಾರ್ಪಟ್ಟಿದೆ. ಗೋವದಲ್ಲಿ ಅತ್ಯಂತ ಎತ್ತರವಾದ ಕಟ್ಟಡ ಸೇಂಟ್ ಮೋನಿಕ ಕಾನ್ವೆಂಟ್. ಮೂರು ಅಂತಸ್ತುಗಳಿರುವ ಇದರ ಗೋಡೆಗಳ ಮೇಲೆ ಬೈಬಲಿನ ಅನೇಕ ಪ್ರಸಂಗಗಳನ್ನು ಭಿನ್ನಭಿನ್ನ ವರ್ಣಗಳಲ್ಲಿ ಚಿತ್ರಿಸಲಾಗಿದೆ.
ಗೋವ ವೆಲ್ಹಾದ ಗುಡ್ಡವೊಂದರ ಮೇಲೆ ಪಿಲಾಡ್ ಮೊನಾಸ್ಟರಿ ಇದೆ. ಇದರ ವಿಶಾಲವಾದ ಒಳ ಅಂಗಳದಲ್ಲಿ ಅತಿ ಸುಂದರವಾಗಿ ಕಂಡರಿಸಿರುವ ಕಂಬವೊಂದು ನಿಂತಿದೆ. 1541 ರಲ್ಲಿ ನಿರ್ಮಿಸಿದ ಉನ್ನತವಾದ ಸೇಂಟ್ ಪಾಲ್ಸ್ ಕಾಲೇಜಿನ ಒಂದು ಭಾಗ ಮಾತ್ರ ಬೀಳದೆ ನಿಂತಿದೆ. ಗೋವದ ಮನೆಗಳಲ್ಲೂ ಲ್ಯಾಟಿನ್ ಶೈಲಿಯ ಪ್ರಭಾವವನ್ನು ಗುರುತಿಸಬಹುದು. ಆ ಪಟ್ಟಣವನ್ನು ನೋಡಿದರೆ ಲ್ಯಾಟಿನ್ ನಗರದಂತೆಯೇ ಕಾಣುತ್ತದೆ.
- ಗೋವಾದ ಜಿಲ್ಲೆಗಳು
- ಪ್ರಜಾಪ್ರಭುತ್ವದಲ್ಲಿ ರಾಜರ ರಾಜ್ಯಗಳ ವಿಲೀನ
- ೨೦೦೯ ಸಾರ್ವತ್ರಿಕ ಚುನಾವಣಾ ಫಲಿತಾಂಶ
- ಭಾರತದ ಸಾರ್ವತ್ರಿಕ ಚುನಾವಣೆ, ೨೦೦೯=೨೦೦೯ ಸಾರ್ವತ್ರಿಕ ಚುನಾವಣಾ ಫಲಿತಾಂಶ
- ೨೦೦೯ ಸಾರ್ವತ್ರಿಕ ಲೋಕಸಭೆ ಮತ್ತು ವಿಧಾನ ಸಭೆಗಳ ಚುನಾವಣಾ ಫಲಿತಾಂಶ= ಭಾರತದ ಸಾರ್ವತ್ರಿಕ ಚುನಾವಣೆ, ೨೦೦೯
- ಅಥವಾ ಭಾರತದ ಸಾರ್ವತ್ರಿಕ ಚುನಾವಣೆ, ೨೦೦೯(ಲೋಕ ಸಭೆ ಮತ್ತು ವಿಧಾನ ಸಭೆ)
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ 2024 ಮೆ ವರೆಗೆ ಸೇವೆ ಸಲ್ಲಿಸಿ. 2024 ರಿಂದ ಪ್ರಸ್ತುತ (1 ರಿಂದ 8ನೆಯ ತರಗತಿಯ - ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.ಧನ್ಯವಾದಗಳು
ಪ್ರಮುಖ ಅಂಶಗಳು
SSLC CORNER
Class-10 Study-Materials Final Exam Papers Notes & Solutions Model & Blue-Print Pre Board Papers Half Yearly ...
ಪ್ರಮುಖ ಕಲಿಕಾಂಶಗಳು
-
16 Tenses in English Grammar (Formula and Examples) Verb Tenses are different forms of verbs describing something happened in the past, happ...
-
*📚SSLC ಸಮಾಜ ವಿಜ್ಞಾನ ಪಾಸಿಂಗ್ ಪ್ಯಾಕೇಜ್* *📚SSLC ಮಾಡೆಲ್ ಪ್ರಶ್ನೆಪತ್ರಿಕೆಗಳು* *📚SSLC ವಿಷಯವಾರು ನೋಟ್ಸ್* *📚SSLC ಬಹುನಿರೀಕ್ಷಿತ ಪ್ರಶ್ನೆಗಳು* *📚SSLC ಪ...
-
1. ಕನ್ನಡ 1st ಪೇಪರ್ 2. ಮನೋವಿಜ್ಞಾನ 1 3. English 4. ಮನೋವಿಜ್ಞಾನ 2 5. ಸಮಾಜ ವಿಜ್ಞಾನ 6. ಶಿಶು ಮನೋವಿಜ್ಞಾನ 7. ಸಮಾಜ ವಿಜ್ಞಾನ ಬೋಧನಾ ಶಸ್ತ್ರ 8. ಭೂಗೋಳ ಶಾಸ...
-
*ದಿನಾಂಕ 18-12-2020 ವಾರ ಗುರುವಾರ ಇಂದಿನ ಹೋಂವರ್ಕ್* *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ್ಕ್* ++++++++++++++++++++++ *ಪಾಠ -25 ನಮ್ಮ ರಾಜ್ಯ...
-
1️⃣9️⃣ 1️⃣2️⃣ 2️⃣0️⃣2️⃣0️⃣ *ದಿನಾಂಕ 19-12-2020 ವಾರ-ಶನಿವಾರ ಇಂದಿನ ಹೋಂವರ್ಕ್* ======================= *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ...
-
ಬಿ. ಆರ್. ಅಂಬೇಡ್ಕರ್ ಸಮಾಜ ಸುಧಾರಕ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ( ಏಪ್ರಿಲ್ ೧೪ , ೧೮೯೧ - ಡಿಸೆಂಬರ್ ೬ , ೧೯೫೬ ) - ಭೀಮರಾವ್ ರಾಮ್ಜೀ ಅಂಬೇಡ್...
-
ವಚನ ಎಂದರೇನು? ವಿಧಗಳು ಯಾವುವು? ವಚನಗಳು ಸಾಹಿತ್ಯದ ದೃಷ್ಟಿಯಲ್ಲಿ ವಚನ ಎಂದರೆ – “ಪರಿಶುದ್ಧ / ನೀತಿಯುಕ್ತ ಮಾತು ಎಂದರ್ಥ .ಆದರೆ ವ್ಯಾಕರಣದ ದೃಷ್ಟಿಯಲ್ಲಿ...
-
* ಇಂದಿನ ಹೋಮ ವರ್ಕ್ ದಿನಾಂಕ 18-01-2021* *ವಾರ ಸೋಮವಾರ* *1 ನೇ ವರ್ಗದ ಗಣಿತ ಹೋಮ ವರ್ಕ್* *೨೧ ರಿಂದ ೫೦ ವರೆಗೆ ಕನ್ನಡ ಅಂಕಿಗಳನ್ನು ಪದ ರೂಪದಲ್ಲಿ ಬರೆಯಿರಿ* *...
-
ಶೈಕ್ಷಣಿಕ ಸಂಪನ್ಮೂಲಗಳು 9.4th class year plan 1.2020-21ನೇ ಸಾಲಿನ ಶಾಲಾ ವಾರ್ಷಿಕ ಕ್ರಿಯಾಯೋಜನೆ 2.2020-21ನೇ ಸಾಲಿನ ಶೈಕ್ಷಣಿಕ ಯೋಜನೆ (SAP) 4.2020-21 ನೇ ಸಾ...
-
Karnataka 5th 6th 7th 8th 9th Model Paper 2021 Summative (SA), Formative (FA) Kannada Hindi English KAR 5th 6th 7th 8th 9th Model Paper Summ...


